ಗುಜರಾತ್ನ ಖೇಡಾ ಜಿಲ್ಲೆಯಲ್ಲಿ ನಾಲ್ವರು ಪೊಲೀಸರು ಮೂವರು ಮುಸ್ಲಿಂ ವ್ಯಕ್ತಿಗಳನ್ನು ಸಾರ್ವಜನಿಕವಾಗಿ ಥಳಿಸಿದ್ದರು. ಇದಕ್ಕೆ ಪರಿಹಾರ ಪಡೆಯಲು ಸಂತ್ರಸ್ತರು ನಿರಾಕರಿಸಿದ್ದಾರೆ ಎಂದು ಪೊಲೀಸರ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದ್ದಾರೆ.
ಕಳೆದ ವರ್ಷ ಅಕ್ಟೋಬರ್ 4ರಂದು ಪೊಲೀಸರು ಮೂವರು ಮುಸ್ಲಿಂ ವ್ಯಕ್ತಿಗಳನ್ನು ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ರಾಜ್ಯದ ಖೇಡಾ ಜಿಲ್ಲೆಯ ಉಂಧೇಲಾ ಗ್ರಾಮದಲ್ಲಿ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಪೊಲೀಸರು ಅವರನ್ನು ಥಳಿಸಿದ್ದರು.
ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ, ನ್ಯಾಯಾಂಗ ನಿಂದನೆಗಾಗಿ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಆರೋಪಗಳನ್ನು ಹೊರಿಸಿತ್ತು.
”ಜನರ ಪೃಷ್ಠದ ಮೇಲೆ ಹೊಡೆಯುವುದು ಕಸ್ಟಡಿ ಚಿತ್ರಹಿಂಸೆಯಾಗುವುದಿಲ್ಲ” ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.
ಆರೋಪಿಗಳಾದ ಎ.ವಿ. ಪರ್ಮಾರ್ (ಇನ್ಸ್ಪೆಕ್ಟರ್), ಡಿ.ಬಿ. ಕುಮಾವತ್ (ಸಬ್ ಇನ್ಸ್ ಪೆಕ್ಟರ್), ಕೆ.ಎಲ್. ದಾಭಿ (ಹೆಡ್ ಕಾನ್ಸ್ಟೆಬಲ್) ಮತ್ತು ರಾಜು ದಾಭಿ (ಕಾನ್ಸ್ಟೇಬಲ್) ಅವರು ಆರೋಪಗಳಿಗೆ ಬದಲಾಗಿ ಸಂತ್ರಸ್ತರಿಗೆ ಪರಿಹಾರವನ್ನು ಪಾವತಿಸಲು ಅವಕಾಶ ನೀಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು. ಏಕೆಂದರೆ ಅದು ಅವರ ವೃತ್ತಿಪರ ದಾಖಲೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ.
ಆರೋಪಿ ಪೊಲೀಸರನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಪ್ರಕಾಶ್ ಜಾನಿ ಅವರು, ”ಸಂತ್ರಸ್ತರನ್ನು ಪ್ರತಿನಿಧಿಸುವ ಹಿರಿಯ ವಕೀಲ ಐ ಎಚ್ ಸೈಯದ್ ಅವರೊಂದಿಗೆ ನಾವು ಸಭೆ ನಡೆಸಿದ್ದೇವೆ. ವಾಸ್ತವವಾಗಿ, ಕೆಲವು ಅರ್ಜಿದಾರರು ಹಾಜರಿದ್ದರು. ಆದಾಗ್ಯೂ, ಉತ್ತಮ ಪ್ರಯತ್ನಗಳ ಹೊರತಾಗಿಯೂ, ಸಂತ್ರಸ್ತರು ತಮ್ಮ ಕುಟುಂಬ ಅಥವಾ ಸಮುದಾಯದ ಸದಸ್ಯರೊಂದಿಗೆ ಮಾತನಾಡಿದ ನಂತರ ಯಾವುದೇ ರಾಜಿ ಮತ್ತು ಪರಿಹಾರವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂಬ ಮಾತು ನನಗೆ ಬಂದಿದೆ” ಎಂದು ಅವರು ಗುಜರಾತ್ ಹೈಕೋರ್ಟ್ ಪೀಠಕ್ಕೆ ತಿಳಿಸಿದರು.
ಇತ್ಯರ್ಥಕ್ಕೆ ಬಂದಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಕ್ಟೋಬರ್ 19 ರಂದು ತನ್ನ ತೀರ್ಪು ಪ್ರಕಟಿಸಲಿದೆ.
ಇದನ್ನೂ ಓದಿ: ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ: ಪೃಷ್ಠದ ಮೇಲೆ ಬಡಿಯುವುದು ಕಸ್ಟಡಿ ಚಿತ್ರಹಿಂಸೆಗೆ ಸಮವಲ್ಲ ಎಂದ ಆರೋಪಿತ ಪೊಲೀಸರು