Homeಮುಖಪುಟಗುಜರಾತ್ | ಸರ್ಕಾರಿ ಯೋಜನೆಯ ಹಣಕ್ಕಾಗಿ ಸಮಸ್ಯೆಗಳಿಲ್ಲದ ಜನರಿಗೆ ಹೃದಯ ಚಿಕಿತ್ಸೆ; ಇಬ್ಬರು ಸಾವು

ಗುಜರಾತ್ | ಸರ್ಕಾರಿ ಯೋಜನೆಯ ಹಣಕ್ಕಾಗಿ ಸಮಸ್ಯೆಗಳಿಲ್ಲದ ಜನರಿಗೆ ಹೃದಯ ಚಿಕಿತ್ಸೆ; ಇಬ್ಬರು ಸಾವು

- Advertisement -
- Advertisement -

ಗುಜರಾತಿನ ಅಹ್ಮದಾಬಾದ್‌ನ ಖ್ಯಾತಿ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ವ್ಯಕ್ತಿಗಳ ಸಾವಿನ ನಂತರ ಪ್ರತಿಭಟನಾಕಾರರು ಆಸ್ಪತ್ರೆಯನ್ನು ಧ್ವಂಸಗೊಳಿಸಿರುವ ಘಟನೆ ಮಂಗಳವಾರ ನಡೆದಿದೆ. ಸರ್ಕಾರಿ ಆರೋಗ್ಯ ಯೋಜನೆಯ ಹಣಕ್ಕಾಗಿ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದ ಜನರಿಗೆ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟೆಂಟ್ ಅಳವಡಿಕೆಗಳನ್ನು ಆಸ್ಪತ್ರೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಗುಜರಾತ್

ಆಸ್ಪತ್ರೆಯು ವೈದ್ಯಕೀಯ ಶಿಬಿರವನ್ನು ಸರ್ಕಾರಿ ಆರೋಗ್ಯ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಮತ್ತು ಯಾವುದೇ ಪೂರ್ವ ಆರೋಗ್ಯ ಸಮಸ್ಯೆಗಳಿಲ್ಲದ ಜನರಿಗೆ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟೆಂಟ್ ಅಳವಡಿಕೆಗಳನ್ನು ನಡೆಸುತ್ತಿದೆ ಎಂದು ಆರೋಪಿಸಲಾಗಿದೆ. ”ಆಸ್ಪತ್ರೆಯು ಆರೋಗ್ಯ ಶಿಬಿರವನ್ನು ಆಯೋಜಿಸಿ ಕಡಿ ತಾಲೂಕಿನ ಬೋರಿಸಾನ ಗ್ರಾಮದ ಜನರನ್ನು ದಿನನಿತ್ಯದ ತಪಾಸಣೆಗಾಗಿ ಆಕರ್ಷಿಸಿತ್ತು” ಎಂದು ವರದಿಗಳು ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಖ್ಯಾತಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಎರಡು ದಿನಗಳ ಹಿಂದೆ ಆರೋಗ್ಯ ಶಿಬಿರಕ್ಕಾಗಿ ನಮ್ಮ ಗ್ರಾಮಕ್ಕೆ ಆಗಮಿಸಿದ್ದರು. ಶಿಬಿರದಲ್ಲಿ ಭಾಗವಹಿಸಿದ ಜನರ ವಿವರಗಳನ್ನು ದಾಖಲಿಸಿದ ನಂತರ, ಆಸ್ಪತ್ರೆಯು ಹೆಚ್ಚಿನ ಪರೀಕ್ಷೆಯ ನೆಪದಲ್ಲಿ 17 18 ಜನರನ್ನು ಐಷಾರಾಮಿ ಬಸ್‌ನಲ್ಲಿ ಸಾಗಿಸಿತ್ತು” ಎಂದು ಕಡಿಯ ಬೋರಿಸಾನ ಗ್ರಾಮದ ಸರಪಂಚ್ ಹೇಳಿದ್ದಾರೆ. ಗುಜರಾತ್

ಇಬ್ಬರು ರೋಗಿಗಳು ಸಾವನ್ನಪ್ಪಿದ್ದು, ಐವರು ಐಸಿಯುನಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಇದಕ್ಕೆ ಪ್ರತಿಯಾಗಿ, ಆಕ್ರೋಶಗೊಂಡ ಗ್ರಾಮಸ್ಥರು ಇಂದು ಮುಂಜಾನೆ ಆಸ್ಪತ್ರೆಗೆ ಮುತ್ತಿಗೆ ಹಾಕಿ, ಆಸ್ಪತ್ರೆಯನ್ನು ಧ್ವಂಸಗೊಳಿಸಿ ಪ್ರತಿಭಟಿಸಿದ್ದಾರೆ.

