Homeಮುಖಪುಟಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

- Advertisement -
- Advertisement -

ಇತ್ತೀಚೆಗೆ ಗುಜರಾತ್ ಮಕ್ಕಳಲ್ಲಿನ ಅಪೌಷ್ಟಿಕತೆಯ ಕುರಿತಾದ ಆಘಾತಕಾರಿ ವರದಿಯೊಂದು ಪ್ರಕಟವಾಗಿದೆ. ಅದೇ ರೀತಿ 2019ರ ಅಕ್ಟೋಬರ್‌ನಲ್ಲಿ ಫೋರ್ಬ್ಸ್ ಪ್ರಕಟಿಸಿದ ಶ್ರೀಮಂತರ ಪಟ್ಟಿಯನ್ನು ಗಣನೆಗೆ ತೆಗೆದುಕೊಂಡರೆ, ಅದರಲ್ಲಿ ಐವರು ಟಾಪ್ ಶ್ರೀಮಂತ ಭಾರತೀಯರಲ್ಲಿ ನಾಲ್ವರು ಗುಜರಾತಿಗಳೇ ಆಗಿದ್ದಾರೆ. ಟಾಪ್ ಎರಡು ಸ್ಥಾನಗಳಲ್ಲಿರುವವರು ಮೋದಿಯವರಿಗೆ ಹತ್ತಿರದ ಸ್ನೇಹಿತರಾಗಿದ್ದಾರೆ. ಅಪೌಷ್ಟಿಕತೆ ಮತ್ತು ಕೊಬ್ಬು (FAT) ಸಂಪತ್ತಿನ ಅಸಮಾನ ಹಂಚಿಕೆಗೆ ಒಂದು ರೂಪಕದಂತೆ ಭಾಸವಾಗುತ್ತಿದೆ.

ಗುಜರಾತ್‌ನ ಸಾಮಾಜಿಕ-ಆರ್ಥಿಕ ಪರಿಶೀಲನೆಯ ವರದಿಯ ಪ್ರಕಾರ, ರಾಜ್ಯದ ಅಂಗನವಾಡಿಗಳಲ್ಲಿರುವ 43 ಲಕ್ಷ ಮಕ್ಕಳಲ್ಲಿ 1.47 ಲಕ್ಷ ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ (severe acute malnutrition- SAM) ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ‘ಆರ್ಥಿಕವಾಗಿ ಪ್ರಗತಿಪರ’ ರಾಜ್ಯವಾದ ಗುಜರಾತ್‌ನಲ್ಲಿ ಅಪೌಷ್ಟಿಕತೆ ಹೇಗೆ ಒಂದು ಸವಾಲಾಗಿ ಮುಂದುವರೆದಿದೆ ಎಂಬುದನ್ನು ಈ ವರದಿ ಬಹಿರಂಗಪಡಿಸುತ್ತದೆ. ಗುಜರಾತಿನ ಅಭಿವೃದ್ಧಿ ಮಾದರಿಯನ್ನು ಕೇಂದ್ರ ಸರ್ಕಾರವು ಭಾರತದಾದ್ಯಂತ ಪುನರಾವರ್ತಿಸುವ ಮಾತನಾಡುತ್ತಿರುವ ಈ ಸಂದರ್ಭದಲ್ಲಿಯೇ ಈ ವರದಿ ಹೊರಬಿದ್ದಿದೆ.

ಈಗ ನಮಗೆ ಥಟ್ಟನೆ ನೆನಪಾಗುವುದು 2019ರ ಫೋರ್ಬ್ಸ್ ಶ್ರೀಮಂತರ ಪಟ್ಟಿ. ಭಾರತದ ಮೊದಲ ಐವರು ಶ್ರೀಮಂತರ ಪೈಕಿ ನಾಲ್ವರು ಗುಜರಾತಿಗಳು! ಅಸಮಾನ ಸಂಪತ್ತಿನ ಹಂಚಿಕೆಗೆ ಮತ್ತು ಕೇಂದ್ರ, ಗುಜರಾತ್ ಸರ್ಕಾರಗಳ ಪಾಲಿಸಿಗಳಿಗೆ ಇವೆರಡೂ-ಅಪೌಷ್ಟಿಕತೆ ಮತ್ತು ‘ಕೊಬ್ಬು’ ಹೆಚ್ಚಿದವರು- ಕನ್ನಡಿ ಹಿಡಿಯುತ್ತಿವೆ.

ಶೇ. 3.41 ಅಂಗನವಾಡಿ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇರುವುದು ಕಂಡುಬಂದಿದೆ. ಅಂಗನವಾಡಿ ಹೊರಗಿರುವ ಮಕ್ಕಳನ್ನು ಗಣನೆಗೆ ತೆಗೆದುಕೊಂಡರೆ ಒಟ್ಟು ಅಪೌಷ್ಟಿಕ ಮಕ್ಕಳ ಸಂಖ್ಯೆ ತುಂಬಾ ಹೆಚ್ಚಿರಬಹುದು.

ರಾಜ್ಯ ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾದ ಉತ್ತರಗಳ ಪ್ರಕಾರ, ರಾಜ್ಯದ ಐದು ಜಿಲ್ಲೆಗಳ 46 ತಾಲೂಕುಗಳಲ್ಲಿ 1.97 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಮತ್ತು 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಬನಸ್ಕಂತ, ಪಟಾನ್, ನವಸಾರಿ, ಜುನಾಗಢ್ ಮತ್ತು ಖೇಡಾ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ತೀವ್ರವಾಗಿದೆ.

