Homeಮುಖಪುಟಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

- Advertisement -
- Advertisement -

ಇತ್ತೀಚೆಗೆ ಗುಜರಾತ್ ಮಕ್ಕಳಲ್ಲಿನ ಅಪೌಷ್ಟಿಕತೆಯ ಕುರಿತಾದ ಆಘಾತಕಾರಿ ವರದಿಯೊಂದು ಪ್ರಕಟವಾಗಿದೆ. ಅದೇ ರೀತಿ 2019ರ ಅಕ್ಟೋಬರ್‌ನಲ್ಲಿ ಫೋರ್ಬ್ಸ್ ಪ್ರಕಟಿಸಿದ ಶ್ರೀಮಂತರ ಪಟ್ಟಿಯನ್ನು ಗಣನೆಗೆ ತೆಗೆದುಕೊಂಡರೆ, ಅದರಲ್ಲಿ ಐವರು ಟಾಪ್ ಶ್ರೀಮಂತ ಭಾರತೀಯರಲ್ಲಿ ನಾಲ್ವರು ಗುಜರಾತಿಗಳೇ ಆಗಿದ್ದಾರೆ. ಟಾಪ್ ಎರಡು ಸ್ಥಾನಗಳಲ್ಲಿರುವವರು ಮೋದಿಯವರಿಗೆ ಹತ್ತಿರದ ಸ್ನೇಹಿತರಾಗಿದ್ದಾರೆ. ಅಪೌಷ್ಟಿಕತೆ ಮತ್ತು ಕೊಬ್ಬು (FAT) ಸಂಪತ್ತಿನ ಅಸಮಾನ ಹಂಚಿಕೆಗೆ ಒಂದು ರೂಪಕದಂತೆ ಭಾಸವಾಗುತ್ತಿದೆ.

ಗುಜರಾತ್‌ನ ಸಾಮಾಜಿಕ-ಆರ್ಥಿಕ ಪರಿಶೀಲನೆಯ ವರದಿಯ ಪ್ರಕಾರ, ರಾಜ್ಯದ ಅಂಗನವಾಡಿಗಳಲ್ಲಿರುವ 43 ಲಕ್ಷ ಮಕ್ಕಳಲ್ಲಿ 1.47 ಲಕ್ಷ ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ (severe acute malnutrition- SAM) ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ‘ಆರ್ಥಿಕವಾಗಿ ಪ್ರಗತಿಪರ’ ರಾಜ್ಯವಾದ ಗುಜರಾತ್‌ನಲ್ಲಿ ಅಪೌಷ್ಟಿಕತೆ ಹೇಗೆ ಒಂದು ಸವಾಲಾಗಿ ಮುಂದುವರೆದಿದೆ ಎಂಬುದನ್ನು ಈ ವರದಿ ಬಹಿರಂಗಪಡಿಸುತ್ತದೆ. ಗುಜರಾತಿನ ಅಭಿವೃದ್ಧಿ ಮಾದರಿಯನ್ನು ಕೇಂದ್ರ ಸರ್ಕಾರವು ಭಾರತದಾದ್ಯಂತ ಪುನರಾವರ್ತಿಸುವ ಮಾತನಾಡುತ್ತಿರುವ ಈ ಸಂದರ್ಭದಲ್ಲಿಯೇ ಈ ವರದಿ ಹೊರಬಿದ್ದಿದೆ.

ಈಗ ನಮಗೆ ಥಟ್ಟನೆ ನೆನಪಾಗುವುದು 2019ರ ಫೋರ್ಬ್ಸ್ ಶ್ರೀಮಂತರ ಪಟ್ಟಿ. ಭಾರತದ ಮೊದಲ ಐವರು ಶ್ರೀಮಂತರ ಪೈಕಿ ನಾಲ್ವರು ಗುಜರಾತಿಗಳು! ಅಸಮಾನ ಸಂಪತ್ತಿನ ಹಂಚಿಕೆಗೆ ಮತ್ತು ಕೇಂದ್ರ, ಗುಜರಾತ್ ಸರ್ಕಾರಗಳ ಪಾಲಿಸಿಗಳಿಗೆ ಇವೆರಡೂ-ಅಪೌಷ್ಟಿಕತೆ ಮತ್ತು ‘ಕೊಬ್ಬು’ ಹೆಚ್ಚಿದವರು- ಕನ್ನಡಿ ಹಿಡಿಯುತ್ತಿವೆ.

ಶೇ. 3.41 ಅಂಗನವಾಡಿ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇರುವುದು ಕಂಡುಬಂದಿದೆ. ಅಂಗನವಾಡಿ ಹೊರಗಿರುವ ಮಕ್ಕಳನ್ನು ಗಣನೆಗೆ ತೆಗೆದುಕೊಂಡರೆ ಒಟ್ಟು ಅಪೌಷ್ಟಿಕ ಮಕ್ಕಳ ಸಂಖ್ಯೆ ತುಂಬಾ ಹೆಚ್ಚಿರಬಹುದು.

ರಾಜ್ಯ ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾದ ಉತ್ತರಗಳ ಪ್ರಕಾರ, ರಾಜ್ಯದ ಐದು ಜಿಲ್ಲೆಗಳ 46 ತಾಲೂಕುಗಳಲ್ಲಿ 1.97 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಮತ್ತು 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಬನಸ್ಕಂತ, ಪಟಾನ್, ನವಸಾರಿ, ಜುನಾಗಢ್ ಮತ್ತು ಖೇಡಾ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ತೀವ್ರವಾಗಿದೆ.

