Homeಮುಖಪುಟ‘ಬಡತನದ ಸ್ಮಾರಕ’ ಎಂದು ಮೋದಿ ಟೀಕಿಸಿದ್ದ ನರೇಗಾ ಯೋಜನೆಯನ್ನು, ‘ಜೀವಸೆಳೆ’ ಎಂದ ಗುಜರಾತ್‌ ಸರ್ಕಾರ!

‘ಬಡತನದ ಸ್ಮಾರಕ’ ಎಂದು ಮೋದಿ ಟೀಕಿಸಿದ್ದ ನರೇಗಾ ಯೋಜನೆಯನ್ನು, ‘ಜೀವಸೆಳೆ’ ಎಂದ ಗುಜರಾತ್‌ ಸರ್ಕಾರ!

- Advertisement -
- Advertisement -

ಕಳೆದ ವರ್ಷದ ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ತಮ್ಮ ಹಳ್ಳಿಗಳಿಗೆ ಮರಳಿದ್ದ ವಲಸೆ ಕಾರ್ಮಿಕರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ)ಯು “ಜೀವಸೆಳೆ” ಆಗಿ ಪರಿಣಮಿಸಿತು ಎಂದು ಕಳೆದ ವಾರ ಗುಜರಾತ್‌‌ ಮುಖ್ಯಮಂತ್ರಿ ವಿಜಯ್‌‌ ರೂಪಾನಿ ಬಿಡುಗಡೆ ಮಾಡಿದ ವರದಿಯಲ್ಲಿ ರಾಜ್ಯ ಸರ್ಕಾರ ಶ್ಲಾಘಿಸಿದೆ.

ನರೇಗಾ ಯೋಜನೆಯು ಕಾಂಗ್ರೆಸ್ ನೇತೃತ್ವ ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ಜಾರಿ ಮಾಡಲಾಗಿದ್ದ ಮಹಾತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದು ಗ್ರಾಮೀಣ ಪ್ರದೇಶದ ಜನರಿಗೆ ನೂರು ದಿನಗಳವರೆಗೂ ಉದ್ಯೋಗವನ್ನು ನೀಡುತ್ತದೆ. ಈ ಯೋಜನೆಯು ಗ್ರಾಮೀಣ ಪ್ರದೇಶದ ಜನರ ವಲಸೆಯನ್ನು ತಪ್ಪಿಸಿದೆ ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಾರೆ.

ಪ್ರಧಾನಿ ಮೋದಿ 2015 ರಲ್ಲಿ, “ಬಡತನವನ್ನು ನಿಭಾಯಿಸುವಲ್ಲಿ 60 ವರ್ಷಗಳಿಂದ ವಿಫಲವಾದ ಕಾಂಗ್ರೆಸ್‌ ಪಕ್ಷದ ಜೀವಂತ ಸ್ಮಾರಕ” ಎಂದು ಈ ಯೋಜನೆಯನ್ನು ಸಂಸತ್ತಿನಲ್ಲಿ ಟೀಕಿಸಿದ್ದರು.

ಇದನ್ನೂ ಓದಿ: ಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

“ಕಳೆದ ವರ್ಷ ಕೊರೊನಾ ಲಾಕ್‌ಡೌನ್ ನಂತರ, ಗುಜರಾತ್‌ನ ಬುಡಕಟ್ಟು ಜಿಲ್ಲೆಯಾದ ದಾಹೋಡ್‌ನ ಹಳ್ಳಿಗಳಿಗೆ ಸರಿಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರು ಮರಳಿದರು. ಇವರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಸರ್ಕಾರವು ಕಾರ್ಯನಿರ್ವಹಿಸುತ್ತಿದೆ. ನರೇಗಾ ಯೋಜನೆಯು ತಮ್ಮ ಮನೆಗಳಿಗೆ ಮರಳುವಂತೆ ಅನಿವಾರ್ಯ ಪರಿಸ್ಥಿತಿಗೆ ಬಿದ್ದ ಕಾರ್ಮಿಕರಿಗೆ ಜೀವಸೆಳೆಯಾಗಿದೆ” ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿದ ವರದಿಯು ಬಣ್ಣಿಸಿದೆ.

ದಾಹೋಡ್‌ನ ಧಾರಾ ಡೊಂಗ್ರಿ ಗ್ರಾಮದಲ್ಲಿ, ಸಣ್ಣ ಭೂಹಿಡುವಳಿ ಮತ್ತು ನೀರಾವರಿ ಸೌಲಭ್ಯಗಳಿಲ್ಲದ ವಲಸೆ ಕಾರ್ಮಿಕರು ನರೇಗಾ ಅಡಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

“ವಲಸಿಗ ಕಾರ್ಮಿಕರು ನಗರಗಳಲ್ಲಿ ಗಳಿಸುತ್ತಿರುವುದಕ್ಕೆ ಹೋಲಿಸಿದರೆ, ನರೇಗಾ ಅಡಿಯಲ್ಲಿನ ವೇತನವು ಕನಿಷ್ಠವಾಗಿದ್ದರೂ (ದಿನಕ್ಕೆ 224 ರೂ.),ಕೊರೊನಾದಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮ ಕುಟುಂಬವನ್ನು ನಿಭಾಯಿಸಲು ಇದು ನೆರವಾಯಿತು” ಎಂದು ವರದಿ ಹೇಳುತ್ತದೆ. ಅದೇ ಹಳ್ಳಿಯ ಗುತ್ತಿಗೆ ಕಾರ್ಮಿಕರ ಉದಾಹರಣೆಯನ್ನು ಉದಾಹರಿಸಿ, ಈ ಸಂಕಷ್ಟದ ಸಮಯದಲ್ಲಿ ನರೇಗಾ ಹೇಗೆ “ಸಕಾರಾತ್ಮಕ ಪಾತ್ರ” ವಹಿಸಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಗುಜರಾತ್‌ನಲ್ಲಿ ದಾಹೋಡ್‌‌ ಜಿಲ್ಲೆ ಅತೀ ಹೆಚ್ಚು ನರೇಗಾ ಚಟುವಟಿಕೆ ಏರ್ಪಟ್ಟ ಜಿಲ್ಲೆಯಾಗಿದೆ. ಅಲ್ಲಿ ಸುಮಾರು 2.38 ಲಕ್ಷ ಜನರು ಉದ್ಯೋಗ ಪಡೆದುಕೊಂಡಿದ್ದಾರೆ. ನಂತರದ ಸ್ಥಾನದಲ್ಲಿ ಭಾವನಗರ (77,659) ಮತ್ತು ನರ್ಮದಾ (59,208) ಜಿಲ್ಲೆಗಳು ಸೇರಿದೆ.

ಇದನ್ನೂ ಓದಿ: ಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....