Homeಕರೋನಾ ತಲ್ಲಣಮಾಸ್ಕ್ ಧರಿಸದಿದ್ದವರು ಕೊರೊನಾ ಕೇಂದ್ರಗಳಲ್ಲಿ ಸೇವೆ ಸಲ್ಲಿಸಲಿ- ಗುಜರಾತ್ ಹೈಕೋರ್ಟ್

ಮಾಸ್ಕ್ ಧರಿಸದಿದ್ದವರು ಕೊರೊನಾ ಕೇಂದ್ರಗಳಲ್ಲಿ ಸೇವೆ ಸಲ್ಲಿಸಲಿ- ಗುಜರಾತ್ ಹೈಕೋರ್ಟ್

ಮಾಸ್ಕ್​ ಧರಿಸದ್ದಕ್ಕೆ ದಂಡ ಕಟ್ಟುವುದರ ಜೊತೆಗೆ ಕೊರೊನಾ ಆರೈಕೆ ಕೇಂದ್ರಗಳಲ್ಲಿ ಸಮುದಾಯ ಸೇವೆಯನ್ನೂ ಸಲ್ಲಿಸಬೇಕು. 

- Advertisement -
- Advertisement -

ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿ ಸಿಕ್ಕಿಬಿದ್ದವರನ್ನು ಕೊರೊನಾ ವೈರಸ್ ಆರೈಕೆ ಕೇಂದ್ರಗಳಲ್ಲಿ ಸಮುದಾಯ ಸೇವೆ ಮಾಡಲು ಕಡ್ಡಾಯಗೊಳಿಸುವಂತೆ ಗುಜರಾತ್ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಮಾಸ್ಕ್ ಧರಿಸದೆ ಓಡಾಡುವವರ ದಂಡದ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದೆ. ಮಾಸ್ಕ್​ ಧರಿಸದ್ದಕ್ಕೆ ದಂಡ ಕಟ್ಟುವುದರ ಜೊತೆಗೆ ಸಮುದಾಯ ಸೇವೆಯನ್ನೂ ಸಲ್ಲಿಸಬೇಕು.

ಕೊರೊನಾ ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಯು 5 ರಿಂದ 15 ದಿನಗಳವರೆಗೆ, ದಿನಕ್ಕೆ 4 ರಿಂದ 6 ಗಂಟೆಗಳ ಕಾಲ ಸಮುದಾಯ ಸೇವೆ ಮಾಡಬೇಕಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಜೆ.ಬಿ.ಪಾರ್ಡಿವಾಲಾ ಅವರ ನ್ಯಾಯಪೀಠ ಹೇಳಿದೆ.

ಜೊತೆಗೆ, “ನಿಯಮ ಉಲ್ಲಂಘಿಸಿದವರಿಗೆ ನೀಡಲಾಗುವ ಕೆಲಸಗಳು, ವೈದ್ಯಕೀಯೇತರ ಸ್ಪರೂಪದ್ದಾಗಿರಬೇಕು. ಸ್ವಚ್ಛತಾ ಕಾರ್ಯ, ಮನೆಗೆಲಸ, ಅಡುಗೆ ಮಾಡುವುದು ಮತ್ತು ಬಡಿಸಲು ಸಹಾಯ ಮಾಡುವುದು, ದಾಖಲೆ ತಯಾರಿಕೆ, ದತ್ತಾಂಶ ಸಂಗ್ರಹಣೆ ಇತ್ಯಾದಿಗಳನ್ನು ನೀಡಬೇಕು” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು

ಕೊರೊನಾ ಸಂಬಂಧಿತ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ದಂಡ ವಿಧಿಸುವುದನ್ನು ಮುಂದುವರಿಸಲಾಗುವುದು ಎಂದಿರುವ ನ್ಯಾಯಪೀಠ, ಸಮುದಾಯ ಕೇಂದ್ರಗಳಲ್ಲಿ ಸೇವೆಯನ್ನು ಶಿಕ್ಷೆಯಾಗಿ ವಿಧಿಸುವ ನೀತಿಯನ್ನು ತರಲು ಗುಜರಾತ್ ಸರ್ಕಾರಕ್ಕೆ ಆದೇಶಿಸಿದೆ.

ಪ್ರಸ್ತಾವನೆಯನ್ನು ಕಾರ್ಯಗತಗೊಳಿಸಲು ಸರ್ಕಾರ ಬಯಸಿದೆ ಆದರೆ ಅದನ್ನು ಜಾರಿಗೊಳಿಸುವುದು ಒಂದು ಸವಾಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.

ದೇಶದಲ್ಲಿ ಗುಜರಾತ್ ಅತಿಹೆಚ್ಚು ಕೊರೊನಾ ಪೀಡಿತ ರಾಜ್ಯಗಳಲ್ಲಿ ಒಂದಾಗಿದೆ. ಇದು ಈವರೆಗೆ 2 ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಕಳೆದ ತಿಂಗಳು ಸೋಂಕು ಹೆಚ್ಚಳದ ಮಧ್ಯೆ, ಗುಜರಾತ್ ಅಹಮದಾಬಾದ್‌ನಲ್ಲಿ ರಾತ್ರಿ ಕರ್ಫ್ಯೂ ಹಾಕಲಾಗಿತ್ತು. ರಾಜ್‌ಕೋಟ್, ಸೂರತ್ ಮತ್ತು ವಡೋದರಾದಲ್ಲೂ ಇದೇ ರೀತಿಯ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ.

ನಿನ್ನೆಯಷ್ಟೇ ’ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ. ಆದರೆ ನವೆಂಬರ್ 24 ರಂದು ರಾಜ್ಯಗಳನ್ನುದ್ದೇಶಿಸಿ ಮಾತನಾಡಿದ ದೇಶದ ಪ್ರಧಾನಿ, ದೇಶದ ಪ್ರತಿಯೊಬ್ಬ ಪ್ರಜೆಗೆ ವ್ಯಾಕ್ಸೀನ್ ತಲುಪಲಿದೆ. ಅದಕ್ಕಾಗಿ ಎಲ್ಲಾ ವ್ಯವಸ್ಥೆ ನಡೆದಿದೆ ಎಂದು ಭರವಸೆ ನೀಡಿದ್ದರು.


ಇದನ್ನೂ ಓದಿ: ಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...