Homeಮುಖಪುಟನರೇಗಾ ಹಗರಣ: ಗುಜರಾತ್ ಸಚಿವ ಬಚು ಖಬಾದ್ ಪುತ್ರನ ಬಂಧನ

ನರೇಗಾ ಹಗರಣ: ಗುಜರಾತ್ ಸಚಿವ ಬಚು ಖಬಾದ್ ಪುತ್ರನ ಬಂಧನ

- Advertisement -
- Advertisement -

ಗುಜರಾತ್‌ನ ದೇವಗಢ್ ಬರಿಯಾ ಮತ್ತು ಧನ್‌ಪುರ ತಾಲೂಕುಗಳಲ್ಲಿ ನಡೆದ 75 ಕೋಟಿ ರೂ.ಗಳ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ) ಹಗರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸಚಿವ ಬಚು ಖಬಾದ್ ಅವರ ಪುತ್ರ ಬಲವಂತ್‌ಸಿನ್ಹ ಖಬಾದ್ ಅವರನ್ನು ದಾಹೋದ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಚು ಖಬಾದ್ ಪಂಚಾಯತ್ ರಾಜ್ ಮತ್ತು ಕೃಷಿ ಖಾತೆ ರಾಜ್ಯ ಸಚಿವರಾಗಿದ್ದಾರೆ.

ಬಲವಂತಸಿನ್ಹ ಮತ್ತು ಅವರ ಕಿರಿಯ ಸಹೋದರ ಕಿರಣ್ ದಾಹೋದ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಹಿಂತೆಗೆದುಕೊಂಡ ಕೆಲ ದಿನಗಳ ನಂತರ ಅವರ ಬಂಧನ ಆಗಿದೆ.

ಹಗರಣದಲ್ಲಿ ಬಲವಂತಸಿನ್ಹ ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದ ನಂತರ ಅವರನ್ನು ಬಂಧಿಸಲಾಗಿದೆ ಎಂದು ದಾಹೋದ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಭಂಡಾರಿ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಪ್ರಾಥಮಿಕ ತನಿಖೆ ತನಿಖೆಯಲ್ಲಿ ನರೇಗಾ ಯೋಜನೆಗಳಿಗೆ ಸರಕುಗಳನ್ನು ಪೂರೈಸುವ ಬಲ್ವಂತ್‌ಸಿನ್ಹ ಖಬಾದ್ ಮಾಲೀಕತ್ವದ ಏಜೆನ್ಸಿಯು ಕೆಲವು ಮೊತ್ತಗಳಿಗೆ ಬಿಲ್‌ಗಳನ್ನು ನೀಡದೆ ಸಂಪೂರ್ಣ ಸರಕುಗಳ ಪಟ್ಟಿಯನ್ನು ತಲುಪಿಸಿದೆ ಎಂದು ತಿಳಿದುಬಂದಿದೆ. ತನಿಖೆ ಮುಂದುವರೆದಿದೆ ಮತ್ತು ದುರುಪಯೋಗದ ನಿಖರವಾದ ಮೊತ್ತವನ್ನು ನಾವು ಇನ್ನೂ ಖಚಿತಪಡಿಸಿಕೊಳ್ಳಬೇಕಾಗಿದೆ,” ಎಂದು ಭಂಡಾರಿ ಹೇಳಿದ್ದಾರೆ.

ಕಿರಣ್ ಅವರನ್ನು ಇನ್ನೂ ಬಂಧಿಸಲಾಗಿಲ್ಲ. ಹಗರಣದಲ್ಲಿ ಅವರ ಪಾತ್ರವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 24 ರಂದು ದಾಖಲಾಗಿರುವ ಎಫ್‌ಐಆರ್‌ನಲ್ಲಿ, ನರೇಗಾ ಯೋಜನೆಗಳಿಗೆ ಸಾಮಗ್ರಿಗಳನ್ನು ಪೂರೈಸುವ ಗುತ್ತಿಗೆಯನ್ನು ಬಿಡ್ ಗೆಲ್ಲದ ಕಂಪನಿಗಳಿಗೆ ನೀಡಲಾಗಿದೆ. ಅವರ ಬಿಲ್ ಹಣವನ್ನೂ ಪಾವತಿಸಲಾಗಿದೆ. ಅಸ್ತಿತ್ವದಲ್ಲೇ ಇಲ್ಲದ ಕೆಲ ಯೋಜನೆಗಳಿಗೆ ಬಿಲ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಗರಣವು ವಿಶೇಷವಾಗಿ ದೇವಗಢ ಬರಿಯಾದ ಕುವಾ ಗ್ರಾಮದ ಜನರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಬೆಳಕಿಗೆ ಬಂತು ಎಂದು ವರದಿಗಳು ಹೇಳಿವೆ.

ಈ ಪ್ರಕರಣ ಸಂಬಂಧ ದಾಹೋದ್ ಜಿಲ್ಲಾ ಪೊಲೀಸರು ಈ ಹಿಂದೆ ಐವರನ್ನು ಬಂಧಿಸಿದ್ದರು. ಅವರಲ್ಲಿ ನರೇಗಾ  ಶಾಖೆಯ ಇಬ್ಬರು ಲೆಕ್ಕಪರಿಶೋಧಕರಾದ ಜಯವೀರ್ ನಾಗೋರಿ ಮತ್ತು ಮಹಿಪಾಲ್‌ಸಿನ್ಹ ಚೌಹಾಣ್. ಗ್ರಾಮ ರೋಜ್‌ಗಾರ್ ಸೇವಕರಾದ ಕುಲದೀಪ್ ಬರಿಯಾ ಮತ್ತು ಮಂಗಲ್‌ಸಿನ್ಹ ಪಟೇಲಿಯಾ ಹಾಗೂ ತಾಂತ್ರಿಕ ಸಹಾಯಕ ಮನೀಶ್ ಪಟೇಲ್ ಸೇರಿದ್ದಾರೆ.

ಹಗರಣದ ತನಿಖೆಗೆ ವಿಶೇಷ ತಂಡ ರಚಿಸುವಂತೆ ಕಾಂಗ್ರೆಸ್ ನಾಯಕ ಅಮಿತ್ ಚಾವ್ಡಾ ಅವರು ಒತ್ತಾಯಿಸಿದ್ದಾರೆ. 30 ವರ್ಷಗಳ ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವು ಮೊದಲ ಆದ್ಯತೆಯಾಗಿದೆ. ದಾಹೋದ್‌ನಲ್ಲಿ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಪದೇ ಪದೇ ದೂರುಗಳು ಬಂದರೂ ಸರ್ಕಾರ ಕ್ರಮ ಕೈಗೊಂಡಿರಲಿಲ್ಲ. ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿಲ್ಲ. ಆದರೂ, ಬಿಲ್ ಪಾಸ್ ಮಾಡಲಾಗಿದೆ. ಕಾಂಗ್ರೆಸ್ ಈ ವಿಷಯವನ್ನು ಲಿಖಿತವಾಗಿ ಮತ್ತು ಮೌಖಿಕವಾಗಿ ಹಾಗೂ ವಿಧಾನಸಭೆಯಲ್ಲಿ ಪ್ರಶ್ನೆಗಳ ಮೂಲಕ ಪದೇ ಪದೇ ಪ್ರಶ್ನಿಸಿದೆ ಎಂದು ಚಾವ್ಡಾ ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...