Homeಸಿನಿಮಾಕ್ರೀಡೆಪ್ರೊ ಕಬಡ್ಡಿ ಪ್ಲೇಆಫ್‌ನಲ್ಲಿ ಬೆಂಗಳೂರು ಬುಲ್ಸ್ ವಿರುದ್ಧ ಗುಜರಾತ್ ಎದುರಾಳಿ: ಗೆದ್ದರಷ್ಟೆ ಸೆಮಿಫೈನಲ್ ಪ್ರವೇಶ

ಪ್ರೊ ಕಬಡ್ಡಿ ಪ್ಲೇಆಫ್‌ನಲ್ಲಿ ಬೆಂಗಳೂರು ಬುಲ್ಸ್ ವಿರುದ್ಧ ಗುಜರಾತ್ ಎದುರಾಳಿ: ಗೆದ್ದರಷ್ಟೆ ಸೆಮಿಫೈನಲ್ ಪ್ರವೇಶ

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಟ್ನಾ ಪೈರೇಟ್ಸ್ ಮತ್ತು ಎರಡನೇ ಸ್ಥಾನದಲ್ಲಿರುವ ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ತಲುಪಿವೆ.

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ 8ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿವೆ. ತೀವ್ರ ಕೂತುಹಲಕಾರಿ ಘಟ್ಟದಲ್ಲಿ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಪ್ಲೇಆಫ್ ಪ್ರವೇಶ ಪಡೆದಿದೆ. 4ನೇ ಸ್ಥಾನದಲ್ಲಿರುವ ಗುಜರಾತ್ ಗೈಂಟ್ಸ್ ವಿರುದ್ಧ ಫೆಬ್ರವರಿ 21ರ ಸೋಮವಾರದಂದು ನಡೆಯುವ ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇಲ್ಲಿ ಗೆದ್ದರಷ್ಟೆ ಬೆಂಗಳೂರು ಬುಲ್ಸ್ ಸೆಮಿಫೈನಲ್‌ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಕಾದಾಡಲು ಅವಕಾಶ. ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ.

ಸೋಮವಾರದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಯು.ಪಿ ಯೋಧ ಮತ್ತು ಪುಣೇರಿ ಪಲ್ಟನ್ ಸೆಣಸಲಿದ್ದು ಗೆದ್ದವರು ಫೆಬ್ರವರಿ 23 ರಂದು ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ಪಟ್ನಾ ಪೈರೇಟ್ಸ್ ವಿರುದ್ಧ ಕಾದಾಡಲಿವೆ. ಫೈನಲ್ ಪಂದ್ಯ ಫೆಬ್ರವರಿ 25 ರಂದು ನಡೆಯಲಿದೆ.

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಟ್ನಾ ಪೈರೇಟ್ಸ್ ಮತ್ತು ಎರಡನೇ ಸ್ಥಾನದಲ್ಲಿರುವ ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ತಲುಪಿವೆ. ಉಳಿದಂತೆ ಹರ್ಯಾಣ ಸ್ಟೀಲರ್ಸ್, ಜೈಪುರ್ ಪಿಂಕ್ ಪ್ಯಾಂಥರ್ಸ್, ಯು ಮುಂಬಾ, ತಮಿಳು ತಲೈವಾಸ್, ಬೆಂಗಾಲ್ ವಾರಿಯರ್ಸ್ ಮತ್ತು ತೆಲುಗು ಟೈಟನ್ಸ್ ತಂಡಗಳು ಲೀಗ್ ಹಂತದಲ್ಲಿ ಹೊರಬಿದ್ದಿವೆ.

ಪವನ್ ಕುಮಾರ್ ಶೆಹ್ರಾವತ್ ನಾಯಕತ್ವದಲ್ಲಿ ಬೆಂಗಳೂರು ತಂಡ ನಿರೀಕ್ಷೆಗೂ ಮೀರಿ ಆಟವಾಡುತ್ತಿದೆ. ಲೀಗ್ ಹಂತದ 22 ಪಂದ್ಯಗಳಲ್ಲಿ 11 ರಲ್ಲಿ ಜಯಗಳಿಸಿ 09 ರಲ್ಲಿ ಸೋತು 02 ಪಂದ್ಯಗಳನ್ನು ಟೈ ಮಾಡಿಕೊಂಡಿದೆ. 274 ರೈಡ್ ಪಾಯಿಂಟ್‌ಗಳೊಂದಿಗೆ ಪವನ್ ಕುಮಾರ್ ಅಗ್ರಸ್ಥಾನದಲ್ಲಿದ್ದಾರೆ. ಅವರು 16 ಸೂಪರ್ ಟೆನ್‌ಗಳನ್ನು ಗಳಿಸಿಕೊಂಡಿದ್ದಾರೆ. ಭರತ್ ಅವರಿಗೆ ಉತ್ತಮ ಸಾಥ್ ನೀಡುತ್ತಿದ್ದಾರೆ. ಡಿಫೆಂಡಿಂಗ್ ವಿಭಾಗದಲ್ಲಿ ಸೌರಬ್ ನಂದಲ್, ಅಮನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

2014ರಲ್ಲಿ ಪ್ರೊ ಕಬಡ್ಡಿ ಲೀಗ್ ಆರಂಭವಾಗಿದೆ. ಮೊದಲ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿದ್ದರು. ಎರಡನೇ ಬಾರಿ ಯು ಮುಂಬಾ ಕಪ್ ಎತ್ತಿ ಹಿಡಿದಿತ್ತು. 3, 4, 5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಆಗಿತ್ತು. 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಪಟ್ಟಕ್ಕೇರಿತ್ತು. ಕಳೆದ 7ನೇ ಆವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಫೈನಲ್ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಜಯಗಳಿಸಿ ಚಾಂಪಿಯನ್ ಆಗಿತ್ತು.

2019ರ 7ನೇ ಆವೃತ್ತಿಯಲ್ಲಿ ಇದೇ ರೀತಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಯು.ಪಿ ಯೋಧ ವಿರುದ್ಧ ಟೈ ಬ್ರೇಕರ್‌ನಲ್ಲಿ ರೋಚಕ 3 ಪಾಯಿಂಟ್‌ಗಳ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮಿಯಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಎಡವಿತ್ತು. ಈ ಬಾರಿ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ; ಈಗ ಎಲ್ಲೆಲ್ಲೂ ಕಬಡ್ಡಿ.. ಕಬಡ್ಡಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...