Homeಮುಖಪುಟಗುಜರಾತ್: ದ್ವಾರಕಾದಲ್ಲಿ 313 ಕೋಟಿ ಮೌಲ್ಯದ ಹೆರಾಯಿನ್ ವಶ, ಮೂವರ ಬಂಧನ

ಗುಜರಾತ್: ದ್ವಾರಕಾದಲ್ಲಿ 313 ಕೋಟಿ ಮೌಲ್ಯದ ಹೆರಾಯಿನ್ ವಶ, ಮೂವರ ಬಂಧನ

- Advertisement -
- Advertisement -

ಕಳೆದ ಎರಡು ದಿನಗಳಿಂದ ಗುಜರಾತ್‌ನ ದೇವಭೂಮಿ ದ್ವಾರಕಾ ಜಿಲ್ಲೆಯಲ್ಲಿ ಮೂವರು ವ್ಯಕ್ತಿಗಳಿಂದ 313.25 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಮತ್ತು ಮೆಥಾಂಫೆಟಮೈನ್ (methamphetamine) ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಮಾದಕ ದ್ರವ್ಯಗಳು ಪಾಕಿಸ್ತಾನದಿಂದ ಬಂದಿದ್ದು, ಸಮುದ್ರ ಮಾರ್ಗದ ಮೂಲಕ ಗುಜರಾತ್‌ಗೆ ಕಳ್ಳಸಾಗಣೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ (ನ.10) ನಡೆದ ದಾಳಿಯ ವೇಳೆ ಇಬ್ಬರಿಂದ ವಶಪಡಿಸಿಕೊಂಡ 47 ಪ್ಯಾಕೆಟ್‌ಗಳಲ್ಲಿ 225 ಕೋಟಿ ರೂಪಾಯಿ ಮೌಲ್ಯದ 45 ಕೆಜಿ ಹೆರಾಯಿನ್ ಇತ್ತು ಎಂದು ವಿಧಿವಿಜ್ಞಾನ ವರದಿಯು ದೃಢಪಡಿಸಿದೆ ಎಂದಿದ್ದಾರೆ.

ಇದಕ್ಕೂ ಮುನ್ನ, ಮಂಗಳವಾರ (ನ.9) ಪೊಲೀಸರು ಖಚಿತ ಮಾಹಿತಿ ಮೇರೆಗೆ ಖಂಬಾಲಿಯಾ ಪಟ್ಟಣದ ಅತಿಥಿ ಗೃಹದಿಂದ ಮಹಾರಾಷ್ಟ್ರದ ಥಾಣೆ ನಿವಾಸಿ ಸಜ್ಜದ್ ಘೋಸಿ ಎಂಬಾತನನ್ನು ಬಂಧಿಸಿದ್ದರು. ಆತನಿಂದ ಒಟ್ಟು 88.25 ಕೋಟಿ ಮೌಲ್ಯದ 11.483 ಕೆಜಿ ಹೆರಾಯಿನ್ ಮತ್ತು 6.168 ಕೆಜಿ ಮೆಥಾಂಫೆಟಮೈನ್ ಒಳಗೊಂಡ 19 ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ಬಂಧಿತ ಸಜ್ಜದ್ ಘೋಸಿ ತನ್ನ ಇಬ್ಬರು ಸಹೋದರರಾದ ಸಲೀಂ ಕಾರಾ ಮತ್ತು ಅಲಿ ಕಾರಾ ಅವರಿಂದ ಡ್ರಗ್ಸ್  ತೆಗೆದುಕೊಂಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ‌ಇದಾದ ಬಳಿಕ ಬುಧವಾರ ಜಿಲ್ಲೆಯ ಸಲಾಯ ಕರಾವಳಿ ಪಟ್ಟಣದಲ್ಲಿರುವ ಕಾರಾ ಸಹೋದರರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿ ಅಪರಿಚಿತ ವಸ್ತುವನ್ನು ಒಳಗೊಂಡ 47 ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದರು.

“ಪರೀಕ್ಷೆಗಳ ನಂತರ, 47 ಪ್ಯಾಕೆಟ್‌ಗಳಲ್ಲಿ 45 ಕೆಜಿ ಹೆರಾಯಿನ್ ಇರುವುದು ದೃಢಪಟ್ಟಿದೆ. ಡ್ರಗ್ಸ್ ವಶಪಡಿಸಿಕೊಂಡ ನಂತರ ಮೂವರನ್ನು ಬಂಧಿಸಲಾಗಿದೆ” ಎಂದು ದೇವಭೂಮಿ ದ್ವಾರಕಾದ ಪೊಲೀಸ್ ಅಧೀಕ್ಷಕ ಸುನಿಲ್ ಜೋಶಿ ಹೇಳಿದ್ದಾರೆ.

ಸಜ್ಜದ್ ಘೋಸಿ ಈ ಹಿಂದೆ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು. ಸಲೀಂ ಕಾರಾ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆ, ನಕಲಿ ಕರೆನ್ಸಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಬಂಧಿತರಾಗಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಸೆಪ್ಟೆಂಬರ್ 15 ರಂದು ಗುಜರಾತ್‌ನ ಮುಂದ್ರಾ ಬಂದರಿನಲ್ಲಿ ಅಫ್ಘಾನಿಸ್ತಾನದಿಂದ ಬಂದಿದ್ದ ಎರಡು ಕಂಟೇನರ್‌ಗಳನ್ನು ವಶಪಡಿಸಿಕೊಂಡಿದ್ದು, ಸುಮಾರು ಮೂರು ಟನ್‌ಗಳ 20 ಸಾವಿರ ಕೋಟಿ ರೂ. ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಂದರಿನ ಅಧಿಕಾರಿಗಳು ಹೇಳಿದ್ದರು.


ಇದನ್ನೂ ಓದಿ: ಅದಾನಿ ಮಾಲಿಕತ್ವದ ಬಂದರಿನಲ್ಲಿ 20 ಸಾವಿರ ಕೋಟಿ ರೂ.ಗಳ ಹೆರಾಯಿನ್ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು ಹಾಗೂ ಕಾರ್ಯಕರ್ತರು, ಸಂಸದರ ಸಭೆಯಲ್ಲೇ...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...