Homeಅಂಕಣಗಳುಧರ್ಮಗಳನು ಮೀರಿದ ಈ ಮಾತೃತ್ವ

ಧರ್ಮಗಳನು ಮೀರಿದ ಈ ಮಾತೃತ್ವ

- Advertisement -
- Advertisement -

ಗೌರಿ ಲಂಕೇಶ್
20 ಆಗಸ್ಟ್, 2008 (`ಕಂಡಹಾಗೆ’ ಸಂಪಾದಕೀಯದಿಂದ) |

ನಾನು ಸಿನಿಕಳಲ್ಲ. ಆದ್ದರಿಂದ ನಮ್ಮ ದೇಶಕ್ಕೆ ಇನ್ನೂ ಭವಿಷ್ಯವಿದೆ ಇಲ್ಲಿ ಜಾತಿ, ಧರ್ಮ ದಂತಹ ಭೇದಗಳನ್ನು ಮೀರುವ ಜನರಿದ್ದಾರೆ. ಮಮತೆ ಮತ್ತು ಮಾನವೀಯತೆಗೆ ಇನ್ನೂ ಮೌಲ್ಯವಿದೆ ಎಂದು ಸಾರುವ ಒಂದು ನಿಜ ಕಥೆಯನ್ನು ಇಲ್ಲಿ ಹೇಳುತ್ತೇನೆ. ಈ ಕತೆಯ ಕೇಂದ್ರಬಿಂದು ವಿವೇಕ್ ಅಲಿಯಾಸ್ ಮುಜಾಫರ್ ಎಂಬ ಎಂಟು ವರ್ಷದ ಬಾಲಕ. ಮುಖ್ಯಪಾತ್ರಧಾರಿಗಳು ಆತನಿಗೆ ಜನ್ಮಕೊಟ್ಟ ಜಬುನ್ನೀಸಾ ಮತ್ತು ಸಲೀಂ ಎಂಬ ಮುಸ್ಲಿಂ ದಂಪತಿಗಳು ಹಾಗೂ ಆತನನ್ನು ಕಳೆದ ಆರು ವರ್ಷಗಳಿಂದ ಅಕ್ಕರೆಯಿಂದ ಸಾಕಿರುವ ವೀಣಾಪಟ್ನಿ ಎಂಬ ಹಿಂದೂ ತಾಯಿ.
ವಿವೇಕ್ ಅಲಿಯಾಸ್ ಮುಜಾಫರ್‍ನ ಕಥೆ ಪ್ರಾರಂಭವಾಗುವುದು 2002ರಿಂದ. ಅದು ಫೆಬ್ರವರಿ 28. ಹಿಂದಿನ ದಿನವೇ ಗೋದ್ರದಲ್ಲಿ ಸಬರಮತಿ ರೈಲಿನ ಹಲವು ಬೋಗಿಗಳಿಗೆ ಬೆಂಕಿ ಬಿದ್ದು 59 ಅಮಾಯಕರು ಆಹುತಿಯಾಗಿದ್ದರು. ಅದಕ್ಕೆ ಪ್ರತಿಯಾಗಿ ಅಮಾಯಕ ಮುಸಲ್ಮಾನರ ಮೇಲೆ ಹಿಂದುತ್ವವಾದಿಗಳ ದಾಳಿ ಶುರುವಾಗಿತ್ತು.
