Homeಮುಖಪುಟಗುಜರಾತ್: ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರಿಂದ ಬೃಹತ್ ಪ್ರತಿಭಟನೆ

ಗುಜರಾತ್: ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರಿಂದ ಬೃಹತ್ ಪ್ರತಿಭಟನೆ

- Advertisement -
- Advertisement -

ಬಿಜೆಪಿ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಪರ್ಷೋತ್ತಮ್ ರೂಪಲಾ ಅವರನ್ನು ಪಕ್ಷದ ಉಮೇದುವಾರಿಕೆಯಿಂದ ವಜಾ ಮಾಡುವಂತೆ ಆಗ್ರಹಿಸಿ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕ್ಷತ್ರಿಯ ಸಮುದಾಯದ ಒಂದು ಲಕ್ಷಕ್ಕೂ ಅಧಿಕ ಜನರು ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದ್ದಾರೆ.

ಸಚಿವ ರೂಪಾಲಾ ವಿರುದ್ಧ ರಾಜ್‌ಕೋಟ್‌ನಲ್ಲಿ ಕ್ಷತ್ರಿಯ ಸಮುದಾಯ ನಡೆಸಿದ ಎರಡನೇ ಬೃಹತ್ ಸಮಾವೇಶ ಇದಾಗಿದೆ.

ಕ್ಷತ್ರಿಯ ರಾಜಮನೆತನದ ಕುಟುಂಬಗಳು ಬ್ರಿಟಿಷರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದರು ಮತ್ತು ಅವರ ಹೆಣ್ಣು ಮಕ್ಕಳನ್ನು ಬ್ರಿಟಿಷರಿಗೆ ಮದುವೆ ಮಾಡಿ ಕೊಡುತ್ತಿದ್ದರು ಎಂದು ಸಚಿವ ರೂಪಾಲ ಹೇಳಿಕೆ ನೀಡಿದ್ದರು. ಇದು ರಜಪೂರನ್ನು ಕೆರಳಿಸುವಂತೆ ಮಾಡಿದೆ.

ಭಾನುವಾರ, ಸಮುದಾಯದ ಮುಖಂಡರು ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಮತ್ತು ರೂಪಾಲಾ ಅವರ ನಾಮಪತ್ರವನ್ನು ಹಿಂಪಡೆಯದಿದ್ದರೆ, ಏಪ್ರಿಲ್ 19 ರ ನಂತರ ಅಹಮದಾಬಾದ್‌ನಲ್ಲಿ ಮತ್ತೊಂದು ಬೃಹತ್ ಸಮಾವೇಶ ನಡೆಸುವುದಾಗಿ ಘೋಷಿಸಿದ್ದಾರೆ.

“ರೂಪಾಲಾ ಅವರ ಉಮೇದುವಾರಿಕೆಯನ್ನು ಹಿಂಪಡೆಯಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದೆ. ಈ ವಿಷಯದಲ್ಲಿ ನಾವು ದೃಢವಾಗಿ ನಿಂತಿದ್ದೇವೆ ಎಂದು ಕ್ಷತ್ರಿಯ ಸಮುದಾಯದ ಕೋರ್ ಕಮಿಟಿ ಸದಸ್ಯ ರಾಮಜುಭಾ ಜಡೇಜಾ ಸಭೆಯನ್ನು ಉದ್ದೇಶಿಸಿ ಹೇಳಿದ್ದಾರೆ.

“ಈ ಹಿಂದೆ, ಸದಸ್ಯರು ತಪ್ಪು ಮಾಡಿದಾಗ ಬಿಜೆಪಿ ನಾಯಕತ್ವ ಅಂತವರ ವಿರುದ್ಧ ಕ್ರಮ ತೆಗೆದು ಕೊಂಡಿತ್ತು. ಇದರಲ್ಲಿ ಪಕ್ಷದ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರಕರಣವೂ ಸೇರಿದೆ” ಎಂದು ಜಡೇಜಾ ನೆನಪಿಸಿದ್ದಾರೆ.

ಮಾರ್ಚ್ 22 ರಂದು ದಲಿತ ಸಮುದಾಯದ ಸಭೆಯಲ್ಲಿ ಕೇಂದ್ರ ಸಚಿವರು ಕ್ಷತ್ರಿಯರ ಕುರಿತು ನೀಡಿದ ನಂತರ ಕ್ಷತ್ರಿಯ ಸಮುದಾಯದ ಸುಮಾರು 75 ವಿವಿಧ ಗುಂಪುಗಳು ಅಥವಾ ಕುಲಗಳು ಪ್ರತಿಭಟನೆ ನಡೆಸುತ್ತಿವೆ.

ಸಮುದಾಯದ ಉನ್ನತ ನಾಯಕರನ್ನು ಒಳಗೊಂಡ ಸಮನ್ವಯ ಸಮಿತಿಯು ಬಿಜೆಪಿಯ ಕ್ಷತ್ರಿಯ ನಾಯಕರೊಂದಿಗೆ ಎರಡು ಸಭೆಗಳನ್ನು ನಡೆಸಿದೆ. ಆದರೆ, ಮಾತುಕತೆಗಳು ಬಿಕ್ಕಟ್ಟನ್ನು ಪರಿಹರಿಸುವಲ್ಲಿ ವಿಫಲವಾಗಿದೆ. ಏಕೆಂದರೆ, ರೂಪಲಾ ಅವರ ಉಮೇದುವಾರಿಗೆ ಹಿಂಪಡೆಯಲು ಬಿಜೆಪಿ ನಾಯಕರು ಒಪ್ಪಿಲ್ಲ. ಈ ನಡುವೆ ರೂಪಲಾ ಅವರು ತನ್ನ ಹೇಳಿಕೆಗೆ ಸಂಬಂಧಪಟ್ಟಂತೆ ಎರಡು ಬಾರಿ ಕ್ಷತ್ರಿಯ ಸಮುದಾಯದ ಕ್ಷಮೆ ಕೇಳಿದ್ದಾರೆ.

ಈ ಎಲ್ಲಾ ಗೊಂದಲಗಳ ನಡುವೆ ಕೇಂದ್ರ ಸಚಿವರು ಏಪ್ರಿಲ್ 16 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಮತ್ತು ರಾಜ್‌ಕೋಟ್ ನಗರದಲ್ಲಿ ರೋಡ್‌ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಘೋಷಿಸಿದೆ.

ಫೋಟೋ ಕೃಪೆ : ದಿ ಇಂಡಿಯನ್ ಎಕ್ಸ್‌ಪ್ರೆಸ್

ಇದನ್ನೂ ಓದಿ : Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...