Homeಮುಖಪುಟನರೇಗಾ ಹಗರಣ: ಗುಜರಾತ್ ಸಚಿವ ಬಚು ಖಬಾದ್ ಪುತ್ರನ ಬಂಧನ

ನರೇಗಾ ಹಗರಣ: ಗುಜರಾತ್ ಸಚಿವ ಬಚು ಖಬಾದ್ ಪುತ್ರನ ಬಂಧನ

- Advertisement -
- Advertisement -

ಗುಜರಾತ್‌ನ ದೇವಗಢ್ ಬರಿಯಾ ಮತ್ತು ಧನ್‌ಪುರ ತಾಲೂಕುಗಳಲ್ಲಿ ನಡೆದ 75 ಕೋಟಿ ರೂ.ಗಳ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ) ಹಗರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸಚಿವ ಬಚು ಖಬಾದ್ ಅವರ ಪುತ್ರ ಬಲವಂತ್‌ಸಿನ್ಹ ಖಬಾದ್ ಅವರನ್ನು ದಾಹೋದ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಚು ಖಬಾದ್ ಪಂಚಾಯತ್ ರಾಜ್ ಮತ್ತು ಕೃಷಿ ಖಾತೆ ರಾಜ್ಯ ಸಚಿವರಾಗಿದ್ದಾರೆ.

ಬಲವಂತಸಿನ್ಹ ಮತ್ತು ಅವರ ಕಿರಿಯ ಸಹೋದರ ಕಿರಣ್ ದಾಹೋದ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಹಿಂತೆಗೆದುಕೊಂಡ ಕೆಲ ದಿನಗಳ ನಂತರ ಅವರ ಬಂಧನ ಆಗಿದೆ.

ಹಗರಣದಲ್ಲಿ ಬಲವಂತಸಿನ್ಹ ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದ ನಂತರ ಅವರನ್ನು ಬಂಧಿಸಲಾಗಿದೆ ಎಂದು ದಾಹೋದ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಭಂಡಾರಿ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಪ್ರಾಥಮಿಕ ತನಿಖೆ ತನಿಖೆಯಲ್ಲಿ ನರೇಗಾ ಯೋಜನೆಗಳಿಗೆ ಸರಕುಗಳನ್ನು ಪೂರೈಸುವ ಬಲ್ವಂತ್‌ಸಿನ್ಹ ಖಬಾದ್ ಮಾಲೀಕತ್ವದ ಏಜೆನ್ಸಿಯು ಕೆಲವು ಮೊತ್ತಗಳಿಗೆ ಬಿಲ್‌ಗಳನ್ನು ನೀಡದೆ ಸಂಪೂರ್ಣ ಸರಕುಗಳ ಪಟ್ಟಿಯನ್ನು ತಲುಪಿಸಿದೆ ಎಂದು ತಿಳಿದುಬಂದಿದೆ. ತನಿಖೆ ಮುಂದುವರೆದಿದೆ ಮತ್ತು ದುರುಪಯೋಗದ ನಿಖರವಾದ ಮೊತ್ತವನ್ನು ನಾವು ಇನ್ನೂ ಖಚಿತಪಡಿಸಿಕೊಳ್ಳಬೇಕಾಗಿದೆ,” ಎಂದು ಭಂಡಾರಿ ಹೇಳಿದ್ದಾರೆ.

ಕಿರಣ್ ಅವರನ್ನು ಇನ್ನೂ ಬಂಧಿಸಲಾಗಿಲ್ಲ. ಹಗರಣದಲ್ಲಿ ಅವರ ಪಾತ್ರವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 24 ರಂದು ದಾಖಲಾಗಿರುವ ಎಫ್‌ಐಆರ್‌ನಲ್ಲಿ, ನರೇಗಾ ಯೋಜನೆಗಳಿಗೆ ಸಾಮಗ್ರಿಗಳನ್ನು ಪೂರೈಸುವ ಗುತ್ತಿಗೆಯನ್ನು ಬಿಡ್ ಗೆಲ್ಲದ ಕಂಪನಿಗಳಿಗೆ ನೀಡಲಾಗಿದೆ. ಅವರ ಬಿಲ್ ಹಣವನ್ನೂ ಪಾವತಿಸಲಾಗಿದೆ. ಅಸ್ತಿತ್ವದಲ್ಲೇ ಇಲ್ಲದ ಕೆಲ ಯೋಜನೆಗಳಿಗೆ ಬಿಲ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಗರಣವು ವಿಶೇಷವಾಗಿ ದೇವಗಢ ಬರಿಯಾದ ಕುವಾ ಗ್ರಾಮದ ಜನರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಬೆಳಕಿಗೆ ಬಂತು ಎಂದು ವರದಿಗಳು ಹೇಳಿವೆ.

ಈ ಪ್ರಕರಣ ಸಂಬಂಧ ದಾಹೋದ್ ಜಿಲ್ಲಾ ಪೊಲೀಸರು ಈ ಹಿಂದೆ ಐವರನ್ನು ಬಂಧಿಸಿದ್ದರು. ಅವರಲ್ಲಿ ನರೇಗಾ  ಶಾಖೆಯ ಇಬ್ಬರು ಲೆಕ್ಕಪರಿಶೋಧಕರಾದ ಜಯವೀರ್ ನಾಗೋರಿ ಮತ್ತು ಮಹಿಪಾಲ್‌ಸಿನ್ಹ ಚೌಹಾಣ್. ಗ್ರಾಮ ರೋಜ್‌ಗಾರ್ ಸೇವಕರಾದ ಕುಲದೀಪ್ ಬರಿಯಾ ಮತ್ತು ಮಂಗಲ್‌ಸಿನ್ಹ ಪಟೇಲಿಯಾ ಹಾಗೂ ತಾಂತ್ರಿಕ ಸಹಾಯಕ ಮನೀಶ್ ಪಟೇಲ್ ಸೇರಿದ್ದಾರೆ.

ಹಗರಣದ ತನಿಖೆಗೆ ವಿಶೇಷ ತಂಡ ರಚಿಸುವಂತೆ ಕಾಂಗ್ರೆಸ್ ನಾಯಕ ಅಮಿತ್ ಚಾವ್ಡಾ ಅವರು ಒತ್ತಾಯಿಸಿದ್ದಾರೆ. 30 ವರ್ಷಗಳ ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವು ಮೊದಲ ಆದ್ಯತೆಯಾಗಿದೆ. ದಾಹೋದ್‌ನಲ್ಲಿ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಪದೇ ಪದೇ ದೂರುಗಳು ಬಂದರೂ ಸರ್ಕಾರ ಕ್ರಮ ಕೈಗೊಂಡಿರಲಿಲ್ಲ. ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿಲ್ಲ. ಆದರೂ, ಬಿಲ್ ಪಾಸ್ ಮಾಡಲಾಗಿದೆ. ಕಾಂಗ್ರೆಸ್ ಈ ವಿಷಯವನ್ನು ಲಿಖಿತವಾಗಿ ಮತ್ತು ಮೌಖಿಕವಾಗಿ ಹಾಗೂ ವಿಧಾನಸಭೆಯಲ್ಲಿ ಪ್ರಶ್ನೆಗಳ ಮೂಲಕ ಪದೇ ಪದೇ ಪ್ರಶ್ನಿಸಿದೆ ಎಂದು ಚಾವ್ಡಾ ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...