Homeರಾಜಕೀಯಗುಜರಾತ್‌: BJP ವಿರುದ್ಧ ಮತ ಚಲಾಯಿಸಲು ನಿರ್ಧರಿಸಿದ 60 ಲಕ್ಷ ಜನಸಂಖ್ಯೆಯ ಮಾಲ್ಧಾರಿ ಸಮುದಾಯ!

ಗುಜರಾತ್‌: BJP ವಿರುದ್ಧ ಮತ ಚಲಾಯಿಸಲು ನಿರ್ಧರಿಸಿದ 60 ಲಕ್ಷ ಜನಸಂಖ್ಯೆಯ ಮಾಲ್ಧಾರಿ ಸಮುದಾಯ!

ಸಮುದಾಯದ ಪ್ರತಿಭಟನೆಗೆ ಬೆದರಿದ್ದ ಬಿಜೆಪಿ ಸರ್ಕಾರ ಮಂಡನೆಯಾಗಿದ್ದ ಮಸೂದೆಯೊಂದನ್ನು 2 ತಿಂಗಳ ಹಿಂದೆಯಷ್ಟೆ ವಾಪಾಸು ಪಡೆದಿತ್ತು

- Advertisement -
- Advertisement -

ಆಡಳಿತಾರೂಢ ಬಿಜೆಪಿ ಸರ್ಕಾರವು ತಮ್ಮ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿರುವ ಗುಜರಾತ್ ಮಾಲ್ಧಾರಿ ಮಹಾಪಂಚಾಯತ್ (ಜಿಎಂಎಂ) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಮತ ಚಲಾಯಿಸುವಂತೆ ಸಮುದಾಯಕ್ಕೆ ಕರೆ ನೀಡಿದೆ. ಜಿಎಂಎಂ ರಾಜ್ಯದ ಜಾನುವಾರು ಸಾಕಣೆದಾರರ ಒಕ್ಕೂಟ ಸಂಘಟನೆಯಾದ್ದು, ಗುಜರಾತ್‌‌ನಲ್ಲಿ ಮಾಲ್ಧಾರಿ ಜನಸಂಖ್ಯೆ ಸುಮಾರು 61 ಲಕ್ಷ ಇದೆ ಎಂದು ಸಂಘಟನೆ ಪ್ರತಿಪಾದಿಸಿದೆ.

ಮೆಹ್ಸಾನಾದಲ್ಲಿ ಸೋಮವಾರ ಸಭೆ ನಡೆಸಿದ ಗುಜರಾತ್ ಮಾಲ್ಧಾರಿ ಮಹಾಪಂಚಾಯತ್‌ನ ವಕ್ತಾರ ನಾಗಜಿಭಾಯ್ ದೇಸಾಯಿ ನೀಡಿದ ಹೇಳಿಕೆಯಲ್ಲಿ, ಕಳೆದ ಒಂದೂವರೆ ವರ್ಷಗಳಿಂದ ಬಿಜೆಪಿ ಸರ್ಕಾರದ ಬಗ್ಗೆ ಸಮುದಾಯವು ತೀವ್ರ ಅಸಮಾಧಾನ ಹೊಂದಿರುವುದರಿಂದ ಅದನ್ನು ಒಗ್ಗೂಡಿಸಿ ಪ್ರಜಾಪ್ರಭುತ್ವದಲ್ಲಿ ಮತದಾನದ ಶಕ್ತಿಯನ್ನು ತೋರಿಸುತ್ತೇವೆ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಸೆಂಬರ್ 1 ಮತ್ತು 5 ರಂದು ನಡೆಯುವ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮಾಲ್ಧಾರಿ ಸಮುದಾಯದ ಎಲ್ಲಾ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಮಾಲ್ಧಾರಿ ಮಹಾಪಂಚಾಯತ್ ಮನವಿ ಮಾಡಿದೆ. ಸಮುದಾಯಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಗದೀಶ್ ಠಾಕೂರ್ ಮತ್ತು ಕಾಂಗ್ರೆಸ್ ಶಾಸಕರಿಗೆ ನಾವು ಕೃತಜ್ಞರಾಗಿರುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

