Homeಚಳವಳಿಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

- Advertisement -
- Advertisement -

ಚಂದಯಾನ-2 ಅಭಿಯಾನದ ಯಶಸ್ವಿ ಉಡ್ಡಯನವನ್ನು ಉಲ್ಲೇಖಿಸಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ಆದು ಬಾಹ್ಯಾಕಾಶದಲ್ಲಿ ತಂತ್ರಜ್ಞಾನವನ್ನು ತೋರಿಸುತ್ತದೆಯಾದರೂ, ಚರಂಡಿಗಳು ಮತ್ತು ಕಕ್ಕಸು ಗುಂಡಿಗಳನ್ನು ಸ್ವಚ್ಛ ಮಾಡುವಾಗ ಸಾಯುತ್ತಿರುವ ಕಾರ್ಮಿಕರ ಜೀವ ಉಳಿಸಬಲ್ಲ ಯಾವುದೇ ತಂತ್ರಜ್ಞಾನ ಏಕಿಲ್ಲ ಎಂದು ಟೀಕಿಸಿದ್ದಾರೆ.

ಮುಂದಿನ ಸ್ವಾತಂತ್ರ್ಯೋತ್ಸವಕ್ಕೆ ಮೊದಲು ಯಾವುದೇ ಒಂದು ಗ್ರಾಮವನ್ನು ‘ಅಸ್ಪೃಶ್ಯತೆ ಮುಕ್ತ ಗ್ರಾಮ”ವೆಂದು ಘೋಷಿಸಿ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಸವಾಲು ಹಾಕಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡುತ್ತಾ, ಬಿಜೆಪಿ ಸರಕಾರದ ಮೇಲೆ ಕಟುಟೀಕೆಗಳ ಮಳೆಯನ್ನೇ ಸುರಿಸಿದ ಮೇವಾನಿ, ಗುಜರಾತಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಪ್ರಶ್ನೆಯನ್ನು ಬಲವಾಗಿ ಮಂಡಿಸಿದರು.

ದಲಿತರಿಗೆ ಸಾರ್ವಜನಿಕ ಬಾವಿಗಳಿಂದ ನೀರೆತ್ತಲು ಬಿಡದಿರುವಂತಹ ಅಸ್ಪೃಶ್ಯತೆ ಮತ್ತು ದೌರ್ಜನ್ಯ ನಡೆಯುತ್ತಿರುವ ಗ್ರಾಮಗಳಿಗೆ ಸರಕಾರ ಭೇಟಿ ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು.

“ಸರಕಾರವು ನಾಗರಿಕ ಹಕ್ಕುಗಳ ರಕ್ಷಣಾ ಕಾಯಿದೆಯಡಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕಾಗಿತ್ತು. ದುಃಖದ ವಿಷಯವೆಂದರೆ, ಯಾವುದೇ ದೂರನ್ನು ಕೂಡಾ ದಾಖಲಿಸಲಾಗುತ್ತಿಲ್ಲ” ಎಂದು ಅವರು ಹೇಳಿದರು.

ಬನಸ್ಕಾಂತ ಜಿಲ್ಲೆಯ ವಡ್ಗಾಂವ್ ಶಾಸಕರಾಗಿರುವ ಮೇವಾನಿ, ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಇಲಾಖೆಯ ಬಜೆಟ್ ಅನುದಾನ ಬೇಡಿಕೆ ಕುರಿತು ತಾನು ಮಂಡಿಸಿದ ನಿಲುವಳಿ ಸೂಚನೆಯ ಮೇಲೆ ಮಾತನಾಡುತ್ತಿದ್ದರು.

“ಯಾವುದೇ ದೌರ್ಜನ್ಯದ ಪ್ರಕರಣ ನಡೆದಾಗ ಮಾಧ್ಯಮಗಳು ‘ನೀವು ಯಾವಾಗ ಅಲ್ಲಿಗೆ ಹೋಗುತ್ತೀರಿ’ ಎಂದು ನನ್ನನ್ನು ಕೇಳುತ್ತಾರೆ. ಈಗ ‘ಸರ್ವಮಿತ್ರ’ ಎಂದು ಕರೆಯಲ್ಪಡುತ್ತಿರುವ ವಿಜಯ್ ರೂಪಾನಿಯವರಿಗೆ ನನ್ನ ವಿನಮ್ರ ವಿನಂತಿ ಎಂದರೆ, ನೀವು ದಲಿತಮಿತ್ರರಾಗಿ, ಅಂತಹ ಸ್ಥಳಗಳಿಗೆ ಭೇಟಿ ನೀಡಿ ಎಂಬುದಾಗಿದೆ ” ಎಂದು ಮೇವಾನಿ ಹೇಳಿದರು.

