Homeಮುಖಪುಟಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

- Advertisement -
- Advertisement -

ಇತ್ತೀಚೆಗೆ ಗುಜರಾತ್ ಮಕ್ಕಳಲ್ಲಿನ ಅಪೌಷ್ಟಿಕತೆಯ ಕುರಿತಾದ ಆಘಾತಕಾರಿ ವರದಿಯೊಂದು ಪ್ರಕಟವಾಗಿದೆ. ಅದೇ ರೀತಿ 2019ರ ಅಕ್ಟೋಬರ್‌ನಲ್ಲಿ ಫೋರ್ಬ್ಸ್ ಪ್ರಕಟಿಸಿದ ಶ್ರೀಮಂತರ ಪಟ್ಟಿಯನ್ನು ಗಣನೆಗೆ ತೆಗೆದುಕೊಂಡರೆ, ಅದರಲ್ಲಿ ಐವರು ಟಾಪ್ ಶ್ರೀಮಂತ ಭಾರತೀಯರಲ್ಲಿ ನಾಲ್ವರು ಗುಜರಾತಿಗಳೇ ಆಗಿದ್ದಾರೆ. ಟಾಪ್ ಎರಡು ಸ್ಥಾನಗಳಲ್ಲಿರುವವರು ಮೋದಿಯವರಿಗೆ ಹತ್ತಿರದ ಸ್ನೇಹಿತರಾಗಿದ್ದಾರೆ. ಅಪೌಷ್ಟಿಕತೆ ಮತ್ತು ಕೊಬ್ಬು (FAT) ಸಂಪತ್ತಿನ ಅಸಮಾನ ಹಂಚಿಕೆಗೆ ಒಂದು ರೂಪಕದಂತೆ ಭಾಸವಾಗುತ್ತಿದೆ.

ಗುಜರಾತ್‌ನ ಸಾಮಾಜಿಕ-ಆರ್ಥಿಕ ಪರಿಶೀಲನೆಯ ವರದಿಯ ಪ್ರಕಾರ, ರಾಜ್ಯದ ಅಂಗನವಾಡಿಗಳಲ್ಲಿರುವ 43 ಲಕ್ಷ ಮಕ್ಕಳಲ್ಲಿ 1.47 ಲಕ್ಷ ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ (severe acute malnutrition- SAM) ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ‘ಆರ್ಥಿಕವಾಗಿ ಪ್ರಗತಿಪರ’ ರಾಜ್ಯವಾದ ಗುಜರಾತ್‌ನಲ್ಲಿ ಅಪೌಷ್ಟಿಕತೆ ಹೇಗೆ ಒಂದು ಸವಾಲಾಗಿ ಮುಂದುವರೆದಿದೆ ಎಂಬುದನ್ನು ಈ ವರದಿ ಬಹಿರಂಗಪಡಿಸುತ್ತದೆ. ಗುಜರಾತಿನ ಅಭಿವೃದ್ಧಿ ಮಾದರಿಯನ್ನು ಕೇಂದ್ರ ಸರ್ಕಾರವು ಭಾರತದಾದ್ಯಂತ ಪುನರಾವರ್ತಿಸುವ ಮಾತನಾಡುತ್ತಿರುವ ಈ ಸಂದರ್ಭದಲ್ಲಿಯೇ ಈ ವರದಿ ಹೊರಬಿದ್ದಿದೆ.

ಈಗ ನಮಗೆ ಥಟ್ಟನೆ ನೆನಪಾಗುವುದು 2019ರ ಫೋರ್ಬ್ಸ್ ಶ್ರೀಮಂತರ ಪಟ್ಟಿ. ಭಾರತದ ಮೊದಲ ಐವರು ಶ್ರೀಮಂತರ ಪೈಕಿ ನಾಲ್ವರು ಗುಜರಾತಿಗಳು! ಅಸಮಾನ ಸಂಪತ್ತಿನ ಹಂಚಿಕೆಗೆ ಮತ್ತು ಕೇಂದ್ರ, ಗುಜರಾತ್ ಸರ್ಕಾರಗಳ ಪಾಲಿಸಿಗಳಿಗೆ ಇವೆರಡೂ-ಅಪೌಷ್ಟಿಕತೆ ಮತ್ತು ‘ಕೊಬ್ಬು’ ಹೆಚ್ಚಿದವರು- ಕನ್ನಡಿ ಹಿಡಿಯುತ್ತಿವೆ.

ಶೇ. 3.41 ಅಂಗನವಾಡಿ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇರುವುದು ಕಂಡುಬಂದಿದೆ. ಅಂಗನವಾಡಿ ಹೊರಗಿರುವ ಮಕ್ಕಳನ್ನು ಗಣನೆಗೆ ತೆಗೆದುಕೊಂಡರೆ ಒಟ್ಟು ಅಪೌಷ್ಟಿಕ ಮಕ್ಕಳ ಸಂಖ್ಯೆ ತುಂಬಾ ಹೆಚ್ಚಿರಬಹುದು.

ರಾಜ್ಯ ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾದ ಉತ್ತರಗಳ ಪ್ರಕಾರ, ರಾಜ್ಯದ ಐದು ಜಿಲ್ಲೆಗಳ 46 ತಾಲೂಕುಗಳಲ್ಲಿ 1.97 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಮತ್ತು 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಬನಸ್ಕಂತ, ಪಟಾನ್, ನವಸಾರಿ, ಜುನಾಗಢ್ ಮತ್ತು ಖೇಡಾ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ತೀವ್ರವಾಗಿದೆ.

