Homeಮುಖಪುಟಗುಜರಾತ್‌: ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ; ಪೊಲೀಸರ ವಿರುದ್ಧ ದೋಷಾರೋಪ

ಗುಜರಾತ್‌: ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ; ಪೊಲೀಸರ ವಿರುದ್ಧ ದೋಷಾರೋಪ

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡಿದ ಪ್ರಕರಣದಲ್ಲಿ ನ್ಯಾಯಾಲಯ ನಿಂದನೆಯ ಆರೋಪ ಎದುರಿಸುತ್ತಿರುವ ನಾಲ್ವರು ಪೊಲೀಸರ ವಿರುದ್ಧ ಗುಜರಾತ್ ಹೈಕೋರ್ಟ್ ಬುಧವಾರ ದೋಷಾರೋಪ ದಾಖಲಿಸಿದೆ.

ನ್ಯಾಯಮೂರ್ತಿಗಳಾದ ಎ ಎಸ್ ಸುಪೇಹಿಯಾ ಮತ್ತು ಎಂ ಆರ್ ಮೆಂಗ್ಡೆ ಅವರ ವಿಭಾಗೀಯ ಪೀಠವು, ನಾಡಿಯಾಡ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ತನಿಖಾ ವರದಿಯನ್ನು ಆಧರಿಸಿ ನ್ಯಾಯಾಂಗ ಉಲ್ಲಂಘನೆ ಗಮನಿಸಿದ್ದಾರೆ. ಡಿ ಕೆ ಬಸು  ಮತ್ತು ಪಶ್ಚಿಮ ಬಂಗಾಳ ರಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ  ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ನಾಲ್ವರು ಆರೋಪಿಗಳು ಉಲ್ಲಂಘಿಸಿದ್ದಾರೆ ಎಂದು ಕೋರ್ಟ್‌ ಗಮನಿಸಿದೆ.

2022ರ ಆಕ್ಟೋಬರ್‌ನಲ್ಲಿ ಕಲ್ಲೆಸೆತಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳಿಗೆ ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ, ಸಾರ್ವಜನಿಕವಾಗಿ ಥಳಿಸುವ ಕೃತ್ಯದಲ್ಲಿ ಪೊಲೀಸ್‌ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂಬುವುದನ್ನು ನ್ಯಾಯಾಲಯವು ಕಂಡುಕೊಂಡಿದೆ.

ಆರೋಪಿ ಪೊಲೀಸರಲ್ಲಿ ಒಬ್ಬಾತ ಈ ಕಾನೂನು ಬಾಹಿರ ಹಾಗೂ ಅಪಮಾನಕಾರಿ ಕೃತ್ಯವನ್ನು ನಡಸುವುದಕ್ಕೆ ವೌನಸಮ್ಮತಿಯನ್ನು ನೀಡಿದ್ದಾನೆ. ಹಾಗಾಗಿ ಆತನ ವಿರುದ್ಧ ದೋಷಾರೋಪ ದಾಖಲಿಸುವಲ್ಲಿ ಯಾವುದೇ ರಿಯಾಯಿತಿ ನೀಡಬಾರದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬಂಧಿತರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡುವ ಮೂಲಕ ಆರೋಪಿ ಪೊಲೀಸರು ಸುಪ್ರೀಂಕೋರ್ಟ್ ಮಾರ್ಗದರ್ಶಿಸೂತ್ರಗಳನ್ನು ಉಲ್ಲಂಘಿಸಿದ್ದಾರೆಂದು ನ್ಯಾಯಾಲಯ ಹೇಳಿದೆ.

2022ರ ಆಕ್ಟೋಬರ್ 4ರಂದು ಉಂಧೆಲಾ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಓರ್ವ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ಟೇಬಲ್ ಗಳನ್ನು ನ್ಯಾಯಾಲಯ ಆರೋಪಿಗಳು ಎಂದು ಗಮನಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಪೀಠವು ಅಕ್ಟೋಬರ್ 11ಕ್ಕೆ ನಿಗದಿಪಡಿಸಿದೆ.

