Homeರಾಜಕೀಯಗುಜರಾತ್‌: BJP ವಿರುದ್ಧ ಮತ ಚಲಾಯಿಸಲು ನಿರ್ಧರಿಸಿದ 60 ಲಕ್ಷ ಜನಸಂಖ್ಯೆಯ ಮಾಲ್ಧಾರಿ ಸಮುದಾಯ!

ಗುಜರಾತ್‌: BJP ವಿರುದ್ಧ ಮತ ಚಲಾಯಿಸಲು ನಿರ್ಧರಿಸಿದ 60 ಲಕ್ಷ ಜನಸಂಖ್ಯೆಯ ಮಾಲ್ಧಾರಿ ಸಮುದಾಯ!

ಸಮುದಾಯದ ಪ್ರತಿಭಟನೆಗೆ ಬೆದರಿದ್ದ ಬಿಜೆಪಿ ಸರ್ಕಾರ ಮಂಡನೆಯಾಗಿದ್ದ ಮಸೂದೆಯೊಂದನ್ನು 2 ತಿಂಗಳ ಹಿಂದೆಯಷ್ಟೆ ವಾಪಾಸು ಪಡೆದಿತ್ತು

- Advertisement -
- Advertisement -

ಆಡಳಿತಾರೂಢ ಬಿಜೆಪಿ ಸರ್ಕಾರವು ತಮ್ಮ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿರುವ ಗುಜರಾತ್ ಮಾಲ್ಧಾರಿ ಮಹಾಪಂಚಾಯತ್ (ಜಿಎಂಎಂ) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಮತ ಚಲಾಯಿಸುವಂತೆ ಸಮುದಾಯಕ್ಕೆ ಕರೆ ನೀಡಿದೆ. ಜಿಎಂಎಂ ರಾಜ್ಯದ ಜಾನುವಾರು ಸಾಕಣೆದಾರರ ಒಕ್ಕೂಟ ಸಂಘಟನೆಯಾದ್ದು, ಗುಜರಾತ್‌‌ನಲ್ಲಿ ಮಾಲ್ಧಾರಿ ಜನಸಂಖ್ಯೆ ಸುಮಾರು 61 ಲಕ್ಷ ಇದೆ ಎಂದು ಸಂಘಟನೆ ಪ್ರತಿಪಾದಿಸಿದೆ.

ಮೆಹ್ಸಾನಾದಲ್ಲಿ ಸೋಮವಾರ ಸಭೆ ನಡೆಸಿದ ಗುಜರಾತ್ ಮಾಲ್ಧಾರಿ ಮಹಾಪಂಚಾಯತ್‌ನ ವಕ್ತಾರ ನಾಗಜಿಭಾಯ್ ದೇಸಾಯಿ ನೀಡಿದ ಹೇಳಿಕೆಯಲ್ಲಿ, ಕಳೆದ ಒಂದೂವರೆ ವರ್ಷಗಳಿಂದ ಬಿಜೆಪಿ ಸರ್ಕಾರದ ಬಗ್ಗೆ ಸಮುದಾಯವು ತೀವ್ರ ಅಸಮಾಧಾನ ಹೊಂದಿರುವುದರಿಂದ ಅದನ್ನು ಒಗ್ಗೂಡಿಸಿ ಪ್ರಜಾಪ್ರಭುತ್ವದಲ್ಲಿ ಮತದಾನದ ಶಕ್ತಿಯನ್ನು ತೋರಿಸುತ್ತೇವೆ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಸೆಂಬರ್ 1 ಮತ್ತು 5 ರಂದು ನಡೆಯುವ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮಾಲ್ಧಾರಿ ಸಮುದಾಯದ ಎಲ್ಲಾ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಮಾಲ್ಧಾರಿ ಮಹಾಪಂಚಾಯತ್ ಮನವಿ ಮಾಡಿದೆ. ಸಮುದಾಯಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಗದೀಶ್ ಠಾಕೂರ್ ಮತ್ತು ಕಾಂಗ್ರೆಸ್ ಶಾಸಕರಿಗೆ ನಾವು ಕೃತಜ್ಞರಾಗಿರುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

