Homeಮುಖಪುಟ₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

- Advertisement -
- Advertisement -

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ, ಉತ್ತರ ಗುಜರಾತ್‌ನ ಮೆಹ್ಸಾನ ಜಿಲ್ಲೆಯಿಂದ ವೈದ್ಯಕೀಯ ಶಿಕ್ಷಣದ ವಂಚನೆಯ ಕುರಿತ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

ಹೋಮಿಯೋಪತಿ ವೈದ್ಯರೊಬ್ಬರು ಎಂಬಿಬಿಎಸ್‌ ಪದವಿ ಪ್ರವೇಶಕ್ಕೆ 16.32 ಲಕ್ಷ ರೂಪಾಯಿ ಪಾವತಿಸಿದ್ದು, ಯಾವುದೇ ತರಗತಿಗಳಿಗೆ ಹಾಜರಾಗದೆ, ಪರೀಕ್ಷೆ ಎದುರಿಸದೆ ಒಂದು ತಿಂಗಳಲ್ಲಿ ಪದವಿ ಹಾಗೂ ಪ್ರಮಾಣ ಪತ್ರ ಪಡೆದಿದ್ದಾರೆ.

ವರದಿಗಳ ಪ್ರಕಾರ, ಜುಲೈ 2018ರಲ್ಲಿ ಸುರೇಶ್ ಪಟೇಲ್ (41) ಎಂಬ ಹೋಮಿಯೋಪತಿ ವೈದ್ಯ ವೈದ್ಯಕೀಯ ಶಿಕ್ಷಣದಲ್ಲಿ ಉನ್ನತ ಪದವಿ ಪಡೆಯಲು ಅಂತರ್ಜಾಲದಲ್ಲಿ ಶೋಧ ನಡೆಸುವಾಗ, ಆಲ್ ಇಂಡಿಯಾ ಆಲ್ಟರ್ನೇಟಿವ್ ಮೆಡಿಕಲ್ ಕೌನ್ಸಿಲ್ ಎಂಬ ಸಂಸ್ಥೆ ಎಂಬಿಬಿಎಸ್‌ ಪದವಿಗಾಗಿ ಅರ್ಜಿಗಳನ್ನು ಆಹ್ವಾನಿಸಿರುವುದು ಕಂಡು ಬಂದಿದೆ. ಸುರೇಶ್ ಅವರು ಇಂಟರ್‌ನೆಟ್‌ನಲ್ಲಿ ನೀಡಲಾಗಿದ್ದ ಡಾ. ಪ್ರೇಮ್‌ ಕುಮಾರ್ ರಜಪೂತ್‌ ಎಂಬವರಿಗೆ ಕರೆ ಮಾಡಿದ್ದಾರೆ. ಎಂಬಿಬಿಎಸ್‌ ಪದವಿ ಪ್ರವೇಶದ ಬಗ್ಗೆ ವಿಚಾರಿಸಿದ್ದಾರೆ. ಆಗ ಆ ಕಡೆಯಿಂದ ಮಾತನಾಡಿದ ವ್ಯಕ್ತಿ 12ನೇ ತರಗತಿಯ ಅಂಕ ಪಟ್ಟಿಯ ಆಧಾರದಲ್ಲಿ ಎಂಬಿಬಿಎಸ್‌ ಪದವಿಗೆ ಪ್ರವೇಶ ದೊರೆಯಲಿದೆ ಎಂಬ ಭರವಸೆ ನೀಡಿದ್ದರು ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಆರಂಭದಲ್ಲಿ ಪ್ರೇಮ್‌ ಕುಮಾರ್ ರಜಪೂತ್‌ ಎನ್ನಲಾದ ವ್ಯಕ್ತಿಯ ಮಾತುಗಳ ಮೇಲೆ ಶಂಕೆ ವ್ಯಕ್ತಪಡಿಸಿ, ಹಿಂಜರಿಕೆ ತೋರಿದ್ದ ಸುರೇಶ್ ಪಟೇಲ್‌, ಬಳಿಕ ಆತ ನೀಡಿದ ಭರವಸೆಗಳನ್ನು ನಂಬಿ, ಮುಂಗಡವಾಗಿ 50,000 ರೂ. ಪಾವತಿಸಿ ಜಾನ್ಸಿಯ ಭುಂದೇಲ್‌ಖಂಡ್‌ ವಿವಿಯ ಹೆಸರಿನಲ್ಲಿ ಎಂಬಿಬಿಎಸ್‌ಗೆ ಪ್ರವೇಶ ಪಡೆದಿದ್ದಾರೆ. ಬಳಿಕ ಜುಲೈ 10, 2018ರಿಂದ ಫೆಬ್ರವರಿ 23, 2019ರ ನಡುವೆ ಹಂತ ಹಂತವಾಗಿ ಬರೋಬ್ಬರಿ 16.32 ಲಕ್ಷ ರೂಪಾಯಿ ಪಾವತಿಸಿದ್ದಾರೆ. ತರಗತಿ ಪ್ರಾರಂಭಕ್ಕಾಗಿ ಕಾದಿದ್ದಾರೆ.

