Homeಮುಖಪುಟಖೇಡಾ ಥಳಿತ ಪ್ರಕರಣ:‌ ನಾಲ್ವರು ಪೊಲೀಸ್‌ ಅಧಿಕಾರಿಗಳಿಗೆ 14 ದಿನಗಳ ಜೈಲು ಶಿಕ್ಷೆ

ಖೇಡಾ ಥಳಿತ ಪ್ರಕರಣ:‌ ನಾಲ್ವರು ಪೊಲೀಸ್‌ ಅಧಿಕಾರಿಗಳಿಗೆ 14 ದಿನಗಳ ಜೈಲು ಶಿಕ್ಷೆ

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಐವರು ಮುಸ್ಲಿಂ ವ್ಯಕ್ತಿಗಳನ್ನು ಸಾರ್ವಜನಿಕವಾಗಿ ಥಳಿಸಿದ ಆರೋಪದಲ್ಲಿ ನಾಲ್ವರು ಪೊಲೀಸರನ್ನು ನ್ಯಾಯಾಲಯ ನಿಂದನೆ ಆರೋಪದಲ್ಲಿ ತಪ್ಪಿತಸ್ಥರೆಂದು ಗುಜರಾತ್ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಾರ್ವಜನಿಕವಾಗಿ ಐವರು ಮುಸ್ಲಿಂ ವ್ಯಕ್ತಿಗಳ ಮೇಲೆ ದಾಳಿ ಪೊಲೀಸರು ದಾಳಿ ನಡೆಸಿದ್ದರು. ಅಪರಾಧಿ ಪೊಲೀಸರಿಗೆ ತಲಾ 2 ಸಾವಿರ ರೂ. ದಂಡವನ್ನು ವಿಧಿಸಿದ್ದು, ದಂಡ ತೆರಲು ತಪ್ಪಿದ್ದಲ್ಲಿ ಇನ್ನೂ ಮೂರು ದಿನಗಳ ಕಾಲ ಜೈಲು ಶಿಕ್ಷೆಯನ್ನು ಅನುಭವಿಸಬೇಕು ಎಂದು ಎಚ್ಚರಿಸಿದೆ.

ನ್ಯಾಯಮೂರ್ತಿಗಳಾದ ಎಎಸ್ ಸುಪೇಹಿಯಾ ಮತ್ತು ಗೀತಾ ಗೋಪಿ ಅವರ ವಿಭಾಗೀಯ ಪೀಠವು, ಇದು ಅಮಾನವೀಯ ಕೃತ್ಯವಾಗಿದೆ ಎಂದು ಹೇಳಿದೆ. ಇದು ಡಿಕೆ ಬಸು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಧಿಸಿದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

”ಅವರು ಸಂತ್ರಸ್ತರನ್ನು ಅವಮಾನಿಸುವ ಕೆಟ್ಟ ಉದ್ದೇಶದಿಂದ ಅಮಾನವೀಯ ಕೃತ್ಯ ಎಸಗಿದ್ದಾರೆ. ಅವರು ಡಿಕೆ ಬಸು ಮಾರ್ಗಸೂಚಿಗಳನ್ನು ಮಾತ್ರವಲ್ಲದೆ ಸಂತ್ರಸ್ತರ ವೈಯಕ್ತಿಕ ಸ್ವಾತಂತ್ರ್ಯವನ್ನೂ ಉಲ್ಲಂಘಿಸಿದ್ದಾರೆ” ಎಂದು ಕೋರ್ಟ್ ಗಮನಿಸಿದೆ. ಹೀಗಾಗಿ ನ್ಯಾಯಾಲಯ ಆರೋಪಿಗೆ 14 ದಿನಗಳ ಸಾದಾ ಜೈಲು ಶಿಕ್ಷೆ ಹಾಗೂ ₹2,000 ದಂಡ ವಿಧಿಸಿದೆ.

