Homeಮುಖಪುಟಗುಜರಾತ್‌ ಮಾಡೆಲ್ ಎಕ್ಸ್‌ಪೋಸ್ ಆಗಿದೆ : ರಾಹುಲ್ ಗಾಂಧಿ ಟೀಕೆ

ಗುಜರಾತ್‌ ಮಾಡೆಲ್ ಎಕ್ಸ್‌ಪೋಸ್ ಆಗಿದೆ : ರಾಹುಲ್ ಗಾಂಧಿ ಟೀಕೆ

- Advertisement -
- Advertisement -

ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಬಿಜೆಪಿ ಆಳ್ವಿಕೆಯ ಗುಜರಾತ್‌ ರಾಜ್ಯವು ಮರಣದರದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿರುವುದರಿಂದ ಗುಜರಾತ್‌ ಮಾಡೆಲ್ ಎಕ್ಸ್‌ಪೋಸ್ ಆಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಗುಜರಾತ್‌ನಲ್ಲಿ ಮರಣ ಪ್ರಮಾಣ ಶೇ.6.25ರಷ್ಟಿದೆ. ಹಾಗೆಯೇ ಮಹಾರಾಷ್ಟ್ರದಲ್ಲಿ 3.73, ರಾಜಸ್ಥಾನದಲ್ಲಿ ಶೇ.2.32, ಪಂಜಾಬ್ ಶೇ.2.17, ಪುದುಚೆರಿ ಶೇ.1.98, ಜಾರ್ಖಂಡ್ ಶೇ.0.5, ಛತ್ತೀಸ್‌ಗಡ ಶೇ.0.35 ರಷ್ಟಿದೆ. ಗುಜರಾತ್‌ ಮಾಡೆಲ್ ಎಕ್ಸ್‌ಪೋಸ್ ಆಗಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಅಂದರೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಕೋವಿಡ್‌ನಿಂದಾದ ಮರಣ ಪ್ರಮಾಣ ಕಡಿಮೆ ಇದ್ದು, ಬಿಜೆಪಿ ಆಡಳಿತರೂಢ ಗುಜರಾತ್‌ನಲ್ಲಿ ಮಾತ್ರ ಹೆಚ್ಚಿದೆ ಎಂದು ರಾಹುಲ್ ಗಾಂಧಿ ಬೊಟ್ಟು ಮಾಡಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಬಿಬಿಸಿಯ ವರದಿಯೊಂದನ್ನು ಲಗತ್ತಿರಿಸಿರುವ ಅವರು, ದೇಶದ ಮರಣ ಪ್ರಮಾಣಕ್ಕಿಂತ ಗುಜರಾತ್‌ನ ಮರಣ ಪ್ರಮಾಣ ಎರಡು ಪಟ್ಟು ಹೆಚ್ಚಾಗಿದೆ. ಗುಜರಾತ್‌ನಲ್ಲಿ ಕೊರೋನಾ ವೈರಸ್ ತಹಬದಿಗೆ ತರುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.

ಗುಜರಾತ್ ರಾಜಧಾನಿ ಅಹಮದಾಬಾದ್‌ನ ಆಸ್ಪತ್ರೆಗಳ ಸ್ಥಿತಿಗತಿಗಳ ಬಗ್ಗೆ ಬಿಬಿಸಿ ವರದಿಯು ವಿಶ್ಲೇಷಣೆ ಮಾಡಿ ಕಳಪೆ ಮೂಲಭೂತ ಸೌಕರ್ಯಗಳ ಕಾರಣದಿಂದಾಗಿ ರೋಗಿಗಳಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿದೆ ಎನ್ನಲಾಗಿದೆ.

ಗುಜರಾತ್‌ ರಾಜ್ಯವು 24,055 ಪ್ರಕರಣಗಳನ್ನು ದಾಖಲಿಸಿ ದೇಶದಲ್ಲಿಯೇ ನಾಲ್ಕನೇ ಸ್ಥಾನದಲ್ಲಿದ್ದರೆ, ಮರಣ ಪ್ರಮಾಣದಲ್ಲಿ 1505 ಸಾವುಗಳೊಂದಿಗೆ ಶೆ.6.2 ರ ದರದಲ್ಲಿ ಮೊದಲ ಸ್ಥಾನದಲ್ಲಿದೆ.

ಗುಜರಾತ್ ಇಡೀ ದೇಶಕ್ಕೆ ಮಾದರಿ ಎಂದು ನರೇಂದ್ರ ಮೋದಿಯವರು ಪ್ರಧಾನಿಯಾಗುವ ಮೊದಲು ಭರ್ಜರಿ ಪ್ರಚಾರ ನಡೆಸಿದ್ದರು. ಈಗ ಅದರ ಪರಿಸ್ಥಿತಿ ಏನಾಗಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.


ಇದನ್ನೂ ಓದಿ: ಭಾರತದಲ್ಲಿ, ಪ್ರಪಂಚದಲ್ಲಿ ಎಷ್ಟು ಜನರಿಗೆ ಆರೋಗ್ಯ ಸಮಸ್ಯೆಗಳಿವೆ? ನೀವು ತಿಳಿದಿರಬೇಕಾದ ಅಂಶಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...