Homeಮುಖಪುಟ₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

- Advertisement -
- Advertisement -

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ, ಉತ್ತರ ಗುಜರಾತ್‌ನ ಮೆಹ್ಸಾನ ಜಿಲ್ಲೆಯಿಂದ ವೈದ್ಯಕೀಯ ಶಿಕ್ಷಣದ ವಂಚನೆಯ ಕುರಿತ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

ಹೋಮಿಯೋಪತಿ ವೈದ್ಯರೊಬ್ಬರು ಎಂಬಿಬಿಎಸ್‌ ಪದವಿ ಪ್ರವೇಶಕ್ಕೆ 16.32 ಲಕ್ಷ ರೂಪಾಯಿ ಪಾವತಿಸಿದ್ದು, ಯಾವುದೇ ತರಗತಿಗಳಿಗೆ ಹಾಜರಾಗದೆ, ಪರೀಕ್ಷೆ ಎದುರಿಸದೆ ಒಂದು ತಿಂಗಳಲ್ಲಿ ಪದವಿ ಹಾಗೂ ಪ್ರಮಾಣ ಪತ್ರ ಪಡೆದಿದ್ದಾರೆ.

ವರದಿಗಳ ಪ್ರಕಾರ, ಜುಲೈ 2018ರಲ್ಲಿ ಸುರೇಶ್ ಪಟೇಲ್ (41) ಎಂಬ ಹೋಮಿಯೋಪತಿ ವೈದ್ಯ ವೈದ್ಯಕೀಯ ಶಿಕ್ಷಣದಲ್ಲಿ ಉನ್ನತ ಪದವಿ ಪಡೆಯಲು ಅಂತರ್ಜಾಲದಲ್ಲಿ ಶೋಧ ನಡೆಸುವಾಗ, ಆಲ್ ಇಂಡಿಯಾ ಆಲ್ಟರ್ನೇಟಿವ್ ಮೆಡಿಕಲ್ ಕೌನ್ಸಿಲ್ ಎಂಬ ಸಂಸ್ಥೆ ಎಂಬಿಬಿಎಸ್‌ ಪದವಿಗಾಗಿ ಅರ್ಜಿಗಳನ್ನು ಆಹ್ವಾನಿಸಿರುವುದು ಕಂಡು ಬಂದಿದೆ. ಸುರೇಶ್ ಅವರು ಇಂಟರ್‌ನೆಟ್‌ನಲ್ಲಿ ನೀಡಲಾಗಿದ್ದ ಡಾ. ಪ್ರೇಮ್‌ ಕುಮಾರ್ ರಜಪೂತ್‌ ಎಂಬವರಿಗೆ ಕರೆ ಮಾಡಿದ್ದಾರೆ. ಎಂಬಿಬಿಎಸ್‌ ಪದವಿ ಪ್ರವೇಶದ ಬಗ್ಗೆ ವಿಚಾರಿಸಿದ್ದಾರೆ. ಆಗ ಆ ಕಡೆಯಿಂದ ಮಾತನಾಡಿದ ವ್ಯಕ್ತಿ 12ನೇ ತರಗತಿಯ ಅಂಕ ಪಟ್ಟಿಯ ಆಧಾರದಲ್ಲಿ ಎಂಬಿಬಿಎಸ್‌ ಪದವಿಗೆ ಪ್ರವೇಶ ದೊರೆಯಲಿದೆ ಎಂಬ ಭರವಸೆ ನೀಡಿದ್ದರು ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಆರಂಭದಲ್ಲಿ ಪ್ರೇಮ್‌ ಕುಮಾರ್ ರಜಪೂತ್‌ ಎನ್ನಲಾದ ವ್ಯಕ್ತಿಯ ಮಾತುಗಳ ಮೇಲೆ ಶಂಕೆ ವ್ಯಕ್ತಪಡಿಸಿ, ಹಿಂಜರಿಕೆ ತೋರಿದ್ದ ಸುರೇಶ್ ಪಟೇಲ್‌, ಬಳಿಕ ಆತ ನೀಡಿದ ಭರವಸೆಗಳನ್ನು ನಂಬಿ, ಮುಂಗಡವಾಗಿ 50,000 ರೂ. ಪಾವತಿಸಿ ಜಾನ್ಸಿಯ ಭುಂದೇಲ್‌ಖಂಡ್‌ ವಿವಿಯ ಹೆಸರಿನಲ್ಲಿ ಎಂಬಿಬಿಎಸ್‌ಗೆ ಪ್ರವೇಶ ಪಡೆದಿದ್ದಾರೆ. ಬಳಿಕ ಜುಲೈ 10, 2018ರಿಂದ ಫೆಬ್ರವರಿ 23, 2019ರ ನಡುವೆ ಹಂತ ಹಂತವಾಗಿ ಬರೋಬ್ಬರಿ 16.32 ಲಕ್ಷ ರೂಪಾಯಿ ಪಾವತಿಸಿದ್ದಾರೆ. ತರಗತಿ ಪ್ರಾರಂಭಕ್ಕಾಗಿ ಕಾದಿದ್ದಾರೆ.

