Homeಮುಖಪುಟರಜಪೂತರ ಬಗ್ಗೆ ಕೇಂದ್ರ ಸಚಿವರಿಂದ ಅವಹೇಳನ: ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ರಾಜ್ ಶೇಖಾವತ್...

ರಜಪೂತರ ಬಗ್ಗೆ ಕೇಂದ್ರ ಸಚಿವರಿಂದ ಅವಹೇಳನ: ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ರಾಜ್ ಶೇಖಾವತ್ ಬಂಧನ

- Advertisement -
- Advertisement -

ಗುಜರಾತ್ ಕರ್ಣಿ ಸೇನೆಯ ನಾಯಕ ರಾಜ್ ಶೇಖಾವತ್ ಅವರನ್ನು ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ  ರಾಜ್ಯ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡುವ ಮುನ್ನ ಪೊಲೀಸರು ಬಂಧಿಸಿದ್ದು, ರಜಪೂತರ ಬಗ್ಗೆ ಕೇಂದ್ರ ಸಚಿವರ ಹೇಳಿಕೆಯ ವಿರುದ್ಧದ ಪ್ರತಿಭಟನೆ ಕಿಚ್ಚು ಮುಂದುವರಿದಿದೆ.

ರಜಪೂತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಕೇಂದ್ರ ಸಚಿವ ಪುರ್ಷೋತ್ತಮ್ ರೂಪಾಲಾ ವಿರುದ್ಧ ಪ್ರತಿಭಟನೆಯನ್ನು ಮುನ್ನಡೆಸುತ್ತಿರುವ ರಾಜ್ ಶೇಖಾವತ್ ಗಾಂಧಿನಗರದಲ್ಲಿರುವ ಬಿಜೆಪಿಯ ಗುಜರಾತ್ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕುವ ಉದ್ದೇಶದಿಂದ ತೆರಳುತ್ತಿದ್ದರು.

ರಜಪೂತ ಸಮುದಾಯದ ಸಂಘಟನೆಯಾದ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾದ ಶೇಖಾವತ್ ಅವರು ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಅವರ ಸಮುದಾಯದ ಬಗ್ಗೆ ಹೇಳಿಕೆ ಖಂಡಿಸಿ ರಾಜ್ಯ ಬಿಜೆಪಿ ಪ್ರಧಾನ ಕಚೇರಿ ಘೇರಾವ್‌ಗೆ ಕರೆ ನೀಡಿದ್ದರು. ಪರಶೋತ್ತಮ್ ರೂಪಾಲಾ ಅವರನ್ನು ರಾಜ್‌ಕೋಟ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಿಂದ ಕೈಬಿಡುವಂತೆ ಅವರು ಆಗ್ರಹಿಸಿದ್ದರು.

ನಾವು ರಾಜ್ ಶೇಖಾವತ್ ಅವರನ್ನು ವಿಮಾನ ನಿಲ್ದಾಣದಿಂದ ಬಂಧಿಸಿದ್ದೇವೆ ಎಂದು ಸಹಾಯಕ ಪೊಲೀಸ್ ಆಯುಕ್ತ ವಿ.ಎನ್. ಯಾದವ್ ಹೇಳಿದ್ದಾರೆ.

ಮಾರ್ಚ್ 22ರಂದು ರಾಜ್‌ಕೋಟ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರೂಪಾಲಾ,  ಹಿಂದಿನ ‘ಮಹಾರಾಜರು’ ವಿದೇಶಿ ಆಡಳಿತಗಾರರು ಮತ್ತು ಬ್ರಿಟಿಷರ ಕಿರುಕುಳಕ್ಕೆ ಬಲಿಯಾದರು. ಈ ‘ಮಹಾರಾಜರು’ ಬ್ರಿಟಿಷ್‌ ಆಡಳಿತಗಾರರೊಂದಿಗೆ ಸಹಕರಿಸಿದ್ದರು ಮತ್ತು ಅವರಿಗೆ ತಮ್ಮ ಹೆಣ್ಣುಮಕ್ಕಳನ್ನು ಮದುವೆ ಮಾಡಿಸಿಕೊಟ್ಟಿದ್ದರು ಎಂದು ಹೇಳಿದ್ದರು.

ಇದಾದ ಬಳಿಕ ವ್ಯಾಪಕವಾದ ಪ್ರತಿಭಟನೆ ಭುಗಿಲೆದ್ದಿದ್ದವು, ಕರ್ಣಿ ಸೇನಾ ರಾಷ್ಟ್ರೀಯ ಮುಖ್ಯಸ್ಥ ರಾಜ್ ಶೇಖಾವತ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ರೂಪಾಲಾ ಅವರಿಗೆ ನೀಡಿರುವ ಲೋಕಸಭೆ ಟಿಕೆಟ್‌ ಹಿಂಪಡೆಯುವಂತೆ ಆಗ್ರಹಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪಾಲಾ ಅವರು ಈಗಾಗಲೇ ಮೂರು ಬಾರಿ ಕ್ಷಮೆಯಾಚಿಸಿರುವುದರಿಂದ ಅವರಿಗೆ ಕ್ಷಮೆ ನೀಡುವಂತೆ ಗುಜರಾತ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ್ ಮಂಗಳವಾರ ಮನವಿ ಮಾಡಿದ್ದರು. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಮ್ಮುಖದಲ್ಲಿ ರಜಪೂತ ಸಮುದಾಯದ ಮುಖಂಡರೊಂದಿಗೆ ಪಾಟೀಲ್ ಸಭೆ ನಡೆಸಿದ್ದರು.

ಇದನ್ನು ಓದಿ: ಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಹೆಚ್ಚಿದ ಪ್ರಾದೇಶಿಕ ಸಂಘರ್ಷದ ಭೀತಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ...

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...