Homeಅಂಕಣಗಳುಧರ್ಮಗಳನು ಮೀರಿದ ಈ ಮಾತೃತ್ವ

ಧರ್ಮಗಳನು ಮೀರಿದ ಈ ಮಾತೃತ್ವ

- Advertisement -
- Advertisement -

ಗೌರಿ ಲಂಕೇಶ್
20 ಆಗಸ್ಟ್, 2008 (`ಕಂಡಹಾಗೆ’ ಸಂಪಾದಕೀಯದಿಂದ) |

ನಾನು ಸಿನಿಕಳಲ್ಲ. ಆದ್ದರಿಂದ ನಮ್ಮ ದೇಶಕ್ಕೆ ಇನ್ನೂ ಭವಿಷ್ಯವಿದೆ ಇಲ್ಲಿ ಜಾತಿ, ಧರ್ಮ ದಂತಹ ಭೇದಗಳನ್ನು ಮೀರುವ ಜನರಿದ್ದಾರೆ. ಮಮತೆ ಮತ್ತು ಮಾನವೀಯತೆಗೆ ಇನ್ನೂ ಮೌಲ್ಯವಿದೆ ಎಂದು ಸಾರುವ ಒಂದು ನಿಜ ಕಥೆಯನ್ನು ಇಲ್ಲಿ ಹೇಳುತ್ತೇನೆ. ಈ ಕತೆಯ ಕೇಂದ್ರಬಿಂದು ವಿವೇಕ್ ಅಲಿಯಾಸ್ ಮುಜಾಫರ್ ಎಂಬ ಎಂಟು ವರ್ಷದ ಬಾಲಕ. ಮುಖ್ಯಪಾತ್ರಧಾರಿಗಳು ಆತನಿಗೆ ಜನ್ಮಕೊಟ್ಟ ಜಬುನ್ನೀಸಾ ಮತ್ತು ಸಲೀಂ ಎಂಬ ಮುಸ್ಲಿಂ ದಂಪತಿಗಳು ಹಾಗೂ ಆತನನ್ನು ಕಳೆದ ಆರು ವರ್ಷಗಳಿಂದ ಅಕ್ಕರೆಯಿಂದ ಸಾಕಿರುವ ವೀಣಾಪಟ್ನಿ ಎಂಬ ಹಿಂದೂ ತಾಯಿ.
ವಿವೇಕ್ ಅಲಿಯಾಸ್ ಮುಜಾಫರ್‍ನ ಕಥೆ ಪ್ರಾರಂಭವಾಗುವುದು 2002ರಿಂದ. ಅದು ಫೆಬ್ರವರಿ 28. ಹಿಂದಿನ ದಿನವೇ ಗೋದ್ರದಲ್ಲಿ ಸಬರಮತಿ ರೈಲಿನ ಹಲವು ಬೋಗಿಗಳಿಗೆ ಬೆಂಕಿ ಬಿದ್ದು 59 ಅಮಾಯಕರು ಆಹುತಿಯಾಗಿದ್ದರು. ಅದಕ್ಕೆ ಪ್ರತಿಯಾಗಿ ಅಮಾಯಕ ಮುಸಲ್ಮಾನರ ಮೇಲೆ ಹಿಂದುತ್ವವಾದಿಗಳ ದಾಳಿ ಶುರುವಾಗಿತ್ತು.