1.97 ಲಕ್ಷ ಅಪೌಷ್ಟಿಕ ಮಕ್ಕಳಲ್ಲಿ 68% ಪಟಾನ್ ಜಿಲ್ಲೆಯ ಎಂಟು ತಾಲೂಕಿನಲ್ಲಿದ್ದಾರೆ. ಈ ಐದು ಜಿಲ್ಲೆಗಳಲ್ಲಿ 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅದರಲ್ಲಿ 14,371 ಮಕ್ಕಳು ಪಟಾನ್ ಜಿಲ್ಲೆಯವರು.

2015 ರ ಮೇ ತಿಂಗಳಲ್ಲಿ ಗುಜರಾತ್ ಸರ್ಕಾರವು ರಾಜ್ಯವನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸಲು ನಿರ್ಧರಿಸಿದೆ ಎಂದು ಗುಜರಾತ್‌ನ ಸಾಮಾಜಿಕ-ಆರ್ಥಿಕ ವಿಮರ್ಶೆ (2015-16) ತಿಳಿಸಿತ್ತು. ಆದರೆ ಅದಾಗಲೇ ಇಲ್ಲ. ಗುಜರಾತಿನ ನಾಲ್ವರು ಉದ್ಯಮಿಗಳು ಟಾಪ್ 5 ಶ್ರೀಮಂತರ ಪಟ್ಟಿಗೆ ಸೇರಿದ್ದು ಮಾತ್ರ ಸರಾಗವಾಗಿ ನಡೆಯಿತು ಎಂಬುದು ವಿರೋಧಭಾಸವಲ್ಲವೇ?

ವೈದ್ಯಕೀಯ ತೊಂದರೆಗಳನ್ನು ಹೊಂದಿರುವ ಮತ್ತು ಹಸಿವು ಪರೀಕ್ಷೆಯಲ್ಲಿ ವಿಫಲರಾದ ಅಪೌಷ್ಟಿಕ ಮಕ್ಕಳನ್ನು ಮಕ್ಕಳ ಅಪೌಷ್ಟಿಕತೆ ಚಿಕಿತ್ಸಾ ಕೇಂದ್ರಗಳಿಗೆ ಅಥವಾ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಗಳಿಗೆ ಸೇರಿಸಲು ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ರಾಜ್ಯ ಸಚಿವ ವಾಸುಬೆನ್ ತ್ರಿವೇದಿ, “ರಾಜ್ಯ ಸರ್ಕಾರವು ಸಹ ಅಷ್ಟೇ ಚಿಂತಿತವಾಗಿದೆ. ಆದ್ದರಿಂದ 2016-17ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾದ ದೂಧ್ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲು ನಾವು ನಿರ್ಧರಿಸಿದ್ದೇವೆ ಎಂದಿದ್ದಾರೆ. ಈಗ ಅಲ್ಲಿನ ಅಂಗನವಾಡಿಗಳಲ್ಲಿ ವಾರದಲ್ಲಿ ಎರಡು ಸಲ ಮಾತ್ರ ಹಾಲು ನೀಡಲಾಗುತ್ತಿದೆ.

ಕೊಬ್ಬಿದ ಕುಬೇರರು

2019ರಲ್ಲಿ ಫೋರ್ಬ್ಸ್ ಪ್ರಕಟಿಸಿದ ಪಟ್ಟಿ ಪ್ರಕಾರ, 51.4 ಬಿಲಿಯನ್ ಡಾಲರ್‌ಗಳ ಒಡೆಯ ಅಂಬಾನಿ ಮೊದಲ ಸ್ಥಾನದಲ್ಲಿ, 15.7 ಬಿಲಿಯನ್ ಡಾಲರ್ ಹೊಂದಿರುವ ಅದಾನಿ 2ನೆ ಸ್ಥಾನದಲ್ಲಿ, 15 ಬಿಲಿಯನ್ ಡಾಲರ್ ಶ್ರೀಮಂತ ಪಲ್ಲೊಂಜಿ ಮಿಸ್ತ್ರಿ 4ನೆ ಸ್ಥಾನದಲ್ಲಿ ಮತ್ತು 14 ಬಿಲಿಯನ್ ಡಾಲರ್ ಹೊಂದಿರುವ ಉದಯ ಕೊಟಕ್ 5ನೆ ಸ್ಥಾನದಲ್ಲಿದ್ದಾರೆ. ಇವರೆಲ್ಲ ಗುಜರಾತಿಗಳು.

ಕೊರೋನಾ-ಲಾಕ್‌ಡೌನ್ ಸಮಯದಲ್ಲೇ ಅಂಬಾನಿ-ಅದಾನಿ ಗಳಿಕೆ ತೀವ್ರ ಏರಿಕೆಯಾಗಿದೆ!
ಗುಜರಾತ್ ಅಂಗನವಾಡಿಗಳಲ್ಲಿ ವಾರಕ್ಕೆ ಕೇವಲ ಒಂದಿನ ಅಥವಾ ಎರಡು ದಿನ ಹಾಲು ವಿತರಿಸಲಾಗುತ್ತಿದೆ. ಗುಜರಾತಿನಲ್ಲಿ ಸುಪ್ರಸಿದ್ಧ ಅಮುಲ್ ಡೈರಿ ಇದ್ದರೂ ಅಲ್ಲಿನ ಮಕ್ಕಳಿಗೆ ಹಾಲು, ಮೊಟ್ಟೆಯಂತಹ ಪೌಷ್ಠಿಕ ಆಹಾರಗಳನ್ನು ನೀಡಲು ಸರ್ಕಾರ ವಿಫಲವಾಗಿದೆ ಅಂದರೆ ಅದರ ಆದ್ಯತೆ ಯಾವುದಾಗಿದೆ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...