Homeಚಳವಳಿಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

- Advertisement -
- Advertisement -

ಚಂದಯಾನ-2 ಅಭಿಯಾನದ ಯಶಸ್ವಿ ಉಡ್ಡಯನವನ್ನು ಉಲ್ಲೇಖಿಸಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ಆದು ಬಾಹ್ಯಾಕಾಶದಲ್ಲಿ ತಂತ್ರಜ್ಞಾನವನ್ನು ತೋರಿಸುತ್ತದೆಯಾದರೂ, ಚರಂಡಿಗಳು ಮತ್ತು ಕಕ್ಕಸು ಗುಂಡಿಗಳನ್ನು ಸ್ವಚ್ಛ ಮಾಡುವಾಗ ಸಾಯುತ್ತಿರುವ ಕಾರ್ಮಿಕರ ಜೀವ ಉಳಿಸಬಲ್ಲ ಯಾವುದೇ ತಂತ್ರಜ್ಞಾನ ಏಕಿಲ್ಲ ಎಂದು ಟೀಕಿಸಿದ್ದಾರೆ.

ಮುಂದಿನ ಸ್ವಾತಂತ್ರ್ಯೋತ್ಸವಕ್ಕೆ ಮೊದಲು ಯಾವುದೇ ಒಂದು ಗ್ರಾಮವನ್ನು ‘ಅಸ್ಪೃಶ್ಯತೆ ಮುಕ್ತ ಗ್ರಾಮ”ವೆಂದು ಘೋಷಿಸಿ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಸವಾಲು ಹಾಕಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡುತ್ತಾ, ಬಿಜೆಪಿ ಸರಕಾರದ ಮೇಲೆ ಕಟುಟೀಕೆಗಳ ಮಳೆಯನ್ನೇ ಸುರಿಸಿದ ಮೇವಾನಿ, ಗುಜರಾತಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಪ್ರಶ್ನೆಯನ್ನು ಬಲವಾಗಿ ಮಂಡಿಸಿದರು.

ದಲಿತರಿಗೆ ಸಾರ್ವಜನಿಕ ಬಾವಿಗಳಿಂದ ನೀರೆತ್ತಲು ಬಿಡದಿರುವಂತಹ ಅಸ್ಪೃಶ್ಯತೆ ಮತ್ತು ದೌರ್ಜನ್ಯ ನಡೆಯುತ್ತಿರುವ ಗ್ರಾಮಗಳಿಗೆ ಸರಕಾರ ಭೇಟಿ ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು.

“ಸರಕಾರವು ನಾಗರಿಕ ಹಕ್ಕುಗಳ ರಕ್ಷಣಾ ಕಾಯಿದೆಯಡಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕಾಗಿತ್ತು. ದುಃಖದ ವಿಷಯವೆಂದರೆ, ಯಾವುದೇ ದೂರನ್ನು ಕೂಡಾ ದಾಖಲಿಸಲಾಗುತ್ತಿಲ್ಲ” ಎಂದು ಅವರು ಹೇಳಿದರು.

ಬನಸ್ಕಾಂತ ಜಿಲ್ಲೆಯ ವಡ್ಗಾಂವ್ ಶಾಸಕರಾಗಿರುವ ಮೇವಾನಿ, ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಇಲಾಖೆಯ ಬಜೆಟ್ ಅನುದಾನ ಬೇಡಿಕೆ ಕುರಿತು ತಾನು ಮಂಡಿಸಿದ ನಿಲುವಳಿ ಸೂಚನೆಯ ಮೇಲೆ ಮಾತನಾಡುತ್ತಿದ್ದರು.

“ಯಾವುದೇ ದೌರ್ಜನ್ಯದ ಪ್ರಕರಣ ನಡೆದಾಗ ಮಾಧ್ಯಮಗಳು ‘ನೀವು ಯಾವಾಗ ಅಲ್ಲಿಗೆ ಹೋಗುತ್ತೀರಿ’ ಎಂದು ನನ್ನನ್ನು ಕೇಳುತ್ತಾರೆ. ಈಗ ‘ಸರ್ವಮಿತ್ರ’ ಎಂದು ಕರೆಯಲ್ಪಡುತ್ತಿರುವ ವಿಜಯ್ ರೂಪಾನಿಯವರಿಗೆ ನನ್ನ ವಿನಮ್ರ ವಿನಂತಿ ಎಂದರೆ, ನೀವು ದಲಿತಮಿತ್ರರಾಗಿ, ಅಂತಹ ಸ್ಥಳಗಳಿಗೆ ಭೇಟಿ ನೀಡಿ ಎಂಬುದಾಗಿದೆ ” ಎಂದು ಮೇವಾನಿ ಹೇಳಿದರು.

