Homeಮುಖಪುಟಖೇಡಾ ಥಳಿತ ಪ್ರಕರಣ:‌ ನಾಲ್ವರು ಪೊಲೀಸ್‌ ಅಧಿಕಾರಿಗಳಿಗೆ 14 ದಿನಗಳ ಜೈಲು ಶಿಕ್ಷೆ

ಖೇಡಾ ಥಳಿತ ಪ್ರಕರಣ:‌ ನಾಲ್ವರು ಪೊಲೀಸ್‌ ಅಧಿಕಾರಿಗಳಿಗೆ 14 ದಿನಗಳ ಜೈಲು ಶಿಕ್ಷೆ

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಐವರು ಮುಸ್ಲಿಂ ವ್ಯಕ್ತಿಗಳನ್ನು ಸಾರ್ವಜನಿಕವಾಗಿ ಥಳಿಸಿದ ಆರೋಪದಲ್ಲಿ ನಾಲ್ವರು ಪೊಲೀಸರನ್ನು ನ್ಯಾಯಾಲಯ ನಿಂದನೆ ಆರೋಪದಲ್ಲಿ ತಪ್ಪಿತಸ್ಥರೆಂದು ಗುಜರಾತ್ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಾರ್ವಜನಿಕವಾಗಿ ಐವರು ಮುಸ್ಲಿಂ ವ್ಯಕ್ತಿಗಳ ಮೇಲೆ ದಾಳಿ ಪೊಲೀಸರು ದಾಳಿ ನಡೆಸಿದ್ದರು. ಅಪರಾಧಿ ಪೊಲೀಸರಿಗೆ ತಲಾ 2 ಸಾವಿರ ರೂ. ದಂಡವನ್ನು ವಿಧಿಸಿದ್ದು, ದಂಡ ತೆರಲು ತಪ್ಪಿದ್ದಲ್ಲಿ ಇನ್ನೂ ಮೂರು ದಿನಗಳ ಕಾಲ ಜೈಲು ಶಿಕ್ಷೆಯನ್ನು ಅನುಭವಿಸಬೇಕು ಎಂದು ಎಚ್ಚರಿಸಿದೆ.

ನ್ಯಾಯಮೂರ್ತಿಗಳಾದ ಎಎಸ್ ಸುಪೇಹಿಯಾ ಮತ್ತು ಗೀತಾ ಗೋಪಿ ಅವರ ವಿಭಾಗೀಯ ಪೀಠವು, ಇದು ಅಮಾನವೀಯ ಕೃತ್ಯವಾಗಿದೆ ಎಂದು ಹೇಳಿದೆ. ಇದು ಡಿಕೆ ಬಸು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಧಿಸಿದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

”ಅವರು ಸಂತ್ರಸ್ತರನ್ನು ಅವಮಾನಿಸುವ ಕೆಟ್ಟ ಉದ್ದೇಶದಿಂದ ಅಮಾನವೀಯ ಕೃತ್ಯ ಎಸಗಿದ್ದಾರೆ. ಅವರು ಡಿಕೆ ಬಸು ಮಾರ್ಗಸೂಚಿಗಳನ್ನು ಮಾತ್ರವಲ್ಲದೆ ಸಂತ್ರಸ್ತರ ವೈಯಕ್ತಿಕ ಸ್ವಾತಂತ್ರ್ಯವನ್ನೂ ಉಲ್ಲಂಘಿಸಿದ್ದಾರೆ” ಎಂದು ಕೋರ್ಟ್ ಗಮನಿಸಿದೆ. ಹೀಗಾಗಿ ನ್ಯಾಯಾಲಯ ಆರೋಪಿಗೆ 14 ದಿನಗಳ ಸಾದಾ ಜೈಲು ಶಿಕ್ಷೆ ಹಾಗೂ ₹2,000 ದಂಡ ವಿಧಿಸಿದೆ.

