Homeಮುಖಪುಟ‘ಬಡತನದ ಸ್ಮಾರಕ’ ಎಂದು ಮೋದಿ ಟೀಕಿಸಿದ್ದ ನರೇಗಾ ಯೋಜನೆಯನ್ನು, ‘ಜೀವಸೆಳೆ’ ಎಂದ ಗುಜರಾತ್‌ ಸರ್ಕಾರ!

‘ಬಡತನದ ಸ್ಮಾರಕ’ ಎಂದು ಮೋದಿ ಟೀಕಿಸಿದ್ದ ನರೇಗಾ ಯೋಜನೆಯನ್ನು, ‘ಜೀವಸೆಳೆ’ ಎಂದ ಗುಜರಾತ್‌ ಸರ್ಕಾರ!

- Advertisement -
- Advertisement -

ಕಳೆದ ವರ್ಷದ ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ತಮ್ಮ ಹಳ್ಳಿಗಳಿಗೆ ಮರಳಿದ್ದ ವಲಸೆ ಕಾರ್ಮಿಕರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ)ಯು “ಜೀವಸೆಳೆ” ಆಗಿ ಪರಿಣಮಿಸಿತು ಎಂದು ಕಳೆದ ವಾರ ಗುಜರಾತ್‌‌ ಮುಖ್ಯಮಂತ್ರಿ ವಿಜಯ್‌‌ ರೂಪಾನಿ ಬಿಡುಗಡೆ ಮಾಡಿದ ವರದಿಯಲ್ಲಿ ರಾಜ್ಯ ಸರ್ಕಾರ ಶ್ಲಾಘಿಸಿದೆ.

ನರೇಗಾ ಯೋಜನೆಯು ಕಾಂಗ್ರೆಸ್ ನೇತೃತ್ವ ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ಜಾರಿ ಮಾಡಲಾಗಿದ್ದ ಮಹಾತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದು ಗ್ರಾಮೀಣ ಪ್ರದೇಶದ ಜನರಿಗೆ ನೂರು ದಿನಗಳವರೆಗೂ ಉದ್ಯೋಗವನ್ನು ನೀಡುತ್ತದೆ. ಈ ಯೋಜನೆಯು ಗ್ರಾಮೀಣ ಪ್ರದೇಶದ ಜನರ ವಲಸೆಯನ್ನು ತಪ್ಪಿಸಿದೆ ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಾರೆ.

ಪ್ರಧಾನಿ ಮೋದಿ 2015 ರಲ್ಲಿ, “ಬಡತನವನ್ನು ನಿಭಾಯಿಸುವಲ್ಲಿ 60 ವರ್ಷಗಳಿಂದ ವಿಫಲವಾದ ಕಾಂಗ್ರೆಸ್‌ ಪಕ್ಷದ ಜೀವಂತ ಸ್ಮಾರಕ” ಎಂದು ಈ ಯೋಜನೆಯನ್ನು ಸಂಸತ್ತಿನಲ್ಲಿ ಟೀಕಿಸಿದ್ದರು.

ಇದನ್ನೂ ಓದಿ: ಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

“ಕಳೆದ ವರ್ಷ ಕೊರೊನಾ ಲಾಕ್‌ಡೌನ್ ನಂತರ, ಗುಜರಾತ್‌ನ ಬುಡಕಟ್ಟು ಜಿಲ್ಲೆಯಾದ ದಾಹೋಡ್‌ನ ಹಳ್ಳಿಗಳಿಗೆ ಸರಿಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರು ಮರಳಿದರು. ಇವರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಸರ್ಕಾರವು ಕಾರ್ಯನಿರ್ವಹಿಸುತ್ತಿದೆ. ನರೇಗಾ ಯೋಜನೆಯು ತಮ್ಮ ಮನೆಗಳಿಗೆ ಮರಳುವಂತೆ ಅನಿವಾರ್ಯ ಪರಿಸ್ಥಿತಿಗೆ ಬಿದ್ದ ಕಾರ್ಮಿಕರಿಗೆ ಜೀವಸೆಳೆಯಾಗಿದೆ” ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿದ ವರದಿಯು ಬಣ್ಣಿಸಿದೆ.

ದಾಹೋಡ್‌ನ ಧಾರಾ ಡೊಂಗ್ರಿ ಗ್ರಾಮದಲ್ಲಿ, ಸಣ್ಣ ಭೂಹಿಡುವಳಿ ಮತ್ತು ನೀರಾವರಿ ಸೌಲಭ್ಯಗಳಿಲ್ಲದ ವಲಸೆ ಕಾರ್ಮಿಕರು ನರೇಗಾ ಅಡಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

“ವಲಸಿಗ ಕಾರ್ಮಿಕರು ನಗರಗಳಲ್ಲಿ ಗಳಿಸುತ್ತಿರುವುದಕ್ಕೆ ಹೋಲಿಸಿದರೆ, ನರೇಗಾ ಅಡಿಯಲ್ಲಿನ ವೇತನವು ಕನಿಷ್ಠವಾಗಿದ್ದರೂ (ದಿನಕ್ಕೆ 224 ರೂ.),ಕೊರೊನಾದಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮ ಕುಟುಂಬವನ್ನು ನಿಭಾಯಿಸಲು ಇದು ನೆರವಾಯಿತು” ಎಂದು ವರದಿ ಹೇಳುತ್ತದೆ. ಅದೇ ಹಳ್ಳಿಯ ಗುತ್ತಿಗೆ ಕಾರ್ಮಿಕರ ಉದಾಹರಣೆಯನ್ನು ಉದಾಹರಿಸಿ, ಈ ಸಂಕಷ್ಟದ ಸಮಯದಲ್ಲಿ ನರೇಗಾ ಹೇಗೆ “ಸಕಾರಾತ್ಮಕ ಪಾತ್ರ” ವಹಿಸಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಗುಜರಾತ್‌ನಲ್ಲಿ ದಾಹೋಡ್‌‌ ಜಿಲ್ಲೆ ಅತೀ ಹೆಚ್ಚು ನರೇಗಾ ಚಟುವಟಿಕೆ ಏರ್ಪಟ್ಟ ಜಿಲ್ಲೆಯಾಗಿದೆ. ಅಲ್ಲಿ ಸುಮಾರು 2.38 ಲಕ್ಷ ಜನರು ಉದ್ಯೋಗ ಪಡೆದುಕೊಂಡಿದ್ದಾರೆ. ನಂತರದ ಸ್ಥಾನದಲ್ಲಿ ಭಾವನಗರ (77,659) ಮತ್ತು ನರ್ಮದಾ (59,208) ಜಿಲ್ಲೆಗಳು ಸೇರಿದೆ.

ಇದನ್ನೂ ಓದಿ: ಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...