Homeಮುಖಪುಟ₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

- Advertisement -
- Advertisement -

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ, ಉತ್ತರ ಗುಜರಾತ್‌ನ ಮೆಹ್ಸಾನ ಜಿಲ್ಲೆಯಿಂದ ವೈದ್ಯಕೀಯ ಶಿಕ್ಷಣದ ವಂಚನೆಯ ಕುರಿತ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

ಹೋಮಿಯೋಪತಿ ವೈದ್ಯರೊಬ್ಬರು ಎಂಬಿಬಿಎಸ್‌ ಪದವಿ ಪ್ರವೇಶಕ್ಕೆ 16.32 ಲಕ್ಷ ರೂಪಾಯಿ ಪಾವತಿಸಿದ್ದು, ಯಾವುದೇ ತರಗತಿಗಳಿಗೆ ಹಾಜರಾಗದೆ, ಪರೀಕ್ಷೆ ಎದುರಿಸದೆ ಒಂದು ತಿಂಗಳಲ್ಲಿ ಪದವಿ ಹಾಗೂ ಪ್ರಮಾಣ ಪತ್ರ ಪಡೆದಿದ್ದಾರೆ.

ವರದಿಗಳ ಪ್ರಕಾರ, ಜುಲೈ 2018ರಲ್ಲಿ ಸುರೇಶ್ ಪಟೇಲ್ (41) ಎಂಬ ಹೋಮಿಯೋಪತಿ ವೈದ್ಯ ವೈದ್ಯಕೀಯ ಶಿಕ್ಷಣದಲ್ಲಿ ಉನ್ನತ ಪದವಿ ಪಡೆಯಲು ಅಂತರ್ಜಾಲದಲ್ಲಿ ಶೋಧ ನಡೆಸುವಾಗ, ಆಲ್ ಇಂಡಿಯಾ ಆಲ್ಟರ್ನೇಟಿವ್ ಮೆಡಿಕಲ್ ಕೌನ್ಸಿಲ್ ಎಂಬ ಸಂಸ್ಥೆ ಎಂಬಿಬಿಎಸ್‌ ಪದವಿಗಾಗಿ ಅರ್ಜಿಗಳನ್ನು ಆಹ್ವಾನಿಸಿರುವುದು ಕಂಡು ಬಂದಿದೆ. ಸುರೇಶ್ ಅವರು ಇಂಟರ್‌ನೆಟ್‌ನಲ್ಲಿ ನೀಡಲಾಗಿದ್ದ ಡಾ. ಪ್ರೇಮ್‌ ಕುಮಾರ್ ರಜಪೂತ್‌ ಎಂಬವರಿಗೆ ಕರೆ ಮಾಡಿದ್ದಾರೆ. ಎಂಬಿಬಿಎಸ್‌ ಪದವಿ ಪ್ರವೇಶದ ಬಗ್ಗೆ ವಿಚಾರಿಸಿದ್ದಾರೆ. ಆಗ ಆ ಕಡೆಯಿಂದ ಮಾತನಾಡಿದ ವ್ಯಕ್ತಿ 12ನೇ ತರಗತಿಯ ಅಂಕ ಪಟ್ಟಿಯ ಆಧಾರದಲ್ಲಿ ಎಂಬಿಬಿಎಸ್‌ ಪದವಿಗೆ ಪ್ರವೇಶ ದೊರೆಯಲಿದೆ ಎಂಬ ಭರವಸೆ ನೀಡಿದ್ದರು ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಆರಂಭದಲ್ಲಿ ಪ್ರೇಮ್‌ ಕುಮಾರ್ ರಜಪೂತ್‌ ಎನ್ನಲಾದ ವ್ಯಕ್ತಿಯ ಮಾತುಗಳ ಮೇಲೆ ಶಂಕೆ ವ್ಯಕ್ತಪಡಿಸಿ, ಹಿಂಜರಿಕೆ ತೋರಿದ್ದ ಸುರೇಶ್ ಪಟೇಲ್‌, ಬಳಿಕ ಆತ ನೀಡಿದ ಭರವಸೆಗಳನ್ನು ನಂಬಿ, ಮುಂಗಡವಾಗಿ 50,000 ರೂ. ಪಾವತಿಸಿ ಜಾನ್ಸಿಯ ಭುಂದೇಲ್‌ಖಂಡ್‌ ವಿವಿಯ ಹೆಸರಿನಲ್ಲಿ ಎಂಬಿಬಿಎಸ್‌ಗೆ ಪ್ರವೇಶ ಪಡೆದಿದ್ದಾರೆ. ಬಳಿಕ ಜುಲೈ 10, 2018ರಿಂದ ಫೆಬ್ರವರಿ 23, 2019ರ ನಡುವೆ ಹಂತ ಹಂತವಾಗಿ ಬರೋಬ್ಬರಿ 16.32 ಲಕ್ಷ ರೂಪಾಯಿ ಪಾವತಿಸಿದ್ದಾರೆ. ತರಗತಿ ಪ್ರಾರಂಭಕ್ಕಾಗಿ ಕಾದಿದ್ದಾರೆ.