1.97 ಲಕ್ಷ ಅಪೌಷ್ಟಿಕ ಮಕ್ಕಳಲ್ಲಿ 68% ಪಟಾನ್ ಜಿಲ್ಲೆಯ ಎಂಟು ತಾಲೂಕಿನಲ್ಲಿದ್ದಾರೆ. ಈ ಐದು ಜಿಲ್ಲೆಗಳಲ್ಲಿ 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅದರಲ್ಲಿ 14,371 ಮಕ್ಕಳು ಪಟಾನ್ ಜಿಲ್ಲೆಯವರು.

2015 ರ ಮೇ ತಿಂಗಳಲ್ಲಿ ಗುಜರಾತ್ ಸರ್ಕಾರವು ರಾಜ್ಯವನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸಲು ನಿರ್ಧರಿಸಿದೆ ಎಂದು ಗುಜರಾತ್‌ನ ಸಾಮಾಜಿಕ-ಆರ್ಥಿಕ ವಿಮರ್ಶೆ (2015-16) ತಿಳಿಸಿತ್ತು. ಆದರೆ ಅದಾಗಲೇ ಇಲ್ಲ. ಗುಜರಾತಿನ ನಾಲ್ವರು ಉದ್ಯಮಿಗಳು ಟಾಪ್ 5 ಶ್ರೀಮಂತರ ಪಟ್ಟಿಗೆ ಸೇರಿದ್ದು ಮಾತ್ರ ಸರಾಗವಾಗಿ ನಡೆಯಿತು ಎಂಬುದು ವಿರೋಧಭಾಸವಲ್ಲವೇ?

ವೈದ್ಯಕೀಯ ತೊಂದರೆಗಳನ್ನು ಹೊಂದಿರುವ ಮತ್ತು ಹಸಿವು ಪರೀಕ್ಷೆಯಲ್ಲಿ ವಿಫಲರಾದ ಅಪೌಷ್ಟಿಕ ಮಕ್ಕಳನ್ನು ಮಕ್ಕಳ ಅಪೌಷ್ಟಿಕತೆ ಚಿಕಿತ್ಸಾ ಕೇಂದ್ರಗಳಿಗೆ ಅಥವಾ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಗಳಿಗೆ ಸೇರಿಸಲು ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ರಾಜ್ಯ ಸಚಿವ ವಾಸುಬೆನ್ ತ್ರಿವೇದಿ, “ರಾಜ್ಯ ಸರ್ಕಾರವು ಸಹ ಅಷ್ಟೇ ಚಿಂತಿತವಾಗಿದೆ. ಆದ್ದರಿಂದ 2016-17ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾದ ದೂಧ್ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲು ನಾವು ನಿರ್ಧರಿಸಿದ್ದೇವೆ ಎಂದಿದ್ದಾರೆ. ಈಗ ಅಲ್ಲಿನ ಅಂಗನವಾಡಿಗಳಲ್ಲಿ ವಾರದಲ್ಲಿ ಎರಡು ಸಲ ಮಾತ್ರ ಹಾಲು ನೀಡಲಾಗುತ್ತಿದೆ.

ಕೊಬ್ಬಿದ ಕುಬೇರರು

2019ರಲ್ಲಿ ಫೋರ್ಬ್ಸ್ ಪ್ರಕಟಿಸಿದ ಪಟ್ಟಿ ಪ್ರಕಾರ, 51.4 ಬಿಲಿಯನ್ ಡಾಲರ್‌ಗಳ ಒಡೆಯ ಅಂಬಾನಿ ಮೊದಲ ಸ್ಥಾನದಲ್ಲಿ, 15.7 ಬಿಲಿಯನ್ ಡಾಲರ್ ಹೊಂದಿರುವ ಅದಾನಿ 2ನೆ ಸ್ಥಾನದಲ್ಲಿ, 15 ಬಿಲಿಯನ್ ಡಾಲರ್ ಶ್ರೀಮಂತ ಪಲ್ಲೊಂಜಿ ಮಿಸ್ತ್ರಿ 4ನೆ ಸ್ಥಾನದಲ್ಲಿ ಮತ್ತು 14 ಬಿಲಿಯನ್ ಡಾಲರ್ ಹೊಂದಿರುವ ಉದಯ ಕೊಟಕ್ 5ನೆ ಸ್ಥಾನದಲ್ಲಿದ್ದಾರೆ. ಇವರೆಲ್ಲ ಗುಜರಾತಿಗಳು.

ಕೊರೋನಾ-ಲಾಕ್‌ಡೌನ್ ಸಮಯದಲ್ಲೇ ಅಂಬಾನಿ-ಅದಾನಿ ಗಳಿಕೆ ತೀವ್ರ ಏರಿಕೆಯಾಗಿದೆ!
ಗುಜರಾತ್ ಅಂಗನವಾಡಿಗಳಲ್ಲಿ ವಾರಕ್ಕೆ ಕೇವಲ ಒಂದಿನ ಅಥವಾ ಎರಡು ದಿನ ಹಾಲು ವಿತರಿಸಲಾಗುತ್ತಿದೆ. ಗುಜರಾತಿನಲ್ಲಿ ಸುಪ್ರಸಿದ್ಧ ಅಮುಲ್ ಡೈರಿ ಇದ್ದರೂ ಅಲ್ಲಿನ ಮಕ್ಕಳಿಗೆ ಹಾಲು, ಮೊಟ್ಟೆಯಂತಹ ಪೌಷ್ಠಿಕ ಆಹಾರಗಳನ್ನು ನೀಡಲು ಸರ್ಕಾರ ವಿಫಲವಾಗಿದೆ ಅಂದರೆ ಅದರ ಆದ್ಯತೆ ಯಾವುದಾಗಿದೆ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...