Homeಚಳವಳಿಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

- Advertisement -
- Advertisement -

ಚಂದಯಾನ-2 ಅಭಿಯಾನದ ಯಶಸ್ವಿ ಉಡ್ಡಯನವನ್ನು ಉಲ್ಲೇಖಿಸಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ಆದು ಬಾಹ್ಯಾಕಾಶದಲ್ಲಿ ತಂತ್ರಜ್ಞಾನವನ್ನು ತೋರಿಸುತ್ತದೆಯಾದರೂ, ಚರಂಡಿಗಳು ಮತ್ತು ಕಕ್ಕಸು ಗುಂಡಿಗಳನ್ನು ಸ್ವಚ್ಛ ಮಾಡುವಾಗ ಸಾಯುತ್ತಿರುವ ಕಾರ್ಮಿಕರ ಜೀವ ಉಳಿಸಬಲ್ಲ ಯಾವುದೇ ತಂತ್ರಜ್ಞಾನ ಏಕಿಲ್ಲ ಎಂದು ಟೀಕಿಸಿದ್ದಾರೆ.

ಮುಂದಿನ ಸ್ವಾತಂತ್ರ್ಯೋತ್ಸವಕ್ಕೆ ಮೊದಲು ಯಾವುದೇ ಒಂದು ಗ್ರಾಮವನ್ನು ‘ಅಸ್ಪೃಶ್ಯತೆ ಮುಕ್ತ ಗ್ರಾಮ”ವೆಂದು ಘೋಷಿಸಿ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಸವಾಲು ಹಾಕಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡುತ್ತಾ, ಬಿಜೆಪಿ ಸರಕಾರದ ಮೇಲೆ ಕಟುಟೀಕೆಗಳ ಮಳೆಯನ್ನೇ ಸುರಿಸಿದ ಮೇವಾನಿ, ಗುಜರಾತಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಪ್ರಶ್ನೆಯನ್ನು ಬಲವಾಗಿ ಮಂಡಿಸಿದರು.

ದಲಿತರಿಗೆ ಸಾರ್ವಜನಿಕ ಬಾವಿಗಳಿಂದ ನೀರೆತ್ತಲು ಬಿಡದಿರುವಂತಹ ಅಸ್ಪೃಶ್ಯತೆ ಮತ್ತು ದೌರ್ಜನ್ಯ ನಡೆಯುತ್ತಿರುವ ಗ್ರಾಮಗಳಿಗೆ ಸರಕಾರ ಭೇಟಿ ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು.

“ಸರಕಾರವು ನಾಗರಿಕ ಹಕ್ಕುಗಳ ರಕ್ಷಣಾ ಕಾಯಿದೆಯಡಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕಾಗಿತ್ತು. ದುಃಖದ ವಿಷಯವೆಂದರೆ, ಯಾವುದೇ ದೂರನ್ನು ಕೂಡಾ ದಾಖಲಿಸಲಾಗುತ್ತಿಲ್ಲ” ಎಂದು ಅವರು ಹೇಳಿದರು.

ಬನಸ್ಕಾಂತ ಜಿಲ್ಲೆಯ ವಡ್ಗಾಂವ್ ಶಾಸಕರಾಗಿರುವ ಮೇವಾನಿ, ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಇಲಾಖೆಯ ಬಜೆಟ್ ಅನುದಾನ ಬೇಡಿಕೆ ಕುರಿತು ತಾನು ಮಂಡಿಸಿದ ನಿಲುವಳಿ ಸೂಚನೆಯ ಮೇಲೆ ಮಾತನಾಡುತ್ತಿದ್ದರು.

“ಯಾವುದೇ ದೌರ್ಜನ್ಯದ ಪ್ರಕರಣ ನಡೆದಾಗ ಮಾಧ್ಯಮಗಳು ‘ನೀವು ಯಾವಾಗ ಅಲ್ಲಿಗೆ ಹೋಗುತ್ತೀರಿ’ ಎಂದು ನನ್ನನ್ನು ಕೇಳುತ್ತಾರೆ. ಈಗ ‘ಸರ್ವಮಿತ್ರ’ ಎಂದು ಕರೆಯಲ್ಪಡುತ್ತಿರುವ ವಿಜಯ್ ರೂಪಾನಿಯವರಿಗೆ ನನ್ನ ವಿನಮ್ರ ವಿನಂತಿ ಎಂದರೆ, ನೀವು ದಲಿತಮಿತ್ರರಾಗಿ, ಅಂತಹ ಸ್ಥಳಗಳಿಗೆ ಭೇಟಿ ನೀಡಿ ಎಂಬುದಾಗಿದೆ ” ಎಂದು ಮೇವಾನಿ ಹೇಳಿದರು.