“ಆಗಸ್ಟ್ 15ಕ್ಕೆ ಮೊದಲು ಯಾವುದಾದರೂ ಒಂದು ಹಳ್ಳಿಯನ್ನು  ಅವರು ಅಸ್ಪೃಶ್ಯತೆ ರಹಿತ ಹಳ್ಳಿ ಎಂದು ಘೋಷಣೆ ಮಾಡಬೇಕು ಎಂಬುದು ನನ್ನ ಬೇಡಿಕೆ” ಎಂದು ಅವರು ಹೇಳಿದರು. ಬಜೆಟ್ ಬೇಡಿಕೆಗಳ ಮೇಲೆ ಮಾತನಾಡಿದ ಅವರು, “ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಇಲಾಖೆಗಳನ್ನು ದಲಿತರು ಮತ್ತು ಬುಡಕಟ್ಟು ಜನರನ್ನು ಅರ್ಥಿಕವಾಗಿ ಮೇಲೆತ್ತಲೆಂದು ರೂಪಿಸಲಾಗಿಲ್ಲ. ಈ ಇಲಾಖೆಯ ಉದ್ದೇಶ ರಾಜ್ಯದಲ್ಲಿ ಇನ್ನೂ ಚಾಲ್ತಿಯಲ್ಲಿರುವ  ತಾರತಮ್ಯ ಮತ್ತು ಅಸ್ಪೃಶ್ಯತೆಯಂತಹ ಸಾಮಾಜಿಕ ಪಿಡುಗುಗಳ ನಿವಾರಣೆಯನ್ನು ಖಾತರಿಪಡಿಸುವುದಾಗಿದೆ. ಆದರೂ ಅದಕ್ಕಾಗಿ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಲಾಗಿಲ್ಲ” ಎಂದು ಸರಕಾರವನ್ನು ಟೀಕಿಸಿದರು.

“ನಾವು ಚಂದ್ರಯಾನ-2ರ ಉಡ್ಡಯನವನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಆದೇ ಹೊತ್ತಿಗೆ, ಸ್ವಚ್ಛತಾ ಕಾರ್ಮಿಕರು ಚರಂಡಿಗಳ ಒಳಗೆ ಪ್ರವೇಶಿಸಿ, ಅಲ್ಲಿ ಸಾಯುವುದನ್ನು ತಪ್ಪಿಸುವ ತಂತ್ರಜ್ಞಾನ ಮಾತ್ರ ನಮ್ಮಲ್ಲಿಲ್ಲ” ಎಂದು ಮೇವಾನಿ ವಿಷಾದಿಸಿದರು.

ಸ್ವಚ್ಛತಾ ಕಾರ್ಮಿಕರ ಸಾವುಗಳನ್ನು ತಪ್ಪಿಸಲು ಸರಕಾರಕ್ಕೆ ಒಂದು ರೋಬೋಟ್ ಉಡುಗೊರೆ ನೀಡುವ ಪ್ರಸ್ತಾಪವನ್ನು ಅವರು ಮುಂದಿಟ್ಟರು.

“ಇದು ಸರಕಾರಕ್ಕೆ ನನ್ನ ಕೊಡುಗೆ. ಕೇರಳದಲ್ಲಿ ನಿರ್ಮಿಸಲಾಗಿರುವ 11 ಲಕ್ಷ ರೂ. ಬೆಲೆಯ ರೋಬೋಟ್ ಒಂದನ್ನು ನಾನು ನೀಡುತ್ತೇನೆ. ನಾವು ಅದನ್ನು ಬಳಸಿದರೆ ಕಾರ್ಮಿಕರು ಮ್ಯಾನ್‌ಹೋಲ್ ಒಳಗೆ ಪ್ರವೇಶಿಸಬೇಕಾಗಿಲ್ಲ  ನಾನು ಸಿದ್ಧನಿದ್ದೇನೆ. ಆದರೆ, ಅದನ್ನು ಬಳಸುವುದಾಗಿ ಲಿಖಿತವಾಗಿ ಭರವಸೆ ಕೊಡುತ್ತೀರಾ?” ಎಂದು ಮೇವಾನಿ ಪ್ರಶ್ನಿಸಿದರು.

ದಲಿತರು ಪ್ರತ್ಯೇಕ ಸ್ಮಶಾನಗಳನ್ನು ಬಳಸುವಂತೆ ಮಾಡಲಾಗುತ್ತಿದ್ದು, ಸರಕಾರ ಎಲ್ಲಾ ಜಾತಿಗಳ ಜನರು ಒಂದೇ ಸಮಾನ ಸ್ಮಶಾನ ಬಳಸುವುದನ್ನು ಕಡ್ಡಾಯ ಮಾಡುವ ಧೋರಣೆಯನ್ನು ಜಾರಿಗೊಳಿಸಲು ಸರಕಾರವನ್ನು ಅವರು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...