Homeರಾಷ್ಟ್ರೀಯಪ್ರಧಾನಿ ಮೋದಿ ಮತ್ತು ಗೋಡ್ಸೆ ಬಗ್ಗೆ ಟ್ವೀಟ್‌ ಮಾಡಿದ್ದಕ್ಕಾಗಿ ಗುಜರಾತ್‌ ಶಾಸಕ, ಹೋರಾಟಗಾರ ಜಿಗ್ನೇಶ್‌ ಮೇವಾನಿಯ...

ಪ್ರಧಾನಿ ಮೋದಿ ಮತ್ತು ಗೋಡ್ಸೆ ಬಗ್ಗೆ ಟ್ವೀಟ್‌ ಮಾಡಿದ್ದಕ್ಕಾಗಿ ಗುಜರಾತ್‌ ಶಾಸಕ, ಹೋರಾಟಗಾರ ಜಿಗ್ನೇಶ್‌ ಮೇವಾನಿಯ ಬಂಧನ

- Advertisement -
- Advertisement -

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬುಧವಾರ ತಡರಾತ್ರಿ ಗುಜರಾತ್‌ನ ಪಾಲನ್‌ಪುರ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿದ್ದಾರೆ ಎಂದು ಶಾಸಕರ ತಂಡದ ಹೇಳಿಕೆ ತಿಳಿಸಿದೆ. ಬಂಧನದ ನಂತರ ಅವರನ್ನು ಅಸ್ಸಾಂಗೆ ಕರೆದೊಯ್ಯುವ ಸಾಧ್ಯತೆ ಇದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಪಾಲನ್‌ಪುರ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿದ್ದಾರೆ. ಪೊಲೀಸರು ಇನ್ನೂ ಎಫ್‌ಐಆರ್ ಪ್ರತಿಯನ್ನು ನಮಗೆ ನೀಡಿಲ್ಲ. ಅವರ ವಿರುದ್ಧ ಅಸ್ಸಾಂನಲ್ಲಿ ದಾಖಲಾಗಿರುವ ಕೆಲವು ಪ್ರಕರಣಗಳ ಬಗ್ಗೆ ನಮಗೆ ತಿಳಿಸಲಾಗಿದೆ. ಇಂದು ರಾತ್ರಿ ಅವರನ್ನು ಅಸ್ಸಾಂಗೆ ಕರೆದೊಯ್ಯವ ಸಾಧ್ಯತೆಯಿದೆ” ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.

“ಮೇವಾನಿ ಅವರನ್ನು ಬುಧವಾರ ರಾತ್ರಿ 11.30ರ ಸುಮಾರಿಗೆ ಪಾಲನ್‌ಪುರದ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿ ಅಹಮದಾಬಾದ್‌ಗೆ ಕರೆದೊಯ್ಯಲಾಗಿದೆ. ಪ್ರಧಾನಿ ಮೋದಿ ಬಗ್ಗೆ ಟ್ವೀಟ್ ಮಾಡಿದ್ದಕ್ಕೆ ಅಸ್ಸಾಂನ ಬಿಜೆಪಿ ನಾಯಕರೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಮೇಲೆ ಅವರನ್ನು ಬಂಧಿಸಲಾಗಿದೆ” ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಸ್ಸಾಂನ ಕೊಕ್ರಜಾರ್‌ನ ಬಿಜೆಪಿ ನಾಯಕ ಅರೂಪ್ ಕುಮಾರ್ ಡೇ ಎಂಬವರು ಮೇವಾನಿ ವಿರುದ್ಧ ದೂರು ದಾಖಲಿಸಿದ್ದರು. ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಲು ಸಂಬಂಧಿಸಿದ ಅಪರಾಧ ಮಾಡಿದ್ದಾರೆ ಎಂದು ಎಫ್‌ಐಆರ್‌‌ ಆರೋಪಿಸಿದೆ ಎಂದು ವರದಿ ಹೇಳಿದೆ.

“ಅಸ್ಸಾಂ ಪೊಲೀಸ್ ಅಧಿಕಾರಿಗಳು ಹಂಚಿಕೊಂಡ ದಾಖಲೆಯ ಪ್ರಕಾರ, ಕೆಲವು ದಿನಗಳ ಹಿಂದೆ ಮೇವಾನಿ ಅವರು ನಾಥುರಾಮ್ ಗೋಡ್ಸೆ ಬಗ್ಗೆ ಮಾಡಿದ ಟ್ವೀಟ್ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ಟ್ವೀಟ್ ಅನ್ನು ಟ್ವಿಟರ್ ತಡೆಹಿಡಿದಿದೆ. ಮೇವಾನಿ ಅವರನ್ನು ಮೊದಲು ರಸ್ತೆಯ ಮೂಲಕ ಅಹಮದಾಬಾದ್‌ಗೆ ಕರೆತರಲಾಯಿತು. ನಂತರ ಇಂದು ಮುಂಜಾನೆ ವಿಮಾನದ ಮೂಲಕ ಅಸ್ಸಾಂಗೆ ಕರೆದೊಯ್ಯಲಾಯಿತು” ಎಂದು ಮೇವಾನಿ ಅವರ ಆಪ್ತ ಸುರೇಶ್ ಜಾಟ್ ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ 8 ವರ್ಷಗಳ ಅಧಿಕಾರಾವಧಿಯಲ್ಲಿ ವಿಫಲರಾಗಿದ್ದಾರೆ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ಬಂಧನದ ವಿಚಾರ ತಿಳಿಯುತ್ತಿದ್ದಂತೆ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್ ಮತ್ತು ಇತರ ಕಾಂಗ್ರೆಸ್ ನಾಯಕರು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಧಾವಿಸಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಗುಜರಾತ್‌ನ ವಡ್ಗಾಮ್‌ನ ಶಾಸಕರಾಗಿರುವ ಜಿಗ್ನೇಶ್‌ ಮೇವಾನಿ ದಲಿತ ಹಕ್ಕುಗಳ ಹೋರಾಟಗಾರ ಮತ್ತು ರಾಷ್ಟ್ರೀಯ ದಲಿತ ಅಧಿಕಾರ ಮಂಚ್‌ನ ಸಂಚಾಲಕರೂ ಆಗಿದ್ದಾರೆ. ಅವರು ಕಳೆದ ವರ್ಷ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...