Homeಮುಖಪುಟಗುಜರಾತ್‌: ಹಝರತ್ ಶಹೀದ್ ದರ್ಗಾ ತೆರವಿಗೆ ಹೈಕೋರ್ಟ್‌ ತಡೆ

ಗುಜರಾತ್‌: ಹಝರತ್ ಶಹೀದ್ ದರ್ಗಾ ತೆರವಿಗೆ ಹೈಕೋರ್ಟ್‌ ತಡೆ

- Advertisement -
- Advertisement -

ಅಹಮದಾಬಾದ್‌ನ ಕಲುಪುರ್ ರೈಲು ನಿಲ್ದಾಣದ ಬಳಿ ಇರುವ 500 ವರ್ಷಗಳಿಗೂ ಹೆಚ್ಚು ಹಳೆಯದಾದ ಹಝರತ್ ಕಲು ಶಹೀದ್ ದರ್ಗಾವನ್ನು ರೈಲ್ವೆ ಅಧಿಕಾರಿಗಳು ತೆರವಿಗೆ ನೋಟಿಸ್ ನೀಡಿದ್ದು, ಇದಕ್ಕೆ ಗುಜರಾತ್‌ ಹೈಕೋರ್ಟ್‌ ತಡೆ ನೀಡಿದೆ.

ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ದರ್ಗಾದ ಆಡಳಿತ ಮಂಡಳಿ, ಇದು ಅನಧಿಕೃತ ಎಂಬ ರೈಲ್ವೇ ಅಧಿಕಾರಿಗಳ ವಾದವನ್ನು  ಸುಳ್ಳು ಎನ್ನಲು ನಮ್ಮ ಬಳಿ ಅಗತ್ಯವಾದ ದಾಖಲೆಗಳು ಇದೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದು, ಕೋರ್ಟ್‌ ದರ್ಗಾವನ್ನು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಆದೇಶ ನೀಡಿದೆ.

ಅ.26 ರಂದು ಅಹಮದಾಬಾದ್‌ನ ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ (ಆರ್‌ಎಲ್‌ಡಿಎ) ಮತ್ತು ಪಶ್ಚಿಮ ರೈಲ್ವೆಯ ಹಿರಿಯ ವಿಭಾಗ ಇಂಜಿನಿಯರ್ ಹೊರಡಿಸಿದ ನೋಟೀಸ್‌ನಲ್ಲಿ ಅಹಮದಾಬಾದ್ ರೈಲ್ವೇ ನಿಲ್ದಾಣದ ಅಭಿವೃದ್ಧಿ ಕಾರ್ಯವನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು ಮತ್ತು 14ದಿನಗಳೊಳಗೆ ದರ್ಗಾ ತೆರವಿಗೆ ಸೂಚಿಸಲಾಗಿದೆ. ನೋಟಿಸ್‌ನಲ್ಲಿ ದರ್ಗಾವನ್ನು ಅನಧಿಕೃತ ರಚನೆ ಎಂದು ರೈಲ್ವೇ ಅಧಿಕಾರಿಗಳು ಆರೋಪಿಸಿದ್ದರು.

ದರ್ಗಾದ ಉಸ್ತುವಾರಿ ಮಂಜೂರ್ ಮಾಲೆಕ್ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದು, ಹಝರತ್ ಕಲು ಶಹೀದ್ ಅವರ ದರ್ಗಾವು 500 ವರ್ಷಗಳಿಗಿಂತ ಹೆಚ್ಚು ಹಳೆಯದು. ಪ್ರತಿನಿತ್ಯ ಕನಿಷ್ಠ 500 ಜನ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಇದು ಕೇವಲ ದರ್ಗಾ ಮಾತ್ರವಲ್ಲ, ದರ್ಗಾ ಆವರಣದಲ್ಲಿರುವ ಮಸೀದಿಯಲ್ಲಿಯೂ ಮುಸ್ಲಿಮರು ನಮಾಝ್‌ ಮಾಡುತ್ತಾರೆ ಮತ್ತು ಶತಮಾನಗಳಿಂದ ಇಲ್ಲಿ ಪ್ರಾರ್ಥನೆ ಮಾಡುತ್ತಾ ಬಂದಿದ್ದಾರೆ. ರಾತ್ರೋರಾತ್ರಿ ದರ್ಗಾ ಅಕ್ರಮ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಧ್ವನಿವರ್ಧಕ ಬಳಕೆ, ವಿದ್ಯುತ್ ಸಂಪರ್ಕ ಸೇರಿದಂತೆ ಹಲವು ವರ್ಷಗಳಿಂದ ಸಕ್ಷಮ ಅಧಿಕಾರಿಗಳಿಂದ ವಿವಿಧ ಅನುಮತಿಗಳನ್ನು ಪಡೆದ ಬಗ್ಗೆ ನಮ್ಮಲ್ಲಿ ದಾಖಲೆಗಳಿವೆ ಎಂದು ಹೇಳಿದ್ದಾರೆ.

ಸುನ್ನಿ ಅವಾಮಿ ಫೋರಂನ ಫಿರೋಜ್ ಖಾನ್ ಅಮೀನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದರ್ಗಾವು 1947ರ ಹಿಂದೆ ಮಾನ್ಯತೆ ಪಡೆದಿದೆ ಮತ್ತು ಅಧಿಕೃತವಾಗಿದೆ. ಅದನ್ನು ಯಾಕೆ ಕೆಡವಬಾರದು ಎಂದು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳನ್ನು ಹೊಂದಿದೆ ಎಂದು ಹೇಳಿದ್ದಾರೆ.

ರೈಲ್ವೇ ಅಧಿಕಾರಿಗಳ ನೋಟಿಸ್‌ನ್ನು ಪ್ರಶ್ನಿಸಿ ದರ್ಗಾ ಆಡಳಿತ ಮಂಡಳಿಯು ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ನ.10 ರಂದು ನಡೆದಿದೆ. ನ್ಯಾಯಮೂರ್ತಿ ವೈಭವಿ ನಾನಾವತಿ ಅವರು ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕಕ್ಷಿದಾರರಿಗೆ ಆದೇಶಿಸಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ಜ.16ರಂದು ನಡೆಯಲಿದೆ.

35 ವರ್ಷಗಳಿಂದ ದರ್ಗಾಕ್ಕೆ ಭೇಟಿ ನೀಡುತ್ತಿರುವ ರಾಜು ಬಲದೇವ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದರ್ಗಾ ಶಾಂತಿಯುತ  ಮತ್ತು ಸೌಹಾರ್ಧತೆಯ ಸಂಕೇತವಾಗಿದೆ. ಇದು 800 ವರ್ಷಗಳ ನಂಬಿಕೆ ಮತ್ತು ಇತಿಹಾಸವನ್ನು ಹೊಂದಿದೆ. ರೈಲ್ವೇ ಅಸ್ತಿತ್ವದಲ್ಲಿರುವುದಕ್ಕಿಂತ ಮುಂಚೆಯೇ ಇದು ಅಸ್ತಿತ್ವದಲ್ಲಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: 80 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...