Homeಮುಖಪುಟ₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

- Advertisement -
- Advertisement -

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ, ಉತ್ತರ ಗುಜರಾತ್‌ನ ಮೆಹ್ಸಾನ ಜಿಲ್ಲೆಯಿಂದ ವೈದ್ಯಕೀಯ ಶಿಕ್ಷಣದ ವಂಚನೆಯ ಕುರಿತ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

ಹೋಮಿಯೋಪತಿ ವೈದ್ಯರೊಬ್ಬರು ಎಂಬಿಬಿಎಸ್‌ ಪದವಿ ಪ್ರವೇಶಕ್ಕೆ 16.32 ಲಕ್ಷ ರೂಪಾಯಿ ಪಾವತಿಸಿದ್ದು, ಯಾವುದೇ ತರಗತಿಗಳಿಗೆ ಹಾಜರಾಗದೆ, ಪರೀಕ್ಷೆ ಎದುರಿಸದೆ ಒಂದು ತಿಂಗಳಲ್ಲಿ ಪದವಿ ಹಾಗೂ ಪ್ರಮಾಣ ಪತ್ರ ಪಡೆದಿದ್ದಾರೆ.

ವರದಿಗಳ ಪ್ರಕಾರ, ಜುಲೈ 2018ರಲ್ಲಿ ಸುರೇಶ್ ಪಟೇಲ್ (41) ಎಂಬ ಹೋಮಿಯೋಪತಿ ವೈದ್ಯ ವೈದ್ಯಕೀಯ ಶಿಕ್ಷಣದಲ್ಲಿ ಉನ್ನತ ಪದವಿ ಪಡೆಯಲು ಅಂತರ್ಜಾಲದಲ್ಲಿ ಶೋಧ ನಡೆಸುವಾಗ, ಆಲ್ ಇಂಡಿಯಾ ಆಲ್ಟರ್ನೇಟಿವ್ ಮೆಡಿಕಲ್ ಕೌನ್ಸಿಲ್ ಎಂಬ ಸಂಸ್ಥೆ ಎಂಬಿಬಿಎಸ್‌ ಪದವಿಗಾಗಿ ಅರ್ಜಿಗಳನ್ನು ಆಹ್ವಾನಿಸಿರುವುದು ಕಂಡು ಬಂದಿದೆ. ಸುರೇಶ್ ಅವರು ಇಂಟರ್‌ನೆಟ್‌ನಲ್ಲಿ ನೀಡಲಾಗಿದ್ದ ಡಾ. ಪ್ರೇಮ್‌ ಕುಮಾರ್ ರಜಪೂತ್‌ ಎಂಬವರಿಗೆ ಕರೆ ಮಾಡಿದ್ದಾರೆ. ಎಂಬಿಬಿಎಸ್‌ ಪದವಿ ಪ್ರವೇಶದ ಬಗ್ಗೆ ವಿಚಾರಿಸಿದ್ದಾರೆ. ಆಗ ಆ ಕಡೆಯಿಂದ ಮಾತನಾಡಿದ ವ್ಯಕ್ತಿ 12ನೇ ತರಗತಿಯ ಅಂಕ ಪಟ್ಟಿಯ ಆಧಾರದಲ್ಲಿ ಎಂಬಿಬಿಎಸ್‌ ಪದವಿಗೆ ಪ್ರವೇಶ ದೊರೆಯಲಿದೆ ಎಂಬ ಭರವಸೆ ನೀಡಿದ್ದರು ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಆರಂಭದಲ್ಲಿ ಪ್ರೇಮ್‌ ಕುಮಾರ್ ರಜಪೂತ್‌ ಎನ್ನಲಾದ ವ್ಯಕ್ತಿಯ ಮಾತುಗಳ ಮೇಲೆ ಶಂಕೆ ವ್ಯಕ್ತಪಡಿಸಿ, ಹಿಂಜರಿಕೆ ತೋರಿದ್ದ ಸುರೇಶ್ ಪಟೇಲ್‌, ಬಳಿಕ ಆತ ನೀಡಿದ ಭರವಸೆಗಳನ್ನು ನಂಬಿ, ಮುಂಗಡವಾಗಿ 50,000 ರೂ. ಪಾವತಿಸಿ ಜಾನ್ಸಿಯ ಭುಂದೇಲ್‌ಖಂಡ್‌ ವಿವಿಯ ಹೆಸರಿನಲ್ಲಿ ಎಂಬಿಬಿಎಸ್‌ಗೆ ಪ್ರವೇಶ ಪಡೆದಿದ್ದಾರೆ. ಬಳಿಕ ಜುಲೈ 10, 2018ರಿಂದ ಫೆಬ್ರವರಿ 23, 2019ರ ನಡುವೆ ಹಂತ ಹಂತವಾಗಿ ಬರೋಬ್ಬರಿ 16.32 ಲಕ್ಷ ರೂಪಾಯಿ ಪಾವತಿಸಿದ್ದಾರೆ. ತರಗತಿ ಪ್ರಾರಂಭಕ್ಕಾಗಿ ಕಾದಿದ್ದಾರೆ.

