Homeಮುಖಪುಟಗುಜರಾತ್ | ಸರ್ಕಾರಿ ಯೋಜನೆಯ ಹಣಕ್ಕಾಗಿ ಸಮಸ್ಯೆಗಳಿಲ್ಲದ ಜನರಿಗೆ ಹೃದಯ ಚಿಕಿತ್ಸೆ; ಇಬ್ಬರು ಸಾವು

ಗುಜರಾತ್ | ಸರ್ಕಾರಿ ಯೋಜನೆಯ ಹಣಕ್ಕಾಗಿ ಸಮಸ್ಯೆಗಳಿಲ್ಲದ ಜನರಿಗೆ ಹೃದಯ ಚಿಕಿತ್ಸೆ; ಇಬ್ಬರು ಸಾವು

- Advertisement -
- Advertisement -

ಗುಜರಾತಿನ ಅಹ್ಮದಾಬಾದ್‌ನ ಖ್ಯಾತಿ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ವ್ಯಕ್ತಿಗಳ ಸಾವಿನ ನಂತರ ಪ್ರತಿಭಟನಾಕಾರರು ಆಸ್ಪತ್ರೆಯನ್ನು ಧ್ವಂಸಗೊಳಿಸಿರುವ ಘಟನೆ ಮಂಗಳವಾರ ನಡೆದಿದೆ. ಸರ್ಕಾರಿ ಆರೋಗ್ಯ ಯೋಜನೆಯ ಹಣಕ್ಕಾಗಿ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದ ಜನರಿಗೆ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟೆಂಟ್ ಅಳವಡಿಕೆಗಳನ್ನು ಆಸ್ಪತ್ರೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಗುಜರಾತ್

ಆಸ್ಪತ್ರೆಯು ವೈದ್ಯಕೀಯ ಶಿಬಿರವನ್ನು ಸರ್ಕಾರಿ ಆರೋಗ್ಯ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಮತ್ತು ಯಾವುದೇ ಪೂರ್ವ ಆರೋಗ್ಯ ಸಮಸ್ಯೆಗಳಿಲ್ಲದ ಜನರಿಗೆ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟೆಂಟ್ ಅಳವಡಿಕೆಗಳನ್ನು ನಡೆಸುತ್ತಿದೆ ಎಂದು ಆರೋಪಿಸಲಾಗಿದೆ. ”ಆಸ್ಪತ್ರೆಯು ಆರೋಗ್ಯ ಶಿಬಿರವನ್ನು ಆಯೋಜಿಸಿ ಕಡಿ ತಾಲೂಕಿನ ಬೋರಿಸಾನ ಗ್ರಾಮದ ಜನರನ್ನು ದಿನನಿತ್ಯದ ತಪಾಸಣೆಗಾಗಿ ಆಕರ್ಷಿಸಿತ್ತು” ಎಂದು ವರದಿಗಳು ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಖ್ಯಾತಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಎರಡು ದಿನಗಳ ಹಿಂದೆ ಆರೋಗ್ಯ ಶಿಬಿರಕ್ಕಾಗಿ ನಮ್ಮ ಗ್ರಾಮಕ್ಕೆ ಆಗಮಿಸಿದ್ದರು. ಶಿಬಿರದಲ್ಲಿ ಭಾಗವಹಿಸಿದ ಜನರ ವಿವರಗಳನ್ನು ದಾಖಲಿಸಿದ ನಂತರ, ಆಸ್ಪತ್ರೆಯು ಹೆಚ್ಚಿನ ಪರೀಕ್ಷೆಯ ನೆಪದಲ್ಲಿ 17 18 ಜನರನ್ನು ಐಷಾರಾಮಿ ಬಸ್‌ನಲ್ಲಿ ಸಾಗಿಸಿತ್ತು” ಎಂದು ಕಡಿಯ ಬೋರಿಸಾನ ಗ್ರಾಮದ ಸರಪಂಚ್ ಹೇಳಿದ್ದಾರೆ. ಗುಜರಾತ್

ಇಬ್ಬರು ರೋಗಿಗಳು ಸಾವನ್ನಪ್ಪಿದ್ದು, ಐವರು ಐಸಿಯುನಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಇದಕ್ಕೆ ಪ್ರತಿಯಾಗಿ, ಆಕ್ರೋಶಗೊಂಡ ಗ್ರಾಮಸ್ಥರು ಇಂದು ಮುಂಜಾನೆ ಆಸ್ಪತ್ರೆಗೆ ಮುತ್ತಿಗೆ ಹಾಕಿ, ಆಸ್ಪತ್ರೆಯನ್ನು ಧ್ವಂಸಗೊಳಿಸಿ ಪ್ರತಿಭಟಿಸಿದ್ದಾರೆ.

