Homeಮುಖಪುಟಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

- Advertisement -
- Advertisement -

ಇತ್ತೀಚೆಗೆ ಗುಜರಾತ್ ಮಕ್ಕಳಲ್ಲಿನ ಅಪೌಷ್ಟಿಕತೆಯ ಕುರಿತಾದ ಆಘಾತಕಾರಿ ವರದಿಯೊಂದು ಪ್ರಕಟವಾಗಿದೆ. ಅದೇ ರೀತಿ 2019ರ ಅಕ್ಟೋಬರ್‌ನಲ್ಲಿ ಫೋರ್ಬ್ಸ್ ಪ್ರಕಟಿಸಿದ ಶ್ರೀಮಂತರ ಪಟ್ಟಿಯನ್ನು ಗಣನೆಗೆ ತೆಗೆದುಕೊಂಡರೆ, ಅದರಲ್ಲಿ ಐವರು ಟಾಪ್ ಶ್ರೀಮಂತ ಭಾರತೀಯರಲ್ಲಿ ನಾಲ್ವರು ಗುಜರಾತಿಗಳೇ ಆಗಿದ್ದಾರೆ. ಟಾಪ್ ಎರಡು ಸ್ಥಾನಗಳಲ್ಲಿರುವವರು ಮೋದಿಯವರಿಗೆ ಹತ್ತಿರದ ಸ್ನೇಹಿತರಾಗಿದ್ದಾರೆ. ಅಪೌಷ್ಟಿಕತೆ ಮತ್ತು ಕೊಬ್ಬು (FAT) ಸಂಪತ್ತಿನ ಅಸಮಾನ ಹಂಚಿಕೆಗೆ ಒಂದು ರೂಪಕದಂತೆ ಭಾಸವಾಗುತ್ತಿದೆ.

ಗುಜರಾತ್‌ನ ಸಾಮಾಜಿಕ-ಆರ್ಥಿಕ ಪರಿಶೀಲನೆಯ ವರದಿಯ ಪ್ರಕಾರ, ರಾಜ್ಯದ ಅಂಗನವಾಡಿಗಳಲ್ಲಿರುವ 43 ಲಕ್ಷ ಮಕ್ಕಳಲ್ಲಿ 1.47 ಲಕ್ಷ ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ (severe acute malnutrition- SAM) ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ‘ಆರ್ಥಿಕವಾಗಿ ಪ್ರಗತಿಪರ’ ರಾಜ್ಯವಾದ ಗುಜರಾತ್‌ನಲ್ಲಿ ಅಪೌಷ್ಟಿಕತೆ ಹೇಗೆ ಒಂದು ಸವಾಲಾಗಿ ಮುಂದುವರೆದಿದೆ ಎಂಬುದನ್ನು ಈ ವರದಿ ಬಹಿರಂಗಪಡಿಸುತ್ತದೆ. ಗುಜರಾತಿನ ಅಭಿವೃದ್ಧಿ ಮಾದರಿಯನ್ನು ಕೇಂದ್ರ ಸರ್ಕಾರವು ಭಾರತದಾದ್ಯಂತ ಪುನರಾವರ್ತಿಸುವ ಮಾತನಾಡುತ್ತಿರುವ ಈ ಸಂದರ್ಭದಲ್ಲಿಯೇ ಈ ವರದಿ ಹೊರಬಿದ್ದಿದೆ.

ಈಗ ನಮಗೆ ಥಟ್ಟನೆ ನೆನಪಾಗುವುದು 2019ರ ಫೋರ್ಬ್ಸ್ ಶ್ರೀಮಂತರ ಪಟ್ಟಿ. ಭಾರತದ ಮೊದಲ ಐವರು ಶ್ರೀಮಂತರ ಪೈಕಿ ನಾಲ್ವರು ಗುಜರಾತಿಗಳು! ಅಸಮಾನ ಸಂಪತ್ತಿನ ಹಂಚಿಕೆಗೆ ಮತ್ತು ಕೇಂದ್ರ, ಗುಜರಾತ್ ಸರ್ಕಾರಗಳ ಪಾಲಿಸಿಗಳಿಗೆ ಇವೆರಡೂ-ಅಪೌಷ್ಟಿಕತೆ ಮತ್ತು ‘ಕೊಬ್ಬು’ ಹೆಚ್ಚಿದವರು- ಕನ್ನಡಿ ಹಿಡಿಯುತ್ತಿವೆ.

ಶೇ. 3.41 ಅಂಗನವಾಡಿ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇರುವುದು ಕಂಡುಬಂದಿದೆ. ಅಂಗನವಾಡಿ ಹೊರಗಿರುವ ಮಕ್ಕಳನ್ನು ಗಣನೆಗೆ ತೆಗೆದುಕೊಂಡರೆ ಒಟ್ಟು ಅಪೌಷ್ಟಿಕ ಮಕ್ಕಳ ಸಂಖ್ಯೆ ತುಂಬಾ ಹೆಚ್ಚಿರಬಹುದು.

ರಾಜ್ಯ ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾದ ಉತ್ತರಗಳ ಪ್ರಕಾರ, ರಾಜ್ಯದ ಐದು ಜಿಲ್ಲೆಗಳ 46 ತಾಲೂಕುಗಳಲ್ಲಿ 1.97 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಮತ್ತು 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಬನಸ್ಕಂತ, ಪಟಾನ್, ನವಸಾರಿ, ಜುನಾಗಢ್ ಮತ್ತು ಖೇಡಾ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ತೀವ್ರವಾಗಿದೆ.

