Homeಅಂಕಣಗಳುಧರ್ಮಗಳನು ಮೀರಿದ ಈ ಮಾತೃತ್ವ

ಧರ್ಮಗಳನು ಮೀರಿದ ಈ ಮಾತೃತ್ವ

- Advertisement -
- Advertisement -

ಗೌರಿ ಲಂಕೇಶ್
20 ಆಗಸ್ಟ್, 2008 (`ಕಂಡಹಾಗೆ’ ಸಂಪಾದಕೀಯದಿಂದ) |

ನಾನು ಸಿನಿಕಳಲ್ಲ. ಆದ್ದರಿಂದ ನಮ್ಮ ದೇಶಕ್ಕೆ ಇನ್ನೂ ಭವಿಷ್ಯವಿದೆ ಇಲ್ಲಿ ಜಾತಿ, ಧರ್ಮ ದಂತಹ ಭೇದಗಳನ್ನು ಮೀರುವ ಜನರಿದ್ದಾರೆ. ಮಮತೆ ಮತ್ತು ಮಾನವೀಯತೆಗೆ ಇನ್ನೂ ಮೌಲ್ಯವಿದೆ ಎಂದು ಸಾರುವ ಒಂದು ನಿಜ ಕಥೆಯನ್ನು ಇಲ್ಲಿ ಹೇಳುತ್ತೇನೆ. ಈ ಕತೆಯ ಕೇಂದ್ರಬಿಂದು ವಿವೇಕ್ ಅಲಿಯಾಸ್ ಮುಜಾಫರ್ ಎಂಬ ಎಂಟು ವರ್ಷದ ಬಾಲಕ. ಮುಖ್ಯಪಾತ್ರಧಾರಿಗಳು ಆತನಿಗೆ ಜನ್ಮಕೊಟ್ಟ ಜಬುನ್ನೀಸಾ ಮತ್ತು ಸಲೀಂ ಎಂಬ ಮುಸ್ಲಿಂ ದಂಪತಿಗಳು ಹಾಗೂ ಆತನನ್ನು ಕಳೆದ ಆರು ವರ್ಷಗಳಿಂದ ಅಕ್ಕರೆಯಿಂದ ಸಾಕಿರುವ ವೀಣಾಪಟ್ನಿ ಎಂಬ ಹಿಂದೂ ತಾಯಿ.
ವಿವೇಕ್ ಅಲಿಯಾಸ್ ಮುಜಾಫರ್‍ನ ಕಥೆ ಪ್ರಾರಂಭವಾಗುವುದು 2002ರಿಂದ. ಅದು ಫೆಬ್ರವರಿ 28. ಹಿಂದಿನ ದಿನವೇ ಗೋದ್ರದಲ್ಲಿ ಸಬರಮತಿ ರೈಲಿನ ಹಲವು ಬೋಗಿಗಳಿಗೆ ಬೆಂಕಿ ಬಿದ್ದು 59 ಅಮಾಯಕರು ಆಹುತಿಯಾಗಿದ್ದರು. ಅದಕ್ಕೆ ಪ್ರತಿಯಾಗಿ ಅಮಾಯಕ ಮುಸಲ್ಮಾನರ ಮೇಲೆ ಹಿಂದುತ್ವವಾದಿಗಳ ದಾಳಿ ಶುರುವಾಗಿತ್ತು.