“ವೈದ್ಯಕೀಯ ಶಿಬಿರಕ್ಕೆ ನನ್ನ ಮಾವ ಹಾಜರಾಗಿದ್ದರು. ಅವರಿಗೆ ಯಾವುದೆ ಕಾಯಿಲೆ ಇಲ್ಲದಿದ್ದರೂ, ಅಹಮದಾಬಾದ್‌ಗೆ ಬಂದು ಅವರಿಗೆ ಹೆಚ್ಚಿನ ಚಿಕಿತ್ಸೆ ಪಡೆಯುವಂತೆ ಮತ್ತು ಅದಕ್ಕಾಗಿ ಕಾರನ್ನು ಕಳುಹಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ನನ್ನ ಮಾವನನ್ನು ಕೊಂದರು” ಎಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ನಾಗರ್‌ಭಾಯ್ ಸೆಂಮಾ ಅವರ ಸೊಸೆ ಅಮರತ್ ಬೆನ್ ಅವರು ದುಃಖಿತರಾಗಿ ಹೇಳಿದ್ದಾರೆ.

ಖ್ಯಾತಿ ಆಸ್ಪತ್ರೆಯ ಸಿಇಒ ಚಿರಾಗ್ ರಜಪೂತ್ ಮಾತನಾಡಿ,”ನಮ್ಮ ಆಸ್ಪತ್ರೆಯು ನವೆಂಬರ್ 10 ರಂದು ಬೊರಿಸಾನಾ ಗ್ರಾಮದಲ್ಲಿ ಶಿಬಿರವನ್ನು ನಡೆಸಿತು. ಅದರಲ್ಲಿ ಅನೇಕ ಜನರು ಭಾಗವಹಿಸಿದ್ದರು. ಸುಮಾರು 20 ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿತ್ತು. ಹಾಗಾಗಿ ನವೆಂಬರ್ 11 ರಂದು ಸ್ವಯಂಪ್ರೇರಣೆಯಿಂದ ನಮ್ಮ ಅಹಮದಾಬಾದ್ ಆಸ್ಪತ್ರೆಗೆ ಅವರು ಬಂದಿದ್ದರು. ಅದರಲ್ಲಿ ಎಲ್ಲರೂ ಆಂಜಿಯೋಗ್ರಫಿಗೆ ಒಳಗಾದರು ಮತ್ತು ಏಳು ಮಂದಿ ಆಂಜಿಯೋಪ್ಲಾಸ್ಟಿ ಮಾಡಿದ್ದರು. ದುರಂತವೆಂದರೆ ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಪೊಲೀಸರ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ’’ ಎಂದು ಹೇಳಿದ್ದಾರೆ.

20 ಗ್ರಾಮಸ್ಥರಿಗೆ ಚಿಕಿತ್ಸೆ ನೀಡಲು ಅವರ ಕುಟುಂಬದ ಒಪ್ಪಿಗೆಯನ್ನು ಆಸ್ಪತ್ರೆ ಪಡೆದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ಅವರು ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಾರೆ” ಎಂದು ಹೇಳಿದ್ದಾರೆ.

ಖ್ಯಾತಿ ಆಸ್ಪತ್ರೆಯಲ್ಲಿ ನಡೆದ ಆಪಾದಿತ ಘಟನೆಯು “ಅತ್ಯಂತ ಗಂಭೀರವಾಗಿದೆ” ಎಂದು ಗುಜರಾತ್ ಆರೋಗ್ಯ ಸಚಿವ ರಿಷಿಕೇಶ್ ಪಟೇಲ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ. “PMJAY ಅಡಿಯಲ್ಲಿ ರಾಜ್ಯ ವಂಚನೆ ನಿಗ್ರಹ ಘಟಕದಿಂದ (SAFU) ತಕ್ಷಣದ ತನಿಖೆಗೆ ನಾನು ಆದೇಶಿಸಿದ್ದೇನೆ. ವೈದ್ಯಕೀಯ ನಿರ್ಲಕ್ಷ್ಯದ ಪುರಾವೆಗಳು ಅಥವಾ ಈ ಆರೋಪಗಳಿಗೆ ಯಾವುದೇ ಸಿಂಧುತ್ವ ಕಂಡುಬಂದಲ್ಲಿ, ಆಸ್ಪತ್ರೆ ಮತ್ತು ಸಂಬಂಧಿತ ವೈದ್ಯರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....