ಆದರೆ, ರಜಪೂತ್‌ ನೀಡಿದ ಭರವಸೆಯಂತೆ ತರಗತಿಗಳು ಆರಂಭಗೊಳ್ಳಲೇ ಇಲ್ಲ. ಮಾರ್ಚ್ 2019ರಲ್ಲಿ ಸುರೇಶ್ ಪಟೇಲ್ ಅವರಿಗೆ ಕೊರಿಯರ್ ಮೂಲಕ ಒಂದು ಪಾರ್ಸೆಲ್ ಬರುತ್ತದೆ. ಅದನ್ನು ತೆರೆದು ನೋಡಿದಾಗ ಎಂಬಿಬಿಎಸ್ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರ, ತರಬೇತಿ ಪ್ರಮಾಣ ಪತ್ರ ಹಾಗೂ ನೋಂದಣಿ ಪ್ರಮಾಣ ಪತ್ರ ಇತ್ತು. ಎಲ್ಲವೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ)ದ ಸ್ಟ್ಯಾಂಪ್ ಹೊಂದಿತ್ತು.

ಪ್ರಮಾಣ ಪತ್ರಗಳ ಕುರಿತು ಸುರೇಶ್ ಪಟೇಲ್ ಎಂಸಿಐ ಅನ್ನು ವಿಚಾರಿಸಿದಾಗ ಅವುಗಳೆಲ್ಲ ನಕಲಿ ಎಂಬುವುದು ಗೊತ್ತಾಗಿದೆ. ಹಾಗಾಗಿ ಸುರೇಶ್ ಪಟೇಲ್ ದೂರು ದಾಖಲಿಸಿದ್ದರು. 2019ರಲ್ಲಿ ಈ ಪ್ರಕರಣವನ್ನು ಅಹಮದಾಬಾದ್‌ ಕ್ರೈ ಬ್ರ್ಯಾಂಚ್‌ಗೆ ಹಸ್ತಾಂತರಿಸಲಾಗಿತ್ತು.

ಪೊಲೀಸರಿಗೆ ನೀಡಿದ ದೂರಿನಲ್ಲಿ ಸುರೇಶ್ ಪಟೇಲ್ ಅವರು, “ನಾನು ರಜಪೂತ್‌ ಜೊತೆ ಸುಮಾರು 25 ಬಾರಿ ಮಾತನಾಡಿದ್ದೇನೆ. ಆತ, ಡಾ. ಶೌಖತ್ ಖಾನ್, ಡಾ. ಆನಂದ್ ಮತ್ತು ಅರುಣ್ ಕುಮಾರ್ ಎಂಬವರು ಎಂಬಿಬಿಎಸ್‌ ಪೂರ್ತಿಗೊಳಿಸಲು ನನಗೆ ಸಹಾಯ ಮಾಡಲಿದ್ದಾರೆ” ಎಂದಿದ್ದ ಎಂದು ವಿವರಿಸಿದ್ದಾರೆ.

“2019ರಲ್ಲಿ ನಾನು ಮತ್ತು ಮೆಹ್ಸಾನಾ ಪೊಲೀಸ್ ತಂಡ ದೆಹಲಿಗೆ ತೆರಳಿ ಡಾ. ಆನಂದ್‌ ಕುಮಾರ್‌ಗಾಗಿ ಹುಡುಕಾಟ ನಡೆಸಿದ್ದೇವೆ. ನಾವು ವಿಳಾಸ ಹುಡುಕಿಕೊಂಡು ಹೋದಾಗ ಅಂತವರು ಯಾರೂ ಅಲ್ಲಿ ಇರಲಿಲ್ಲ. ಬಳಿಕ ನಾವು ದೆಹಲಿಯ ಖಾಸಗಿ ಬ್ಯಾಂಕ್‌ ಒಂದಕ್ಕೆ ತೆರಳಿ ಮಾಹಿತಿ ಕಲೆ ಹಾಕಿದಾಗ, ಅನೇಕ ಮಂದಿ ನನ್ನ ರೀತಿ ಮೋಸ ಹೋಗಿರುವುದು ಗೊತ್ತಾಗಿದೆ” ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಪ್ರಕರಣದ ತನಿಖೆ ಬಹಳ ನಿಧಾನಗತಿಯಲ್ಲಿ ಸಾಗುತ್ತಿದೆ. ದೂರು ದಾಖಲಾಗಿ ಐದು ವರ್ಷ ಕಳೆದರೂ ಇದುವರೆಗೆ ಆರೋಪಿಗಳನ್ನು ಪತ್ತೆ ಹಚ್ಚಲು ಆಗಿಲ್ಲ. ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ಡಿಸೆಂಬರ್ 20, 2023ರಲ್ಲಿ ಸುರೇಶ್ ಪಟೇಲ್ ಅವರು ಮೆಹ್ಸಾನಾ ಎಸ್‌ಪಿ ಕಚೇರಿಗೆ ಮತ್ತೊಂದು ದೂರು ನೀಡಿದ್ದಾರೆ. ಈ ವರ್ಷದ ಜೂನ್ 14ರಂದು ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ‘ಸೆಬಿ’ ಅಧಿಕಾರಿಗಳನ್ನು ಭೇಟಿ ಮಾಡಿದ ಟಿಎಂಸಿ ಸಂಸದರು; ಸ್ಟಾಕ್ ಮಾರ್ಕೆಟ್ ‘ಮ್ಯಾನಿಪುಲಟ್’ ತನಿಖೆಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...