Homeಮುಖಪುಟ₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

- Advertisement -
- Advertisement -

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ, ಉತ್ತರ ಗುಜರಾತ್‌ನ ಮೆಹ್ಸಾನ ಜಿಲ್ಲೆಯಿಂದ ವೈದ್ಯಕೀಯ ಶಿಕ್ಷಣದ ವಂಚನೆಯ ಕುರಿತ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

ಹೋಮಿಯೋಪತಿ ವೈದ್ಯರೊಬ್ಬರು ಎಂಬಿಬಿಎಸ್‌ ಪದವಿ ಪ್ರವೇಶಕ್ಕೆ 16.32 ಲಕ್ಷ ರೂಪಾಯಿ ಪಾವತಿಸಿದ್ದು, ಯಾವುದೇ ತರಗತಿಗಳಿಗೆ ಹಾಜರಾಗದೆ, ಪರೀಕ್ಷೆ ಎದುರಿಸದೆ ಒಂದು ತಿಂಗಳಲ್ಲಿ ಪದವಿ ಹಾಗೂ ಪ್ರಮಾಣ ಪತ್ರ ಪಡೆದಿದ್ದಾರೆ.

ವರದಿಗಳ ಪ್ರಕಾರ, ಜುಲೈ 2018ರಲ್ಲಿ ಸುರೇಶ್ ಪಟೇಲ್ (41) ಎಂಬ ಹೋಮಿಯೋಪತಿ ವೈದ್ಯ ವೈದ್ಯಕೀಯ ಶಿಕ್ಷಣದಲ್ಲಿ ಉನ್ನತ ಪದವಿ ಪಡೆಯಲು ಅಂತರ್ಜಾಲದಲ್ಲಿ ಶೋಧ ನಡೆಸುವಾಗ, ಆಲ್ ಇಂಡಿಯಾ ಆಲ್ಟರ್ನೇಟಿವ್ ಮೆಡಿಕಲ್ ಕೌನ್ಸಿಲ್ ಎಂಬ ಸಂಸ್ಥೆ ಎಂಬಿಬಿಎಸ್‌ ಪದವಿಗಾಗಿ ಅರ್ಜಿಗಳನ್ನು ಆಹ್ವಾನಿಸಿರುವುದು ಕಂಡು ಬಂದಿದೆ. ಸುರೇಶ್ ಅವರು ಇಂಟರ್‌ನೆಟ್‌ನಲ್ಲಿ ನೀಡಲಾಗಿದ್ದ ಡಾ. ಪ್ರೇಮ್‌ ಕುಮಾರ್ ರಜಪೂತ್‌ ಎಂಬವರಿಗೆ ಕರೆ ಮಾಡಿದ್ದಾರೆ. ಎಂಬಿಬಿಎಸ್‌ ಪದವಿ ಪ್ರವೇಶದ ಬಗ್ಗೆ ವಿಚಾರಿಸಿದ್ದಾರೆ. ಆಗ ಆ ಕಡೆಯಿಂದ ಮಾತನಾಡಿದ ವ್ಯಕ್ತಿ 12ನೇ ತರಗತಿಯ ಅಂಕ ಪಟ್ಟಿಯ ಆಧಾರದಲ್ಲಿ ಎಂಬಿಬಿಎಸ್‌ ಪದವಿಗೆ ಪ್ರವೇಶ ದೊರೆಯಲಿದೆ ಎಂಬ ಭರವಸೆ ನೀಡಿದ್ದರು ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಆರಂಭದಲ್ಲಿ ಪ್ರೇಮ್‌ ಕುಮಾರ್ ರಜಪೂತ್‌ ಎನ್ನಲಾದ ವ್ಯಕ್ತಿಯ ಮಾತುಗಳ ಮೇಲೆ ಶಂಕೆ ವ್ಯಕ್ತಪಡಿಸಿ, ಹಿಂಜರಿಕೆ ತೋರಿದ್ದ ಸುರೇಶ್ ಪಟೇಲ್‌, ಬಳಿಕ ಆತ ನೀಡಿದ ಭರವಸೆಗಳನ್ನು ನಂಬಿ, ಮುಂಗಡವಾಗಿ 50,000 ರೂ. ಪಾವತಿಸಿ ಜಾನ್ಸಿಯ ಭುಂದೇಲ್‌ಖಂಡ್‌ ವಿವಿಯ ಹೆಸರಿನಲ್ಲಿ ಎಂಬಿಬಿಎಸ್‌ಗೆ ಪ್ರವೇಶ ಪಡೆದಿದ್ದಾರೆ. ಬಳಿಕ ಜುಲೈ 10, 2018ರಿಂದ ಫೆಬ್ರವರಿ 23, 2019ರ ನಡುವೆ ಹಂತ ಹಂತವಾಗಿ ಬರೋಬ್ಬರಿ 16.32 ಲಕ್ಷ ರೂಪಾಯಿ ಪಾವತಿಸಿದ್ದಾರೆ. ತರಗತಿ ಪ್ರಾರಂಭಕ್ಕಾಗಿ ಕಾದಿದ್ದಾರೆ.