ಸಲೀಂ ತನ್ನ 2 ವರ್ಷದ ಮಗ ಮುಜಾಫರ್‍ನೊಂದಿಗೆ ಅಹಮದಾಬಾದಿನ ಗುಲ್ಬರ್ಗ್ ಸೊಸೈಟಿಗೆ ಹೋಗಿದ್ದರು. ಆಗ ಅಲ್ಲೇ ಇದ್ದ ಕಾಂಗ್ರೆಸ್‍ನ ಮಾಜಿ ಸಂಸದ ಇಶಾನ್ ಜಾಫ್ರಿಯವರ ಮನೆ ಮೇಲೆ ಹಿಂದೂತ್ವವಾದಿಗಳ ಗುಂಪೊಂದು ದಾಳಿ ಇಟ್ಟು, ಜಾಫ್ರಿ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದಿತ್ತಲ್ಲದೆ, ಅವರ ಮನೆಗೆ ಬೆಂಕಿ ಇಟ್ಟು ಅವತ್ತು ಅವರೊಂದಿಗಿದ್ದ ಎಷ್ಟೋ ಜನರನ್ನು ಕೊಂದು ಹಾಕಿತು. ಇಂತಹ ಅಮಾನುಷ ಗುಂಪಿನಿಂದ ತಪ್ಪಿಸಿಕೊಳ್ಳಲು ಸಲೀಂ ಓಡಿದರು. ಅವರು ವಾಪಸ್ಸು ಬಂದಾಗ, ಹಿಂದುತ್ವವಾದಿಗಳ ಗುಂಪು ಕೊಂದು ಹಾಕಿದ್ದ ಅವರ ಅಜ್ಜಿಯ ಹೆಣ ಇತ್ತೇ ಹೊರತು ಮಗ ಮುಜಾಫರ್‍ನ ಸುಳಿವಿರಲಿಲ್ಲ. ಸುಮಾರು ಎರಡು ತಿಂಗಳ ಕಾಲ ನಡೆದ ಮಾರಣ ಹೋಮದಲ್ಲಿ ಸುಮಾರು ಮೂರು ಸಾವಿರ ಮುಸಲ್ಮಾನರು ಸಾವನ್ನಪ್ಪಿದರೆ, 400ಕ್ಕೂ ಹೆಚ್ಚು ಜನ ಮತ್ತು ಮಕ್ಕಳು ನಾಪತ್ತೆಯಾದರು.
ಅವತ್ತಿನಿಂದ ಮುಜಾಫರ್‍ಗಾಗಿ ತುಂಬಾ ಹುಡುಕಾಡಿದರು, ಪೊಲೀಸರಿಗೆ ದೂರು ನೀಡಿದರು, ತಮ್ಮ ಮಗ ಎಲ್ಲೋ ಸುರಕ್ಷಿತವಾಗಿದ್ದಾನೆ, ಸಿಕ್ಕೇ ಸಿಗುತ್ತಾನೆ ಎಂಬ ಆಶೆಯಲ್ಲಿ ಬದುಕುತ್ತಿದ್ದರು.

veena patni and muzaffar

ಅವರಿಗೆ ಗೊತ್ತಿಲ್ಲದಿದ್ದು ಏನೆಂದರೆ ಪ್ರವೀಣ್ ಪಟ್ನಿ ಎಂಬ ಪೊಲೀಸ್ ಪೇದೆ ತನಗೆ ಸಿಕ್ಕ ಮುಜಾಫರ್‍ನನ್ನು ತನ್ನ ಸಂಬಂಧಿಕರಾದ ವಿಕ್ರಮ್ ಮತ್ತು ವೀಣಾ ಪಟ್ನಿ ಎಂಬ ದಂಪತಿಗಳಿಗೆ ನೀಡಿದ್ದ. ಪಟ್ನಿ ದಂಪತಿಗಳು ಮಕ್ಕಳಿಲ್ಲದವರಾಗಿರಲಿಲ್ಲ, ಹಣವಂತರೂ ಆಗಿರಲಿಲ್ಲ. ಅವರಿಬ್ಬರಿಗೆ ಬೆಳೆದು ನಿಂತಿದ್ದ 4 ಮಕ್ಕಳಿದ್ದರು. ವಿಕ್ರಂ ಕೂಲಿ ಕೆಲಸ ಮಾಡುತ್ತಿದ್ದರೆ, ವೀಣಾ ಮೀನು ಮಾರಿ ಹಣ ಸಂಪಾದಿಸುತ್ತಿದ್ದರು.
ನಾನು ಯಾರು, ಎಲ್ಲಿಂದ ಬಂದೆ ಎಂಬುದು ಗೊತ್ತಿರದ 2 ವರ್ಷದ ಬಾಲಕ ತಮ್ಮ ಸುಪರ್ದಿಗೆ ಬಂದ ನಂತರ ಆತನಿಗೆ ವಿವೇಕ್ ಎಂದು ಮರುನಾಮಕರಣ ಮಾಡಿದ ಪಟ್ನಿ ದಂಪತಿಗಳು ಅವನನ್ನು ಪ್ರೀತಿಯಿಂದಲೇ ಸಲಹಲಾರಂಭಿಸಿದರು. ಆತನಿಗೆ ಕೈತುತ್ತು ನೀಡುತ್ತಾ, ಕೈ ಹಿಡಿದು ನಡೆಸುತ್ತ, ಜೋಗುಳ ಹಾಡುತ್ತಾ, ಆತ ತನಗೆ ಹುಟ್ಟಿದ ಮಗು ಎಂಬಷ್ಟು ಅಕ್ಕರೆಯಿಂದ ವೀಣಾ ಬೆಳೆಸಿದರು.