ಆದರೆ, ರಜಪೂತ್‌ ನೀಡಿದ ಭರವಸೆಯಂತೆ ತರಗತಿಗಳು ಆರಂಭಗೊಳ್ಳಲೇ ಇಲ್ಲ. ಮಾರ್ಚ್ 2019ರಲ್ಲಿ ಸುರೇಶ್ ಪಟೇಲ್ ಅವರಿಗೆ ಕೊರಿಯರ್ ಮೂಲಕ ಒಂದು ಪಾರ್ಸೆಲ್ ಬರುತ್ತದೆ. ಅದನ್ನು ತೆರೆದು ನೋಡಿದಾಗ ಎಂಬಿಬಿಎಸ್ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರ, ತರಬೇತಿ ಪ್ರಮಾಣ ಪತ್ರ ಹಾಗೂ ನೋಂದಣಿ ಪ್ರಮಾಣ ಪತ್ರ ಇತ್ತು. ಎಲ್ಲವೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ)ದ ಸ್ಟ್ಯಾಂಪ್ ಹೊಂದಿತ್ತು.

ಪ್ರಮಾಣ ಪತ್ರಗಳ ಕುರಿತು ಸುರೇಶ್ ಪಟೇಲ್ ಎಂಸಿಐ ಅನ್ನು ವಿಚಾರಿಸಿದಾಗ ಅವುಗಳೆಲ್ಲ ನಕಲಿ ಎಂಬುವುದು ಗೊತ್ತಾಗಿದೆ. ಹಾಗಾಗಿ ಸುರೇಶ್ ಪಟೇಲ್ ದೂರು ದಾಖಲಿಸಿದ್ದರು. 2019ರಲ್ಲಿ ಈ ಪ್ರಕರಣವನ್ನು ಅಹಮದಾಬಾದ್‌ ಕ್ರೈ ಬ್ರ್ಯಾಂಚ್‌ಗೆ ಹಸ್ತಾಂತರಿಸಲಾಗಿತ್ತು.

ಪೊಲೀಸರಿಗೆ ನೀಡಿದ ದೂರಿನಲ್ಲಿ ಸುರೇಶ್ ಪಟೇಲ್ ಅವರು, “ನಾನು ರಜಪೂತ್‌ ಜೊತೆ ಸುಮಾರು 25 ಬಾರಿ ಮಾತನಾಡಿದ್ದೇನೆ. ಆತ, ಡಾ. ಶೌಖತ್ ಖಾನ್, ಡಾ. ಆನಂದ್ ಮತ್ತು ಅರುಣ್ ಕುಮಾರ್ ಎಂಬವರು ಎಂಬಿಬಿಎಸ್‌ ಪೂರ್ತಿಗೊಳಿಸಲು ನನಗೆ ಸಹಾಯ ಮಾಡಲಿದ್ದಾರೆ” ಎಂದಿದ್ದ ಎಂದು ವಿವರಿಸಿದ್ದಾರೆ.

“2019ರಲ್ಲಿ ನಾನು ಮತ್ತು ಮೆಹ್ಸಾನಾ ಪೊಲೀಸ್ ತಂಡ ದೆಹಲಿಗೆ ತೆರಳಿ ಡಾ. ಆನಂದ್‌ ಕುಮಾರ್‌ಗಾಗಿ ಹುಡುಕಾಟ ನಡೆಸಿದ್ದೇವೆ. ನಾವು ವಿಳಾಸ ಹುಡುಕಿಕೊಂಡು ಹೋದಾಗ ಅಂತವರು ಯಾರೂ ಅಲ್ಲಿ ಇರಲಿಲ್ಲ. ಬಳಿಕ ನಾವು ದೆಹಲಿಯ ಖಾಸಗಿ ಬ್ಯಾಂಕ್‌ ಒಂದಕ್ಕೆ ತೆರಳಿ ಮಾಹಿತಿ ಕಲೆ ಹಾಕಿದಾಗ, ಅನೇಕ ಮಂದಿ ನನ್ನ ರೀತಿ ಮೋಸ ಹೋಗಿರುವುದು ಗೊತ್ತಾಗಿದೆ” ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಪ್ರಕರಣದ ತನಿಖೆ ಬಹಳ ನಿಧಾನಗತಿಯಲ್ಲಿ ಸಾಗುತ್ತಿದೆ. ದೂರು ದಾಖಲಾಗಿ ಐದು ವರ್ಷ ಕಳೆದರೂ ಇದುವರೆಗೆ ಆರೋಪಿಗಳನ್ನು ಪತ್ತೆ ಹಚ್ಚಲು ಆಗಿಲ್ಲ. ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ಡಿಸೆಂಬರ್ 20, 2023ರಲ್ಲಿ ಸುರೇಶ್ ಪಟೇಲ್ ಅವರು ಮೆಹ್ಸಾನಾ ಎಸ್‌ಪಿ ಕಚೇರಿಗೆ ಮತ್ತೊಂದು ದೂರು ನೀಡಿದ್ದಾರೆ. ಈ ವರ್ಷದ ಜೂನ್ 14ರಂದು ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ‘ಸೆಬಿ’ ಅಧಿಕಾರಿಗಳನ್ನು ಭೇಟಿ ಮಾಡಿದ ಟಿಎಂಸಿ ಸಂಸದರು; ಸ್ಟಾಕ್ ಮಾರ್ಕೆಟ್ ‘ಮ್ಯಾನಿಪುಲಟ್’ ತನಿಖೆಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...