Homeಚಳವಳಿಗುಜರಾತ್: ಶಾಸಕ ಜಿಗ್ನೇಶ್ ಮೇವಾನಿ ನೇತೃತ್ವದಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತರು

ಗುಜರಾತ್: ಶಾಸಕ ಜಿಗ್ನೇಶ್ ಮೇವಾನಿ ನೇತೃತ್ವದಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತರು

- Advertisement -
- Advertisement -

ದೇವಾಲಯದಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಸ್ಥಳೀಯ ದಲಿತರೊಂದಿಗೆ ಸೋಮವಾರ ಕಛ್‌ನ ರಾಪರ್ ತಾಲೂಕಿನ ವರ್ನು ಗ್ರಾಮದ ದೇವಸ್ಥಾನದ ಗರ್ಭಗುಡಿಗೆ ಪ್ರವೇಶಿಸಿದ್ದಾರೆ.

ಕಛ್‌ ಜಿಲ್ಲೆಯ ನೇರ್ ಗ್ರಾಮದಲ್ಲಿನ ಗ್ರಾಮದ ದೇವಸ್ಥಾನವನ್ನು ಪ್ರವೇಶಿಸಿದ ಆರೋಪದ ಮೇಲೆ ಇತ್ತೀಚೆಗೆ ಮೇಲ್ಜಾತಿಯ ಜನರು ದಲಿತರ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾದ ಸಂತ್ರಸ್ತರನ್ನು ಭೇಟಿ ಮಾಡಲು ಕಚ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಜಿಗ್ನೇಶ್ ಮೇವಾನಿ ಈ ಕ್ರಮ ಕೈಗೊಂಡಿದ್ದಾರೆ.

ಗ್ರಾಮದ ದೇವಸ್ಥಾನದ ಗರ್ಭಗುಡಿಗೆ ದಲಿತರ ಪ್ರವೇಶವನ್ನು ನಿರಾಕರಿಸುವ ಬಗ್ಗೆ ಮಾಹಿತಿ ಪಡೆದ ಬಳಿಕ ದೇವಾಲಯಕ್ಕೆ ಭೇಟಿ ನೀಡಲು ನಿರ್ಧರಿಸಿದ್ದೇನೆ ಎಂದು ಮೇವಾನಿ ಹೇಳಿದ್ದರು. ಯಾವುದೇ ಪೂರ್ವಾಗ್ರಹವಿಲ್ಲದೆ ಪರಿಸ್ಥಿತಿಯನ್ನು ಪರಿಶೀಲಿಸಬೇಕೆಂದು ಎಲ್ಲರಲ್ಲಿ ಮನವಿ ಮಾಡಿದ್ದರು.

ಇದನ್ನೂ ಓದಿ: ರಾಜಸ್ಥಾನದಲ್ಲಿ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ತ್ವರಿತ ಕ್ರಮಕ್ಕೆ ಜಿಗ್ನೇಶ್ ಮೇವಾನಿ ಆಗ್ರಹ

ಶಾಸಕ ಜಿಗ್ನೇಶ್ ಮೇವಾನಿ ತಮ್ಮ ತಂಡ ಮತ್ತು ಸ್ಥಳೀಯ ದಲಿತರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಸ್ಥಾನದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ತಮ್ಮ ರಾಷ್ಟ್ರೀಯ ದಲಿತ್ ಅಧಿಕಾರ್‌ ಮಂಚ್‌‍ ತಂಡವು ಎಲ್ಲೆಲ್ಲಿ ದಲಿತರಿಗೆ ದೇವಾಲಯ ಪ್ರವೇಶವನ್ನು ತಡೆಯಲಾಗುತ್ತದೊ ಅಲೆಲ್ಲಾ ದೇವಾಲಯಗಳನ್ನು ಪ್ರವೇಶಿಸುವ ಹಕ್ಕುಗಳಿಗಾಗಿ ಗುಜರಾತ್‌ ರಾಜ್ಯದಲ್ಲಿ ಶೀಘ್ರದಲ್ಲೇ ಚಳವಳಿಯನ್ನು ಪ್ರಾರಂಭಿಸುತ್ತದೆ ಎಂದು ತಿಳಿಸಿದ್ದಾರೆ.

“ಭಾವನಗರ ಜಿಲ್ಲೆಯ ಆರು ಸ್ಥಳಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ ಎಂಬ ವರದಿಗಳು ನಮಗೆ ಸಿಕ್ಕಿವೆ. ನಾವು ಶೀಘ್ರದಲ್ಲೇ ಆ ಸ್ಥಳಗಳಲ್ಲಿ ಇದೇ ರೀತಿಯ ಕ್ರಮವನ್ನು ತೆಗೆದುಕೊಳ್ಳುತ್ತೇವೆ” ಎಂದು ಶಾಸಕ ಮೇವಾನಿ ಹೇಳಿದ್ದಾರೆ.

ದೇವಾಲಯಕ್ಕೆ ಪ್ರವೇಶಿಸಿದ ನಂತರ ಅವರು ಗ್ರಾಮದ ಇತರ ಸಮುದಾಯಗಳ ಜನರೊಂದಿಗೆ ಸಭೆ ನಡೆಸಿದರು ಎಂದು ಮೇವಾನಿ ಅವರ ಕಚೇರಿಯ ಪ್ರಕಟಣೆ ತಿಳಿಸಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ ದಲಿತರಿಗೆ ಮಂಜೂರಾದ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿರುವ ಬಗ್ಗೆ ಮೇವಾನಿ ಕಚ್ ಪೊಲೀಸ್ ಅಧೀಕ್ಷಕರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...