1.97 ಲಕ್ಷ ಅಪೌಷ್ಟಿಕ ಮಕ್ಕಳಲ್ಲಿ 68% ಪಟಾನ್ ಜಿಲ್ಲೆಯ ಎಂಟು ತಾಲೂಕಿನಲ್ಲಿದ್ದಾರೆ. ಈ ಐದು ಜಿಲ್ಲೆಗಳಲ್ಲಿ 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅದರಲ್ಲಿ 14,371 ಮಕ್ಕಳು ಪಟಾನ್ ಜಿಲ್ಲೆಯವರು.

2015 ರ ಮೇ ತಿಂಗಳಲ್ಲಿ ಗುಜರಾತ್ ಸರ್ಕಾರವು ರಾಜ್ಯವನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸಲು ನಿರ್ಧರಿಸಿದೆ ಎಂದು ಗುಜರಾತ್‌ನ ಸಾಮಾಜಿಕ-ಆರ್ಥಿಕ ವಿಮರ್ಶೆ (2015-16) ತಿಳಿಸಿತ್ತು. ಆದರೆ ಅದಾಗಲೇ ಇಲ್ಲ. ಗುಜರಾತಿನ ನಾಲ್ವರು ಉದ್ಯಮಿಗಳು ಟಾಪ್ 5 ಶ್ರೀಮಂತರ ಪಟ್ಟಿಗೆ ಸೇರಿದ್ದು ಮಾತ್ರ ಸರಾಗವಾಗಿ ನಡೆಯಿತು ಎಂಬುದು ವಿರೋಧಭಾಸವಲ್ಲವೇ?

ವೈದ್ಯಕೀಯ ತೊಂದರೆಗಳನ್ನು ಹೊಂದಿರುವ ಮತ್ತು ಹಸಿವು ಪರೀಕ್ಷೆಯಲ್ಲಿ ವಿಫಲರಾದ ಅಪೌಷ್ಟಿಕ ಮಕ್ಕಳನ್ನು ಮಕ್ಕಳ ಅಪೌಷ್ಟಿಕತೆ ಚಿಕಿತ್ಸಾ ಕೇಂದ್ರಗಳಿಗೆ ಅಥವಾ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಗಳಿಗೆ ಸೇರಿಸಲು ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ರಾಜ್ಯ ಸಚಿವ ವಾಸುಬೆನ್ ತ್ರಿವೇದಿ, “ರಾಜ್ಯ ಸರ್ಕಾರವು ಸಹ ಅಷ್ಟೇ ಚಿಂತಿತವಾಗಿದೆ. ಆದ್ದರಿಂದ 2016-17ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾದ ದೂಧ್ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲು ನಾವು ನಿರ್ಧರಿಸಿದ್ದೇವೆ ಎಂದಿದ್ದಾರೆ. ಈಗ ಅಲ್ಲಿನ ಅಂಗನವಾಡಿಗಳಲ್ಲಿ ವಾರದಲ್ಲಿ ಎರಡು ಸಲ ಮಾತ್ರ ಹಾಲು ನೀಡಲಾಗುತ್ತಿದೆ.

ಕೊಬ್ಬಿದ ಕುಬೇರರು

2019ರಲ್ಲಿ ಫೋರ್ಬ್ಸ್ ಪ್ರಕಟಿಸಿದ ಪಟ್ಟಿ ಪ್ರಕಾರ, 51.4 ಬಿಲಿಯನ್ ಡಾಲರ್‌ಗಳ ಒಡೆಯ ಅಂಬಾನಿ ಮೊದಲ ಸ್ಥಾನದಲ್ಲಿ, 15.7 ಬಿಲಿಯನ್ ಡಾಲರ್ ಹೊಂದಿರುವ ಅದಾನಿ 2ನೆ ಸ್ಥಾನದಲ್ಲಿ, 15 ಬಿಲಿಯನ್ ಡಾಲರ್ ಶ್ರೀಮಂತ ಪಲ್ಲೊಂಜಿ ಮಿಸ್ತ್ರಿ 4ನೆ ಸ್ಥಾನದಲ್ಲಿ ಮತ್ತು 14 ಬಿಲಿಯನ್ ಡಾಲರ್ ಹೊಂದಿರುವ ಉದಯ ಕೊಟಕ್ 5ನೆ ಸ್ಥಾನದಲ್ಲಿದ್ದಾರೆ. ಇವರೆಲ್ಲ ಗುಜರಾತಿಗಳು.

ಕೊರೋನಾ-ಲಾಕ್‌ಡೌನ್ ಸಮಯದಲ್ಲೇ ಅಂಬಾನಿ-ಅದಾನಿ ಗಳಿಕೆ ತೀವ್ರ ಏರಿಕೆಯಾಗಿದೆ!
ಗುಜರಾತ್ ಅಂಗನವಾಡಿಗಳಲ್ಲಿ ವಾರಕ್ಕೆ ಕೇವಲ ಒಂದಿನ ಅಥವಾ ಎರಡು ದಿನ ಹಾಲು ವಿತರಿಸಲಾಗುತ್ತಿದೆ. ಗುಜರಾತಿನಲ್ಲಿ ಸುಪ್ರಸಿದ್ಧ ಅಮುಲ್ ಡೈರಿ ಇದ್ದರೂ ಅಲ್ಲಿನ ಮಕ್ಕಳಿಗೆ ಹಾಲು, ಮೊಟ್ಟೆಯಂತಹ ಪೌಷ್ಠಿಕ ಆಹಾರಗಳನ್ನು ನೀಡಲು ಸರ್ಕಾರ ವಿಫಲವಾಗಿದೆ ಅಂದರೆ ಅದರ ಆದ್ಯತೆ ಯಾವುದಾಗಿದೆ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...