Homeಚಳವಳಿಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

- Advertisement -
- Advertisement -

ಚಂದಯಾನ-2 ಅಭಿಯಾನದ ಯಶಸ್ವಿ ಉಡ್ಡಯನವನ್ನು ಉಲ್ಲೇಖಿಸಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ಆದು ಬಾಹ್ಯಾಕಾಶದಲ್ಲಿ ತಂತ್ರಜ್ಞಾನವನ್ನು ತೋರಿಸುತ್ತದೆಯಾದರೂ, ಚರಂಡಿಗಳು ಮತ್ತು ಕಕ್ಕಸು ಗುಂಡಿಗಳನ್ನು ಸ್ವಚ್ಛ ಮಾಡುವಾಗ ಸಾಯುತ್ತಿರುವ ಕಾರ್ಮಿಕರ ಜೀವ ಉಳಿಸಬಲ್ಲ ಯಾವುದೇ ತಂತ್ರಜ್ಞಾನ ಏಕಿಲ್ಲ ಎಂದು ಟೀಕಿಸಿದ್ದಾರೆ.

ಮುಂದಿನ ಸ್ವಾತಂತ್ರ್ಯೋತ್ಸವಕ್ಕೆ ಮೊದಲು ಯಾವುದೇ ಒಂದು ಗ್ರಾಮವನ್ನು ‘ಅಸ್ಪೃಶ್ಯತೆ ಮುಕ್ತ ಗ್ರಾಮ”ವೆಂದು ಘೋಷಿಸಿ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಸವಾಲು ಹಾಕಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡುತ್ತಾ, ಬಿಜೆಪಿ ಸರಕಾರದ ಮೇಲೆ ಕಟುಟೀಕೆಗಳ ಮಳೆಯನ್ನೇ ಸುರಿಸಿದ ಮೇವಾನಿ, ಗುಜರಾತಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಪ್ರಶ್ನೆಯನ್ನು ಬಲವಾಗಿ ಮಂಡಿಸಿದರು.

ದಲಿತರಿಗೆ ಸಾರ್ವಜನಿಕ ಬಾವಿಗಳಿಂದ ನೀರೆತ್ತಲು ಬಿಡದಿರುವಂತಹ ಅಸ್ಪೃಶ್ಯತೆ ಮತ್ತು ದೌರ್ಜನ್ಯ ನಡೆಯುತ್ತಿರುವ ಗ್ರಾಮಗಳಿಗೆ ಸರಕಾರ ಭೇಟಿ ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು.

“ಸರಕಾರವು ನಾಗರಿಕ ಹಕ್ಕುಗಳ ರಕ್ಷಣಾ ಕಾಯಿದೆಯಡಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕಾಗಿತ್ತು. ದುಃಖದ ವಿಷಯವೆಂದರೆ, ಯಾವುದೇ ದೂರನ್ನು ಕೂಡಾ ದಾಖಲಿಸಲಾಗುತ್ತಿಲ್ಲ” ಎಂದು ಅವರು ಹೇಳಿದರು.

ಬನಸ್ಕಾಂತ ಜಿಲ್ಲೆಯ ವಡ್ಗಾಂವ್ ಶಾಸಕರಾಗಿರುವ ಮೇವಾನಿ, ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಇಲಾಖೆಯ ಬಜೆಟ್ ಅನುದಾನ ಬೇಡಿಕೆ ಕುರಿತು ತಾನು ಮಂಡಿಸಿದ ನಿಲುವಳಿ ಸೂಚನೆಯ ಮೇಲೆ ಮಾತನಾಡುತ್ತಿದ್ದರು.

“ಯಾವುದೇ ದೌರ್ಜನ್ಯದ ಪ್ರಕರಣ ನಡೆದಾಗ ಮಾಧ್ಯಮಗಳು ‘ನೀವು ಯಾವಾಗ ಅಲ್ಲಿಗೆ ಹೋಗುತ್ತೀರಿ’ ಎಂದು ನನ್ನನ್ನು ಕೇಳುತ್ತಾರೆ. ಈಗ ‘ಸರ್ವಮಿತ್ರ’ ಎಂದು ಕರೆಯಲ್ಪಡುತ್ತಿರುವ ವಿಜಯ್ ರೂಪಾನಿಯವರಿಗೆ ನನ್ನ ವಿನಮ್ರ ವಿನಂತಿ ಎಂದರೆ, ನೀವು ದಲಿತಮಿತ್ರರಾಗಿ, ಅಂತಹ ಸ್ಥಳಗಳಿಗೆ ಭೇಟಿ ನೀಡಿ ಎಂಬುದಾಗಿದೆ ” ಎಂದು ಮೇವಾನಿ ಹೇಳಿದರು.