ಸಲೀಂ ತನ್ನ 2 ವರ್ಷದ ಮಗ ಮುಜಾಫರ್‍ನೊಂದಿಗೆ ಅಹಮದಾಬಾದಿನ ಗುಲ್ಬರ್ಗ್ ಸೊಸೈಟಿಗೆ ಹೋಗಿದ್ದರು. ಆಗ ಅಲ್ಲೇ ಇದ್ದ ಕಾಂಗ್ರೆಸ್‍ನ ಮಾಜಿ ಸಂಸದ ಇಶಾನ್ ಜಾಫ್ರಿಯವರ ಮನೆ ಮೇಲೆ ಹಿಂದೂತ್ವವಾದಿಗಳ ಗುಂಪೊಂದು ದಾಳಿ ಇಟ್ಟು, ಜಾಫ್ರಿ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದಿತ್ತಲ್ಲದೆ, ಅವರ ಮನೆಗೆ ಬೆಂಕಿ ಇಟ್ಟು ಅವತ್ತು ಅವರೊಂದಿಗಿದ್ದ ಎಷ್ಟೋ ಜನರನ್ನು ಕೊಂದು ಹಾಕಿತು. ಇಂತಹ ಅಮಾನುಷ ಗುಂಪಿನಿಂದ ತಪ್ಪಿಸಿಕೊಳ್ಳಲು ಸಲೀಂ ಓಡಿದರು. ಅವರು ವಾಪಸ್ಸು ಬಂದಾಗ, ಹಿಂದುತ್ವವಾದಿಗಳ ಗುಂಪು ಕೊಂದು ಹಾಕಿದ್ದ ಅವರ ಅಜ್ಜಿಯ ಹೆಣ ಇತ್ತೇ ಹೊರತು ಮಗ ಮುಜಾಫರ್‍ನ ಸುಳಿವಿರಲಿಲ್ಲ. ಸುಮಾರು ಎರಡು ತಿಂಗಳ ಕಾಲ ನಡೆದ ಮಾರಣ ಹೋಮದಲ್ಲಿ ಸುಮಾರು ಮೂರು ಸಾವಿರ ಮುಸಲ್ಮಾನರು ಸಾವನ್ನಪ್ಪಿದರೆ, 400ಕ್ಕೂ ಹೆಚ್ಚು ಜನ ಮತ್ತು ಮಕ್ಕಳು ನಾಪತ್ತೆಯಾದರು.
ಅವತ್ತಿನಿಂದ ಮುಜಾಫರ್‍ಗಾಗಿ ತುಂಬಾ ಹುಡುಕಾಡಿದರು, ಪೊಲೀಸರಿಗೆ ದೂರು ನೀಡಿದರು, ತಮ್ಮ ಮಗ ಎಲ್ಲೋ ಸುರಕ್ಷಿತವಾಗಿದ್ದಾನೆ, ಸಿಕ್ಕೇ ಸಿಗುತ್ತಾನೆ ಎಂಬ ಆಶೆಯಲ್ಲಿ ಬದುಕುತ್ತಿದ್ದರು.

veena patni and muzaffar

ಅವರಿಗೆ ಗೊತ್ತಿಲ್ಲದಿದ್ದು ಏನೆಂದರೆ ಪ್ರವೀಣ್ ಪಟ್ನಿ ಎಂಬ ಪೊಲೀಸ್ ಪೇದೆ ತನಗೆ ಸಿಕ್ಕ ಮುಜಾಫರ್‍ನನ್ನು ತನ್ನ ಸಂಬಂಧಿಕರಾದ ವಿಕ್ರಮ್ ಮತ್ತು ವೀಣಾ ಪಟ್ನಿ ಎಂಬ ದಂಪತಿಗಳಿಗೆ ನೀಡಿದ್ದ. ಪಟ್ನಿ ದಂಪತಿಗಳು ಮಕ್ಕಳಿಲ್ಲದವರಾಗಿರಲಿಲ್ಲ, ಹಣವಂತರೂ ಆಗಿರಲಿಲ್ಲ. ಅವರಿಬ್ಬರಿಗೆ ಬೆಳೆದು ನಿಂತಿದ್ದ 4 ಮಕ್ಕಳಿದ್ದರು. ವಿಕ್ರಂ ಕೂಲಿ ಕೆಲಸ ಮಾಡುತ್ತಿದ್ದರೆ, ವೀಣಾ ಮೀನು ಮಾರಿ ಹಣ ಸಂಪಾದಿಸುತ್ತಿದ್ದರು.
ನಾನು ಯಾರು, ಎಲ್ಲಿಂದ ಬಂದೆ ಎಂಬುದು ಗೊತ್ತಿರದ 2 ವರ್ಷದ ಬಾಲಕ ತಮ್ಮ ಸುಪರ್ದಿಗೆ ಬಂದ ನಂತರ ಆತನಿಗೆ ವಿವೇಕ್ ಎಂದು ಮರುನಾಮಕರಣ ಮಾಡಿದ ಪಟ್ನಿ ದಂಪತಿಗಳು ಅವನನ್ನು ಪ್ರೀತಿಯಿಂದಲೇ ಸಲಹಲಾರಂಭಿಸಿದರು. ಆತನಿಗೆ ಕೈತುತ್ತು ನೀಡುತ್ತಾ, ಕೈ ಹಿಡಿದು ನಡೆಸುತ್ತ, ಜೋಗುಳ ಹಾಡುತ್ತಾ, ಆತ ತನಗೆ ಹುಟ್ಟಿದ ಮಗು ಎಂಬಷ್ಟು ಅಕ್ಕರೆಯಿಂದ ವೀಣಾ ಬೆಳೆಸಿದರು.