“ವೈದ್ಯಕೀಯ ಶಿಬಿರಕ್ಕೆ ನನ್ನ ಮಾವ ಹಾಜರಾಗಿದ್ದರು. ಅವರಿಗೆ ಯಾವುದೆ ಕಾಯಿಲೆ ಇಲ್ಲದಿದ್ದರೂ, ಅಹಮದಾಬಾದ್‌ಗೆ ಬಂದು ಅವರಿಗೆ ಹೆಚ್ಚಿನ ಚಿಕಿತ್ಸೆ ಪಡೆಯುವಂತೆ ಮತ್ತು ಅದಕ್ಕಾಗಿ ಕಾರನ್ನು ಕಳುಹಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ನನ್ನ ಮಾವನನ್ನು ಕೊಂದರು” ಎಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ನಾಗರ್‌ಭಾಯ್ ಸೆಂಮಾ ಅವರ ಸೊಸೆ ಅಮರತ್ ಬೆನ್ ಅವರು ದುಃಖಿತರಾಗಿ ಹೇಳಿದ್ದಾರೆ.

ಖ್ಯಾತಿ ಆಸ್ಪತ್ರೆಯ ಸಿಇಒ ಚಿರಾಗ್ ರಜಪೂತ್ ಮಾತನಾಡಿ,”ನಮ್ಮ ಆಸ್ಪತ್ರೆಯು ನವೆಂಬರ್ 10 ರಂದು ಬೊರಿಸಾನಾ ಗ್ರಾಮದಲ್ಲಿ ಶಿಬಿರವನ್ನು ನಡೆಸಿತು. ಅದರಲ್ಲಿ ಅನೇಕ ಜನರು ಭಾಗವಹಿಸಿದ್ದರು. ಸುಮಾರು 20 ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿತ್ತು. ಹಾಗಾಗಿ ನವೆಂಬರ್ 11 ರಂದು ಸ್ವಯಂಪ್ರೇರಣೆಯಿಂದ ನಮ್ಮ ಅಹಮದಾಬಾದ್ ಆಸ್ಪತ್ರೆಗೆ ಅವರು ಬಂದಿದ್ದರು. ಅದರಲ್ಲಿ ಎಲ್ಲರೂ ಆಂಜಿಯೋಗ್ರಫಿಗೆ ಒಳಗಾದರು ಮತ್ತು ಏಳು ಮಂದಿ ಆಂಜಿಯೋಪ್ಲಾಸ್ಟಿ ಮಾಡಿದ್ದರು. ದುರಂತವೆಂದರೆ ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಪೊಲೀಸರ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ’’ ಎಂದು ಹೇಳಿದ್ದಾರೆ.

20 ಗ್ರಾಮಸ್ಥರಿಗೆ ಚಿಕಿತ್ಸೆ ನೀಡಲು ಅವರ ಕುಟುಂಬದ ಒಪ್ಪಿಗೆಯನ್ನು ಆಸ್ಪತ್ರೆ ಪಡೆದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ಅವರು ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಾರೆ” ಎಂದು ಹೇಳಿದ್ದಾರೆ.

ಖ್ಯಾತಿ ಆಸ್ಪತ್ರೆಯಲ್ಲಿ ನಡೆದ ಆಪಾದಿತ ಘಟನೆಯು “ಅತ್ಯಂತ ಗಂಭೀರವಾಗಿದೆ” ಎಂದು ಗುಜರಾತ್ ಆರೋಗ್ಯ ಸಚಿವ ರಿಷಿಕೇಶ್ ಪಟೇಲ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ. “PMJAY ಅಡಿಯಲ್ಲಿ ರಾಜ್ಯ ವಂಚನೆ ನಿಗ್ರಹ ಘಟಕದಿಂದ (SAFU) ತಕ್ಷಣದ ತನಿಖೆಗೆ ನಾನು ಆದೇಶಿಸಿದ್ದೇನೆ. ವೈದ್ಯಕೀಯ ನಿರ್ಲಕ್ಷ್ಯದ ಪುರಾವೆಗಳು ಅಥವಾ ಈ ಆರೋಪಗಳಿಗೆ ಯಾವುದೇ ಸಿಂಧುತ್ವ ಕಂಡುಬಂದಲ್ಲಿ, ಆಸ್ಪತ್ರೆ ಮತ್ತು ಸಂಬಂಧಿತ ವೈದ್ಯರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...