“ಆಗಸ್ಟ್ 15ಕ್ಕೆ ಮೊದಲು ಯಾವುದಾದರೂ ಒಂದು ಹಳ್ಳಿಯನ್ನು  ಅವರು ಅಸ್ಪೃಶ್ಯತೆ ರಹಿತ ಹಳ್ಳಿ ಎಂದು ಘೋಷಣೆ ಮಾಡಬೇಕು ಎಂಬುದು ನನ್ನ ಬೇಡಿಕೆ” ಎಂದು ಅವರು ಹೇಳಿದರು. ಬಜೆಟ್ ಬೇಡಿಕೆಗಳ ಮೇಲೆ ಮಾತನಾಡಿದ ಅವರು, “ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಇಲಾಖೆಗಳನ್ನು ದಲಿತರು ಮತ್ತು ಬುಡಕಟ್ಟು ಜನರನ್ನು ಅರ್ಥಿಕವಾಗಿ ಮೇಲೆತ್ತಲೆಂದು ರೂಪಿಸಲಾಗಿಲ್ಲ. ಈ ಇಲಾಖೆಯ ಉದ್ದೇಶ ರಾಜ್ಯದಲ್ಲಿ ಇನ್ನೂ ಚಾಲ್ತಿಯಲ್ಲಿರುವ  ತಾರತಮ್ಯ ಮತ್ತು ಅಸ್ಪೃಶ್ಯತೆಯಂತಹ ಸಾಮಾಜಿಕ ಪಿಡುಗುಗಳ ನಿವಾರಣೆಯನ್ನು ಖಾತರಿಪಡಿಸುವುದಾಗಿದೆ. ಆದರೂ ಅದಕ್ಕಾಗಿ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಲಾಗಿಲ್ಲ” ಎಂದು ಸರಕಾರವನ್ನು ಟೀಕಿಸಿದರು.

“ನಾವು ಚಂದ್ರಯಾನ-2ರ ಉಡ್ಡಯನವನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಆದೇ ಹೊತ್ತಿಗೆ, ಸ್ವಚ್ಛತಾ ಕಾರ್ಮಿಕರು ಚರಂಡಿಗಳ ಒಳಗೆ ಪ್ರವೇಶಿಸಿ, ಅಲ್ಲಿ ಸಾಯುವುದನ್ನು ತಪ್ಪಿಸುವ ತಂತ್ರಜ್ಞಾನ ಮಾತ್ರ ನಮ್ಮಲ್ಲಿಲ್ಲ” ಎಂದು ಮೇವಾನಿ ವಿಷಾದಿಸಿದರು.

ಸ್ವಚ್ಛತಾ ಕಾರ್ಮಿಕರ ಸಾವುಗಳನ್ನು ತಪ್ಪಿಸಲು ಸರಕಾರಕ್ಕೆ ಒಂದು ರೋಬೋಟ್ ಉಡುಗೊರೆ ನೀಡುವ ಪ್ರಸ್ತಾಪವನ್ನು ಅವರು ಮುಂದಿಟ್ಟರು.

“ಇದು ಸರಕಾರಕ್ಕೆ ನನ್ನ ಕೊಡುಗೆ. ಕೇರಳದಲ್ಲಿ ನಿರ್ಮಿಸಲಾಗಿರುವ 11 ಲಕ್ಷ ರೂ. ಬೆಲೆಯ ರೋಬೋಟ್ ಒಂದನ್ನು ನಾನು ನೀಡುತ್ತೇನೆ. ನಾವು ಅದನ್ನು ಬಳಸಿದರೆ ಕಾರ್ಮಿಕರು ಮ್ಯಾನ್‌ಹೋಲ್ ಒಳಗೆ ಪ್ರವೇಶಿಸಬೇಕಾಗಿಲ್ಲ  ನಾನು ಸಿದ್ಧನಿದ್ದೇನೆ. ಆದರೆ, ಅದನ್ನು ಬಳಸುವುದಾಗಿ ಲಿಖಿತವಾಗಿ ಭರವಸೆ ಕೊಡುತ್ತೀರಾ?” ಎಂದು ಮೇವಾನಿ ಪ್ರಶ್ನಿಸಿದರು.

ದಲಿತರು ಪ್ರತ್ಯೇಕ ಸ್ಮಶಾನಗಳನ್ನು ಬಳಸುವಂತೆ ಮಾಡಲಾಗುತ್ತಿದ್ದು, ಸರಕಾರ ಎಲ್ಲಾ ಜಾತಿಗಳ ಜನರು ಒಂದೇ ಸಮಾನ ಸ್ಮಶಾನ ಬಳಸುವುದನ್ನು ಕಡ್ಡಾಯ ಮಾಡುವ ಧೋರಣೆಯನ್ನು ಜಾರಿಗೊಳಿಸಲು ಸರಕಾರವನ್ನು ಅವರು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...