ಇತ್ತ ತೀಸ್ತಾ ಸೆಟಲ್ವಾಡ್‍ರ ನೆರವಿನೊಂದಿಗೆ ಮಗನಿಗಾಗಿ ಹುಡುಕಾಟವನ್ನು ಸಲೀಂ, ಜಬುನ್ನೀಸಾ ಮುಂದುವರಿಸಿದ್ದರು. ಕೊನೆಗೂ ಮುಜಾಫರ್ ಎಲ್ಲಿದ್ದಾನೆ ಎಂದು ಪತ್ತೆ ಹೆಚ್ಚಿದ ಅವರು ಆತನನ್ನು ಹಿಂದಿರುಗಿಸುವಂತೆ ಕೇಳಿಕೊಂಡರು. ವಿವೇಕ್ ಅವರ ಮಗ ಎಂಬುದಕ್ಕೆ ಸಾಕ್ಷಿ ಏನೆಂದು ವೀಣಾ ಪ್ರಶ್ನಿಸಿದಾಗ ಸಲೀಂ ಮತ್ತು ವಿವೇಕ್ ಆಲಿಯಾಸ್ ಮುಜಾಫರ್ ಡಿಎನ್‍ಎ ಪರೀಕ್ಷಿಸಲಾಯಿತು. ಅದರಿಂದ ವಿವೇಕ್ ನಿಜವಾಗಲೂ ಸಲೀಂ ಮತ್ತು ಜಬುನ್ನೀಸ್ಸಾರ ಮಗ ಎಂದು ಸಾಬೀತಾಯಿತು.
ಆದರೆ ಆರು ವರ್ಷಗಳ ಕಾಲ ಆತನನ್ನು ತನ್ನ ಮಗನೆಂದು ಬೆಳೆಸಿದ್ದ ವೀಣಾ ಅವನನ್ನು ಹೆತ್ತವರಿಗೆ ಹಿಂದಿರುಗಿಸಲು ಒಪ್ಪಲಿಲ್ಲ. ಆಗ ಸಲೀಂ ಮತ್ತು ಜಬುನ್ನೀಸಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅವರ ದುರಂತಕ್ಕೆ ವಿವೇಕನಿಗೆ ತನಗೆ ಜನ್ಮ ನೀಡಿರುವವವರ ನೆನಪೇ ಇರಲಿಲ್ಲ ಮಾತ್ರವಲ್ಲ, ನ್ಯಾಯಾಧೀಶರ ಮುಂದೆ ತಾನು ವೀಣಾ ಅಮ್ಮನೊಂದಿಗೆ ಇರುತ್ತೇನೆ ಎಂದ. ಕಾನೂನಿನ ಪ್ರಕಾರ ಆತ ಹೆತ್ತವರಿಗೆ ಸೇರಬೇಕಿದ್ದರು ಆ ಬಾಲಕನ ಮನಸ್ಸನ್ನು ನೋಯಿಸಬಾರದು ಎಂದು ಅವನನ್ನು ವೀಣಾರೊಂದಿಗೆ ಬಿಡಲಾಯಿತು.
ಸಲೀಂ ಮತ್ತು ಜಬುನ್ನಿಸ್ಸಾರಿಗೆ ತಮ್ಮ ಮಗನ ಮೇಲೆ ವೀಣಾರವರಿಗೆ ಇರುವ ಪ್ರೀತಿ ಅರ್ಥವಾಗುತ್ತದೆ. ಹಾಗಂತ ಹೆತ್ತ ಕುಡಿಯನ್ನು ಮರೆತು ಸುಮ್ಮನಿರಲಾಗುವುದಿಲ್ಲ. ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸುವ ಸಲೀಂ “ವೀಣಾ ನನ್ನ ಮಗನ ದೊಡ್ಡಮ್ಮ ಆಗಿರಲಿ, ನನ್ನ ಹೆಂಡತಿಯೇ ಆತನಿಗೆ ಚಿಕ್ಕಮ್ಮನಾಗಿರಲಿ. ನಾನು ಅವರನ್ನು ಅತ್ತಿಗೆಯಂತೆ ನೋಡಿಕೊಳ್ಳುತ್ತೇನೆ. ಆದರೆ ನಮಗೆ ನಮ್ಮ ಮಗ ಬೇಕು” ಎನ್ನುತ್ತಾರೆ.
