Homeಮುಖಪುಟ‘ಬಡತನದ ಸ್ಮಾರಕ’ ಎಂದು ಮೋದಿ ಟೀಕಿಸಿದ್ದ ನರೇಗಾ ಯೋಜನೆಯನ್ನು, ‘ಜೀವಸೆಳೆ’ ಎಂದ ಗುಜರಾತ್‌ ಸರ್ಕಾರ!

‘ಬಡತನದ ಸ್ಮಾರಕ’ ಎಂದು ಮೋದಿ ಟೀಕಿಸಿದ್ದ ನರೇಗಾ ಯೋಜನೆಯನ್ನು, ‘ಜೀವಸೆಳೆ’ ಎಂದ ಗುಜರಾತ್‌ ಸರ್ಕಾರ!

- Advertisement -
- Advertisement -

ಕಳೆದ ವರ್ಷದ ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ತಮ್ಮ ಹಳ್ಳಿಗಳಿಗೆ ಮರಳಿದ್ದ ವಲಸೆ ಕಾರ್ಮಿಕರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ)ಯು “ಜೀವಸೆಳೆ” ಆಗಿ ಪರಿಣಮಿಸಿತು ಎಂದು ಕಳೆದ ವಾರ ಗುಜರಾತ್‌‌ ಮುಖ್ಯಮಂತ್ರಿ ವಿಜಯ್‌‌ ರೂಪಾನಿ ಬಿಡುಗಡೆ ಮಾಡಿದ ವರದಿಯಲ್ಲಿ ರಾಜ್ಯ ಸರ್ಕಾರ ಶ್ಲಾಘಿಸಿದೆ.

ನರೇಗಾ ಯೋಜನೆಯು ಕಾಂಗ್ರೆಸ್ ನೇತೃತ್ವ ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ಜಾರಿ ಮಾಡಲಾಗಿದ್ದ ಮಹಾತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದು ಗ್ರಾಮೀಣ ಪ್ರದೇಶದ ಜನರಿಗೆ ನೂರು ದಿನಗಳವರೆಗೂ ಉದ್ಯೋಗವನ್ನು ನೀಡುತ್ತದೆ. ಈ ಯೋಜನೆಯು ಗ್ರಾಮೀಣ ಪ್ರದೇಶದ ಜನರ ವಲಸೆಯನ್ನು ತಪ್ಪಿಸಿದೆ ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಾರೆ.

ಪ್ರಧಾನಿ ಮೋದಿ 2015 ರಲ್ಲಿ, “ಬಡತನವನ್ನು ನಿಭಾಯಿಸುವಲ್ಲಿ 60 ವರ್ಷಗಳಿಂದ ವಿಫಲವಾದ ಕಾಂಗ್ರೆಸ್‌ ಪಕ್ಷದ ಜೀವಂತ ಸ್ಮಾರಕ” ಎಂದು ಈ ಯೋಜನೆಯನ್ನು ಸಂಸತ್ತಿನಲ್ಲಿ ಟೀಕಿಸಿದ್ದರು.

ಇದನ್ನೂ ಓದಿ: ಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

“ಕಳೆದ ವರ್ಷ ಕೊರೊನಾ ಲಾಕ್‌ಡೌನ್ ನಂತರ, ಗುಜರಾತ್‌ನ ಬುಡಕಟ್ಟು ಜಿಲ್ಲೆಯಾದ ದಾಹೋಡ್‌ನ ಹಳ್ಳಿಗಳಿಗೆ ಸರಿಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರು ಮರಳಿದರು. ಇವರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಸರ್ಕಾರವು ಕಾರ್ಯನಿರ್ವಹಿಸುತ್ತಿದೆ. ನರೇಗಾ ಯೋಜನೆಯು ತಮ್ಮ ಮನೆಗಳಿಗೆ ಮರಳುವಂತೆ ಅನಿವಾರ್ಯ ಪರಿಸ್ಥಿತಿಗೆ ಬಿದ್ದ ಕಾರ್ಮಿಕರಿಗೆ ಜೀವಸೆಳೆಯಾಗಿದೆ” ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿದ ವರದಿಯು ಬಣ್ಣಿಸಿದೆ.

ದಾಹೋಡ್‌ನ ಧಾರಾ ಡೊಂಗ್ರಿ ಗ್ರಾಮದಲ್ಲಿ, ಸಣ್ಣ ಭೂಹಿಡುವಳಿ ಮತ್ತು ನೀರಾವರಿ ಸೌಲಭ್ಯಗಳಿಲ್ಲದ ವಲಸೆ ಕಾರ್ಮಿಕರು ನರೇಗಾ ಅಡಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

“ವಲಸಿಗ ಕಾರ್ಮಿಕರು ನಗರಗಳಲ್ಲಿ ಗಳಿಸುತ್ತಿರುವುದಕ್ಕೆ ಹೋಲಿಸಿದರೆ, ನರೇಗಾ ಅಡಿಯಲ್ಲಿನ ವೇತನವು ಕನಿಷ್ಠವಾಗಿದ್ದರೂ (ದಿನಕ್ಕೆ 224 ರೂ.),ಕೊರೊನಾದಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮ ಕುಟುಂಬವನ್ನು ನಿಭಾಯಿಸಲು ಇದು ನೆರವಾಯಿತು” ಎಂದು ವರದಿ ಹೇಳುತ್ತದೆ. ಅದೇ ಹಳ್ಳಿಯ ಗುತ್ತಿಗೆ ಕಾರ್ಮಿಕರ ಉದಾಹರಣೆಯನ್ನು ಉದಾಹರಿಸಿ, ಈ ಸಂಕಷ್ಟದ ಸಮಯದಲ್ಲಿ ನರೇಗಾ ಹೇಗೆ “ಸಕಾರಾತ್ಮಕ ಪಾತ್ರ” ವಹಿಸಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಗುಜರಾತ್‌ನಲ್ಲಿ ದಾಹೋಡ್‌‌ ಜಿಲ್ಲೆ ಅತೀ ಹೆಚ್ಚು ನರೇಗಾ ಚಟುವಟಿಕೆ ಏರ್ಪಟ್ಟ ಜಿಲ್ಲೆಯಾಗಿದೆ. ಅಲ್ಲಿ ಸುಮಾರು 2.38 ಲಕ್ಷ ಜನರು ಉದ್ಯೋಗ ಪಡೆದುಕೊಂಡಿದ್ದಾರೆ. ನಂತರದ ಸ್ಥಾನದಲ್ಲಿ ಭಾವನಗರ (77,659) ಮತ್ತು ನರ್ಮದಾ (59,208) ಜಿಲ್ಲೆಗಳು ಸೇರಿದೆ.

ಇದನ್ನೂ ಓದಿ: ಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...