1.97 ಲಕ್ಷ ಅಪೌಷ್ಟಿಕ ಮಕ್ಕಳಲ್ಲಿ 68% ಪಟಾನ್ ಜಿಲ್ಲೆಯ ಎಂಟು ತಾಲೂಕಿನಲ್ಲಿದ್ದಾರೆ. ಈ ಐದು ಜಿಲ್ಲೆಗಳಲ್ಲಿ 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅದರಲ್ಲಿ 14,371 ಮಕ್ಕಳು ಪಟಾನ್ ಜಿಲ್ಲೆಯವರು.

2015 ರ ಮೇ ತಿಂಗಳಲ್ಲಿ ಗುಜರಾತ್ ಸರ್ಕಾರವು ರಾಜ್ಯವನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸಲು ನಿರ್ಧರಿಸಿದೆ ಎಂದು ಗುಜರಾತ್‌ನ ಸಾಮಾಜಿಕ-ಆರ್ಥಿಕ ವಿಮರ್ಶೆ (2015-16) ತಿಳಿಸಿತ್ತು. ಆದರೆ ಅದಾಗಲೇ ಇಲ್ಲ. ಗುಜರಾತಿನ ನಾಲ್ವರು ಉದ್ಯಮಿಗಳು ಟಾಪ್ 5 ಶ್ರೀಮಂತರ ಪಟ್ಟಿಗೆ ಸೇರಿದ್ದು ಮಾತ್ರ ಸರಾಗವಾಗಿ ನಡೆಯಿತು ಎಂಬುದು ವಿರೋಧಭಾಸವಲ್ಲವೇ?

ವೈದ್ಯಕೀಯ ತೊಂದರೆಗಳನ್ನು ಹೊಂದಿರುವ ಮತ್ತು ಹಸಿವು ಪರೀಕ್ಷೆಯಲ್ಲಿ ವಿಫಲರಾದ ಅಪೌಷ್ಟಿಕ ಮಕ್ಕಳನ್ನು ಮಕ್ಕಳ ಅಪೌಷ್ಟಿಕತೆ ಚಿಕಿತ್ಸಾ ಕೇಂದ್ರಗಳಿಗೆ ಅಥವಾ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಗಳಿಗೆ ಸೇರಿಸಲು ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ರಾಜ್ಯ ಸಚಿವ ವಾಸುಬೆನ್ ತ್ರಿವೇದಿ, “ರಾಜ್ಯ ಸರ್ಕಾರವು ಸಹ ಅಷ್ಟೇ ಚಿಂತಿತವಾಗಿದೆ. ಆದ್ದರಿಂದ 2016-17ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾದ ದೂಧ್ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲು ನಾವು ನಿರ್ಧರಿಸಿದ್ದೇವೆ ಎಂದಿದ್ದಾರೆ. ಈಗ ಅಲ್ಲಿನ ಅಂಗನವಾಡಿಗಳಲ್ಲಿ ವಾರದಲ್ಲಿ ಎರಡು ಸಲ ಮಾತ್ರ ಹಾಲು ನೀಡಲಾಗುತ್ತಿದೆ.

ಕೊಬ್ಬಿದ ಕುಬೇರರು

2019ರಲ್ಲಿ ಫೋರ್ಬ್ಸ್ ಪ್ರಕಟಿಸಿದ ಪಟ್ಟಿ ಪ್ರಕಾರ, 51.4 ಬಿಲಿಯನ್ ಡಾಲರ್‌ಗಳ ಒಡೆಯ ಅಂಬಾನಿ ಮೊದಲ ಸ್ಥಾನದಲ್ಲಿ, 15.7 ಬಿಲಿಯನ್ ಡಾಲರ್ ಹೊಂದಿರುವ ಅದಾನಿ 2ನೆ ಸ್ಥಾನದಲ್ಲಿ, 15 ಬಿಲಿಯನ್ ಡಾಲರ್ ಶ್ರೀಮಂತ ಪಲ್ಲೊಂಜಿ ಮಿಸ್ತ್ರಿ 4ನೆ ಸ್ಥಾನದಲ್ಲಿ ಮತ್ತು 14 ಬಿಲಿಯನ್ ಡಾಲರ್ ಹೊಂದಿರುವ ಉದಯ ಕೊಟಕ್ 5ನೆ ಸ್ಥಾನದಲ್ಲಿದ್ದಾರೆ. ಇವರೆಲ್ಲ ಗುಜರಾತಿಗಳು.

ಕೊರೋನಾ-ಲಾಕ್‌ಡೌನ್ ಸಮಯದಲ್ಲೇ ಅಂಬಾನಿ-ಅದಾನಿ ಗಳಿಕೆ ತೀವ್ರ ಏರಿಕೆಯಾಗಿದೆ!
ಗುಜರಾತ್ ಅಂಗನವಾಡಿಗಳಲ್ಲಿ ವಾರಕ್ಕೆ ಕೇವಲ ಒಂದಿನ ಅಥವಾ ಎರಡು ದಿನ ಹಾಲು ವಿತರಿಸಲಾಗುತ್ತಿದೆ. ಗುಜರಾತಿನಲ್ಲಿ ಸುಪ್ರಸಿದ್ಧ ಅಮುಲ್ ಡೈರಿ ಇದ್ದರೂ ಅಲ್ಲಿನ ಮಕ್ಕಳಿಗೆ ಹಾಲು, ಮೊಟ್ಟೆಯಂತಹ ಪೌಷ್ಠಿಕ ಆಹಾರಗಳನ್ನು ನೀಡಲು ಸರ್ಕಾರ ವಿಫಲವಾಗಿದೆ ಅಂದರೆ ಅದರ ಆದ್ಯತೆ ಯಾವುದಾಗಿದೆ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...