Homeಮುಖಪುಟಗುಜರಾತ್: ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರಿಂದ ಬೃಹತ್ ಪ್ರತಿಭಟನೆ

ಗುಜರಾತ್: ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರಿಂದ ಬೃಹತ್ ಪ್ರತಿಭಟನೆ

- Advertisement -
- Advertisement -

ಬಿಜೆಪಿ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಪರ್ಷೋತ್ತಮ್ ರೂಪಲಾ ಅವರನ್ನು ಪಕ್ಷದ ಉಮೇದುವಾರಿಕೆಯಿಂದ ವಜಾ ಮಾಡುವಂತೆ ಆಗ್ರಹಿಸಿ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕ್ಷತ್ರಿಯ ಸಮುದಾಯದ ಒಂದು ಲಕ್ಷಕ್ಕೂ ಅಧಿಕ ಜನರು ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದ್ದಾರೆ.

ಸಚಿವ ರೂಪಾಲಾ ವಿರುದ್ಧ ರಾಜ್‌ಕೋಟ್‌ನಲ್ಲಿ ಕ್ಷತ್ರಿಯ ಸಮುದಾಯ ನಡೆಸಿದ ಎರಡನೇ ಬೃಹತ್ ಸಮಾವೇಶ ಇದಾಗಿದೆ.

ಕ್ಷತ್ರಿಯ ರಾಜಮನೆತನದ ಕುಟುಂಬಗಳು ಬ್ರಿಟಿಷರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದರು ಮತ್ತು ಅವರ ಹೆಣ್ಣು ಮಕ್ಕಳನ್ನು ಬ್ರಿಟಿಷರಿಗೆ ಮದುವೆ ಮಾಡಿ ಕೊಡುತ್ತಿದ್ದರು ಎಂದು ಸಚಿವ ರೂಪಾಲ ಹೇಳಿಕೆ ನೀಡಿದ್ದರು. ಇದು ರಜಪೂರನ್ನು ಕೆರಳಿಸುವಂತೆ ಮಾಡಿದೆ.

ಭಾನುವಾರ, ಸಮುದಾಯದ ಮುಖಂಡರು ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಮತ್ತು ರೂಪಾಲಾ ಅವರ ನಾಮಪತ್ರವನ್ನು ಹಿಂಪಡೆಯದಿದ್ದರೆ, ಏಪ್ರಿಲ್ 19 ರ ನಂತರ ಅಹಮದಾಬಾದ್‌ನಲ್ಲಿ ಮತ್ತೊಂದು ಬೃಹತ್ ಸಮಾವೇಶ ನಡೆಸುವುದಾಗಿ ಘೋಷಿಸಿದ್ದಾರೆ.

“ರೂಪಾಲಾ ಅವರ ಉಮೇದುವಾರಿಕೆಯನ್ನು ಹಿಂಪಡೆಯಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದೆ. ಈ ವಿಷಯದಲ್ಲಿ ನಾವು ದೃಢವಾಗಿ ನಿಂತಿದ್ದೇವೆ ಎಂದು ಕ್ಷತ್ರಿಯ ಸಮುದಾಯದ ಕೋರ್ ಕಮಿಟಿ ಸದಸ್ಯ ರಾಮಜುಭಾ ಜಡೇಜಾ ಸಭೆಯನ್ನು ಉದ್ದೇಶಿಸಿ ಹೇಳಿದ್ದಾರೆ.

“ಈ ಹಿಂದೆ, ಸದಸ್ಯರು ತಪ್ಪು ಮಾಡಿದಾಗ ಬಿಜೆಪಿ ನಾಯಕತ್ವ ಅಂತವರ ವಿರುದ್ಧ ಕ್ರಮ ತೆಗೆದು ಕೊಂಡಿತ್ತು. ಇದರಲ್ಲಿ ಪಕ್ಷದ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರಕರಣವೂ ಸೇರಿದೆ” ಎಂದು ಜಡೇಜಾ ನೆನಪಿಸಿದ್ದಾರೆ.

ಮಾರ್ಚ್ 22 ರಂದು ದಲಿತ ಸಮುದಾಯದ ಸಭೆಯಲ್ಲಿ ಕೇಂದ್ರ ಸಚಿವರು ಕ್ಷತ್ರಿಯರ ಕುರಿತು ನೀಡಿದ ನಂತರ ಕ್ಷತ್ರಿಯ ಸಮುದಾಯದ ಸುಮಾರು 75 ವಿವಿಧ ಗುಂಪುಗಳು ಅಥವಾ ಕುಲಗಳು ಪ್ರತಿಭಟನೆ ನಡೆಸುತ್ತಿವೆ.

ಸಮುದಾಯದ ಉನ್ನತ ನಾಯಕರನ್ನು ಒಳಗೊಂಡ ಸಮನ್ವಯ ಸಮಿತಿಯು ಬಿಜೆಪಿಯ ಕ್ಷತ್ರಿಯ ನಾಯಕರೊಂದಿಗೆ ಎರಡು ಸಭೆಗಳನ್ನು ನಡೆಸಿದೆ. ಆದರೆ, ಮಾತುಕತೆಗಳು ಬಿಕ್ಕಟ್ಟನ್ನು ಪರಿಹರಿಸುವಲ್ಲಿ ವಿಫಲವಾಗಿದೆ. ಏಕೆಂದರೆ, ರೂಪಲಾ ಅವರ ಉಮೇದುವಾರಿಗೆ ಹಿಂಪಡೆಯಲು ಬಿಜೆಪಿ ನಾಯಕರು ಒಪ್ಪಿಲ್ಲ. ಈ ನಡುವೆ ರೂಪಲಾ ಅವರು ತನ್ನ ಹೇಳಿಕೆಗೆ ಸಂಬಂಧಪಟ್ಟಂತೆ ಎರಡು ಬಾರಿ ಕ್ಷತ್ರಿಯ ಸಮುದಾಯದ ಕ್ಷಮೆ ಕೇಳಿದ್ದಾರೆ.

ಈ ಎಲ್ಲಾ ಗೊಂದಲಗಳ ನಡುವೆ ಕೇಂದ್ರ ಸಚಿವರು ಏಪ್ರಿಲ್ 16 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಮತ್ತು ರಾಜ್‌ಕೋಟ್ ನಗರದಲ್ಲಿ ರೋಡ್‌ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಘೋಷಿಸಿದೆ.

ಫೋಟೋ ಕೃಪೆ : ದಿ ಇಂಡಿಯನ್ ಎಕ್ಸ್‌ಪ್ರೆಸ್

ಇದನ್ನೂ ಓದಿ : Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...