ಆದರೆ, ರಜಪೂತ್‌ ನೀಡಿದ ಭರವಸೆಯಂತೆ ತರಗತಿಗಳು ಆರಂಭಗೊಳ್ಳಲೇ ಇಲ್ಲ. ಮಾರ್ಚ್ 2019ರಲ್ಲಿ ಸುರೇಶ್ ಪಟೇಲ್ ಅವರಿಗೆ ಕೊರಿಯರ್ ಮೂಲಕ ಒಂದು ಪಾರ್ಸೆಲ್ ಬರುತ್ತದೆ. ಅದನ್ನು ತೆರೆದು ನೋಡಿದಾಗ ಎಂಬಿಬಿಎಸ್ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರ, ತರಬೇತಿ ಪ್ರಮಾಣ ಪತ್ರ ಹಾಗೂ ನೋಂದಣಿ ಪ್ರಮಾಣ ಪತ್ರ ಇತ್ತು. ಎಲ್ಲವೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ)ದ ಸ್ಟ್ಯಾಂಪ್ ಹೊಂದಿತ್ತು.

ಪ್ರಮಾಣ ಪತ್ರಗಳ ಕುರಿತು ಸುರೇಶ್ ಪಟೇಲ್ ಎಂಸಿಐ ಅನ್ನು ವಿಚಾರಿಸಿದಾಗ ಅವುಗಳೆಲ್ಲ ನಕಲಿ ಎಂಬುವುದು ಗೊತ್ತಾಗಿದೆ. ಹಾಗಾಗಿ ಸುರೇಶ್ ಪಟೇಲ್ ದೂರು ದಾಖಲಿಸಿದ್ದರು. 2019ರಲ್ಲಿ ಈ ಪ್ರಕರಣವನ್ನು ಅಹಮದಾಬಾದ್‌ ಕ್ರೈ ಬ್ರ್ಯಾಂಚ್‌ಗೆ ಹಸ್ತಾಂತರಿಸಲಾಗಿತ್ತು.

ಪೊಲೀಸರಿಗೆ ನೀಡಿದ ದೂರಿನಲ್ಲಿ ಸುರೇಶ್ ಪಟೇಲ್ ಅವರು, “ನಾನು ರಜಪೂತ್‌ ಜೊತೆ ಸುಮಾರು 25 ಬಾರಿ ಮಾತನಾಡಿದ್ದೇನೆ. ಆತ, ಡಾ. ಶೌಖತ್ ಖಾನ್, ಡಾ. ಆನಂದ್ ಮತ್ತು ಅರುಣ್ ಕುಮಾರ್ ಎಂಬವರು ಎಂಬಿಬಿಎಸ್‌ ಪೂರ್ತಿಗೊಳಿಸಲು ನನಗೆ ಸಹಾಯ ಮಾಡಲಿದ್ದಾರೆ” ಎಂದಿದ್ದ ಎಂದು ವಿವರಿಸಿದ್ದಾರೆ.

“2019ರಲ್ಲಿ ನಾನು ಮತ್ತು ಮೆಹ್ಸಾನಾ ಪೊಲೀಸ್ ತಂಡ ದೆಹಲಿಗೆ ತೆರಳಿ ಡಾ. ಆನಂದ್‌ ಕುಮಾರ್‌ಗಾಗಿ ಹುಡುಕಾಟ ನಡೆಸಿದ್ದೇವೆ. ನಾವು ವಿಳಾಸ ಹುಡುಕಿಕೊಂಡು ಹೋದಾಗ ಅಂತವರು ಯಾರೂ ಅಲ್ಲಿ ಇರಲಿಲ್ಲ. ಬಳಿಕ ನಾವು ದೆಹಲಿಯ ಖಾಸಗಿ ಬ್ಯಾಂಕ್‌ ಒಂದಕ್ಕೆ ತೆರಳಿ ಮಾಹಿತಿ ಕಲೆ ಹಾಕಿದಾಗ, ಅನೇಕ ಮಂದಿ ನನ್ನ ರೀತಿ ಮೋಸ ಹೋಗಿರುವುದು ಗೊತ್ತಾಗಿದೆ” ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಪ್ರಕರಣದ ತನಿಖೆ ಬಹಳ ನಿಧಾನಗತಿಯಲ್ಲಿ ಸಾಗುತ್ತಿದೆ. ದೂರು ದಾಖಲಾಗಿ ಐದು ವರ್ಷ ಕಳೆದರೂ ಇದುವರೆಗೆ ಆರೋಪಿಗಳನ್ನು ಪತ್ತೆ ಹಚ್ಚಲು ಆಗಿಲ್ಲ. ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ಡಿಸೆಂಬರ್ 20, 2023ರಲ್ಲಿ ಸುರೇಶ್ ಪಟೇಲ್ ಅವರು ಮೆಹ್ಸಾನಾ ಎಸ್‌ಪಿ ಕಚೇರಿಗೆ ಮತ್ತೊಂದು ದೂರು ನೀಡಿದ್ದಾರೆ. ಈ ವರ್ಷದ ಜೂನ್ 14ರಂದು ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ‘ಸೆಬಿ’ ಅಧಿಕಾರಿಗಳನ್ನು ಭೇಟಿ ಮಾಡಿದ ಟಿಎಂಸಿ ಸಂಸದರು; ಸ್ಟಾಕ್ ಮಾರ್ಕೆಟ್ ‘ಮ್ಯಾನಿಪುಲಟ್’ ತನಿಖೆಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...