Homeಚಳವಳಿಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

- Advertisement -
- Advertisement -

ಚಂದಯಾನ-2 ಅಭಿಯಾನದ ಯಶಸ್ವಿ ಉಡ್ಡಯನವನ್ನು ಉಲ್ಲೇಖಿಸಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ಆದು ಬಾಹ್ಯಾಕಾಶದಲ್ಲಿ ತಂತ್ರಜ್ಞಾನವನ್ನು ತೋರಿಸುತ್ತದೆಯಾದರೂ, ಚರಂಡಿಗಳು ಮತ್ತು ಕಕ್ಕಸು ಗುಂಡಿಗಳನ್ನು ಸ್ವಚ್ಛ ಮಾಡುವಾಗ ಸಾಯುತ್ತಿರುವ ಕಾರ್ಮಿಕರ ಜೀವ ಉಳಿಸಬಲ್ಲ ಯಾವುದೇ ತಂತ್ರಜ್ಞಾನ ಏಕಿಲ್ಲ ಎಂದು ಟೀಕಿಸಿದ್ದಾರೆ.

ಮುಂದಿನ ಸ್ವಾತಂತ್ರ್ಯೋತ್ಸವಕ್ಕೆ ಮೊದಲು ಯಾವುದೇ ಒಂದು ಗ್ರಾಮವನ್ನು ‘ಅಸ್ಪೃಶ್ಯತೆ ಮುಕ್ತ ಗ್ರಾಮ”ವೆಂದು ಘೋಷಿಸಿ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಸವಾಲು ಹಾಕಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡುತ್ತಾ, ಬಿಜೆಪಿ ಸರಕಾರದ ಮೇಲೆ ಕಟುಟೀಕೆಗಳ ಮಳೆಯನ್ನೇ ಸುರಿಸಿದ ಮೇವಾನಿ, ಗುಜರಾತಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಪ್ರಶ್ನೆಯನ್ನು ಬಲವಾಗಿ ಮಂಡಿಸಿದರು.

ದಲಿತರಿಗೆ ಸಾರ್ವಜನಿಕ ಬಾವಿಗಳಿಂದ ನೀರೆತ್ತಲು ಬಿಡದಿರುವಂತಹ ಅಸ್ಪೃಶ್ಯತೆ ಮತ್ತು ದೌರ್ಜನ್ಯ ನಡೆಯುತ್ತಿರುವ ಗ್ರಾಮಗಳಿಗೆ ಸರಕಾರ ಭೇಟಿ ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು.

“ಸರಕಾರವು ನಾಗರಿಕ ಹಕ್ಕುಗಳ ರಕ್ಷಣಾ ಕಾಯಿದೆಯಡಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕಾಗಿತ್ತು. ದುಃಖದ ವಿಷಯವೆಂದರೆ, ಯಾವುದೇ ದೂರನ್ನು ಕೂಡಾ ದಾಖಲಿಸಲಾಗುತ್ತಿಲ್ಲ” ಎಂದು ಅವರು ಹೇಳಿದರು.

ಬನಸ್ಕಾಂತ ಜಿಲ್ಲೆಯ ವಡ್ಗಾಂವ್ ಶಾಸಕರಾಗಿರುವ ಮೇವಾನಿ, ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಇಲಾಖೆಯ ಬಜೆಟ್ ಅನುದಾನ ಬೇಡಿಕೆ ಕುರಿತು ತಾನು ಮಂಡಿಸಿದ ನಿಲುವಳಿ ಸೂಚನೆಯ ಮೇಲೆ ಮಾತನಾಡುತ್ತಿದ್ದರು.

“ಯಾವುದೇ ದೌರ್ಜನ್ಯದ ಪ್ರಕರಣ ನಡೆದಾಗ ಮಾಧ್ಯಮಗಳು ‘ನೀವು ಯಾವಾಗ ಅಲ್ಲಿಗೆ ಹೋಗುತ್ತೀರಿ’ ಎಂದು ನನ್ನನ್ನು ಕೇಳುತ್ತಾರೆ. ಈಗ ‘ಸರ್ವಮಿತ್ರ’ ಎಂದು ಕರೆಯಲ್ಪಡುತ್ತಿರುವ ವಿಜಯ್ ರೂಪಾನಿಯವರಿಗೆ ನನ್ನ ವಿನಮ್ರ ವಿನಂತಿ ಎಂದರೆ, ನೀವು ದಲಿತಮಿತ್ರರಾಗಿ, ಅಂತಹ ಸ್ಥಳಗಳಿಗೆ ಭೇಟಿ ನೀಡಿ ಎಂಬುದಾಗಿದೆ ” ಎಂದು ಮೇವಾನಿ ಹೇಳಿದರು.