ಸಲೀಂ ತನ್ನ 2 ವರ್ಷದ ಮಗ ಮುಜಾಫರ್‍ನೊಂದಿಗೆ ಅಹಮದಾಬಾದಿನ ಗುಲ್ಬರ್ಗ್ ಸೊಸೈಟಿಗೆ ಹೋಗಿದ್ದರು. ಆಗ ಅಲ್ಲೇ ಇದ್ದ ಕಾಂಗ್ರೆಸ್‍ನ ಮಾಜಿ ಸಂಸದ ಇಶಾನ್ ಜಾಫ್ರಿಯವರ ಮನೆ ಮೇಲೆ ಹಿಂದೂತ್ವವಾದಿಗಳ ಗುಂಪೊಂದು ದಾಳಿ ಇಟ್ಟು, ಜಾಫ್ರಿ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದಿತ್ತಲ್ಲದೆ, ಅವರ ಮನೆಗೆ ಬೆಂಕಿ ಇಟ್ಟು ಅವತ್ತು ಅವರೊಂದಿಗಿದ್ದ ಎಷ್ಟೋ ಜನರನ್ನು ಕೊಂದು ಹಾಕಿತು. ಇಂತಹ ಅಮಾನುಷ ಗುಂಪಿನಿಂದ ತಪ್ಪಿಸಿಕೊಳ್ಳಲು ಸಲೀಂ ಓಡಿದರು. ಅವರು ವಾಪಸ್ಸು ಬಂದಾಗ, ಹಿಂದುತ್ವವಾದಿಗಳ ಗುಂಪು ಕೊಂದು ಹಾಕಿದ್ದ ಅವರ ಅಜ್ಜಿಯ ಹೆಣ ಇತ್ತೇ ಹೊರತು ಮಗ ಮುಜಾಫರ್‍ನ ಸುಳಿವಿರಲಿಲ್ಲ. ಸುಮಾರು ಎರಡು ತಿಂಗಳ ಕಾಲ ನಡೆದ ಮಾರಣ ಹೋಮದಲ್ಲಿ ಸುಮಾರು ಮೂರು ಸಾವಿರ ಮುಸಲ್ಮಾನರು ಸಾವನ್ನಪ್ಪಿದರೆ, 400ಕ್ಕೂ ಹೆಚ್ಚು ಜನ ಮತ್ತು ಮಕ್ಕಳು ನಾಪತ್ತೆಯಾದರು.
ಅವತ್ತಿನಿಂದ ಮುಜಾಫರ್‍ಗಾಗಿ ತುಂಬಾ ಹುಡುಕಾಡಿದರು, ಪೊಲೀಸರಿಗೆ ದೂರು ನೀಡಿದರು, ತಮ್ಮ ಮಗ ಎಲ್ಲೋ ಸುರಕ್ಷಿತವಾಗಿದ್ದಾನೆ, ಸಿಕ್ಕೇ ಸಿಗುತ್ತಾನೆ ಎಂಬ ಆಶೆಯಲ್ಲಿ ಬದುಕುತ್ತಿದ್ದರು.

veena patni and muzaffar

ಅವರಿಗೆ ಗೊತ್ತಿಲ್ಲದಿದ್ದು ಏನೆಂದರೆ ಪ್ರವೀಣ್ ಪಟ್ನಿ ಎಂಬ ಪೊಲೀಸ್ ಪೇದೆ ತನಗೆ ಸಿಕ್ಕ ಮುಜಾಫರ್‍ನನ್ನು ತನ್ನ ಸಂಬಂಧಿಕರಾದ ವಿಕ್ರಮ್ ಮತ್ತು ವೀಣಾ ಪಟ್ನಿ ಎಂಬ ದಂಪತಿಗಳಿಗೆ ನೀಡಿದ್ದ. ಪಟ್ನಿ ದಂಪತಿಗಳು ಮಕ್ಕಳಿಲ್ಲದವರಾಗಿರಲಿಲ್ಲ, ಹಣವಂತರೂ ಆಗಿರಲಿಲ್ಲ. ಅವರಿಬ್ಬರಿಗೆ ಬೆಳೆದು ನಿಂತಿದ್ದ 4 ಮಕ್ಕಳಿದ್ದರು. ವಿಕ್ರಂ ಕೂಲಿ ಕೆಲಸ ಮಾಡುತ್ತಿದ್ದರೆ, ವೀಣಾ ಮೀನು ಮಾರಿ ಹಣ ಸಂಪಾದಿಸುತ್ತಿದ್ದರು.
ನಾನು ಯಾರು, ಎಲ್ಲಿಂದ ಬಂದೆ ಎಂಬುದು ಗೊತ್ತಿರದ 2 ವರ್ಷದ ಬಾಲಕ ತಮ್ಮ ಸುಪರ್ದಿಗೆ ಬಂದ ನಂತರ ಆತನಿಗೆ ವಿವೇಕ್ ಎಂದು ಮರುನಾಮಕರಣ ಮಾಡಿದ ಪಟ್ನಿ ದಂಪತಿಗಳು ಅವನನ್ನು ಪ್ರೀತಿಯಿಂದಲೇ ಸಲಹಲಾರಂಭಿಸಿದರು. ಆತನಿಗೆ ಕೈತುತ್ತು ನೀಡುತ್ತಾ, ಕೈ ಹಿಡಿದು ನಡೆಸುತ್ತ, ಜೋಗುಳ ಹಾಡುತ್ತಾ, ಆತ ತನಗೆ ಹುಟ್ಟಿದ ಮಗು ಎಂಬಷ್ಟು ಅಕ್ಕರೆಯಿಂದ ವೀಣಾ ಬೆಳೆಸಿದರು.
