Homeಮುಖಪುಟಗುಜರಾತ್: ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರಿಂದ ಬೃಹತ್ ಪ್ರತಿಭಟನೆ

ಗುಜರಾತ್: ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರಿಂದ ಬೃಹತ್ ಪ್ರತಿಭಟನೆ

- Advertisement -
- Advertisement -

ಬಿಜೆಪಿ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಪರ್ಷೋತ್ತಮ್ ರೂಪಲಾ ಅವರನ್ನು ಪಕ್ಷದ ಉಮೇದುವಾರಿಕೆಯಿಂದ ವಜಾ ಮಾಡುವಂತೆ ಆಗ್ರಹಿಸಿ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕ್ಷತ್ರಿಯ ಸಮುದಾಯದ ಒಂದು ಲಕ್ಷಕ್ಕೂ ಅಧಿಕ ಜನರು ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದ್ದಾರೆ.

ಸಚಿವ ರೂಪಾಲಾ ವಿರುದ್ಧ ರಾಜ್‌ಕೋಟ್‌ನಲ್ಲಿ ಕ್ಷತ್ರಿಯ ಸಮುದಾಯ ನಡೆಸಿದ ಎರಡನೇ ಬೃಹತ್ ಸಮಾವೇಶ ಇದಾಗಿದೆ.

ಕ್ಷತ್ರಿಯ ರಾಜಮನೆತನದ ಕುಟುಂಬಗಳು ಬ್ರಿಟಿಷರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದರು ಮತ್ತು ಅವರ ಹೆಣ್ಣು ಮಕ್ಕಳನ್ನು ಬ್ರಿಟಿಷರಿಗೆ ಮದುವೆ ಮಾಡಿ ಕೊಡುತ್ತಿದ್ದರು ಎಂದು ಸಚಿವ ರೂಪಾಲ ಹೇಳಿಕೆ ನೀಡಿದ್ದರು. ಇದು ರಜಪೂರನ್ನು ಕೆರಳಿಸುವಂತೆ ಮಾಡಿದೆ.

ಭಾನುವಾರ, ಸಮುದಾಯದ ಮುಖಂಡರು ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಮತ್ತು ರೂಪಾಲಾ ಅವರ ನಾಮಪತ್ರವನ್ನು ಹಿಂಪಡೆಯದಿದ್ದರೆ, ಏಪ್ರಿಲ್ 19 ರ ನಂತರ ಅಹಮದಾಬಾದ್‌ನಲ್ಲಿ ಮತ್ತೊಂದು ಬೃಹತ್ ಸಮಾವೇಶ ನಡೆಸುವುದಾಗಿ ಘೋಷಿಸಿದ್ದಾರೆ.

“ರೂಪಾಲಾ ಅವರ ಉಮೇದುವಾರಿಕೆಯನ್ನು ಹಿಂಪಡೆಯಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದೆ. ಈ ವಿಷಯದಲ್ಲಿ ನಾವು ದೃಢವಾಗಿ ನಿಂತಿದ್ದೇವೆ ಎಂದು ಕ್ಷತ್ರಿಯ ಸಮುದಾಯದ ಕೋರ್ ಕಮಿಟಿ ಸದಸ್ಯ ರಾಮಜುಭಾ ಜಡೇಜಾ ಸಭೆಯನ್ನು ಉದ್ದೇಶಿಸಿ ಹೇಳಿದ್ದಾರೆ.

“ಈ ಹಿಂದೆ, ಸದಸ್ಯರು ತಪ್ಪು ಮಾಡಿದಾಗ ಬಿಜೆಪಿ ನಾಯಕತ್ವ ಅಂತವರ ವಿರುದ್ಧ ಕ್ರಮ ತೆಗೆದು ಕೊಂಡಿತ್ತು. ಇದರಲ್ಲಿ ಪಕ್ಷದ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರಕರಣವೂ ಸೇರಿದೆ” ಎಂದು ಜಡೇಜಾ ನೆನಪಿಸಿದ್ದಾರೆ.

ಮಾರ್ಚ್ 22 ರಂದು ದಲಿತ ಸಮುದಾಯದ ಸಭೆಯಲ್ಲಿ ಕೇಂದ್ರ ಸಚಿವರು ಕ್ಷತ್ರಿಯರ ಕುರಿತು ನೀಡಿದ ನಂತರ ಕ್ಷತ್ರಿಯ ಸಮುದಾಯದ ಸುಮಾರು 75 ವಿವಿಧ ಗುಂಪುಗಳು ಅಥವಾ ಕುಲಗಳು ಪ್ರತಿಭಟನೆ ನಡೆಸುತ್ತಿವೆ.

ಸಮುದಾಯದ ಉನ್ನತ ನಾಯಕರನ್ನು ಒಳಗೊಂಡ ಸಮನ್ವಯ ಸಮಿತಿಯು ಬಿಜೆಪಿಯ ಕ್ಷತ್ರಿಯ ನಾಯಕರೊಂದಿಗೆ ಎರಡು ಸಭೆಗಳನ್ನು ನಡೆಸಿದೆ. ಆದರೆ, ಮಾತುಕತೆಗಳು ಬಿಕ್ಕಟ್ಟನ್ನು ಪರಿಹರಿಸುವಲ್ಲಿ ವಿಫಲವಾಗಿದೆ. ಏಕೆಂದರೆ, ರೂಪಲಾ ಅವರ ಉಮೇದುವಾರಿಗೆ ಹಿಂಪಡೆಯಲು ಬಿಜೆಪಿ ನಾಯಕರು ಒಪ್ಪಿಲ್ಲ. ಈ ನಡುವೆ ರೂಪಲಾ ಅವರು ತನ್ನ ಹೇಳಿಕೆಗೆ ಸಂಬಂಧಪಟ್ಟಂತೆ ಎರಡು ಬಾರಿ ಕ್ಷತ್ರಿಯ ಸಮುದಾಯದ ಕ್ಷಮೆ ಕೇಳಿದ್ದಾರೆ.

ಈ ಎಲ್ಲಾ ಗೊಂದಲಗಳ ನಡುವೆ ಕೇಂದ್ರ ಸಚಿವರು ಏಪ್ರಿಲ್ 16 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಮತ್ತು ರಾಜ್‌ಕೋಟ್ ನಗರದಲ್ಲಿ ರೋಡ್‌ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಘೋಷಿಸಿದೆ.

ಫೋಟೋ ಕೃಪೆ : ದಿ ಇಂಡಿಯನ್ ಎಕ್ಸ್‌ಪ್ರೆಸ್

ಇದನ್ನೂ ಓದಿ : Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...