ಮಾಲಧಾರಿ ಸಮುದಾಯದ ಬಾಕಿ ಉಳಿದಿರುವ ಬೇಡಿಕೆಗಳನ್ನು ಪಟ್ಟಿ ಮಾಡಿರುವ ದೇಸಾಯಿ, “ಕಳೆದ ವಾರದಿಂದ ಮಹಾಪಂಚಾಯತ್ ಸಮುದಾಯದ ಕಡಯಿಂದ ಅಭಿಪ್ರಾಯಗಳನ್ನು ಕೇಳಿದೆ. ನಿನ್ನೆ (ಸೋಮವಾರ) ನಡೆದ ಪ್ರತಿನಿಧಿಗಳ ಸಭೆಯಲ್ಲಿ ಬಿಜೆಪಿ ವಿರುದ್ಧ ಮತ ಹಾಕಲು ನಿರ್ಧರಿಸಲಾಯಿತು. ಮತ ಎಂಬ ಅಸ್ತ್ರ ಬಳಸಿ ಬಿಜೆಪಿಗೆ ತಕ್ಕ ಪಾಠ ಕಲಿಸುವಂತೆ ಸಮುದಾಯವು ಮನವಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಮಾಲ್ಧಾರಿ ವಸಾಹತ್ (ವಸತಿ ಪ್ರದೇಶ) ಸ್ಥಾಪಿಸುವುದು, ಸಮುದಾಯದ ಸದಸ್ಯರ ವಿರುದ್ಧ ಸುಳ್ಳು ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು, ರೈತರಾಗಿರುವ ಹಕ್ಕು ಮತ್ತು ಗಿರ್, ಬರ್ದಾ ಮತ್ತು ಅಲೆಚ್ ಅರಣ್ಯ ಪ್ರದೇಶದಲ್ಲಿ ವಾಸಿಸುವ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ಸೇರಿದಂತೆ ಹಲವು ಬೇಡಿಕೆಗಳನ್ನು ಸಮುದಾಯ ಮುಂದಿಟ್ಟಿದೆ ಎಂದು ದೇಸಾಯಿ ಹೇಳಿದ್ದಾರೆ.

“ಗುಜರಾತ್ ನಗರ ಪ್ರದೇಶಗಳಲ್ಲಿ ಜಾನುವಾರು ನಿಯಂತ್ರಣ (ಕೀಪಿಂಗ್ ಮತ್ತು ಮೂವಿಂಗ್) ಮಸೂದೆ-2022” ಯನ್ನು ಅಂಗೀಕರಿಸಿದ್ದಕ್ಕಾಗಿ ಬಿಜೆಪಿ ಸರ್ಕಾರದ ವಿರುದ್ಧ ಸಮುದಾಯವು ಈಗಾಗಲೇ ಭಾರಿ ವಿರೋಧವನ್ನು ಹೊಂದಿದೆ. ಈ ವರ್ಷ ಸೆಪ್ಟೆಂಬರ್ 18 ರಂದು, ಮಸೂದೆಯನ್ನು ರದ್ದುಗೊಳಿಸುವಂತೆ ಕೋರಿ, ಮಾಲ್ಧಾರಿ ಸಮುದಾಯದ ಮುಖಂಡರು ಮಹಾಪಂಚಾಯತ್ ಅನ್ನು ಆಯೋಜಿಸಿದರು. ಗಾಂಧಿನಗರ ಜಿಲ್ಲೆಯ ಶೇರ್ತಾ ಗ್ರಾಮದಲ್ಲಿ ನಡೆದ ಈ ಮಹಾಪಂಚಾಯತ್‌ನಲ್ಲಿ ಸುಮಾರು 50,000 ಸದಸ್ಯರು ಭಾಗವಹಿಸಿದ್ದರು.

ಇದನ್ನೂ ಓದಿ: ಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

ಈ ಪ್ರತಿಭಟನೆ ನಡೆದು ಒಂದು ದಿನದ ನಂತರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಮಸೂದೆಯನ್ನು ಮರುಪರಿಶೀಲನೆಗಾಗಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ಹೀಗಾಗಿ ಸೆಪ್ಟೆಂಬರ್ 21 ರಂದು ವಿಧಾನಸಭೆಯು ಅವಿರೋಧವಾಗಿ ಮಸೂದೆಯನ್ನು ಹಿಂತೆಗೆದುಕೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...