Homeಮುಖಪುಟಗುಜರಾತ್: ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರಿಂದ ಬೃಹತ್ ಪ್ರತಿಭಟನೆ

ಗುಜರಾತ್: ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರಿಂದ ಬೃಹತ್ ಪ್ರತಿಭಟನೆ

- Advertisement -
- Advertisement -

ಬಿಜೆಪಿ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಪರ್ಷೋತ್ತಮ್ ರೂಪಲಾ ಅವರನ್ನು ಪಕ್ಷದ ಉಮೇದುವಾರಿಕೆಯಿಂದ ವಜಾ ಮಾಡುವಂತೆ ಆಗ್ರಹಿಸಿ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕ್ಷತ್ರಿಯ ಸಮುದಾಯದ ಒಂದು ಲಕ್ಷಕ್ಕೂ ಅಧಿಕ ಜನರು ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದ್ದಾರೆ.

ಸಚಿವ ರೂಪಾಲಾ ವಿರುದ್ಧ ರಾಜ್‌ಕೋಟ್‌ನಲ್ಲಿ ಕ್ಷತ್ರಿಯ ಸಮುದಾಯ ನಡೆಸಿದ ಎರಡನೇ ಬೃಹತ್ ಸಮಾವೇಶ ಇದಾಗಿದೆ.

ಕ್ಷತ್ರಿಯ ರಾಜಮನೆತನದ ಕುಟುಂಬಗಳು ಬ್ರಿಟಿಷರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದರು ಮತ್ತು ಅವರ ಹೆಣ್ಣು ಮಕ್ಕಳನ್ನು ಬ್ರಿಟಿಷರಿಗೆ ಮದುವೆ ಮಾಡಿ ಕೊಡುತ್ತಿದ್ದರು ಎಂದು ಸಚಿವ ರೂಪಾಲ ಹೇಳಿಕೆ ನೀಡಿದ್ದರು. ಇದು ರಜಪೂರನ್ನು ಕೆರಳಿಸುವಂತೆ ಮಾಡಿದೆ.

ಭಾನುವಾರ, ಸಮುದಾಯದ ಮುಖಂಡರು ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಮತ್ತು ರೂಪಾಲಾ ಅವರ ನಾಮಪತ್ರವನ್ನು ಹಿಂಪಡೆಯದಿದ್ದರೆ, ಏಪ್ರಿಲ್ 19 ರ ನಂತರ ಅಹಮದಾಬಾದ್‌ನಲ್ಲಿ ಮತ್ತೊಂದು ಬೃಹತ್ ಸಮಾವೇಶ ನಡೆಸುವುದಾಗಿ ಘೋಷಿಸಿದ್ದಾರೆ.

“ರೂಪಾಲಾ ಅವರ ಉಮೇದುವಾರಿಕೆಯನ್ನು ಹಿಂಪಡೆಯಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದೆ. ಈ ವಿಷಯದಲ್ಲಿ ನಾವು ದೃಢವಾಗಿ ನಿಂತಿದ್ದೇವೆ ಎಂದು ಕ್ಷತ್ರಿಯ ಸಮುದಾಯದ ಕೋರ್ ಕಮಿಟಿ ಸದಸ್ಯ ರಾಮಜುಭಾ ಜಡೇಜಾ ಸಭೆಯನ್ನು ಉದ್ದೇಶಿಸಿ ಹೇಳಿದ್ದಾರೆ.

“ಈ ಹಿಂದೆ, ಸದಸ್ಯರು ತಪ್ಪು ಮಾಡಿದಾಗ ಬಿಜೆಪಿ ನಾಯಕತ್ವ ಅಂತವರ ವಿರುದ್ಧ ಕ್ರಮ ತೆಗೆದು ಕೊಂಡಿತ್ತು. ಇದರಲ್ಲಿ ಪಕ್ಷದ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರಕರಣವೂ ಸೇರಿದೆ” ಎಂದು ಜಡೇಜಾ ನೆನಪಿಸಿದ್ದಾರೆ.

ಮಾರ್ಚ್ 22 ರಂದು ದಲಿತ ಸಮುದಾಯದ ಸಭೆಯಲ್ಲಿ ಕೇಂದ್ರ ಸಚಿವರು ಕ್ಷತ್ರಿಯರ ಕುರಿತು ನೀಡಿದ ನಂತರ ಕ್ಷತ್ರಿಯ ಸಮುದಾಯದ ಸುಮಾರು 75 ವಿವಿಧ ಗುಂಪುಗಳು ಅಥವಾ ಕುಲಗಳು ಪ್ರತಿಭಟನೆ ನಡೆಸುತ್ತಿವೆ.

ಸಮುದಾಯದ ಉನ್ನತ ನಾಯಕರನ್ನು ಒಳಗೊಂಡ ಸಮನ್ವಯ ಸಮಿತಿಯು ಬಿಜೆಪಿಯ ಕ್ಷತ್ರಿಯ ನಾಯಕರೊಂದಿಗೆ ಎರಡು ಸಭೆಗಳನ್ನು ನಡೆಸಿದೆ. ಆದರೆ, ಮಾತುಕತೆಗಳು ಬಿಕ್ಕಟ್ಟನ್ನು ಪರಿಹರಿಸುವಲ್ಲಿ ವಿಫಲವಾಗಿದೆ. ಏಕೆಂದರೆ, ರೂಪಲಾ ಅವರ ಉಮೇದುವಾರಿಗೆ ಹಿಂಪಡೆಯಲು ಬಿಜೆಪಿ ನಾಯಕರು ಒಪ್ಪಿಲ್ಲ. ಈ ನಡುವೆ ರೂಪಲಾ ಅವರು ತನ್ನ ಹೇಳಿಕೆಗೆ ಸಂಬಂಧಪಟ್ಟಂತೆ ಎರಡು ಬಾರಿ ಕ್ಷತ್ರಿಯ ಸಮುದಾಯದ ಕ್ಷಮೆ ಕೇಳಿದ್ದಾರೆ.

ಈ ಎಲ್ಲಾ ಗೊಂದಲಗಳ ನಡುವೆ ಕೇಂದ್ರ ಸಚಿವರು ಏಪ್ರಿಲ್ 16 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಮತ್ತು ರಾಜ್‌ಕೋಟ್ ನಗರದಲ್ಲಿ ರೋಡ್‌ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಘೋಷಿಸಿದೆ.

ಫೋಟೋ ಕೃಪೆ : ದಿ ಇಂಡಿಯನ್ ಎಕ್ಸ್‌ಪ್ರೆಸ್

ಇದನ್ನೂ ಓದಿ : Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...