Homeಮುಖಪುಟಗುಜರಾತ್‌: ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ; ಪೊಲೀಸರ ವಿರುದ್ಧ ದೋಷಾರೋಪ

ಗುಜರಾತ್‌: ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ; ಪೊಲೀಸರ ವಿರುದ್ಧ ದೋಷಾರೋಪ

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡಿದ ಪ್ರಕರಣದಲ್ಲಿ ನ್ಯಾಯಾಲಯ ನಿಂದನೆಯ ಆರೋಪ ಎದುರಿಸುತ್ತಿರುವ ನಾಲ್ವರು ಪೊಲೀಸರ ವಿರುದ್ಧ ಗುಜರಾತ್ ಹೈಕೋರ್ಟ್ ಬುಧವಾರ ದೋಷಾರೋಪ ದಾಖಲಿಸಿದೆ.

ನ್ಯಾಯಮೂರ್ತಿಗಳಾದ ಎ ಎಸ್ ಸುಪೇಹಿಯಾ ಮತ್ತು ಎಂ ಆರ್ ಮೆಂಗ್ಡೆ ಅವರ ವಿಭಾಗೀಯ ಪೀಠವು, ನಾಡಿಯಾಡ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ತನಿಖಾ ವರದಿಯನ್ನು ಆಧರಿಸಿ ನ್ಯಾಯಾಂಗ ಉಲ್ಲಂಘನೆ ಗಮನಿಸಿದ್ದಾರೆ. ಡಿ ಕೆ ಬಸು  ಮತ್ತು ಪಶ್ಚಿಮ ಬಂಗಾಳ ರಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ  ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ನಾಲ್ವರು ಆರೋಪಿಗಳು ಉಲ್ಲಂಘಿಸಿದ್ದಾರೆ ಎಂದು ಕೋರ್ಟ್‌ ಗಮನಿಸಿದೆ.

2022ರ ಆಕ್ಟೋಬರ್‌ನಲ್ಲಿ ಕಲ್ಲೆಸೆತಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳಿಗೆ ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ, ಸಾರ್ವಜನಿಕವಾಗಿ ಥಳಿಸುವ ಕೃತ್ಯದಲ್ಲಿ ಪೊಲೀಸ್‌ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂಬುವುದನ್ನು ನ್ಯಾಯಾಲಯವು ಕಂಡುಕೊಂಡಿದೆ.

ಆರೋಪಿ ಪೊಲೀಸರಲ್ಲಿ ಒಬ್ಬಾತ ಈ ಕಾನೂನು ಬಾಹಿರ ಹಾಗೂ ಅಪಮಾನಕಾರಿ ಕೃತ್ಯವನ್ನು ನಡಸುವುದಕ್ಕೆ ವೌನಸಮ್ಮತಿಯನ್ನು ನೀಡಿದ್ದಾನೆ. ಹಾಗಾಗಿ ಆತನ ವಿರುದ್ಧ ದೋಷಾರೋಪ ದಾಖಲಿಸುವಲ್ಲಿ ಯಾವುದೇ ರಿಯಾಯಿತಿ ನೀಡಬಾರದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬಂಧಿತರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡುವ ಮೂಲಕ ಆರೋಪಿ ಪೊಲೀಸರು ಸುಪ್ರೀಂಕೋರ್ಟ್ ಮಾರ್ಗದರ್ಶಿಸೂತ್ರಗಳನ್ನು ಉಲ್ಲಂಘಿಸಿದ್ದಾರೆಂದು ನ್ಯಾಯಾಲಯ ಹೇಳಿದೆ.

2022ರ ಆಕ್ಟೋಬರ್ 4ರಂದು ಉಂಧೆಲಾ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಓರ್ವ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ಟೇಬಲ್ ಗಳನ್ನು ನ್ಯಾಯಾಲಯ ಆರೋಪಿಗಳು ಎಂದು ಗಮನಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಪೀಠವು ಅಕ್ಟೋಬರ್ 11ಕ್ಕೆ ನಿಗದಿಪಡಿಸಿದೆ.