ಮಾಲಧಾರಿ ಸಮುದಾಯದ ಬಾಕಿ ಉಳಿದಿರುವ ಬೇಡಿಕೆಗಳನ್ನು ಪಟ್ಟಿ ಮಾಡಿರುವ ದೇಸಾಯಿ, “ಕಳೆದ ವಾರದಿಂದ ಮಹಾಪಂಚಾಯತ್ ಸಮುದಾಯದ ಕಡಯಿಂದ ಅಭಿಪ್ರಾಯಗಳನ್ನು ಕೇಳಿದೆ. ನಿನ್ನೆ (ಸೋಮವಾರ) ನಡೆದ ಪ್ರತಿನಿಧಿಗಳ ಸಭೆಯಲ್ಲಿ ಬಿಜೆಪಿ ವಿರುದ್ಧ ಮತ ಹಾಕಲು ನಿರ್ಧರಿಸಲಾಯಿತು. ಮತ ಎಂಬ ಅಸ್ತ್ರ ಬಳಸಿ ಬಿಜೆಪಿಗೆ ತಕ್ಕ ಪಾಠ ಕಲಿಸುವಂತೆ ಸಮುದಾಯವು ಮನವಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಮಾಲ್ಧಾರಿ ವಸಾಹತ್ (ವಸತಿ ಪ್ರದೇಶ) ಸ್ಥಾಪಿಸುವುದು, ಸಮುದಾಯದ ಸದಸ್ಯರ ವಿರುದ್ಧ ಸುಳ್ಳು ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು, ರೈತರಾಗಿರುವ ಹಕ್ಕು ಮತ್ತು ಗಿರ್, ಬರ್ದಾ ಮತ್ತು ಅಲೆಚ್ ಅರಣ್ಯ ಪ್ರದೇಶದಲ್ಲಿ ವಾಸಿಸುವ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ಸೇರಿದಂತೆ ಹಲವು ಬೇಡಿಕೆಗಳನ್ನು ಸಮುದಾಯ ಮುಂದಿಟ್ಟಿದೆ ಎಂದು ದೇಸಾಯಿ ಹೇಳಿದ್ದಾರೆ.

“ಗುಜರಾತ್ ನಗರ ಪ್ರದೇಶಗಳಲ್ಲಿ ಜಾನುವಾರು ನಿಯಂತ್ರಣ (ಕೀಪಿಂಗ್ ಮತ್ತು ಮೂವಿಂಗ್) ಮಸೂದೆ-2022” ಯನ್ನು ಅಂಗೀಕರಿಸಿದ್ದಕ್ಕಾಗಿ ಬಿಜೆಪಿ ಸರ್ಕಾರದ ವಿರುದ್ಧ ಸಮುದಾಯವು ಈಗಾಗಲೇ ಭಾರಿ ವಿರೋಧವನ್ನು ಹೊಂದಿದೆ. ಈ ವರ್ಷ ಸೆಪ್ಟೆಂಬರ್ 18 ರಂದು, ಮಸೂದೆಯನ್ನು ರದ್ದುಗೊಳಿಸುವಂತೆ ಕೋರಿ, ಮಾಲ್ಧಾರಿ ಸಮುದಾಯದ ಮುಖಂಡರು ಮಹಾಪಂಚಾಯತ್ ಅನ್ನು ಆಯೋಜಿಸಿದರು. ಗಾಂಧಿನಗರ ಜಿಲ್ಲೆಯ ಶೇರ್ತಾ ಗ್ರಾಮದಲ್ಲಿ ನಡೆದ ಈ ಮಹಾಪಂಚಾಯತ್‌ನಲ್ಲಿ ಸುಮಾರು 50,000 ಸದಸ್ಯರು ಭಾಗವಹಿಸಿದ್ದರು.

ಇದನ್ನೂ ಓದಿ: ಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

ಈ ಪ್ರತಿಭಟನೆ ನಡೆದು ಒಂದು ದಿನದ ನಂತರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಮಸೂದೆಯನ್ನು ಮರುಪರಿಶೀಲನೆಗಾಗಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ಹೀಗಾಗಿ ಸೆಪ್ಟೆಂಬರ್ 21 ರಂದು ವಿಧಾನಸಭೆಯು ಅವಿರೋಧವಾಗಿ ಮಸೂದೆಯನ್ನು ಹಿಂತೆಗೆದುಕೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...