“ಆಗಸ್ಟ್ 15ಕ್ಕೆ ಮೊದಲು ಯಾವುದಾದರೂ ಒಂದು ಹಳ್ಳಿಯನ್ನು  ಅವರು ಅಸ್ಪೃಶ್ಯತೆ ರಹಿತ ಹಳ್ಳಿ ಎಂದು ಘೋಷಣೆ ಮಾಡಬೇಕು ಎಂಬುದು ನನ್ನ ಬೇಡಿಕೆ” ಎಂದು ಅವರು ಹೇಳಿದರು. ಬಜೆಟ್ ಬೇಡಿಕೆಗಳ ಮೇಲೆ ಮಾತನಾಡಿದ ಅವರು, “ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಇಲಾಖೆಗಳನ್ನು ದಲಿತರು ಮತ್ತು ಬುಡಕಟ್ಟು ಜನರನ್ನು ಅರ್ಥಿಕವಾಗಿ ಮೇಲೆತ್ತಲೆಂದು ರೂಪಿಸಲಾಗಿಲ್ಲ. ಈ ಇಲಾಖೆಯ ಉದ್ದೇಶ ರಾಜ್ಯದಲ್ಲಿ ಇನ್ನೂ ಚಾಲ್ತಿಯಲ್ಲಿರುವ  ತಾರತಮ್ಯ ಮತ್ತು ಅಸ್ಪೃಶ್ಯತೆಯಂತಹ ಸಾಮಾಜಿಕ ಪಿಡುಗುಗಳ ನಿವಾರಣೆಯನ್ನು ಖಾತರಿಪಡಿಸುವುದಾಗಿದೆ. ಆದರೂ ಅದಕ್ಕಾಗಿ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಲಾಗಿಲ್ಲ” ಎಂದು ಸರಕಾರವನ್ನು ಟೀಕಿಸಿದರು.

“ನಾವು ಚಂದ್ರಯಾನ-2ರ ಉಡ್ಡಯನವನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಆದೇ ಹೊತ್ತಿಗೆ, ಸ್ವಚ್ಛತಾ ಕಾರ್ಮಿಕರು ಚರಂಡಿಗಳ ಒಳಗೆ ಪ್ರವೇಶಿಸಿ, ಅಲ್ಲಿ ಸಾಯುವುದನ್ನು ತಪ್ಪಿಸುವ ತಂತ್ರಜ್ಞಾನ ಮಾತ್ರ ನಮ್ಮಲ್ಲಿಲ್ಲ” ಎಂದು ಮೇವಾನಿ ವಿಷಾದಿಸಿದರು.

ಸ್ವಚ್ಛತಾ ಕಾರ್ಮಿಕರ ಸಾವುಗಳನ್ನು ತಪ್ಪಿಸಲು ಸರಕಾರಕ್ಕೆ ಒಂದು ರೋಬೋಟ್ ಉಡುಗೊರೆ ನೀಡುವ ಪ್ರಸ್ತಾಪವನ್ನು ಅವರು ಮುಂದಿಟ್ಟರು.

“ಇದು ಸರಕಾರಕ್ಕೆ ನನ್ನ ಕೊಡುಗೆ. ಕೇರಳದಲ್ಲಿ ನಿರ್ಮಿಸಲಾಗಿರುವ 11 ಲಕ್ಷ ರೂ. ಬೆಲೆಯ ರೋಬೋಟ್ ಒಂದನ್ನು ನಾನು ನೀಡುತ್ತೇನೆ. ನಾವು ಅದನ್ನು ಬಳಸಿದರೆ ಕಾರ್ಮಿಕರು ಮ್ಯಾನ್‌ಹೋಲ್ ಒಳಗೆ ಪ್ರವೇಶಿಸಬೇಕಾಗಿಲ್ಲ  ನಾನು ಸಿದ್ಧನಿದ್ದೇನೆ. ಆದರೆ, ಅದನ್ನು ಬಳಸುವುದಾಗಿ ಲಿಖಿತವಾಗಿ ಭರವಸೆ ಕೊಡುತ್ತೀರಾ?” ಎಂದು ಮೇವಾನಿ ಪ್ರಶ್ನಿಸಿದರು.

ದಲಿತರು ಪ್ರತ್ಯೇಕ ಸ್ಮಶಾನಗಳನ್ನು ಬಳಸುವಂತೆ ಮಾಡಲಾಗುತ್ತಿದ್ದು, ಸರಕಾರ ಎಲ್ಲಾ ಜಾತಿಗಳ ಜನರು ಒಂದೇ ಸಮಾನ ಸ್ಮಶಾನ ಬಳಸುವುದನ್ನು ಕಡ್ಡಾಯ ಮಾಡುವ ಧೋರಣೆಯನ್ನು ಜಾರಿಗೊಳಿಸಲು ಸರಕಾರವನ್ನು ಅವರು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...