ಇತ್ತ ತೀಸ್ತಾ ಸೆಟಲ್ವಾಡ್‍ರ ನೆರವಿನೊಂದಿಗೆ ಮಗನಿಗಾಗಿ ಹುಡುಕಾಟವನ್ನು ಸಲೀಂ, ಜಬುನ್ನೀಸಾ ಮುಂದುವರಿಸಿದ್ದರು. ಕೊನೆಗೂ ಮುಜಾಫರ್ ಎಲ್ಲಿದ್ದಾನೆ ಎಂದು ಪತ್ತೆ ಹೆಚ್ಚಿದ ಅವರು ಆತನನ್ನು ಹಿಂದಿರುಗಿಸುವಂತೆ ಕೇಳಿಕೊಂಡರು. ವಿವೇಕ್ ಅವರ ಮಗ ಎಂಬುದಕ್ಕೆ ಸಾಕ್ಷಿ ಏನೆಂದು ವೀಣಾ ಪ್ರಶ್ನಿಸಿದಾಗ ಸಲೀಂ ಮತ್ತು ವಿವೇಕ್ ಆಲಿಯಾಸ್ ಮುಜಾಫರ್ ಡಿಎನ್‍ಎ ಪರೀಕ್ಷಿಸಲಾಯಿತು. ಅದರಿಂದ ವಿವೇಕ್ ನಿಜವಾಗಲೂ ಸಲೀಂ ಮತ್ತು ಜಬುನ್ನೀಸ್ಸಾರ ಮಗ ಎಂದು ಸಾಬೀತಾಯಿತು.
ಆದರೆ ಆರು ವರ್ಷಗಳ ಕಾಲ ಆತನನ್ನು ತನ್ನ ಮಗನೆಂದು ಬೆಳೆಸಿದ್ದ ವೀಣಾ ಅವನನ್ನು ಹೆತ್ತವರಿಗೆ ಹಿಂದಿರುಗಿಸಲು ಒಪ್ಪಲಿಲ್ಲ. ಆಗ ಸಲೀಂ ಮತ್ತು ಜಬುನ್ನೀಸಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅವರ ದುರಂತಕ್ಕೆ ವಿವೇಕನಿಗೆ ತನಗೆ ಜನ್ಮ ನೀಡಿರುವವವರ ನೆನಪೇ ಇರಲಿಲ್ಲ ಮಾತ್ರವಲ್ಲ, ನ್ಯಾಯಾಧೀಶರ ಮುಂದೆ ತಾನು ವೀಣಾ ಅಮ್ಮನೊಂದಿಗೆ ಇರುತ್ತೇನೆ ಎಂದ. ಕಾನೂನಿನ ಪ್ರಕಾರ ಆತ ಹೆತ್ತವರಿಗೆ ಸೇರಬೇಕಿದ್ದರು ಆ ಬಾಲಕನ ಮನಸ್ಸನ್ನು ನೋಯಿಸಬಾರದು ಎಂದು ಅವನನ್ನು ವೀಣಾರೊಂದಿಗೆ ಬಿಡಲಾಯಿತು.
ಸಲೀಂ ಮತ್ತು ಜಬುನ್ನಿಸ್ಸಾರಿಗೆ ತಮ್ಮ ಮಗನ ಮೇಲೆ ವೀಣಾರವರಿಗೆ ಇರುವ ಪ್ರೀತಿ ಅರ್ಥವಾಗುತ್ತದೆ. ಹಾಗಂತ ಹೆತ್ತ ಕುಡಿಯನ್ನು ಮರೆತು ಸುಮ್ಮನಿರಲಾಗುವುದಿಲ್ಲ. ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸುವ ಸಲೀಂ “ವೀಣಾ ನನ್ನ ಮಗನ ದೊಡ್ಡಮ್ಮ ಆಗಿರಲಿ, ನನ್ನ ಹೆಂಡತಿಯೇ ಆತನಿಗೆ ಚಿಕ್ಕಮ್ಮನಾಗಿರಲಿ. ನಾನು ಅವರನ್ನು ಅತ್ತಿಗೆಯಂತೆ ನೋಡಿಕೊಳ್ಳುತ್ತೇನೆ. ಆದರೆ ನಮಗೆ ನಮ್ಮ ಮಗ ಬೇಕು” ಎನ್ನುತ್ತಾರೆ.
