Homeಚಳವಳಿಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

- Advertisement -
- Advertisement -

ಚಂದಯಾನ-2 ಅಭಿಯಾನದ ಯಶಸ್ವಿ ಉಡ್ಡಯನವನ್ನು ಉಲ್ಲೇಖಿಸಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ಆದು ಬಾಹ್ಯಾಕಾಶದಲ್ಲಿ ತಂತ್ರಜ್ಞಾನವನ್ನು ತೋರಿಸುತ್ತದೆಯಾದರೂ, ಚರಂಡಿಗಳು ಮತ್ತು ಕಕ್ಕಸು ಗುಂಡಿಗಳನ್ನು ಸ್ವಚ್ಛ ಮಾಡುವಾಗ ಸಾಯುತ್ತಿರುವ ಕಾರ್ಮಿಕರ ಜೀವ ಉಳಿಸಬಲ್ಲ ಯಾವುದೇ ತಂತ್ರಜ್ಞಾನ ಏಕಿಲ್ಲ ಎಂದು ಟೀಕಿಸಿದ್ದಾರೆ.

ಮುಂದಿನ ಸ್ವಾತಂತ್ರ್ಯೋತ್ಸವಕ್ಕೆ ಮೊದಲು ಯಾವುದೇ ಒಂದು ಗ್ರಾಮವನ್ನು ‘ಅಸ್ಪೃಶ್ಯತೆ ಮುಕ್ತ ಗ್ರಾಮ”ವೆಂದು ಘೋಷಿಸಿ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಸವಾಲು ಹಾಕಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡುತ್ತಾ, ಬಿಜೆಪಿ ಸರಕಾರದ ಮೇಲೆ ಕಟುಟೀಕೆಗಳ ಮಳೆಯನ್ನೇ ಸುರಿಸಿದ ಮೇವಾನಿ, ಗುಜರಾತಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಪ್ರಶ್ನೆಯನ್ನು ಬಲವಾಗಿ ಮಂಡಿಸಿದರು.

ದಲಿತರಿಗೆ ಸಾರ್ವಜನಿಕ ಬಾವಿಗಳಿಂದ ನೀರೆತ್ತಲು ಬಿಡದಿರುವಂತಹ ಅಸ್ಪೃಶ್ಯತೆ ಮತ್ತು ದೌರ್ಜನ್ಯ ನಡೆಯುತ್ತಿರುವ ಗ್ರಾಮಗಳಿಗೆ ಸರಕಾರ ಭೇಟಿ ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು.

“ಸರಕಾರವು ನಾಗರಿಕ ಹಕ್ಕುಗಳ ರಕ್ಷಣಾ ಕಾಯಿದೆಯಡಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕಾಗಿತ್ತು. ದುಃಖದ ವಿಷಯವೆಂದರೆ, ಯಾವುದೇ ದೂರನ್ನು ಕೂಡಾ ದಾಖಲಿಸಲಾಗುತ್ತಿಲ್ಲ” ಎಂದು ಅವರು ಹೇಳಿದರು.

ಬನಸ್ಕಾಂತ ಜಿಲ್ಲೆಯ ವಡ್ಗಾಂವ್ ಶಾಸಕರಾಗಿರುವ ಮೇವಾನಿ, ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಇಲಾಖೆಯ ಬಜೆಟ್ ಅನುದಾನ ಬೇಡಿಕೆ ಕುರಿತು ತಾನು ಮಂಡಿಸಿದ ನಿಲುವಳಿ ಸೂಚನೆಯ ಮೇಲೆ ಮಾತನಾಡುತ್ತಿದ್ದರು.

“ಯಾವುದೇ ದೌರ್ಜನ್ಯದ ಪ್ರಕರಣ ನಡೆದಾಗ ಮಾಧ್ಯಮಗಳು ‘ನೀವು ಯಾವಾಗ ಅಲ್ಲಿಗೆ ಹೋಗುತ್ತೀರಿ’ ಎಂದು ನನ್ನನ್ನು ಕೇಳುತ್ತಾರೆ. ಈಗ ‘ಸರ್ವಮಿತ್ರ’ ಎಂದು ಕರೆಯಲ್ಪಡುತ್ತಿರುವ ವಿಜಯ್ ರೂಪಾನಿಯವರಿಗೆ ನನ್ನ ವಿನಮ್ರ ವಿನಂತಿ ಎಂದರೆ, ನೀವು ದಲಿತಮಿತ್ರರಾಗಿ, ಅಂತಹ ಸ್ಥಳಗಳಿಗೆ ಭೇಟಿ ನೀಡಿ ಎಂಬುದಾಗಿದೆ ” ಎಂದು ಮೇವಾನಿ ಹೇಳಿದರು.

