Homeಮುಖಪುಟರಜಪೂತರ ಬಗ್ಗೆ ಕೇಂದ್ರ ಸಚಿವರಿಂದ ಅವಹೇಳನ: ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ರಾಜ್ ಶೇಖಾವತ್...

ರಜಪೂತರ ಬಗ್ಗೆ ಕೇಂದ್ರ ಸಚಿವರಿಂದ ಅವಹೇಳನ: ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ರಾಜ್ ಶೇಖಾವತ್ ಬಂಧನ

- Advertisement -
- Advertisement -

ಗುಜರಾತ್ ಕರ್ಣಿ ಸೇನೆಯ ನಾಯಕ ರಾಜ್ ಶೇಖಾವತ್ ಅವರನ್ನು ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ  ರಾಜ್ಯ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡುವ ಮುನ್ನ ಪೊಲೀಸರು ಬಂಧಿಸಿದ್ದು, ರಜಪೂತರ ಬಗ್ಗೆ ಕೇಂದ್ರ ಸಚಿವರ ಹೇಳಿಕೆಯ ವಿರುದ್ಧದ ಪ್ರತಿಭಟನೆ ಕಿಚ್ಚು ಮುಂದುವರಿದಿದೆ.

ರಜಪೂತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಕೇಂದ್ರ ಸಚಿವ ಪುರ್ಷೋತ್ತಮ್ ರೂಪಾಲಾ ವಿರುದ್ಧ ಪ್ರತಿಭಟನೆಯನ್ನು ಮುನ್ನಡೆಸುತ್ತಿರುವ ರಾಜ್ ಶೇಖಾವತ್ ಗಾಂಧಿನಗರದಲ್ಲಿರುವ ಬಿಜೆಪಿಯ ಗುಜರಾತ್ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕುವ ಉದ್ದೇಶದಿಂದ ತೆರಳುತ್ತಿದ್ದರು.

ರಜಪೂತ ಸಮುದಾಯದ ಸಂಘಟನೆಯಾದ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾದ ಶೇಖಾವತ್ ಅವರು ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಅವರ ಸಮುದಾಯದ ಬಗ್ಗೆ ಹೇಳಿಕೆ ಖಂಡಿಸಿ ರಾಜ್ಯ ಬಿಜೆಪಿ ಪ್ರಧಾನ ಕಚೇರಿ ಘೇರಾವ್‌ಗೆ ಕರೆ ನೀಡಿದ್ದರು. ಪರಶೋತ್ತಮ್ ರೂಪಾಲಾ ಅವರನ್ನು ರಾಜ್‌ಕೋಟ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಿಂದ ಕೈಬಿಡುವಂತೆ ಅವರು ಆಗ್ರಹಿಸಿದ್ದರು.

ನಾವು ರಾಜ್ ಶೇಖಾವತ್ ಅವರನ್ನು ವಿಮಾನ ನಿಲ್ದಾಣದಿಂದ ಬಂಧಿಸಿದ್ದೇವೆ ಎಂದು ಸಹಾಯಕ ಪೊಲೀಸ್ ಆಯುಕ್ತ ವಿ.ಎನ್. ಯಾದವ್ ಹೇಳಿದ್ದಾರೆ.

ಮಾರ್ಚ್ 22ರಂದು ರಾಜ್‌ಕೋಟ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರೂಪಾಲಾ,  ಹಿಂದಿನ ‘ಮಹಾರಾಜರು’ ವಿದೇಶಿ ಆಡಳಿತಗಾರರು ಮತ್ತು ಬ್ರಿಟಿಷರ ಕಿರುಕುಳಕ್ಕೆ ಬಲಿಯಾದರು. ಈ ‘ಮಹಾರಾಜರು’ ಬ್ರಿಟಿಷ್‌ ಆಡಳಿತಗಾರರೊಂದಿಗೆ ಸಹಕರಿಸಿದ್ದರು ಮತ್ತು ಅವರಿಗೆ ತಮ್ಮ ಹೆಣ್ಣುಮಕ್ಕಳನ್ನು ಮದುವೆ ಮಾಡಿಸಿಕೊಟ್ಟಿದ್ದರು ಎಂದು ಹೇಳಿದ್ದರು.

ಇದಾದ ಬಳಿಕ ವ್ಯಾಪಕವಾದ ಪ್ರತಿಭಟನೆ ಭುಗಿಲೆದ್ದಿದ್ದವು, ಕರ್ಣಿ ಸೇನಾ ರಾಷ್ಟ್ರೀಯ ಮುಖ್ಯಸ್ಥ ರಾಜ್ ಶೇಖಾವತ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ರೂಪಾಲಾ ಅವರಿಗೆ ನೀಡಿರುವ ಲೋಕಸಭೆ ಟಿಕೆಟ್‌ ಹಿಂಪಡೆಯುವಂತೆ ಆಗ್ರಹಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪಾಲಾ ಅವರು ಈಗಾಗಲೇ ಮೂರು ಬಾರಿ ಕ್ಷಮೆಯಾಚಿಸಿರುವುದರಿಂದ ಅವರಿಗೆ ಕ್ಷಮೆ ನೀಡುವಂತೆ ಗುಜರಾತ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ್ ಮಂಗಳವಾರ ಮನವಿ ಮಾಡಿದ್ದರು. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಮ್ಮುಖದಲ್ಲಿ ರಜಪೂತ ಸಮುದಾಯದ ಮುಖಂಡರೊಂದಿಗೆ ಪಾಟೀಲ್ ಸಭೆ ನಡೆಸಿದ್ದರು.

ಇದನ್ನು ಓದಿ: ಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಹೆಚ್ಚಿದ ಪ್ರಾದೇಶಿಕ ಸಂಘರ್ಷದ ಭೀತಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...