Homeಮುಖಪುಟಶಾಲಾ ಮಕ್ಕಳಿಗೆ 'ಭಗವದ್ಗೀತೆ' ಬೋಧನೆ: ಪೂರಕ ಪಠ್ಯ ಬಿಡುಗಡೆ

ಶಾಲಾ ಮಕ್ಕಳಿಗೆ ‘ಭಗವದ್ಗೀತೆ’ ಬೋಧನೆ: ಪೂರಕ ಪಠ್ಯ ಬಿಡುಗಡೆ

- Advertisement -
- Advertisement -

ಗುಜರಾತ್ ಸರಕಾರವು ಶಾಲಾ ಮಕ್ಕಳಿಗೆ ‘ಭಗವದ್ಗೀತೆ’ ಕುರಿತು ಕಲಿಸಲು ಪೂರಕ ಪಠ್ಯಪುಸ್ತಕವನ್ನು ಬಿಡುಗಡೆ ಮಾಡಿದ್ದು, ಮುಂದಿನ ವರ್ಷದಿಂದಲೇ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ‘ಭಗವದ್ಗೀತೆ’ ಬೋಧಿಸುವುದಾಗಿ ಹೇಳಿದೆ.

ಗುಜರಾತ್‌ನಲ್ಲಿ ಮುಂಬರುವ ಶೈಕ್ಷಣಿಕ ವರ್ಷದಂದಲೇ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಪಾಠಗಳನ್ನು ಕಲಿಸಲಾಗುತ್ತಿದೆ. ಗೀತಾ ಜಯಂತಿಯಂದು ಈ ಘೋಷಣೆ ಮಾಡಲಾಗಿದೆ. ಗುಜರಾತ್‌ನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆಯಲ್ಲಿರುವ ಆಧ್ಯಾತ್ಮಿಕ ತತ್ವಗಳನ್ನು ಪೂರಕ ಪಠ್ಯಪುಸ್ತಕದ ಮೂಲಕ ಬೋಧನಾ ಕಾರ್ಯ ನಡೆಯಲಿದೆ.

ಗುಜರಾತ್‌ನ ಶಿಕ್ಷಣ ರಾಜ್ಯ ಸಚಿವ ಪ್ರಫುಲ್ ಪನ್ಶೇರಿಯಾ ಈ ಕುರಿತು ಮಾಹಿತಿ ನೀಡಿದ್ದು, 6ರಿಂದ 8ನೇ ತರಗತಿಯ ಪಠ್ಯಕ್ರಮದಲ್ಲಿ ಭಗವದ್ಗೀತೆಯಿಂದ ಆಯ್ದ ಆಧ್ಯಾತ್ಮಿಕ ತತ್ವಗಳು ಮತ್ತು ಮೌಲ್ಯಗಳನ್ನು ಪೂರಕ ಪಠ್ಯಪುಸ್ತಕವಾಗಿ ಸೇರಿಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ನಿರ್ಧಾರವು 3 ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿಯ ತತ್ವಗಳೊಂದಿಗೆ ಹೊಂದಿಕೆಯಾಗುತ್ತದೆ ಎಂದು ಹೇಳಿದ್ದಾರೆ.

ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಕೃತಜ್ಞತೆಗಳು. ಈ ಮೂಲಕ ವಿದ್ಯಾರ್ಥಿಗಳಿಗೆ  ಭಾರತದ ಶ್ರೀಮಂತ, ವೈವಿಧ್ಯಮಯ, ಪ್ರಾಚೀನ ಸಂಸ್ಕೃತಿ ಮತ್ತು ಸಂಪ್ರದಾಯಗಳ ಜ್ಞಾನ ಸಿಗಲಿದೆ. ಪೂಜ್ಯ ಗ್ರಂಥವನ್ನು ಆಧರಿಸಿದ ಪೂರಕ ಪಠ್ಯಪುಸ್ತಕವು ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳನ್ನು ತುಂಬುತ್ತದೆ. 6 ರಿಂದ 8ನೇ ತರಗತಿಗಳಿಗೆ ಮೊದಲ ಭಾಗವನ್ನು ಶೀಘ್ರದಲ್ಲೇ ದೇಶಾದ್ಯಂತ ಶಾಲೆಗಳಿಗೆ ವಿತರಿಸಲಾಗುವುದು ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020ರಡಿಯಲ್ಲಿ ತೆಗೆದುಕೊಂಡ ಈ ನಿರ್ಧಾರವು ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪನ್ಶೇರಿಯಾ ಹೇಳಿದರು.

ಮಾ.2022ರಲ್ಲಿ ಗುಜರಾತ್ ಸರ್ಕಾರವು ಭಗವದ್ಗೀತೆಯನ್ನು 6ರಿಂದ 12ನೇ ತರಗತಿಗಳಿಗೆ ರಾಜ್ಯದಾದ್ಯಂತ ಶಾಲಾ ಪಠ್ಯಕ್ರಮದಲ್ಲಿ ಕಲಿಸಲಿದೆ ಎಂದು ಗುಜರಾತ್‌ ಸರಕಾರವು ವಿಧಾನಸಭೆಯಲ್ಲಿ ಹೇಳಿತ್ತು.

ಈ ಬಗ್ಗೆ ಮಾತನಾಡಿದ ಗುಜರಾತ್ ಸರ್ಕಾರದ ಬುಡಕಟ್ಟು ಅಭಿವೃದ್ಧಿ, ಪ್ರಾಥಮಿಕ, ಮಾಧ್ಯಮಿಕ ಮತ್ತು ವಯಸ್ಕ ಶಿಕ್ಷಣದ ಸಚಿವ ಕುಬೇರ್ ದಿಂಡೋರ್, ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರವಾಗಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ನೇತೃತ್ವದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಗುಜರಾತ್ ಶಿಕ್ಷಣ ಇಲಾಖೆಯು ಸಂಸ್ಕೃತ ಶ್ಲೋಕಗಳು, ಭಗವದ್ಗೀತೆಯ ಗುಜರಾತ್‌ನಲ್ಲಿ ಭಾಷಾಂತರವನ್ನು ಹೊಂದಿರುವ ಪೂರಕ ಪಠ್ಯಪುಸ್ತಕವನ್ನು ಬಿಡುಗಡೆ ಮಾಡಿದೆ. ಜೀವನ ಮೌಲ್ಯಗಳ ಪಾಠಗಳನ್ನು ಕಲಿಸುವ ಈ ಪುಸ್ತಕವನ್ನು ಅಧ್ಯಯನದ ಅನುಕ್ರಮದಲ್ಲಿ ಸೇರಿಸುವ ಮೂಲಕ ಮಕ್ಕಳಲ್ಲಿ ಜೀವನದ ಮೌಲ್ಯಗಳು ಮತ್ತು ಕರ್ಮದ ತತ್ವಗಳನ್ನು ಬಲಪಡಿಸುವುದು ಗುರಿಯಾಗಿದೆ ಎಂದು ಅದು ಹೇಳಿದೆ. ಇಲಾಖೆಯು 12ನೇ ತರಗತಿಯವರೆಗೆ ಭಗವದ್ಗೀತೆ ಪಾಠಗಳನ್ನು ಸೇರಿಸಲು ಸಿದ್ದತೆ ನಡೆಸುತ್ತಿದೆ.

ಇದನ್ನು ಓದಿ: ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...