ಕಳೆದ ವರ್ಷ ನವರಾತ್ರಿ ಆಚರಣೆಯ ಸಂದರ್ಭದಲ್ಲಿ, ಕನಿಷ್ಠ ನಾಲ್ವರು ಮುಸ್ಲಿಂ ಯುವಕರನ್ನು ಕಾನೂನುಬಾಹಿರವಾಗಿ ಬಂಧಿಸಲಾಯಿತು ಮತ್ತು ಬಂಧಿತ ಯುವಕರಿಗೆ ಪೊಲೀಸರು ಖೇಡಾದಲ್ಲಿ ಸಾರ್ವಜನಿಕವಾಗಿ ಥಳಿಸಿದ್ದರು.

ಸಂತ್ರಸ್ತರಾದ ಜಹಿರ್ಮಿಯಾ ಮಾಲೆಕ್ (62), ಮಕ್ಸುದಾಬಾನು ಮಾಲೆಕ್ (45), ಸಹದ್ಮಿಯಾ ಮಾಲೆಕ್ (23), ಸಕಿಲ್ಮಿಯಾ ಮಾಲೆಕ್ (24) ಮತ್ತು ಶಾಹಿದ್ರಾಜ ಮಾಲೆಕ್ (25) ಅವರು 13 ಖೇಡಾ ಪೊಲೀಸ್ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಇದಲ್ಲದೆ ಸಂತ್ರಸ್ತರು ಪರಿಹಾರ ಕೋರಿದ್ದರು, ಅರ್ಜಿದಾರರು ಅಹಮದಾಬಾದ್ ರೇಂಜ್ ಐಜಿ ಮತ್ತು ಖೇಡಾ ಎಸ್ಪಿ ಸೇರಿದಂತೆ 15 ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಡಿ ಕೆ ಬಸು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ  ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿದ್ದರು.

ಇನ್‌ಸ್ಪೆಕ್ಟರ್ ಎ ವಿ ಪರ್ಮಾರ್, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಮತ್ತು ಹೆಡ್ ಕಾನ್‌ಸ್ಟೆಬಲ್ ಕನಕ್‌ಸಿನ್ಹ್ ಲಕ್ಷ್ಮಣಸಿನ್ಹ್ ಎಂಬ ನಾಲ್ವರು ಪೊಲೀಸ್ ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಇನ್‌ಸ್ಪೆಕ್ಟರ್ ಪರ್ಮಾರ್, ಸಂತ್ರಸ್ತರಾದ ಸಹದ್ಮಿಯಾ, ಸಕಿಲ್ಮಿಯಾ ಮತ್ತು ಶಾಹಿದ್ರಾಜಾ ಅವರ ಮೇಲೆ ಕೋಲಿನಿಂದ ಹಲ್ಲೆ ನಡೆಸುವುದು, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್ ಅಲ್ಲಿ ನಿಂತಿರುವುದು, ಕನಕಸಿಂಹ ಅವರು ಬಿಳಿ ಪೈಪ್ ಹಿಡಿದು ಅರ್ಜಿದಾರರನ್ನು ವ್ಯಾನ್‌ನ ಕಡೆಗೆ ತಳ್ಳುತ್ತಿರುವುದು ಮತ್ತು  ಇನ್ಸ್‌ಪೆಕ್ಟರ್ ಪರ್ಮಾರ್  ಯುವಕರಿಗೆ ಹೊಡೆಯುವಾಗ ಪೇದೆ ರಾಜುಭಾಯ್ ಮೂವರು ಯುವಕರ ಕೈಗಳನ್ನು ಕಂಬಕ್ಕೆ ಗಟ್ಟಿಯಾಗಿ ಹಿಡಿದಿರುವುದು ವೈರಲ್ ವಿಡಿಯೋದಲ್ಲಿ ಕಂಡು ಬಂದಿತ್ತು.

ಇದನ್ನು ಓದಿ: ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಬಗ್ಗೆ ನ್ಯಾಯಾಂಗದ ಮಧ್ಯಸ್ಥಿಕೆ ಕೋರಿ 16 ಮಾದ್ಯಮ ಸಂಸ್ಥೆಗಳಿಂದ ಸಿಜೆಐಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ...

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...