Homeಸಿನಿಮಾಕ್ರೀಡೆಪ್ರೊ ಕಬಡ್ಡಿ ಪ್ಲೇಆಫ್‌ನಲ್ಲಿ ಬೆಂಗಳೂರು ಬುಲ್ಸ್ ವಿರುದ್ಧ ಗುಜರಾತ್ ಎದುರಾಳಿ: ಗೆದ್ದರಷ್ಟೆ ಸೆಮಿಫೈನಲ್ ಪ್ರವೇಶ

ಪ್ರೊ ಕಬಡ್ಡಿ ಪ್ಲೇಆಫ್‌ನಲ್ಲಿ ಬೆಂಗಳೂರು ಬುಲ್ಸ್ ವಿರುದ್ಧ ಗುಜರಾತ್ ಎದುರಾಳಿ: ಗೆದ್ದರಷ್ಟೆ ಸೆಮಿಫೈನಲ್ ಪ್ರವೇಶ

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಟ್ನಾ ಪೈರೇಟ್ಸ್ ಮತ್ತು ಎರಡನೇ ಸ್ಥಾನದಲ್ಲಿರುವ ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ತಲುಪಿವೆ.

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ 8ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿವೆ. ತೀವ್ರ ಕೂತುಹಲಕಾರಿ ಘಟ್ಟದಲ್ಲಿ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಪ್ಲೇಆಫ್ ಪ್ರವೇಶ ಪಡೆದಿದೆ. 4ನೇ ಸ್ಥಾನದಲ್ಲಿರುವ ಗುಜರಾತ್ ಗೈಂಟ್ಸ್ ವಿರುದ್ಧ ಫೆಬ್ರವರಿ 21ರ ಸೋಮವಾರದಂದು ನಡೆಯುವ ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇಲ್ಲಿ ಗೆದ್ದರಷ್ಟೆ ಬೆಂಗಳೂರು ಬುಲ್ಸ್ ಸೆಮಿಫೈನಲ್‌ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಕಾದಾಡಲು ಅವಕಾಶ. ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ.

ಸೋಮವಾರದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಯು.ಪಿ ಯೋಧ ಮತ್ತು ಪುಣೇರಿ ಪಲ್ಟನ್ ಸೆಣಸಲಿದ್ದು ಗೆದ್ದವರು ಫೆಬ್ರವರಿ 23 ರಂದು ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ಪಟ್ನಾ ಪೈರೇಟ್ಸ್ ವಿರುದ್ಧ ಕಾದಾಡಲಿವೆ. ಫೈನಲ್ ಪಂದ್ಯ ಫೆಬ್ರವರಿ 25 ರಂದು ನಡೆಯಲಿದೆ.

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಟ್ನಾ ಪೈರೇಟ್ಸ್ ಮತ್ತು ಎರಡನೇ ಸ್ಥಾನದಲ್ಲಿರುವ ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ತಲುಪಿವೆ. ಉಳಿದಂತೆ ಹರ್ಯಾಣ ಸ್ಟೀಲರ್ಸ್, ಜೈಪುರ್ ಪಿಂಕ್ ಪ್ಯಾಂಥರ್ಸ್, ಯು ಮುಂಬಾ, ತಮಿಳು ತಲೈವಾಸ್, ಬೆಂಗಾಲ್ ವಾರಿಯರ್ಸ್ ಮತ್ತು ತೆಲುಗು ಟೈಟನ್ಸ್ ತಂಡಗಳು ಲೀಗ್ ಹಂತದಲ್ಲಿ ಹೊರಬಿದ್ದಿವೆ.

ಪವನ್ ಕುಮಾರ್ ಶೆಹ್ರಾವತ್ ನಾಯಕತ್ವದಲ್ಲಿ ಬೆಂಗಳೂರು ತಂಡ ನಿರೀಕ್ಷೆಗೂ ಮೀರಿ ಆಟವಾಡುತ್ತಿದೆ. ಲೀಗ್ ಹಂತದ 22 ಪಂದ್ಯಗಳಲ್ಲಿ 11 ರಲ್ಲಿ ಜಯಗಳಿಸಿ 09 ರಲ್ಲಿ ಸೋತು 02 ಪಂದ್ಯಗಳನ್ನು ಟೈ ಮಾಡಿಕೊಂಡಿದೆ. 274 ರೈಡ್ ಪಾಯಿಂಟ್‌ಗಳೊಂದಿಗೆ ಪವನ್ ಕುಮಾರ್ ಅಗ್ರಸ್ಥಾನದಲ್ಲಿದ್ದಾರೆ. ಅವರು 16 ಸೂಪರ್ ಟೆನ್‌ಗಳನ್ನು ಗಳಿಸಿಕೊಂಡಿದ್ದಾರೆ. ಭರತ್ ಅವರಿಗೆ ಉತ್ತಮ ಸಾಥ್ ನೀಡುತ್ತಿದ್ದಾರೆ. ಡಿಫೆಂಡಿಂಗ್ ವಿಭಾಗದಲ್ಲಿ ಸೌರಬ್ ನಂದಲ್, ಅಮನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

2014ರಲ್ಲಿ ಪ್ರೊ ಕಬಡ್ಡಿ ಲೀಗ್ ಆರಂಭವಾಗಿದೆ. ಮೊದಲ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿದ್ದರು. ಎರಡನೇ ಬಾರಿ ಯು ಮುಂಬಾ ಕಪ್ ಎತ್ತಿ ಹಿಡಿದಿತ್ತು. 3, 4, 5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಆಗಿತ್ತು. 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಪಟ್ಟಕ್ಕೇರಿತ್ತು. ಕಳೆದ 7ನೇ ಆವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಫೈನಲ್ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಜಯಗಳಿಸಿ ಚಾಂಪಿಯನ್ ಆಗಿತ್ತು.

2019ರ 7ನೇ ಆವೃತ್ತಿಯಲ್ಲಿ ಇದೇ ರೀತಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಯು.ಪಿ ಯೋಧ ವಿರುದ್ಧ ಟೈ ಬ್ರೇಕರ್‌ನಲ್ಲಿ ರೋಚಕ 3 ಪಾಯಿಂಟ್‌ಗಳ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮಿಯಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಎಡವಿತ್ತು. ಈ ಬಾರಿ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ; ಈಗ ಎಲ್ಲೆಲ್ಲೂ ಕಬಡ್ಡಿ.. ಕಬಡ್ಡಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...