ಇತ್ತ ತೀಸ್ತಾ ಸೆಟಲ್ವಾಡ್‍ರ ನೆರವಿನೊಂದಿಗೆ ಮಗನಿಗಾಗಿ ಹುಡುಕಾಟವನ್ನು ಸಲೀಂ, ಜಬುನ್ನೀಸಾ ಮುಂದುವರಿಸಿದ್ದರು. ಕೊನೆಗೂ ಮುಜಾಫರ್ ಎಲ್ಲಿದ್ದಾನೆ ಎಂದು ಪತ್ತೆ ಹೆಚ್ಚಿದ ಅವರು ಆತನನ್ನು ಹಿಂದಿರುಗಿಸುವಂತೆ ಕೇಳಿಕೊಂಡರು. ವಿವೇಕ್ ಅವರ ಮಗ ಎಂಬುದಕ್ಕೆ ಸಾಕ್ಷಿ ಏನೆಂದು ವೀಣಾ ಪ್ರಶ್ನಿಸಿದಾಗ ಸಲೀಂ ಮತ್ತು ವಿವೇಕ್ ಆಲಿಯಾಸ್ ಮುಜಾಫರ್ ಡಿಎನ್‍ಎ ಪರೀಕ್ಷಿಸಲಾಯಿತು. ಅದರಿಂದ ವಿವೇಕ್ ನಿಜವಾಗಲೂ ಸಲೀಂ ಮತ್ತು ಜಬುನ್ನೀಸ್ಸಾರ ಮಗ ಎಂದು ಸಾಬೀತಾಯಿತು.
ಆದರೆ ಆರು ವರ್ಷಗಳ ಕಾಲ ಆತನನ್ನು ತನ್ನ ಮಗನೆಂದು ಬೆಳೆಸಿದ್ದ ವೀಣಾ ಅವನನ್ನು ಹೆತ್ತವರಿಗೆ ಹಿಂದಿರುಗಿಸಲು ಒಪ್ಪಲಿಲ್ಲ. ಆಗ ಸಲೀಂ ಮತ್ತು ಜಬುನ್ನೀಸಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅವರ ದುರಂತಕ್ಕೆ ವಿವೇಕನಿಗೆ ತನಗೆ ಜನ್ಮ ನೀಡಿರುವವವರ ನೆನಪೇ ಇರಲಿಲ್ಲ ಮಾತ್ರವಲ್ಲ, ನ್ಯಾಯಾಧೀಶರ ಮುಂದೆ ತಾನು ವೀಣಾ ಅಮ್ಮನೊಂದಿಗೆ ಇರುತ್ತೇನೆ ಎಂದ. ಕಾನೂನಿನ ಪ್ರಕಾರ ಆತ ಹೆತ್ತವರಿಗೆ ಸೇರಬೇಕಿದ್ದರು ಆ ಬಾಲಕನ ಮನಸ್ಸನ್ನು ನೋಯಿಸಬಾರದು ಎಂದು ಅವನನ್ನು ವೀಣಾರೊಂದಿಗೆ ಬಿಡಲಾಯಿತು.
ಸಲೀಂ ಮತ್ತು ಜಬುನ್ನಿಸ್ಸಾರಿಗೆ ತಮ್ಮ ಮಗನ ಮೇಲೆ ವೀಣಾರವರಿಗೆ ಇರುವ ಪ್ರೀತಿ ಅರ್ಥವಾಗುತ್ತದೆ. ಹಾಗಂತ ಹೆತ್ತ ಕುಡಿಯನ್ನು ಮರೆತು ಸುಮ್ಮನಿರಲಾಗುವುದಿಲ್ಲ. ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸುವ ಸಲೀಂ “ವೀಣಾ ನನ್ನ ಮಗನ ದೊಡ್ಡಮ್ಮ ಆಗಿರಲಿ, ನನ್ನ ಹೆಂಡತಿಯೇ ಆತನಿಗೆ ಚಿಕ್ಕಮ್ಮನಾಗಿರಲಿ. ನಾನು ಅವರನ್ನು ಅತ್ತಿಗೆಯಂತೆ ನೋಡಿಕೊಳ್ಳುತ್ತೇನೆ. ಆದರೆ ನಮಗೆ ನಮ್ಮ ಮಗ ಬೇಕು” ಎನ್ನುತ್ತಾರೆ.
