Homeಮುಖಪುಟಗುಜರಾತ್‌: ಹಝರತ್ ಶಹೀದ್ ದರ್ಗಾ ತೆರವಿಗೆ ಹೈಕೋರ್ಟ್‌ ತಡೆ

ಗುಜರಾತ್‌: ಹಝರತ್ ಶಹೀದ್ ದರ್ಗಾ ತೆರವಿಗೆ ಹೈಕೋರ್ಟ್‌ ತಡೆ

- Advertisement -
- Advertisement -

ಅಹಮದಾಬಾದ್‌ನ ಕಲುಪುರ್ ರೈಲು ನಿಲ್ದಾಣದ ಬಳಿ ಇರುವ 500 ವರ್ಷಗಳಿಗೂ ಹೆಚ್ಚು ಹಳೆಯದಾದ ಹಝರತ್ ಕಲು ಶಹೀದ್ ದರ್ಗಾವನ್ನು ರೈಲ್ವೆ ಅಧಿಕಾರಿಗಳು ತೆರವಿಗೆ ನೋಟಿಸ್ ನೀಡಿದ್ದು, ಇದಕ್ಕೆ ಗುಜರಾತ್‌ ಹೈಕೋರ್ಟ್‌ ತಡೆ ನೀಡಿದೆ.

ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ದರ್ಗಾದ ಆಡಳಿತ ಮಂಡಳಿ, ಇದು ಅನಧಿಕೃತ ಎಂಬ ರೈಲ್ವೇ ಅಧಿಕಾರಿಗಳ ವಾದವನ್ನು  ಸುಳ್ಳು ಎನ್ನಲು ನಮ್ಮ ಬಳಿ ಅಗತ್ಯವಾದ ದಾಖಲೆಗಳು ಇದೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದು, ಕೋರ್ಟ್‌ ದರ್ಗಾವನ್ನು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಆದೇಶ ನೀಡಿದೆ.

ಅ.26 ರಂದು ಅಹಮದಾಬಾದ್‌ನ ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ (ಆರ್‌ಎಲ್‌ಡಿಎ) ಮತ್ತು ಪಶ್ಚಿಮ ರೈಲ್ವೆಯ ಹಿರಿಯ ವಿಭಾಗ ಇಂಜಿನಿಯರ್ ಹೊರಡಿಸಿದ ನೋಟೀಸ್‌ನಲ್ಲಿ ಅಹಮದಾಬಾದ್ ರೈಲ್ವೇ ನಿಲ್ದಾಣದ ಅಭಿವೃದ್ಧಿ ಕಾರ್ಯವನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು ಮತ್ತು 14ದಿನಗಳೊಳಗೆ ದರ್ಗಾ ತೆರವಿಗೆ ಸೂಚಿಸಲಾಗಿದೆ. ನೋಟಿಸ್‌ನಲ್ಲಿ ದರ್ಗಾವನ್ನು ಅನಧಿಕೃತ ರಚನೆ ಎಂದು ರೈಲ್ವೇ ಅಧಿಕಾರಿಗಳು ಆರೋಪಿಸಿದ್ದರು.

ದರ್ಗಾದ ಉಸ್ತುವಾರಿ ಮಂಜೂರ್ ಮಾಲೆಕ್ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದು, ಹಝರತ್ ಕಲು ಶಹೀದ್ ಅವರ ದರ್ಗಾವು 500 ವರ್ಷಗಳಿಗಿಂತ ಹೆಚ್ಚು ಹಳೆಯದು. ಪ್ರತಿನಿತ್ಯ ಕನಿಷ್ಠ 500 ಜನ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಇದು ಕೇವಲ ದರ್ಗಾ ಮಾತ್ರವಲ್ಲ, ದರ್ಗಾ ಆವರಣದಲ್ಲಿರುವ ಮಸೀದಿಯಲ್ಲಿಯೂ ಮುಸ್ಲಿಮರು ನಮಾಝ್‌ ಮಾಡುತ್ತಾರೆ ಮತ್ತು ಶತಮಾನಗಳಿಂದ ಇಲ್ಲಿ ಪ್ರಾರ್ಥನೆ ಮಾಡುತ್ತಾ ಬಂದಿದ್ದಾರೆ. ರಾತ್ರೋರಾತ್ರಿ ದರ್ಗಾ ಅಕ್ರಮ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಧ್ವನಿವರ್ಧಕ ಬಳಕೆ, ವಿದ್ಯುತ್ ಸಂಪರ್ಕ ಸೇರಿದಂತೆ ಹಲವು ವರ್ಷಗಳಿಂದ ಸಕ್ಷಮ ಅಧಿಕಾರಿಗಳಿಂದ ವಿವಿಧ ಅನುಮತಿಗಳನ್ನು ಪಡೆದ ಬಗ್ಗೆ ನಮ್ಮಲ್ಲಿ ದಾಖಲೆಗಳಿವೆ ಎಂದು ಹೇಳಿದ್ದಾರೆ.

ಸುನ್ನಿ ಅವಾಮಿ ಫೋರಂನ ಫಿರೋಜ್ ಖಾನ್ ಅಮೀನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದರ್ಗಾವು 1947ರ ಹಿಂದೆ ಮಾನ್ಯತೆ ಪಡೆದಿದೆ ಮತ್ತು ಅಧಿಕೃತವಾಗಿದೆ. ಅದನ್ನು ಯಾಕೆ ಕೆಡವಬಾರದು ಎಂದು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳನ್ನು ಹೊಂದಿದೆ ಎಂದು ಹೇಳಿದ್ದಾರೆ.

ರೈಲ್ವೇ ಅಧಿಕಾರಿಗಳ ನೋಟಿಸ್‌ನ್ನು ಪ್ರಶ್ನಿಸಿ ದರ್ಗಾ ಆಡಳಿತ ಮಂಡಳಿಯು ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ನ.10 ರಂದು ನಡೆದಿದೆ. ನ್ಯಾಯಮೂರ್ತಿ ವೈಭವಿ ನಾನಾವತಿ ಅವರು ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕಕ್ಷಿದಾರರಿಗೆ ಆದೇಶಿಸಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ಜ.16ರಂದು ನಡೆಯಲಿದೆ.

35 ವರ್ಷಗಳಿಂದ ದರ್ಗಾಕ್ಕೆ ಭೇಟಿ ನೀಡುತ್ತಿರುವ ರಾಜು ಬಲದೇವ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದರ್ಗಾ ಶಾಂತಿಯುತ  ಮತ್ತು ಸೌಹಾರ್ಧತೆಯ ಸಂಕೇತವಾಗಿದೆ. ಇದು 800 ವರ್ಷಗಳ ನಂಬಿಕೆ ಮತ್ತು ಇತಿಹಾಸವನ್ನು ಹೊಂದಿದೆ. ರೈಲ್ವೇ ಅಸ್ತಿತ್ವದಲ್ಲಿರುವುದಕ್ಕಿಂತ ಮುಂಚೆಯೇ ಇದು ಅಸ್ತಿತ್ವದಲ್ಲಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: 80 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...