ಬರ್ಟೋಲ್ಡ್ ಬ್ರೆಕ್ಟ್ ರವರ ‘ಕಕೇಶಿಯನ್ ಚಾಕ್ ಸರ್ಕಲ್’ ಎಂಬ ನಾಟಕದಲ್ಲಿ ಹೆತ್ತ ತಾಯಿಯೇ ತನ್ನ ಮಗನನ್ನು ಎಳೆದಾಡಲು ಸಿದ್ಧರಿರುತ್ತಾಳೆ. ಆದರೆ ಆತನನ್ನು ಸಾಕಿ ಸಲುಹಿದ ದತ್ತು ತಾಯಿ ಅವರಿಗೆ ನೋವಾಗಕೂಡದೆಂದು ಅವನನ್ನು ತನ್ನತ್ತ ಎಳೆಯಲು ನಿರಾಕರಿಸುತ್ತಾಳೆ.
ಆದರೆ ಬೈಬಲ್‍ನಲ್ಲಿ ಬರುವ ‘ಜಡ್ಜ್‍ಮೆಂಟ್ ಆಫ್ ಸೋಲಮನ್’ ಪ್ರಸಂಗದಲ್ಲಿ ನ್ಯಾಯಾಧೀಶ ಸೊಲಮನ್ ಮಗುವನ್ನು ಕತ್ತರಿಸಿ ಇಬ್ಬರು ತಾಯಂದಿರಿಗೆ ಹಂಚಲು ತಯಾರಾದಾಗ, ಆತನನ್ನು ಹೆತ್ತ ತಾಯಿ “ತನ್ನ ಮಗುವನ್ನು ಕೊಲ್ಲಬೇಡಿ ಅವಳಿಗೆ ಕೊಡಿ” ಎಂದು ಕಣ್ಣೀರಿಡುತ್ತಾಳೆ.
ಅಂದರೆ ಹೆತ್ತ ತಾಯಿಯ ಪ್ರೀತಿ ದೊಡ್ಡದು, ಸಾಕಿ ಸಲುಹಿದ ತಾಯಿಯ ಮಮತೆ ಹೆಚ್ಚಿನದು ಎಂದು ತೀರ್ಮಾನಿಸುವುದು ಸುಲಭವಲ್ಲ. ಇವತ್ತು ಜಾತಿ, ಧರ್ಮ, ಅಂತಸ್ತು ಎಂದೆಲ್ಲ ಬಹಳಷ್ಟು ಜನ ಅಂಧರಾಗಿರುವಾಗ ಈ ಪುಟ್ಟ ಬಾಲಕ ಮತ್ತು ಆತನ ಇಬ್ಬರು ತಾಯಂದಿರು ಅವುಗಳನ್ನೆಲ್ಲ ಮೀರಿ ಮಾತೃತ್ವ, ಮಮತೆ ಮತ್ತು ಮಾನವೀಯತೆಯ ಪ್ರತಿಬಿಂಬಗಳಾಗಿದ್ದಾರೆ.
ಈಗಾಗಲೇ ಧರ್ಮದ ಹೆಸರಲ್ಲಿ ಸಾಕಷ್ಟು ದ್ವೇಷ ಮತ್ತು ರಕ್ತಪಾತವನ್ನು ಕಂಡಿರುವ ಗುಜರಾತ್ ಈ ಪ್ರಕರಣದಲ್ಲಾದರೂ ತನ್ನ ಅಂತರಾಳದಲ್ಲಿರುವ ಮನುಷ್ಯತ್ವವನ್ನು ಕಂಡುಕೊಳ್ಳುವಂತಾಗಲಿ.
ಹಾಗಾದರೆ ಎಷ್ಟು ಚೆನ್ನ ಅಲ್ಲವೇ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....