”ಇದು ಮಾನವೀಯತೆಯ ವಿರುದ್ಧದ ಕೃತ್ಯವಾಗಿದ್ದು, ಸಾರ್ವಜನಿಕರೆದು ಅವಮಾನಿಸಲಾಗಿದೆ ಮತ್ತು ಈ ಘಟನೆಯ ವಿಡಿಯೋ, ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಇದು ಕೇವಲ ಉಂಡೇಲ ಗ್ರಾಮಕ್ಕೆ ಸೀಮಿತವಾಗಿಲ್ಲ. ಹೀಗಾಗಿ, ನಾಲ್ವರು ಪೊಲೀಸರಿಗೆ 14 ದಿನಗಳ ಸಾದಾ ಜೈಲು ಶಿಕ್ಷೆ ಮತ್ತು 2,000 ದಂಡ,’’ ಎಂದು ಪೀಠವು ಆದೇಶಿಸಿದೆ. ಸಂತ್ರಸ್ತರಿಗೆ ಪರಿಹಾರ ನೀಡಲು ಮುಂದಾದ ಪೊಲೀಸರ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿ ಎಎಸ್ ಸುಪೇಹಿಯಾ ನೇತೃತ್ವದ ಪೀಠವು ತನ್ನ ಆದೇಶವನ್ನು ಮೂರು ತಿಂಗಳ ಅವಧಿಗೆ ತಡೆಹಿಡಿಯಿತು.

ಪೊಲೀಸ್ ಅಧಿಕಾರಿಗಳು ಸಲ್ಲಿಸಿದ ಕ್ಷಮಾಪಣೆಯನ್ನು ಸ್ವೀಕರಿಸಲು ಪೀಠವು ನಿರಾಕರಿಸಿತು. ”ಅವರು ಪ್ರಾಮಾಣಿಕವಾಗಿದ್ದರೂ, ಅವರ ಕೃತ್ಯವು ಕಾನೂನು ಸುವ್ಯವಸ್ಥೆಯ ಮೇಲೆ ದುರ್ಬಲ ಪರಿಣಾಮ ಬೀರಿದೆ” ಎಂದು ಹೇಳಿದರು.

”ಕ್ಷಮಾಪಣೆಯನ್ನು ಸ್ವೀಕರಿಸುವುದು ನ್ಯಾಯದ ಅಪಹಾಸ್ಯಕ್ಕೆ ಕಾರಣವಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

”ಪೊಲೀಸರ ಅಮಾನವೀಯ ಕೃತ್ಯಗಳು ಕ್ಷಮೆಯ ಗಡಿಯನ್ನು ಮೀರಿವೆ. ಮನುಷ್ಯ ಎಂಬ ಭಾವನೆಯನ್ನು ಅಳಿಸಿಹಾಕುವ ಮಟ್ಟಿಗೆ ಕೃತ್ಯ ನಡೆಸಲಾಗಿದೆ. ಇದು ಕಾನೂನುಬದ್ಧವಾಗಿ ಸರಿದೂಗಿಸಲು ಸಾಧ್ಯವಿಲ್ಲ” ಎಂದು ಪೀಠವು ಒತ್ತಿಹೇಳಿತು.

”ಅಲ್ಲದೆ, ಕ್ಷಮಾಪಣೆಯನ್ನು ಅಂಗೀಕರಿಸಿದರೆ, ಅದು ಸಮಾಜಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಮತ್ತು ಅಂತಹ ಕೃತ್ಯಗಳನ್ನು ಪ್ರೋತ್ಸಾಹಿಸುತ್ತದೆ ಮತ್ತು ನ್ಯಾಯಾಂಗದ ಮೇಲಿನ ಜನರ ವಿಶ್ವಾಸವನ್ನು ಕದಡುತ್ತದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಖೇಡಾ ಥಳಿತ ಪ್ರಕರಣ: ಆರೋಪಿತ ಪೊಲೀಸರಿಂದ ಪರಿಹಾರ ನಿರಾಕರಿಸಿದ ಸಂತ್ರಸ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...