“ಆಗಸ್ಟ್ 15ಕ್ಕೆ ಮೊದಲು ಯಾವುದಾದರೂ ಒಂದು ಹಳ್ಳಿಯನ್ನು  ಅವರು ಅಸ್ಪೃಶ್ಯತೆ ರಹಿತ ಹಳ್ಳಿ ಎಂದು ಘೋಷಣೆ ಮಾಡಬೇಕು ಎಂಬುದು ನನ್ನ ಬೇಡಿಕೆ” ಎಂದು ಅವರು ಹೇಳಿದರು. ಬಜೆಟ್ ಬೇಡಿಕೆಗಳ ಮೇಲೆ ಮಾತನಾಡಿದ ಅವರು, “ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಇಲಾಖೆಗಳನ್ನು ದಲಿತರು ಮತ್ತು ಬುಡಕಟ್ಟು ಜನರನ್ನು ಅರ್ಥಿಕವಾಗಿ ಮೇಲೆತ್ತಲೆಂದು ರೂಪಿಸಲಾಗಿಲ್ಲ. ಈ ಇಲಾಖೆಯ ಉದ್ದೇಶ ರಾಜ್ಯದಲ್ಲಿ ಇನ್ನೂ ಚಾಲ್ತಿಯಲ್ಲಿರುವ  ತಾರತಮ್ಯ ಮತ್ತು ಅಸ್ಪೃಶ್ಯತೆಯಂತಹ ಸಾಮಾಜಿಕ ಪಿಡುಗುಗಳ ನಿವಾರಣೆಯನ್ನು ಖಾತರಿಪಡಿಸುವುದಾಗಿದೆ. ಆದರೂ ಅದಕ್ಕಾಗಿ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಲಾಗಿಲ್ಲ” ಎಂದು ಸರಕಾರವನ್ನು ಟೀಕಿಸಿದರು.

“ನಾವು ಚಂದ್ರಯಾನ-2ರ ಉಡ್ಡಯನವನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಆದೇ ಹೊತ್ತಿಗೆ, ಸ್ವಚ್ಛತಾ ಕಾರ್ಮಿಕರು ಚರಂಡಿಗಳ ಒಳಗೆ ಪ್ರವೇಶಿಸಿ, ಅಲ್ಲಿ ಸಾಯುವುದನ್ನು ತಪ್ಪಿಸುವ ತಂತ್ರಜ್ಞಾನ ಮಾತ್ರ ನಮ್ಮಲ್ಲಿಲ್ಲ” ಎಂದು ಮೇವಾನಿ ವಿಷಾದಿಸಿದರು.

ಸ್ವಚ್ಛತಾ ಕಾರ್ಮಿಕರ ಸಾವುಗಳನ್ನು ತಪ್ಪಿಸಲು ಸರಕಾರಕ್ಕೆ ಒಂದು ರೋಬೋಟ್ ಉಡುಗೊರೆ ನೀಡುವ ಪ್ರಸ್ತಾಪವನ್ನು ಅವರು ಮುಂದಿಟ್ಟರು.

“ಇದು ಸರಕಾರಕ್ಕೆ ನನ್ನ ಕೊಡುಗೆ. ಕೇರಳದಲ್ಲಿ ನಿರ್ಮಿಸಲಾಗಿರುವ 11 ಲಕ್ಷ ರೂ. ಬೆಲೆಯ ರೋಬೋಟ್ ಒಂದನ್ನು ನಾನು ನೀಡುತ್ತೇನೆ. ನಾವು ಅದನ್ನು ಬಳಸಿದರೆ ಕಾರ್ಮಿಕರು ಮ್ಯಾನ್‌ಹೋಲ್ ಒಳಗೆ ಪ್ರವೇಶಿಸಬೇಕಾಗಿಲ್ಲ  ನಾನು ಸಿದ್ಧನಿದ್ದೇನೆ. ಆದರೆ, ಅದನ್ನು ಬಳಸುವುದಾಗಿ ಲಿಖಿತವಾಗಿ ಭರವಸೆ ಕೊಡುತ್ತೀರಾ?” ಎಂದು ಮೇವಾನಿ ಪ್ರಶ್ನಿಸಿದರು.

ದಲಿತರು ಪ್ರತ್ಯೇಕ ಸ್ಮಶಾನಗಳನ್ನು ಬಳಸುವಂತೆ ಮಾಡಲಾಗುತ್ತಿದ್ದು, ಸರಕಾರ ಎಲ್ಲಾ ಜಾತಿಗಳ ಜನರು ಒಂದೇ ಸಮಾನ ಸ್ಮಶಾನ ಬಳಸುವುದನ್ನು ಕಡ್ಡಾಯ ಮಾಡುವ ಧೋರಣೆಯನ್ನು ಜಾರಿಗೊಳಿಸಲು ಸರಕಾರವನ್ನು ಅವರು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...