ಆದರೆ, ರಜಪೂತ್‌ ನೀಡಿದ ಭರವಸೆಯಂತೆ ತರಗತಿಗಳು ಆರಂಭಗೊಳ್ಳಲೇ ಇಲ್ಲ. ಮಾರ್ಚ್ 2019ರಲ್ಲಿ ಸುರೇಶ್ ಪಟೇಲ್ ಅವರಿಗೆ ಕೊರಿಯರ್ ಮೂಲಕ ಒಂದು ಪಾರ್ಸೆಲ್ ಬರುತ್ತದೆ. ಅದನ್ನು ತೆರೆದು ನೋಡಿದಾಗ ಎಂಬಿಬಿಎಸ್ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರ, ತರಬೇತಿ ಪ್ರಮಾಣ ಪತ್ರ ಹಾಗೂ ನೋಂದಣಿ ಪ್ರಮಾಣ ಪತ್ರ ಇತ್ತು. ಎಲ್ಲವೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ)ದ ಸ್ಟ್ಯಾಂಪ್ ಹೊಂದಿತ್ತು.

ಪ್ರಮಾಣ ಪತ್ರಗಳ ಕುರಿತು ಸುರೇಶ್ ಪಟೇಲ್ ಎಂಸಿಐ ಅನ್ನು ವಿಚಾರಿಸಿದಾಗ ಅವುಗಳೆಲ್ಲ ನಕಲಿ ಎಂಬುವುದು ಗೊತ್ತಾಗಿದೆ. ಹಾಗಾಗಿ ಸುರೇಶ್ ಪಟೇಲ್ ದೂರು ದಾಖಲಿಸಿದ್ದರು. 2019ರಲ್ಲಿ ಈ ಪ್ರಕರಣವನ್ನು ಅಹಮದಾಬಾದ್‌ ಕ್ರೈ ಬ್ರ್ಯಾಂಚ್‌ಗೆ ಹಸ್ತಾಂತರಿಸಲಾಗಿತ್ತು.

ಪೊಲೀಸರಿಗೆ ನೀಡಿದ ದೂರಿನಲ್ಲಿ ಸುರೇಶ್ ಪಟೇಲ್ ಅವರು, “ನಾನು ರಜಪೂತ್‌ ಜೊತೆ ಸುಮಾರು 25 ಬಾರಿ ಮಾತನಾಡಿದ್ದೇನೆ. ಆತ, ಡಾ. ಶೌಖತ್ ಖಾನ್, ಡಾ. ಆನಂದ್ ಮತ್ತು ಅರುಣ್ ಕುಮಾರ್ ಎಂಬವರು ಎಂಬಿಬಿಎಸ್‌ ಪೂರ್ತಿಗೊಳಿಸಲು ನನಗೆ ಸಹಾಯ ಮಾಡಲಿದ್ದಾರೆ” ಎಂದಿದ್ದ ಎಂದು ವಿವರಿಸಿದ್ದಾರೆ.

“2019ರಲ್ಲಿ ನಾನು ಮತ್ತು ಮೆಹ್ಸಾನಾ ಪೊಲೀಸ್ ತಂಡ ದೆಹಲಿಗೆ ತೆರಳಿ ಡಾ. ಆನಂದ್‌ ಕುಮಾರ್‌ಗಾಗಿ ಹುಡುಕಾಟ ನಡೆಸಿದ್ದೇವೆ. ನಾವು ವಿಳಾಸ ಹುಡುಕಿಕೊಂಡು ಹೋದಾಗ ಅಂತವರು ಯಾರೂ ಅಲ್ಲಿ ಇರಲಿಲ್ಲ. ಬಳಿಕ ನಾವು ದೆಹಲಿಯ ಖಾಸಗಿ ಬ್ಯಾಂಕ್‌ ಒಂದಕ್ಕೆ ತೆರಳಿ ಮಾಹಿತಿ ಕಲೆ ಹಾಕಿದಾಗ, ಅನೇಕ ಮಂದಿ ನನ್ನ ರೀತಿ ಮೋಸ ಹೋಗಿರುವುದು ಗೊತ್ತಾಗಿದೆ” ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಪ್ರಕರಣದ ತನಿಖೆ ಬಹಳ ನಿಧಾನಗತಿಯಲ್ಲಿ ಸಾಗುತ್ತಿದೆ. ದೂರು ದಾಖಲಾಗಿ ಐದು ವರ್ಷ ಕಳೆದರೂ ಇದುವರೆಗೆ ಆರೋಪಿಗಳನ್ನು ಪತ್ತೆ ಹಚ್ಚಲು ಆಗಿಲ್ಲ. ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ಡಿಸೆಂಬರ್ 20, 2023ರಲ್ಲಿ ಸುರೇಶ್ ಪಟೇಲ್ ಅವರು ಮೆಹ್ಸಾನಾ ಎಸ್‌ಪಿ ಕಚೇರಿಗೆ ಮತ್ತೊಂದು ದೂರು ನೀಡಿದ್ದಾರೆ. ಈ ವರ್ಷದ ಜೂನ್ 14ರಂದು ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ‘ಸೆಬಿ’ ಅಧಿಕಾರಿಗಳನ್ನು ಭೇಟಿ ಮಾಡಿದ ಟಿಎಂಸಿ ಸಂಸದರು; ಸ್ಟಾಕ್ ಮಾರ್ಕೆಟ್ ‘ಮ್ಯಾನಿಪುಲಟ್’ ತನಿಖೆಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...