Homeಮುಖಪುಟಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿಗೆ ಅಸ್ಸಾಂನ ಸ್ಥಳೀಯ ನ್ಯಾಯಾಲಯ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಪ್ರಧಾನಿ ಮೋದಿಯವರನ್ನು ಟೀಕಿಸಿದ ಟ್ವೀಟ್‌ಗೆ ಸಂಬಂಧಿಸಿದಂತೆ ಬಂಧನಕ್ಕೊಳಕ್ಕಾಗಿದ್ದ ಮೇವಾನಿಯವರು ಸೋಮವಾರ ಜಾಮೀನು ಪಡೆದ ಬೆನ್ನಲ್ಲೇ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿದ ಆಧಾರದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದರು.

“ಇದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಪಿತೂರಿ. ನನ್ನ ಪ್ರತಿಷ್ಟೆ ಹಾಳು ಮಾಡಲು ಸುಳ್ಳು ಪ್ರಕರಣ ಹೂಡಲಾಗಿದೆ. ಇದನ್ನು ವ್ಯವಸ್ಥಿತವಾಗಿ ಮಾಡುತ್ತಾ ಬಂದಿದ್ದಾರೆ. ಅವರು ಅದನ್ನು ರೋಹಿತ್ ವೇಮುಲಾಗೆ ಮತ್ತು ಚಂದ್ರಶೇಖರ್ ಆಜಾದ್‌ಗೆ ಮಾಡಿದರು. ಈಗ ಅವರು ನನ್ನನ್ನು ಗುರಿಯಾಗಿಸುತ್ತಿದ್ದಾರೆ” ಎಂದು ಸೋಮವಾರ ಜಾಮೀನು ದೊರೆತಾದ ಜಿಗ್ನೇಶ್ ಮೇವಾನಿ ಪ್ರತಿಕ್ರಿಯಿಸಿದ್ದರು.

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮೇವಾನಿ ವಿರುದ್ಧ ಎರಡನೇ ಪ್ರಕರಣವನ್ನು ಏಪ್ರಿಲ್ 21ರಂದು ದಾಖಲಿಸಲಾಗಿತ್ತು. ನ್ಯಾಯಾಲಯ ಐದು ದಿನಗಳ ನ್ಯಾಯಂಗ ಬಂಧಿನಕ್ಕೆ ಒಪ್ಪಿಸಿತ್ತು. ಇಂದು ಜಾಮೀನು ಮಂಜೂರು ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 353 (ಸಾರ್ವಜನಿಕ ಸೇವೆಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲು ಹಲ್ಲೆ), 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಫೋರ್ಸ್ ಬಳಸುವುದು) ‌ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ದೂರುದಾರ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳು ಏಪ್ರಿಲ್ 21ರಂದು ಮಧ್ಯಾಹ್ನ ಮೇವಾನಿ ಅವರನ್ನು ಸರ್ಕಾರಿ ವಾಹನದಲ್ಲಿ ಕರೆತರುತ್ತಿದ್ದರು. ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಬರಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. “ಅನುಚಿತವಾಗಿ ವರ್ತಿಸಿರುವ ಮೇವಾನಿ ನಮ್ಮ ಮೇಲೆ ಕೋಪಗೊಂಡರು. ಹೆಚ್ಚು ಕೆಟ್ಟ ಪದಗಳನ್ನು ಬಳಸಿದರು” ಎಂದು ಅಧಿಕಾರಿ ಆರೋಪಿಸಿದ್ದರು.

ಇದನ್ನೂ ಓದಿ: 5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

ಮೇವಾನಿ ನನ್ನ ಕಡೆಗೆ ಬೆರಳು ತೋರಿಸಿ ಬಲವಂತವಾಗಿ ಸೀಟ್‌ ಮೇಲೆ ತಳ್ಳಿದರು. “ನನ್ನ ಕಾನೂನು ಕರ್ತವ್ಯವನ್ನು ನಿರ್ವಹಿಸುವ ಸಮಯದಲ್ಲಿ ಆಕ್ರಮಣ ಮಾಡಲಾಗಿದೆ. ತಳ್ಳುವಾಗ ಅನುಚಿತವಾಗಿ ನನ್ನನ್ನು ಸ್ಪರ್ಶಿಸಿದ್ದಾರೆ” ಎಂದು ದೂರಿದ್ದಾರೆ.

ಇದರ ನಡುವೆ ಮೇವಾನಿ ಅವರ ವಕೀಲ ಅಂಗ್‌ಶುಮನ್ ಬೋರಾ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು ಸಂಪೂರ್ಣವಾಗಿ ಸುಳ್ಳು ಮತ್ತು ಕಟ್ಟುಕಥೆಯ ಪ್ರಕರಣ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...