ಬರ್ಟೋಲ್ಡ್ ಬ್ರೆಕ್ಟ್ ರವರ ‘ಕಕೇಶಿಯನ್ ಚಾಕ್ ಸರ್ಕಲ್’ ಎಂಬ ನಾಟಕದಲ್ಲಿ ಹೆತ್ತ ತಾಯಿಯೇ ತನ್ನ ಮಗನನ್ನು ಎಳೆದಾಡಲು ಸಿದ್ಧರಿರುತ್ತಾಳೆ. ಆದರೆ ಆತನನ್ನು ಸಾಕಿ ಸಲುಹಿದ ದತ್ತು ತಾಯಿ ಅವರಿಗೆ ನೋವಾಗಕೂಡದೆಂದು ಅವನನ್ನು ತನ್ನತ್ತ ಎಳೆಯಲು ನಿರಾಕರಿಸುತ್ತಾಳೆ.
ಆದರೆ ಬೈಬಲ್‍ನಲ್ಲಿ ಬರುವ ‘ಜಡ್ಜ್‍ಮೆಂಟ್ ಆಫ್ ಸೋಲಮನ್’ ಪ್ರಸಂಗದಲ್ಲಿ ನ್ಯಾಯಾಧೀಶ ಸೊಲಮನ್ ಮಗುವನ್ನು ಕತ್ತರಿಸಿ ಇಬ್ಬರು ತಾಯಂದಿರಿಗೆ ಹಂಚಲು ತಯಾರಾದಾಗ, ಆತನನ್ನು ಹೆತ್ತ ತಾಯಿ “ತನ್ನ ಮಗುವನ್ನು ಕೊಲ್ಲಬೇಡಿ ಅವಳಿಗೆ ಕೊಡಿ” ಎಂದು ಕಣ್ಣೀರಿಡುತ್ತಾಳೆ.
ಅಂದರೆ ಹೆತ್ತ ತಾಯಿಯ ಪ್ರೀತಿ ದೊಡ್ಡದು, ಸಾಕಿ ಸಲುಹಿದ ತಾಯಿಯ ಮಮತೆ ಹೆಚ್ಚಿನದು ಎಂದು ತೀರ್ಮಾನಿಸುವುದು ಸುಲಭವಲ್ಲ. ಇವತ್ತು ಜಾತಿ, ಧರ್ಮ, ಅಂತಸ್ತು ಎಂದೆಲ್ಲ ಬಹಳಷ್ಟು ಜನ ಅಂಧರಾಗಿರುವಾಗ ಈ ಪುಟ್ಟ ಬಾಲಕ ಮತ್ತು ಆತನ ಇಬ್ಬರು ತಾಯಂದಿರು ಅವುಗಳನ್ನೆಲ್ಲ ಮೀರಿ ಮಾತೃತ್ವ, ಮಮತೆ ಮತ್ತು ಮಾನವೀಯತೆಯ ಪ್ರತಿಬಿಂಬಗಳಾಗಿದ್ದಾರೆ.
ಈಗಾಗಲೇ ಧರ್ಮದ ಹೆಸರಲ್ಲಿ ಸಾಕಷ್ಟು ದ್ವೇಷ ಮತ್ತು ರಕ್ತಪಾತವನ್ನು ಕಂಡಿರುವ ಗುಜರಾತ್ ಈ ಪ್ರಕರಣದಲ್ಲಾದರೂ ತನ್ನ ಅಂತರಾಳದಲ್ಲಿರುವ ಮನುಷ್ಯತ್ವವನ್ನು ಕಂಡುಕೊಳ್ಳುವಂತಾಗಲಿ.
ಹಾಗಾದರೆ ಎಷ್ಟು ಚೆನ್ನ ಅಲ್ಲವೇ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...