ಆದರೆ, ರಜಪೂತ್‌ ನೀಡಿದ ಭರವಸೆಯಂತೆ ತರಗತಿಗಳು ಆರಂಭಗೊಳ್ಳಲೇ ಇಲ್ಲ. ಮಾರ್ಚ್ 2019ರಲ್ಲಿ ಸುರೇಶ್ ಪಟೇಲ್ ಅವರಿಗೆ ಕೊರಿಯರ್ ಮೂಲಕ ಒಂದು ಪಾರ್ಸೆಲ್ ಬರುತ್ತದೆ. ಅದನ್ನು ತೆರೆದು ನೋಡಿದಾಗ ಎಂಬಿಬಿಎಸ್ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರ, ತರಬೇತಿ ಪ್ರಮಾಣ ಪತ್ರ ಹಾಗೂ ನೋಂದಣಿ ಪ್ರಮಾಣ ಪತ್ರ ಇತ್ತು. ಎಲ್ಲವೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ)ದ ಸ್ಟ್ಯಾಂಪ್ ಹೊಂದಿತ್ತು.

ಪ್ರಮಾಣ ಪತ್ರಗಳ ಕುರಿತು ಸುರೇಶ್ ಪಟೇಲ್ ಎಂಸಿಐ ಅನ್ನು ವಿಚಾರಿಸಿದಾಗ ಅವುಗಳೆಲ್ಲ ನಕಲಿ ಎಂಬುವುದು ಗೊತ್ತಾಗಿದೆ. ಹಾಗಾಗಿ ಸುರೇಶ್ ಪಟೇಲ್ ದೂರು ದಾಖಲಿಸಿದ್ದರು. 2019ರಲ್ಲಿ ಈ ಪ್ರಕರಣವನ್ನು ಅಹಮದಾಬಾದ್‌ ಕ್ರೈ ಬ್ರ್ಯಾಂಚ್‌ಗೆ ಹಸ್ತಾಂತರಿಸಲಾಗಿತ್ತು.

ಪೊಲೀಸರಿಗೆ ನೀಡಿದ ದೂರಿನಲ್ಲಿ ಸುರೇಶ್ ಪಟೇಲ್ ಅವರು, “ನಾನು ರಜಪೂತ್‌ ಜೊತೆ ಸುಮಾರು 25 ಬಾರಿ ಮಾತನಾಡಿದ್ದೇನೆ. ಆತ, ಡಾ. ಶೌಖತ್ ಖಾನ್, ಡಾ. ಆನಂದ್ ಮತ್ತು ಅರುಣ್ ಕುಮಾರ್ ಎಂಬವರು ಎಂಬಿಬಿಎಸ್‌ ಪೂರ್ತಿಗೊಳಿಸಲು ನನಗೆ ಸಹಾಯ ಮಾಡಲಿದ್ದಾರೆ” ಎಂದಿದ್ದ ಎಂದು ವಿವರಿಸಿದ್ದಾರೆ.

“2019ರಲ್ಲಿ ನಾನು ಮತ್ತು ಮೆಹ್ಸಾನಾ ಪೊಲೀಸ್ ತಂಡ ದೆಹಲಿಗೆ ತೆರಳಿ ಡಾ. ಆನಂದ್‌ ಕುಮಾರ್‌ಗಾಗಿ ಹುಡುಕಾಟ ನಡೆಸಿದ್ದೇವೆ. ನಾವು ವಿಳಾಸ ಹುಡುಕಿಕೊಂಡು ಹೋದಾಗ ಅಂತವರು ಯಾರೂ ಅಲ್ಲಿ ಇರಲಿಲ್ಲ. ಬಳಿಕ ನಾವು ದೆಹಲಿಯ ಖಾಸಗಿ ಬ್ಯಾಂಕ್‌ ಒಂದಕ್ಕೆ ತೆರಳಿ ಮಾಹಿತಿ ಕಲೆ ಹಾಕಿದಾಗ, ಅನೇಕ ಮಂದಿ ನನ್ನ ರೀತಿ ಮೋಸ ಹೋಗಿರುವುದು ಗೊತ್ತಾಗಿದೆ” ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಪ್ರಕರಣದ ತನಿಖೆ ಬಹಳ ನಿಧಾನಗತಿಯಲ್ಲಿ ಸಾಗುತ್ತಿದೆ. ದೂರು ದಾಖಲಾಗಿ ಐದು ವರ್ಷ ಕಳೆದರೂ ಇದುವರೆಗೆ ಆರೋಪಿಗಳನ್ನು ಪತ್ತೆ ಹಚ್ಚಲು ಆಗಿಲ್ಲ. ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ಡಿಸೆಂಬರ್ 20, 2023ರಲ್ಲಿ ಸುರೇಶ್ ಪಟೇಲ್ ಅವರು ಮೆಹ್ಸಾನಾ ಎಸ್‌ಪಿ ಕಚೇರಿಗೆ ಮತ್ತೊಂದು ದೂರು ನೀಡಿದ್ದಾರೆ. ಈ ವರ್ಷದ ಜೂನ್ 14ರಂದು ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ‘ಸೆಬಿ’ ಅಧಿಕಾರಿಗಳನ್ನು ಭೇಟಿ ಮಾಡಿದ ಟಿಎಂಸಿ ಸಂಸದರು; ಸ್ಟಾಕ್ ಮಾರ್ಕೆಟ್ ‘ಮ್ಯಾನಿಪುಲಟ್’ ತನಿಖೆಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...