Homeಮುಖಪುಟಆರ್‌ಟಿಐ ಕಾರ್ಯಕರ್ತ ಅಮಿತ್ ಜೇತ್ವಾ ಹತ್ಯೆ ಪ್ರಕರಣ: ಬಿಜೆಪಿಯ ಮಾಜಿ ಸಂಸದ ಸೇರಿ ಎಲ್ಲಾ ಆರೋಪಿಗಳನ್ನು...

ಆರ್‌ಟಿಐ ಕಾರ್ಯಕರ್ತ ಅಮಿತ್ ಜೇತ್ವಾ ಹತ್ಯೆ ಪ್ರಕರಣ: ಬಿಜೆಪಿಯ ಮಾಜಿ ಸಂಸದ ಸೇರಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ಗುಜರಾತ್‌ ಹೈಕೋರ್ಟ್‌

- Advertisement -
- Advertisement -

ಆರ್‌ಟಿಐ ಕಾರ್ಯಕರ್ತ ಮತ್ತು ಪರಿಸರವಾದಿ ಅಮಿತ್ ಜೇತ್ವಾ ಹತ್ಯೆ ಪ್ರಕರಣದಲ್ಲಿ ಜುನಾಗಡದ ಬಿಜೆಪಿಯ ಮಾಜಿ ಸಂಸದ ದಿನು ಬೋಘಾ ಸೋಲಂಕಿ ಮತ್ತು ಇತರ ಆರು ಜನರನ್ನು ಗುಜರಾತ್ ಹೈಕೋರ್ಟ್‌ ಖುಲಾಸೆಗೊಳಿಸಿದೆ.

ನ್ಯಾಯಮೂರ್ತಿಗಳಾದ ಎಎಸ್ ಸುಪೇಹಿಯಾ ಮತ್ತು ವಿಮಲ್ ಕೆ ವ್ಯಾಸ್ ಅವರ ಪೀಠ ಇಂದು ಸತ್ಯಮೇವ ಜಯತೇ. ಸತ್ಯಕ್ಕೆ ಜಯ ಸಿಗಬೇಕು ಎಂದು ದಿನು ಬೋಘಾ ಸೋಲಂಕಿ ಸೆರಿದಂತೆ ಇತರ ಆರೋಪಿಗಳನ್ನು ಪ್ರಕರಣದಲ್ಲಿ ಖುಲಾಸೆಗೊಳಿಸುವಾಗ ಹೇಳಿದೆ.

ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ಪ್ರಕರಣವನ್ನು ಪೊಲೀಸರು ಮತ್ತು ವಿಚಾರಣಾ ನ್ಯಾಯಾಲಯವು ನಿರ್ವಹಿಸಿದ ರೀತಿಯನ್ನು ಟೀಕಿಸಿದೆ. ಸತ್ಯವನ್ನು ಸಮಾಧಿ ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಹೈಕೋರ್ಟ್ ಟೀಕಿಸಿದೆ. ಅಪರಾಧದ ತನಿಖೆಯು ಆರಂಭದಿಂದಲೂ ಕಾಟಾಚಾರದಿಂದ ಕೂಡಿದೆ ಮತ್ತು ಪೂರ್ವಾಗ್ರಹ ಪೀಡಿತವಾಗಿತ್ತು. ಸಾಕ್ಷಿಗಳ ವಿಶ್ವಾಸವನ್ನು ಗಳಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲಗೊಂಡಿದೆ. ಕೊಲೆ ನಡೆದಾಗ ದೂರುದಾರ ಪೋಲಿಸ್ ಕಾನ್‌ಸ್ಟೇಬಲ್ ಸ್ಥಳದಲ್ಲಿದ್ದರು, ಅವರು ಓಡಿ ಪರಾರಿಯಾಗುತ್ತಿದ್ದ ದಾಳಿಕೋರರನ್ನು ಬೆನ್ನಟ್ಟಿದ್ದರು. ಮೊದಲ ತನಿಖಾಧಿಕಾರಿ ಕೇವಲ 55 ಸೆಕೆಂಡ್‌ಗಳಲ್ಲಿ ಮತ್ತು ಹಿರಿಯ ಪೋಲಿಸ್ ಅಧಿಕಾರಿ 20 ನಿಮಿಷಗಳಲ್ಲಿ ಘಟನಾ ಸ್ಥಳವನ್ನು ತಲುಪಿದ್ದರು, ಆದರೆ ದಾಳಿಕೋರರನ್ನು ತಕ್ಷಣಕ್ಕೆ ಬಂಧಿಸಲು ಸಾಧ್ಯವಾಗದಿರುವುದು ದಿಗ್ಭ್ರಮೆಯನ್ನು ಮೂಡಿಸಿದೆ ಮತ್ತು ಸತ್ಯವನ್ನು ಮುಚ್ಚಿ ಹಾಕಲು ಎಲ್ಲ ಪ್ರಯತ್ನಗಳನ್ನು ಮಾಡಲಾಗಿದೆ. ದೋಷಿಯೆಂದು ಹೇಳಿದ ಜುಲೈ 11, 2019ರ ಕೆಳ ನ್ಯಾಯಾಲಯದ ತೀರ್ಪನ್ನು ನಾವು ರದ್ದುಗೊಳಿಸಿದ್ದೇವೆ, ಮೇಲ್ಮನವಿದಾರರನ್ನು ನಾವು ದೋಷಮುಕ್ತಗೊಳಿಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ.

ಅಮಿತ್ ಜೇಥ್ವಾ ಅವರು ಆರ್‌ಟಿಐ  ಕಾರ್ಯಕರ್ತ ಮತ್ತು ಪರಿಸರವಾದಿಯಾಗಿದ್ದಾರೆ. ಅವರು ಆರ್‌ಟಿಐಯಡಿ ಮಾಹಿತಿಗಳನ್ನು ಪಡೆದು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರಕರಣಗಳನ್ನು ದಾಖಲಿಸುತ್ತಿದ್ದರು. ಅವರನ್ನು 2010ರ ಜುಲೈನಲ್ಲಿ ಗುಜರಾತ್ ಹೈಕೋರ್ಟಿನ ಗೇಟ್‌ನ ಹೊರಗಡೆ ಮೋಟಾರ್‌ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಅವರ ಹತ್ಯೆಗೆ ಸುಮಾರು ಒಂದು ತಿಂಗಳ ಮೊದಲು, ಅವರು ಗಿರ್ ಅರಣ್ಯದ ಸುತ್ತ ಅಕ್ರಮ ಗಣಿಗಾರಿಕೆ ಬಗ್ಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬಿಜೆಪಿಯ ಮಾಜಿ ಸಂಸದ ಸೋಲಂಕಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಅವರು ದಾಖಲೆಯನ್ನು ಕೂಡ ಕೋರ್ಟ್‌ಗೆ ಸಲ್ಲಿಸಿದ್ದರು.

ಅಮಿತ್ ಜೇಥ್ವಾ ಹತ್ಯೆ ಪ್ರಕರಣವನ್ನು ಹೈಕೋರ್ಟ್  2012ರಲ್ಲಿ ಸಿಬಿಐ ತನಿಖೆಗೆ  ವಹಿಸಿದೆ. 2019ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಈ ಕೊಲೆ ಪ್ರಕರಣದಲ್ಲಿ ಸೋಲಂಕಿ ಮತ್ತು ಅವರ ಸೋದರಳಿಯ ಸೇರಿ ಇತರ ಆರೋಪಿಗಳಿಗೆ ಜೀವಾವಧಿ  ಶಿಕ್ಷೆಯನ್ನು ವಿಧಿಸಿತ್ತು. ಈ ತೀರ್ಪನ್ನು ಈಗ ಹೈಕೋರ್ಟ್ ರದ್ದುಗೊಳಿಸಿದೆ.

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್‌ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...