ಬರ್ಟೋಲ್ಡ್ ಬ್ರೆಕ್ಟ್ ರವರ ‘ಕಕೇಶಿಯನ್ ಚಾಕ್ ಸರ್ಕಲ್’ ಎಂಬ ನಾಟಕದಲ್ಲಿ ಹೆತ್ತ ತಾಯಿಯೇ ತನ್ನ ಮಗನನ್ನು ಎಳೆದಾಡಲು ಸಿದ್ಧರಿರುತ್ತಾಳೆ. ಆದರೆ ಆತನನ್ನು ಸಾಕಿ ಸಲುಹಿದ ದತ್ತು ತಾಯಿ ಅವರಿಗೆ ನೋವಾಗಕೂಡದೆಂದು ಅವನನ್ನು ತನ್ನತ್ತ ಎಳೆಯಲು ನಿರಾಕರಿಸುತ್ತಾಳೆ.
ಆದರೆ ಬೈಬಲ್‍ನಲ್ಲಿ ಬರುವ ‘ಜಡ್ಜ್‍ಮೆಂಟ್ ಆಫ್ ಸೋಲಮನ್’ ಪ್ರಸಂಗದಲ್ಲಿ ನ್ಯಾಯಾಧೀಶ ಸೊಲಮನ್ ಮಗುವನ್ನು ಕತ್ತರಿಸಿ ಇಬ್ಬರು ತಾಯಂದಿರಿಗೆ ಹಂಚಲು ತಯಾರಾದಾಗ, ಆತನನ್ನು ಹೆತ್ತ ತಾಯಿ “ತನ್ನ ಮಗುವನ್ನು ಕೊಲ್ಲಬೇಡಿ ಅವಳಿಗೆ ಕೊಡಿ” ಎಂದು ಕಣ್ಣೀರಿಡುತ್ತಾಳೆ.
ಅಂದರೆ ಹೆತ್ತ ತಾಯಿಯ ಪ್ರೀತಿ ದೊಡ್ಡದು, ಸಾಕಿ ಸಲುಹಿದ ತಾಯಿಯ ಮಮತೆ ಹೆಚ್ಚಿನದು ಎಂದು ತೀರ್ಮಾನಿಸುವುದು ಸುಲಭವಲ್ಲ. ಇವತ್ತು ಜಾತಿ, ಧರ್ಮ, ಅಂತಸ್ತು ಎಂದೆಲ್ಲ ಬಹಳಷ್ಟು ಜನ ಅಂಧರಾಗಿರುವಾಗ ಈ ಪುಟ್ಟ ಬಾಲಕ ಮತ್ತು ಆತನ ಇಬ್ಬರು ತಾಯಂದಿರು ಅವುಗಳನ್ನೆಲ್ಲ ಮೀರಿ ಮಾತೃತ್ವ, ಮಮತೆ ಮತ್ತು ಮಾನವೀಯತೆಯ ಪ್ರತಿಬಿಂಬಗಳಾಗಿದ್ದಾರೆ.
ಈಗಾಗಲೇ ಧರ್ಮದ ಹೆಸರಲ್ಲಿ ಸಾಕಷ್ಟು ದ್ವೇಷ ಮತ್ತು ರಕ್ತಪಾತವನ್ನು ಕಂಡಿರುವ ಗುಜರಾತ್ ಈ ಪ್ರಕರಣದಲ್ಲಾದರೂ ತನ್ನ ಅಂತರಾಳದಲ್ಲಿರುವ ಮನುಷ್ಯತ್ವವನ್ನು ಕಂಡುಕೊಳ್ಳುವಂತಾಗಲಿ.
ಹಾಗಾದರೆ ಎಷ್ಟು ಚೆನ್ನ ಅಲ್ಲವೇ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...