“ಆಗಸ್ಟ್ 15ಕ್ಕೆ ಮೊದಲು ಯಾವುದಾದರೂ ಒಂದು ಹಳ್ಳಿಯನ್ನು  ಅವರು ಅಸ್ಪೃಶ್ಯತೆ ರಹಿತ ಹಳ್ಳಿ ಎಂದು ಘೋಷಣೆ ಮಾಡಬೇಕು ಎಂಬುದು ನನ್ನ ಬೇಡಿಕೆ” ಎಂದು ಅವರು ಹೇಳಿದರು. ಬಜೆಟ್ ಬೇಡಿಕೆಗಳ ಮೇಲೆ ಮಾತನಾಡಿದ ಅವರು, “ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಇಲಾಖೆಗಳನ್ನು ದಲಿತರು ಮತ್ತು ಬುಡಕಟ್ಟು ಜನರನ್ನು ಅರ್ಥಿಕವಾಗಿ ಮೇಲೆತ್ತಲೆಂದು ರೂಪಿಸಲಾಗಿಲ್ಲ. ಈ ಇಲಾಖೆಯ ಉದ್ದೇಶ ರಾಜ್ಯದಲ್ಲಿ ಇನ್ನೂ ಚಾಲ್ತಿಯಲ್ಲಿರುವ  ತಾರತಮ್ಯ ಮತ್ತು ಅಸ್ಪೃಶ್ಯತೆಯಂತಹ ಸಾಮಾಜಿಕ ಪಿಡುಗುಗಳ ನಿವಾರಣೆಯನ್ನು ಖಾತರಿಪಡಿಸುವುದಾಗಿದೆ. ಆದರೂ ಅದಕ್ಕಾಗಿ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಲಾಗಿಲ್ಲ” ಎಂದು ಸರಕಾರವನ್ನು ಟೀಕಿಸಿದರು.

“ನಾವು ಚಂದ್ರಯಾನ-2ರ ಉಡ್ಡಯನವನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಆದೇ ಹೊತ್ತಿಗೆ, ಸ್ವಚ್ಛತಾ ಕಾರ್ಮಿಕರು ಚರಂಡಿಗಳ ಒಳಗೆ ಪ್ರವೇಶಿಸಿ, ಅಲ್ಲಿ ಸಾಯುವುದನ್ನು ತಪ್ಪಿಸುವ ತಂತ್ರಜ್ಞಾನ ಮಾತ್ರ ನಮ್ಮಲ್ಲಿಲ್ಲ” ಎಂದು ಮೇವಾನಿ ವಿಷಾದಿಸಿದರು.

ಸ್ವಚ್ಛತಾ ಕಾರ್ಮಿಕರ ಸಾವುಗಳನ್ನು ತಪ್ಪಿಸಲು ಸರಕಾರಕ್ಕೆ ಒಂದು ರೋಬೋಟ್ ಉಡುಗೊರೆ ನೀಡುವ ಪ್ರಸ್ತಾಪವನ್ನು ಅವರು ಮುಂದಿಟ್ಟರು.

“ಇದು ಸರಕಾರಕ್ಕೆ ನನ್ನ ಕೊಡುಗೆ. ಕೇರಳದಲ್ಲಿ ನಿರ್ಮಿಸಲಾಗಿರುವ 11 ಲಕ್ಷ ರೂ. ಬೆಲೆಯ ರೋಬೋಟ್ ಒಂದನ್ನು ನಾನು ನೀಡುತ್ತೇನೆ. ನಾವು ಅದನ್ನು ಬಳಸಿದರೆ ಕಾರ್ಮಿಕರು ಮ್ಯಾನ್‌ಹೋಲ್ ಒಳಗೆ ಪ್ರವೇಶಿಸಬೇಕಾಗಿಲ್ಲ  ನಾನು ಸಿದ್ಧನಿದ್ದೇನೆ. ಆದರೆ, ಅದನ್ನು ಬಳಸುವುದಾಗಿ ಲಿಖಿತವಾಗಿ ಭರವಸೆ ಕೊಡುತ್ತೀರಾ?” ಎಂದು ಮೇವಾನಿ ಪ್ರಶ್ನಿಸಿದರು.

ದಲಿತರು ಪ್ರತ್ಯೇಕ ಸ್ಮಶಾನಗಳನ್ನು ಬಳಸುವಂತೆ ಮಾಡಲಾಗುತ್ತಿದ್ದು, ಸರಕಾರ ಎಲ್ಲಾ ಜಾತಿಗಳ ಜನರು ಒಂದೇ ಸಮಾನ ಸ್ಮಶಾನ ಬಳಸುವುದನ್ನು ಕಡ್ಡಾಯ ಮಾಡುವ ಧೋರಣೆಯನ್ನು ಜಾರಿಗೊಳಿಸಲು ಸರಕಾರವನ್ನು ಅವರು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...