”ಇದು ಮಾನವೀಯತೆಯ ವಿರುದ್ಧದ ಕೃತ್ಯವಾಗಿದ್ದು, ಸಾರ್ವಜನಿಕರೆದು ಅವಮಾನಿಸಲಾಗಿದೆ ಮತ್ತು ಈ ಘಟನೆಯ ವಿಡಿಯೋ, ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಇದು ಕೇವಲ ಉಂಡೇಲ ಗ್ರಾಮಕ್ಕೆ ಸೀಮಿತವಾಗಿಲ್ಲ. ಹೀಗಾಗಿ, ನಾಲ್ವರು ಪೊಲೀಸರಿಗೆ 14 ದಿನಗಳ ಸಾದಾ ಜೈಲು ಶಿಕ್ಷೆ ಮತ್ತು 2,000 ದಂಡ,’’ ಎಂದು ಪೀಠವು ಆದೇಶಿಸಿದೆ. ಸಂತ್ರಸ್ತರಿಗೆ ಪರಿಹಾರ ನೀಡಲು ಮುಂದಾದ ಪೊಲೀಸರ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿ ಎಎಸ್ ಸುಪೇಹಿಯಾ ನೇತೃತ್ವದ ಪೀಠವು ತನ್ನ ಆದೇಶವನ್ನು ಮೂರು ತಿಂಗಳ ಅವಧಿಗೆ ತಡೆಹಿಡಿಯಿತು.

ಪೊಲೀಸ್ ಅಧಿಕಾರಿಗಳು ಸಲ್ಲಿಸಿದ ಕ್ಷಮಾಪಣೆಯನ್ನು ಸ್ವೀಕರಿಸಲು ಪೀಠವು ನಿರಾಕರಿಸಿತು. ”ಅವರು ಪ್ರಾಮಾಣಿಕವಾಗಿದ್ದರೂ, ಅವರ ಕೃತ್ಯವು ಕಾನೂನು ಸುವ್ಯವಸ್ಥೆಯ ಮೇಲೆ ದುರ್ಬಲ ಪರಿಣಾಮ ಬೀರಿದೆ” ಎಂದು ಹೇಳಿದರು.

”ಕ್ಷಮಾಪಣೆಯನ್ನು ಸ್ವೀಕರಿಸುವುದು ನ್ಯಾಯದ ಅಪಹಾಸ್ಯಕ್ಕೆ ಕಾರಣವಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

”ಪೊಲೀಸರ ಅಮಾನವೀಯ ಕೃತ್ಯಗಳು ಕ್ಷಮೆಯ ಗಡಿಯನ್ನು ಮೀರಿವೆ. ಮನುಷ್ಯ ಎಂಬ ಭಾವನೆಯನ್ನು ಅಳಿಸಿಹಾಕುವ ಮಟ್ಟಿಗೆ ಕೃತ್ಯ ನಡೆಸಲಾಗಿದೆ. ಇದು ಕಾನೂನುಬದ್ಧವಾಗಿ ಸರಿದೂಗಿಸಲು ಸಾಧ್ಯವಿಲ್ಲ” ಎಂದು ಪೀಠವು ಒತ್ತಿಹೇಳಿತು.

”ಅಲ್ಲದೆ, ಕ್ಷಮಾಪಣೆಯನ್ನು ಅಂಗೀಕರಿಸಿದರೆ, ಅದು ಸಮಾಜಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಮತ್ತು ಅಂತಹ ಕೃತ್ಯಗಳನ್ನು ಪ್ರೋತ್ಸಾಹಿಸುತ್ತದೆ ಮತ್ತು ನ್ಯಾಯಾಂಗದ ಮೇಲಿನ ಜನರ ವಿಶ್ವಾಸವನ್ನು ಕದಡುತ್ತದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಖೇಡಾ ಥಳಿತ ಪ್ರಕರಣ: ಆರೋಪಿತ ಪೊಲೀಸರಿಂದ ಪರಿಹಾರ ನಿರಾಕರಿಸಿದ ಸಂತ್ರಸ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...