ಕಳೆದ ವರ್ಷ ನವರಾತ್ರಿ ಆಚರಣೆಯ ಸಂದರ್ಭದಲ್ಲಿ, ಕನಿಷ್ಠ ನಾಲ್ವರು ಮುಸ್ಲಿಂ ಯುವಕರನ್ನು ಕಾನೂನುಬಾಹಿರವಾಗಿ ಬಂಧಿಸಲಾಯಿತು ಮತ್ತು ಬಂಧಿತ ಯುವಕರಿಗೆ ಪೊಲೀಸರು ಖೇಡಾದಲ್ಲಿ ಸಾರ್ವಜನಿಕವಾಗಿ ಥಳಿಸಿದ್ದರು.

ಸಂತ್ರಸ್ತರಾದ ಜಹಿರ್ಮಿಯಾ ಮಾಲೆಕ್ (62), ಮಕ್ಸುದಾಬಾನು ಮಾಲೆಕ್ (45), ಸಹದ್ಮಿಯಾ ಮಾಲೆಕ್ (23), ಸಕಿಲ್ಮಿಯಾ ಮಾಲೆಕ್ (24) ಮತ್ತು ಶಾಹಿದ್ರಾಜ ಮಾಲೆಕ್ (25) ಅವರು 13 ಖೇಡಾ ಪೊಲೀಸ್ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಇದಲ್ಲದೆ ಸಂತ್ರಸ್ತರು ಪರಿಹಾರ ಕೋರಿದ್ದರು, ಅರ್ಜಿದಾರರು ಅಹಮದಾಬಾದ್ ರೇಂಜ್ ಐಜಿ ಮತ್ತು ಖೇಡಾ ಎಸ್ಪಿ ಸೇರಿದಂತೆ 15 ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಡಿ ಕೆ ಬಸು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ  ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿದ್ದರು.

ಇನ್‌ಸ್ಪೆಕ್ಟರ್ ಎ ವಿ ಪರ್ಮಾರ್, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಮತ್ತು ಹೆಡ್ ಕಾನ್‌ಸ್ಟೆಬಲ್ ಕನಕ್‌ಸಿನ್ಹ್ ಲಕ್ಷ್ಮಣಸಿನ್ಹ್ ಎಂಬ ನಾಲ್ವರು ಪೊಲೀಸ್ ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಇನ್‌ಸ್ಪೆಕ್ಟರ್ ಪರ್ಮಾರ್, ಸಂತ್ರಸ್ತರಾದ ಸಹದ್ಮಿಯಾ, ಸಕಿಲ್ಮಿಯಾ ಮತ್ತು ಶಾಹಿದ್ರಾಜಾ ಅವರ ಮೇಲೆ ಕೋಲಿನಿಂದ ಹಲ್ಲೆ ನಡೆಸುವುದು, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್ ಅಲ್ಲಿ ನಿಂತಿರುವುದು, ಕನಕಸಿಂಹ ಅವರು ಬಿಳಿ ಪೈಪ್ ಹಿಡಿದು ಅರ್ಜಿದಾರರನ್ನು ವ್ಯಾನ್‌ನ ಕಡೆಗೆ ತಳ್ಳುತ್ತಿರುವುದು ಮತ್ತು  ಇನ್ಸ್‌ಪೆಕ್ಟರ್ ಪರ್ಮಾರ್  ಯುವಕರಿಗೆ ಹೊಡೆಯುವಾಗ ಪೇದೆ ರಾಜುಭಾಯ್ ಮೂವರು ಯುವಕರ ಕೈಗಳನ್ನು ಕಂಬಕ್ಕೆ ಗಟ್ಟಿಯಾಗಿ ಹಿಡಿದಿರುವುದು ವೈರಲ್ ವಿಡಿಯೋದಲ್ಲಿ ಕಂಡು ಬಂದಿತ್ತು.

ಇದನ್ನು ಓದಿ: ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಬಗ್ಗೆ ನ್ಯಾಯಾಂಗದ ಮಧ್ಯಸ್ಥಿಕೆ ಕೋರಿ 16 ಮಾದ್ಯಮ ಸಂಸ್ಥೆಗಳಿಂದ ಸಿಜೆಐಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...