“ಆಗಸ್ಟ್ 15ಕ್ಕೆ ಮೊದಲು ಯಾವುದಾದರೂ ಒಂದು ಹಳ್ಳಿಯನ್ನು  ಅವರು ಅಸ್ಪೃಶ್ಯತೆ ರಹಿತ ಹಳ್ಳಿ ಎಂದು ಘೋಷಣೆ ಮಾಡಬೇಕು ಎಂಬುದು ನನ್ನ ಬೇಡಿಕೆ” ಎಂದು ಅವರು ಹೇಳಿದರು. ಬಜೆಟ್ ಬೇಡಿಕೆಗಳ ಮೇಲೆ ಮಾತನಾಡಿದ ಅವರು, “ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಇಲಾಖೆಗಳನ್ನು ದಲಿತರು ಮತ್ತು ಬುಡಕಟ್ಟು ಜನರನ್ನು ಅರ್ಥಿಕವಾಗಿ ಮೇಲೆತ್ತಲೆಂದು ರೂಪಿಸಲಾಗಿಲ್ಲ. ಈ ಇಲಾಖೆಯ ಉದ್ದೇಶ ರಾಜ್ಯದಲ್ಲಿ ಇನ್ನೂ ಚಾಲ್ತಿಯಲ್ಲಿರುವ  ತಾರತಮ್ಯ ಮತ್ತು ಅಸ್ಪೃಶ್ಯತೆಯಂತಹ ಸಾಮಾಜಿಕ ಪಿಡುಗುಗಳ ನಿವಾರಣೆಯನ್ನು ಖಾತರಿಪಡಿಸುವುದಾಗಿದೆ. ಆದರೂ ಅದಕ್ಕಾಗಿ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಲಾಗಿಲ್ಲ” ಎಂದು ಸರಕಾರವನ್ನು ಟೀಕಿಸಿದರು.

“ನಾವು ಚಂದ್ರಯಾನ-2ರ ಉಡ್ಡಯನವನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಆದೇ ಹೊತ್ತಿಗೆ, ಸ್ವಚ್ಛತಾ ಕಾರ್ಮಿಕರು ಚರಂಡಿಗಳ ಒಳಗೆ ಪ್ರವೇಶಿಸಿ, ಅಲ್ಲಿ ಸಾಯುವುದನ್ನು ತಪ್ಪಿಸುವ ತಂತ್ರಜ್ಞಾನ ಮಾತ್ರ ನಮ್ಮಲ್ಲಿಲ್ಲ” ಎಂದು ಮೇವಾನಿ ವಿಷಾದಿಸಿದರು.

ಸ್ವಚ್ಛತಾ ಕಾರ್ಮಿಕರ ಸಾವುಗಳನ್ನು ತಪ್ಪಿಸಲು ಸರಕಾರಕ್ಕೆ ಒಂದು ರೋಬೋಟ್ ಉಡುಗೊರೆ ನೀಡುವ ಪ್ರಸ್ತಾಪವನ್ನು ಅವರು ಮುಂದಿಟ್ಟರು.

“ಇದು ಸರಕಾರಕ್ಕೆ ನನ್ನ ಕೊಡುಗೆ. ಕೇರಳದಲ್ಲಿ ನಿರ್ಮಿಸಲಾಗಿರುವ 11 ಲಕ್ಷ ರೂ. ಬೆಲೆಯ ರೋಬೋಟ್ ಒಂದನ್ನು ನಾನು ನೀಡುತ್ತೇನೆ. ನಾವು ಅದನ್ನು ಬಳಸಿದರೆ ಕಾರ್ಮಿಕರು ಮ್ಯಾನ್‌ಹೋಲ್ ಒಳಗೆ ಪ್ರವೇಶಿಸಬೇಕಾಗಿಲ್ಲ  ನಾನು ಸಿದ್ಧನಿದ್ದೇನೆ. ಆದರೆ, ಅದನ್ನು ಬಳಸುವುದಾಗಿ ಲಿಖಿತವಾಗಿ ಭರವಸೆ ಕೊಡುತ್ತೀರಾ?” ಎಂದು ಮೇವಾನಿ ಪ್ರಶ್ನಿಸಿದರು.

ದಲಿತರು ಪ್ರತ್ಯೇಕ ಸ್ಮಶಾನಗಳನ್ನು ಬಳಸುವಂತೆ ಮಾಡಲಾಗುತ್ತಿದ್ದು, ಸರಕಾರ ಎಲ್ಲಾ ಜಾತಿಗಳ ಜನರು ಒಂದೇ ಸಮಾನ ಸ್ಮಶಾನ ಬಳಸುವುದನ್ನು ಕಡ್ಡಾಯ ಮಾಡುವ ಧೋರಣೆಯನ್ನು ಜಾರಿಗೊಳಿಸಲು ಸರಕಾರವನ್ನು ಅವರು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...